Homeಮುಖಪುಟವಯನಾಡ್ ದುರಂತ | ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಿ - ಮೋದಿಗೆ ಪತ್ರ ಬರೆದ...

ವಯನಾಡ್ ದುರಂತ | ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಿ – ಮೋದಿಗೆ ಪತ್ರ ಬರೆದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ ವರ್ಷ ಸಂಭವಿಸಿದ ಭೀಕರ ಭೂಕುಸಿತದ ನಂತರ ವಯನಾಡಿನ ಜನರು ತಮ್ಮ ಜೀವನವನ್ನು ಪುನರ್ನಿರ್ಮಿಸಲು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ವಿವರಿಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕ ಗಾಂಧಿ, ಸರ್ಕಾರದ ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸುವಂತೆ ಒತ್ತಾಯಿಸಿದ್ದು, ಈ ಬಗ್ಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಯನಾಡ್ ದುರಂತ

ವಯನಾಡಿನ ಜನರು ತಮಗೆ ಸಂಭವಿಸಿರುವ ಭೀಕರ ದುರದೃಷ್ಟದಿಂದ ಹೊರಬರಲು ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲಕ್ಕೆ ಅರ್ಹರು ಎಂದು ಅವರು ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ವಯನಾಡ್ ದುರಂತ

“ವಯನಾಡಿನ ಲೋಕಸಭಾ ಸಂಸದೆಯಾಗಿ, ನನ್ನ ಕ್ಷೇತ್ರದ ಚೂರಲ್ಮಲಾ ಮತ್ತು ಮುಂಡಕ್ಕೈ ಜನರ ದುಃಸ್ಥಿತಿಯ ಬಗ್ಗೆ ನಿಮಗೆ ತಿಳಿಸುವುದು ನನ್ನ ಕರ್ತವ್ಯವೆಂದು ನಾನು ಭಾವಿಸಿದ್ದೇನೆ. ಭೀಕರ ದುರಂತವು ಅವರ ಜೀವನ ಮತ್ತು ಜೀವನೋಪಾಯವನ್ನು ನಾಶಪಡಿಸಿದ ಆರು ತಿಂಗಳಾಗಿದೆ. ಅದರ ನಂತರ ಅವರು ತಮ್ಮ ಜೀವನವನ್ನು ಪುನರ್ನಿರ್ಮಿಸಲು ಪ್ರಯತ್ನಿಸುತ್ತಾ ಊಹಿಸಲಾಗದ ಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂಬುದು ನಿಜಕ್ಕೂ ಹೃದಯವಿದ್ರಾವಕವಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಜುಲೈ 30, 2024 ರಂದು ವಯನಾಡ್ ಜಿಲ್ಲೆಯ ಈ ಎರಡು ಜನವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ಭೀಕರ ಭೂಕುಸಿತ ಸಂಭವಿಸಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ಈ ದುರಂತದ ನಂತರ, 298 ಜನರು ಸಾವನ್ನಪ್ಪಿದ್ದು, 231 ಶವಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ 223 ಮೃತದೇಹಗಳನ್ನು ಗುರುತಿಸಲಾಗಿದ್ದು, 32 ಜನರು ಕಾಣೆಯಾಗಿದ್ದಾರೆ ಮತ್ತು ಸತ್ತಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದುರಂತದಲ್ಲಿ ಒಟ್ಟು 17 ಕುಟುಂಬಗಳು ಸಂಪೂರ್ಣವಾಗಿ ನಾಶವಾಗಿವೆ ಮತ್ತು 1,685 ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದಾರೆ. “ನಾಶಕ್ಕೆ ಒಳಗಾಗಿರುವುದರಲ್ಲಿ ಮನೆಗಳು, ಶಾಲೆಗಳು, ಗ್ರಾಮ ಕಚೇರಿಗಳು, ಔಷಧಾಲಯಗಳು, ಅಂಗನವಾಡಿಗಳು, ಅಂಗಡಿಗಳು, ಧಾರ್ಮಿಕ ಕೇಂದ್ರಗಳು ಮತ್ತು ಸರ್ಕಾರಿ ಕಟ್ಟಡಗಳು ಸೇರಿವೆ” ಎಂದು ಅವರು ಹೇಳಿದ್ದಾರೆ.

