Homeಮುಖಪುಟವಯನಾಡ್ : ಚೊಚ್ಚಲ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿಗೆ ಭರ್ಜರಿ ಜಯ

ವಯನಾಡ್ : ಚೊಚ್ಚಲ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿಗೆ ಭರ್ಜರಿ ಜಯ

- Advertisement -
- Advertisement -

ರಾಹುಲ್ ಗಾಂಧಿಯಿಂದ ತೆರವಾಗಿರುವ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗೆದ್ದು ಬೀಗಿದ್ದಾರೆ.

ಚುನಾವಣಾ ಆಯೋಗದ ಅಧಿಕೃತ ಮಾಹಿತಿ ಪ್ರಕಾರ, ಈ ಸುದ್ದಿ ಬರೆಯುವ ಹೊತ್ತಿಗೆ (4.30PM) ಪ್ರಿಯಾಂಕಾ ಗಾಂಧಿ 6,22,338 ಮತಗಳನ್ನು ಪಡೆದಿದ್ದರು. ಅವರ ಗೆಲುವಿನ ಅಂತರ 410,931 ಇತ್ತು. ಈ ಮೂಲಕ ಈ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸಹೋದರ ರಾಹುಲ್ ಗಾಂಧಿ ಪಡೆದ 3.64 ಮತಗಳಿಗಿಂತ ಹೆಚ್ಚು ಮತಗಳನ್ನು ಪ್ರಿಯಾಂಕಾ ಸೆಳೆದಿದ್ದಾರೆ.

ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರದಿಂದ 2019ರಲ್ಲಿ ಮೊದಲ ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದಾಗ 4.3 ಲಕ್ಷ ದಾಖಲೆ ಮತಗಳನ್ನು ಪಡೆದಿದ್ದರು. ಆ ದಾಖಲೆ ಮುರಿದು ಪ್ರಿಯಾಂಕಾ ಗಾಂಧಿ ಸುಮಾರು 5 ಲಕ್ಷ ಮತಗಳನ್ನು ಪಡೆಯುವ ನಿರೀಕ್ಷೆಯನ್ನು ಕಾಂಗ್ರೆಸ್ ಹೊಂದಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾದ್ದರಿಂದ ದಾಖಲೆ ಮುರಿಯುವ ಸಾಧ್ಯತೆ ಇಲ್ಲ ಎನ್ನಲಾಗಿತ್ತು.

ಕಳೆದ ಸಾರ್ವತ್ರಿಕ ಚುನಾವಣೆಗೆ ಹೋಲಿಸಿದರೆ ಶೇ.9ರಷ್ಟು ಮತದಾನದ ಪ್ರಮಾಣ ಕುಸಿದಿದ್ದರೂ, ಪ್ರಿಯಾಂಕಾ ಅವರ ಮತಗಳಿಕೆ ಶೇ.60ರಿಂದ ಶೇ.65ಕ್ಕೆ ಏರಿಕೆಯಾಗಿದೆ.

ಮಲ್ಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳ ಪ್ರದೇಶಗಳನ್ನು ಒಳಗೊಂಡಿರುವ ವಯನಾಡ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಮೊಟ್ಟ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರೂ, ಸ್ವತಃ ಚುನಾವಣೆ ಎದುರಿಸಿದ್ದು ಇದೇ ಮೊದಲ ಬಾರಿಯಾಗಿದೆ.

ಪ್ರಿಯಾಂಕಾ ಗಾಂಧಿ ವಿರುದ್ದ ಸ್ಪರ್ಧಿಸಿದ್ದ ಎಲ್‌ಡಿಎಫ್ ಅಭ್ಯರ್ಥಿ ಸಿಪಿಐನ ಸತ್ಯನ್ ಮೊಕೇರಿ ಅವರು ಈ ಸುದ್ದಿ ಬರೆಯುವ ಹೊತ್ತಿಗೆ 2,11,407 ಮತಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದ್ದರು. ಇದು ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐನ ಅಭ್ಯರ್ಥಿಯಾಗಿದ್ದ ಅನ್ನಿ ರಾಜಾ ಗಳಿಸಿದ್ದ 2.83 ಲಕ್ಷ ಮತಗಳಿಗಿಂತ ಕಡಿಮೆಯಾಗಿದೆ. ಎಲ್‌ಡಿಎಫ್‌ನ ಮತಗಳ ಪ್ರಮಾಣವೂ ಸುಮಾರು ನಾಲ್ಕು ಪ್ರತಿಶತದಷ್ಟು ಕುಸಿತ ಕಂಡಿದೆ.

ಬಿಜೆಪಿಯ ನವ್ಯಾ ಹರಿದಾಸ್ ಈ ಸುದ್ದಿ ಬರೆಯು ಹೊತ್ತಿಗೆ 10,9,939 ಮತಗಳೊಂದಿಗೆ ಮೂರನೇ ಸ್ಥಾನ ಗಳಿಸಿದ್ದರು. ಇದು ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಗಳಿಸಿದ್ದ 1.41 ಲಕ್ಷ ಮತಗಳಿಗಿಂತ ಕಡಿಮೆಯಾಗಿದೆ. ಬಿಜೆಪಿಯ ಮತಗಳ ಪ್ರಮಾಣವೂ ಈ ಬಾರಿ ಶೇ.13ರಿಂದ ಶೇ.11.5ಕ್ಕೆ ಕುಸಿದಿದೆ.

ಇದನ್ನೂ ಓದಿ : ಉಪಚುನಾವಣೆ : ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...