Homeಮುಖಪುಟವಯನಾಡ್ ದುರಂತ | ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಿ - ಮೋದಿಗೆ ಪತ್ರ ಬರೆದ...

ವಯನಾಡ್ ದುರಂತ | ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಿ – ಮೋದಿಗೆ ಪತ್ರ ಬರೆದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ ವರ್ಷ ಸಂಭವಿಸಿದ ಭೀಕರ ಭೂಕುಸಿತದ ನಂತರ ವಯನಾಡಿನ ಜನರು ತಮ್ಮ ಜೀವನವನ್ನು ಪುನರ್ನಿರ್ಮಿಸಲು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ವಿವರಿಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕ ಗಾಂಧಿ, ಸರ್ಕಾರದ ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸುವಂತೆ ಒತ್ತಾಯಿಸಿದ್ದು, ಈ ಬಗ್ಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಯನಾಡ್ ದುರಂತ

ವಯನಾಡಿನ ಜನರು ತಮಗೆ ಸಂಭವಿಸಿರುವ ಭೀಕರ ದುರದೃಷ್ಟದಿಂದ ಹೊರಬರಲು ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲಕ್ಕೆ ಅರ್ಹರು ಎಂದು ಅವರು ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ವಯನಾಡ್ ದುರಂತ

“ವಯನಾಡಿನ ಲೋಕಸಭಾ ಸಂಸದೆಯಾಗಿ, ನನ್ನ ಕ್ಷೇತ್ರದ ಚೂರಲ್ಮಲಾ ಮತ್ತು ಮುಂಡಕ್ಕೈ ಜನರ ದುಃಸ್ಥಿತಿಯ ಬಗ್ಗೆ ನಿಮಗೆ ತಿಳಿಸುವುದು ನನ್ನ ಕರ್ತವ್ಯವೆಂದು ನಾನು ಭಾವಿಸಿದ್ದೇನೆ. ಭೀಕರ ದುರಂತವು ಅವರ ಜೀವನ ಮತ್ತು ಜೀವನೋಪಾಯವನ್ನು ನಾಶಪಡಿಸಿದ ಆರು ತಿಂಗಳಾಗಿದೆ. ಅದರ ನಂತರ ಅವರು ತಮ್ಮ ಜೀವನವನ್ನು ಪುನರ್ನಿರ್ಮಿಸಲು ಪ್ರಯತ್ನಿಸುತ್ತಾ ಊಹಿಸಲಾಗದ ಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂಬುದು ನಿಜಕ್ಕೂ ಹೃದಯವಿದ್ರಾವಕವಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಜುಲೈ 30, 2024 ರಂದು ವಯನಾಡ್ ಜಿಲ್ಲೆಯ ಈ ಎರಡು ಜನವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ಭೀಕರ ಭೂಕುಸಿತ ಸಂಭವಿಸಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ಈ ದುರಂತದ ನಂತರ, 298 ಜನರು ಸಾವನ್ನಪ್ಪಿದ್ದು, 231 ಶವಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ 223 ಮೃತದೇಹಗಳನ್ನು ಗುರುತಿಸಲಾಗಿದ್ದು, 32 ಜನರು ಕಾಣೆಯಾಗಿದ್ದಾರೆ ಮತ್ತು ಸತ್ತಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದುರಂತದಲ್ಲಿ ಒಟ್ಟು 17 ಕುಟುಂಬಗಳು ಸಂಪೂರ್ಣವಾಗಿ ನಾಶವಾಗಿವೆ ಮತ್ತು 1,685 ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದಾರೆ. “ನಾಶಕ್ಕೆ ಒಳಗಾಗಿರುವುದರಲ್ಲಿ ಮನೆಗಳು, ಶಾಲೆಗಳು, ಗ್ರಾಮ ಕಚೇರಿಗಳು, ಔಷಧಾಲಯಗಳು, ಅಂಗನವಾಡಿಗಳು, ಅಂಗಡಿಗಳು, ಧಾರ್ಮಿಕ ಕೇಂದ್ರಗಳು ಮತ್ತು ಸರ್ಕಾರಿ ಕಟ್ಟಡಗಳು ಸೇರಿವೆ” ಎಂದು ಅವರು ಹೇಳಿದ್ದಾರೆ.

