Homeಮುಖಪುಟವಯನಾಡ್ ದುರಂತ | ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಿ - ಮೋದಿಗೆ ಪತ್ರ ಬರೆದ...

ವಯನಾಡ್ ದುರಂತ | ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಿ – ಮೋದಿಗೆ ಪತ್ರ ಬರೆದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ ವರ್ಷ ಸಂಭವಿಸಿದ ಭೀಕರ ಭೂಕುಸಿತದ ನಂತರ ವಯನಾಡಿನ ಜನರು ತಮ್ಮ ಜೀವನವನ್ನು ಪುನರ್ನಿರ್ಮಿಸಲು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ವಿವರಿಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕ ಗಾಂಧಿ, ಸರ್ಕಾರದ ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸುವಂತೆ ಒತ್ತಾಯಿಸಿದ್ದು, ಈ ಬಗ್ಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಯನಾಡ್ ದುರಂತ

ವಯನಾಡಿನ ಜನರು ತಮಗೆ ಸಂಭವಿಸಿರುವ ಭೀಕರ ದುರದೃಷ್ಟದಿಂದ ಹೊರಬರಲು ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲಕ್ಕೆ ಅರ್ಹರು ಎಂದು ಅವರು ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ವಯನಾಡ್ ದುರಂತ

“ವಯನಾಡಿನ ಲೋಕಸಭಾ ಸಂಸದೆಯಾಗಿ, ನನ್ನ ಕ್ಷೇತ್ರದ ಚೂರಲ್ಮಲಾ ಮತ್ತು ಮುಂಡಕ್ಕೈ ಜನರ ದುಃಸ್ಥಿತಿಯ ಬಗ್ಗೆ ನಿಮಗೆ ತಿಳಿಸುವುದು ನನ್ನ ಕರ್ತವ್ಯವೆಂದು ನಾನು ಭಾವಿಸಿದ್ದೇನೆ. ಭೀಕರ ದುರಂತವು ಅವರ ಜೀವನ ಮತ್ತು ಜೀವನೋಪಾಯವನ್ನು ನಾಶಪಡಿಸಿದ ಆರು ತಿಂಗಳಾಗಿದೆ. ಅದರ ನಂತರ ಅವರು ತಮ್ಮ ಜೀವನವನ್ನು ಪುನರ್ನಿರ್ಮಿಸಲು ಪ್ರಯತ್ನಿಸುತ್ತಾ ಊಹಿಸಲಾಗದ ಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂಬುದು ನಿಜಕ್ಕೂ ಹೃದಯವಿದ್ರಾವಕವಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಜುಲೈ 30, 2024 ರಂದು ವಯನಾಡ್ ಜಿಲ್ಲೆಯ ಈ ಎರಡು ಜನವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ಭೀಕರ ಭೂಕುಸಿತ ಸಂಭವಿಸಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ಈ ದುರಂತದ ನಂತರ, 298 ಜನರು ಸಾವನ್ನಪ್ಪಿದ್ದು, 231 ಶವಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ 223 ಮೃತದೇಹಗಳನ್ನು ಗುರುತಿಸಲಾಗಿದ್ದು, 32 ಜನರು ಕಾಣೆಯಾಗಿದ್ದಾರೆ ಮತ್ತು ಸತ್ತಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದುರಂತದಲ್ಲಿ ಒಟ್ಟು 17 ಕುಟುಂಬಗಳು ಸಂಪೂರ್ಣವಾಗಿ ನಾಶವಾಗಿವೆ ಮತ್ತು 1,685 ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದಾರೆ. “ನಾಶಕ್ಕೆ ಒಳಗಾಗಿರುವುದರಲ್ಲಿ ಮನೆಗಳು, ಶಾಲೆಗಳು, ಗ್ರಾಮ ಕಚೇರಿಗಳು, ಔಷಧಾಲಯಗಳು, ಅಂಗನವಾಡಿಗಳು, ಅಂಗಡಿಗಳು, ಧಾರ್ಮಿಕ ಕೇಂದ್ರಗಳು ಮತ್ತು ಸರ್ಕಾರಿ ಕಟ್ಟಡಗಳು ಸೇರಿವೆ” ಎಂದು ಅವರು ಹೇಳಿದ್ದಾರೆ.