ವೆಲ್ಲರ್ಮಲ ಸರ್ಕಾರಿ ವೃತ್ತಿಪರ ಪ್ರೌಢಶಾಲೆ ಮತ್ತು ಮುಂದಕ್ಕೈ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಭೂಕುಸಿತದಿಂದ ಸಂಪೂರ್ಣವಾಗಿ ನಾಶವಾಗಿವೆ ಎಂದು ಅವರು ಹೇಳಿದ್ದಾರೆ. “ಈ ಹಿಂದೆ 658 ವಿದ್ಯಾರ್ಥಿಗಳು ದಾಖಲಾಗಿದ್ದ ಈ ಎರಡು ಸಂಸ್ಥೆಗಳು ಈಗಲೂ ಶಾಶ್ವತ ಪುನರ್ವಸತಿಗಾಗಿ ಕಾಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಹಲವು ಸಂದರ್ಭಗಳ ಹಿನ್ನಲೆ, ವಯನಾಡ್ ಜಿಲ್ಲೆಗೆ ತೀವ್ರ ಬೆಂಬಲದ ಅಗತ್ಯವಿದೆ. ಅಲ್ಲಿನ ಜನರು ಧೈರ್ಯಶಾಲಿಗಳಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಣಾಯಕ ಆರ್ಥಿಕ ಮತ್ತು ಮೂಲಸೌಕರ್ಯ ಬೆಂಬಲವಿಲ್ಲದೆ ಅವರು ಈ ದುರಂತವನ್ನು ನಿವಾರಿಸುವುದು ಅಸಾಧ್ಯ. ದುರದೃಷ್ಟವಶಾತ್, ಪುನರ್ವಸತಿ ಪ್ರಕ್ರಿಯೆಯು ಆಮೆಗತಿಯಲ್ಲಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಭೀಕರ ದುರಂತದ ನಂತರ ಪ್ರಧಾನಿ ಮೋದಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಹಾಗಾಗಿ ಕೇಂದ್ರ ಸರ್ಕಾರದಿಂದ ಗಣನೀಯ ಆರ್ಥಿಕ ನೆರವಿನ ನಿರೀಕ್ಷೆಯಿದೆ. ದುರದೃಷ್ಟವಶಾತ್, ಆ ನಿರೀಕ್ಷೆಗಳು ಈಡೇರಿಲ್ಲ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಇದಲ್ಲದೆ, ಕೇಂದ್ರ ಸರ್ಕಾರವು ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನಿರಾಕರಿಸಿದ್ದು ಸಂತ್ರಸ್ತರಿಗೆ ಆಘಾತವನ್ನುಂಟು ಮಾಡಿತ್ತು. ಹಲವು ತಿಂಗಳುಗಳ ನಂತರ, ಕೇರಳದ ಸಂಸದರ ನಿರಂತರ ಒತ್ತಡದ ನಂತರ, ವಿಪತ್ತನ್ನು ‘ತೀವ್ರ ಪ್ರಕೃತಿ ವಿಕೋಪ’ ಎಂದು ಘೋಷಿಸುವುದು ಸರಿಯಾದ ದಿಕ್ಕಿನಲ್ಲಿರುವ ಹೆಜ್ಜೆಯಂತೆ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಈ ಅಸಮರ್ಪಕ ಮತ್ತು ಷರತ್ತುಬದ್ಧ ಪರಿಹಾರ ಪ್ಯಾಕೇಜ್ ಘೋಷಣೆಯು ಅತ್ಯಂತ ನಿರಾಶಾದಾಯಕವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....