ವೆಲ್ಲರ್ಮಲ ಸರ್ಕಾರಿ ವೃತ್ತಿಪರ ಪ್ರೌಢಶಾಲೆ ಮತ್ತು ಮುಂದಕ್ಕೈ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಭೂಕುಸಿತದಿಂದ ಸಂಪೂರ್ಣವಾಗಿ ನಾಶವಾಗಿವೆ ಎಂದು ಅವರು ಹೇಳಿದ್ದಾರೆ. “ಈ ಹಿಂದೆ 658 ವಿದ್ಯಾರ್ಥಿಗಳು ದಾಖಲಾಗಿದ್ದ ಈ ಎರಡು ಸಂಸ್ಥೆಗಳು ಈಗಲೂ ಶಾಶ್ವತ ಪುನರ್ವಸತಿಗಾಗಿ ಕಾಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಹಲವು ಸಂದರ್ಭಗಳ ಹಿನ್ನಲೆ, ವಯನಾಡ್ ಜಿಲ್ಲೆಗೆ ತೀವ್ರ ಬೆಂಬಲದ ಅಗತ್ಯವಿದೆ. ಅಲ್ಲಿನ ಜನರು ಧೈರ್ಯಶಾಲಿಗಳಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಣಾಯಕ ಆರ್ಥಿಕ ಮತ್ತು ಮೂಲಸೌಕರ್ಯ ಬೆಂಬಲವಿಲ್ಲದೆ ಅವರು ಈ ದುರಂತವನ್ನು ನಿವಾರಿಸುವುದು ಅಸಾಧ್ಯ. ದುರದೃಷ್ಟವಶಾತ್, ಪುನರ್ವಸತಿ ಪ್ರಕ್ರಿಯೆಯು ಆಮೆಗತಿಯಲ್ಲಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಭೀಕರ ದುರಂತದ ನಂತರ ಪ್ರಧಾನಿ ಮೋದಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಹಾಗಾಗಿ ಕೇಂದ್ರ ಸರ್ಕಾರದಿಂದ ಗಣನೀಯ ಆರ್ಥಿಕ ನೆರವಿನ ನಿರೀಕ್ಷೆಯಿದೆ. ದುರದೃಷ್ಟವಶಾತ್, ಆ ನಿರೀಕ್ಷೆಗಳು ಈಡೇರಿಲ್ಲ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಇದಲ್ಲದೆ, ಕೇಂದ್ರ ಸರ್ಕಾರವು ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನಿರಾಕರಿಸಿದ್ದು ಸಂತ್ರಸ್ತರಿಗೆ ಆಘಾತವನ್ನುಂಟು ಮಾಡಿತ್ತು. ಹಲವು ತಿಂಗಳುಗಳ ನಂತರ, ಕೇರಳದ ಸಂಸದರ ನಿರಂತರ ಒತ್ತಡದ ನಂತರ, ವಿಪತ್ತನ್ನು ‘ತೀವ್ರ ಪ್ರಕೃತಿ ವಿಕೋಪ’ ಎಂದು ಘೋಷಿಸುವುದು ಸರಿಯಾದ ದಿಕ್ಕಿನಲ್ಲಿರುವ ಹೆಜ್ಜೆಯಂತೆ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಈ ಅಸಮರ್ಪಕ ಮತ್ತು ಷರತ್ತುಬದ್ಧ ಪರಿಹಾರ ಪ್ಯಾಕೇಜ್ ಘೋಷಣೆಯು ಅತ್ಯಂತ ನಿರಾಶಾದಾಯಕವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...