ವೆಲ್ಲರ್ಮಲ ಸರ್ಕಾರಿ ವೃತ್ತಿಪರ ಪ್ರೌಢಶಾಲೆ ಮತ್ತು ಮುಂದಕ್ಕೈ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಭೂಕುಸಿತದಿಂದ ಸಂಪೂರ್ಣವಾಗಿ ನಾಶವಾಗಿವೆ ಎಂದು ಅವರು ಹೇಳಿದ್ದಾರೆ. “ಈ ಹಿಂದೆ 658 ವಿದ್ಯಾರ್ಥಿಗಳು ದಾಖಲಾಗಿದ್ದ ಈ ಎರಡು ಸಂಸ್ಥೆಗಳು ಈಗಲೂ ಶಾಶ್ವತ ಪುನರ್ವಸತಿಗಾಗಿ ಕಾಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಹಲವು ಸಂದರ್ಭಗಳ ಹಿನ್ನಲೆ, ವಯನಾಡ್ ಜಿಲ್ಲೆಗೆ ತೀವ್ರ ಬೆಂಬಲದ ಅಗತ್ಯವಿದೆ. ಅಲ್ಲಿನ ಜನರು ಧೈರ್ಯಶಾಲಿಗಳಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಣಾಯಕ ಆರ್ಥಿಕ ಮತ್ತು ಮೂಲಸೌಕರ್ಯ ಬೆಂಬಲವಿಲ್ಲದೆ ಅವರು ಈ ದುರಂತವನ್ನು ನಿವಾರಿಸುವುದು ಅಸಾಧ್ಯ. ದುರದೃಷ್ಟವಶಾತ್, ಪುನರ್ವಸತಿ ಪ್ರಕ್ರಿಯೆಯು ಆಮೆಗತಿಯಲ್ಲಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಭೀಕರ ದುರಂತದ ನಂತರ ಪ್ರಧಾನಿ ಮೋದಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಹಾಗಾಗಿ ಕೇಂದ್ರ ಸರ್ಕಾರದಿಂದ ಗಣನೀಯ ಆರ್ಥಿಕ ನೆರವಿನ ನಿರೀಕ್ಷೆಯಿದೆ. ದುರದೃಷ್ಟವಶಾತ್, ಆ ನಿರೀಕ್ಷೆಗಳು ಈಡೇರಿಲ್ಲ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಇದಲ್ಲದೆ, ಕೇಂದ್ರ ಸರ್ಕಾರವು ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನಿರಾಕರಿಸಿದ್ದು ಸಂತ್ರಸ್ತರಿಗೆ ಆಘಾತವನ್ನುಂಟು ಮಾಡಿತ್ತು. ಹಲವು ತಿಂಗಳುಗಳ ನಂತರ, ಕೇರಳದ ಸಂಸದರ ನಿರಂತರ ಒತ್ತಡದ ನಂತರ, ವಿಪತ್ತನ್ನು ‘ತೀವ್ರ ಪ್ರಕೃತಿ ವಿಕೋಪ’ ಎಂದು ಘೋಷಿಸುವುದು ಸರಿಯಾದ ದಿಕ್ಕಿನಲ್ಲಿರುವ ಹೆಜ್ಜೆಯಂತೆ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಈ ಅಸಮರ್ಪಕ ಮತ್ತು ಷರತ್ತುಬದ್ಧ ಪರಿಹಾರ ಪ್ಯಾಕೇಜ್ ಘೋಷಣೆಯು ಅತ್ಯಂತ ನಿರಾಶಾದಾಯಕವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...