Homeಮುಖಪುಟವಯನಾಡ್ ದುರಂತ | ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಿ - ಮೋದಿಗೆ ಪತ್ರ ಬರೆದ...

ವಯನಾಡ್ ದುರಂತ | ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಿ – ಮೋದಿಗೆ ಪತ್ರ ಬರೆದ ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ ವರ್ಷ ಸಂಭವಿಸಿದ ಭೀಕರ ಭೂಕುಸಿತದ ನಂತರ ವಯನಾಡಿನ ಜನರು ತಮ್ಮ ಜೀವನವನ್ನು ಪುನರ್ನಿರ್ಮಿಸಲು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ವಿವರಿಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕ ಗಾಂಧಿ, ಸರ್ಕಾರದ ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸುವಂತೆ ಒತ್ತಾಯಿಸಿದ್ದು, ಈ ಬಗ್ಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಯನಾಡ್ ದುರಂತ

ವಯನಾಡಿನ ಜನರು ತಮಗೆ ಸಂಭವಿಸಿರುವ ಭೀಕರ ದುರದೃಷ್ಟದಿಂದ ಹೊರಬರಲು ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲಕ್ಕೆ ಅರ್ಹರು ಎಂದು ಅವರು ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ವಯನಾಡ್ ದುರಂತ

“ವಯನಾಡಿನ ಲೋಕಸಭಾ ಸಂಸದೆಯಾಗಿ, ನನ್ನ ಕ್ಷೇತ್ರದ ಚೂರಲ್ಮಲಾ ಮತ್ತು ಮುಂಡಕ್ಕೈ ಜನರ ದುಃಸ್ಥಿತಿಯ ಬಗ್ಗೆ ನಿಮಗೆ ತಿಳಿಸುವುದು ನನ್ನ ಕರ್ತವ್ಯವೆಂದು ನಾನು ಭಾವಿಸಿದ್ದೇನೆ. ಭೀಕರ ದುರಂತವು ಅವರ ಜೀವನ ಮತ್ತು ಜೀವನೋಪಾಯವನ್ನು ನಾಶಪಡಿಸಿದ ಆರು ತಿಂಗಳಾಗಿದೆ. ಅದರ ನಂತರ ಅವರು ತಮ್ಮ ಜೀವನವನ್ನು ಪುನರ್ನಿರ್ಮಿಸಲು ಪ್ರಯತ್ನಿಸುತ್ತಾ ಊಹಿಸಲಾಗದ ಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂಬುದು ನಿಜಕ್ಕೂ ಹೃದಯವಿದ್ರಾವಕವಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಜುಲೈ 30, 2024 ರಂದು ವಯನಾಡ್ ಜಿಲ್ಲೆಯ ಈ ಎರಡು ಜನವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ಭೀಕರ ಭೂಕುಸಿತ ಸಂಭವಿಸಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ಈ ದುರಂತದ ನಂತರ, 298 ಜನರು ಸಾವನ್ನಪ್ಪಿದ್ದು, 231 ಶವಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ 223 ಮೃತದೇಹಗಳನ್ನು ಗುರುತಿಸಲಾಗಿದ್ದು, 32 ಜನರು ಕಾಣೆಯಾಗಿದ್ದಾರೆ ಮತ್ತು ಸತ್ತಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದುರಂತದಲ್ಲಿ ಒಟ್ಟು 17 ಕುಟುಂಬಗಳು ಸಂಪೂರ್ಣವಾಗಿ ನಾಶವಾಗಿವೆ ಮತ್ತು 1,685 ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದಾರೆ. “ನಾಶಕ್ಕೆ ಒಳಗಾಗಿರುವುದರಲ್ಲಿ ಮನೆಗಳು, ಶಾಲೆಗಳು, ಗ್ರಾಮ ಕಚೇರಿಗಳು, ಔಷಧಾಲಯಗಳು, ಅಂಗನವಾಡಿಗಳು, ಅಂಗಡಿಗಳು, ಧಾರ್ಮಿಕ ಕೇಂದ್ರಗಳು ಮತ್ತು ಸರ್ಕಾರಿ ಕಟ್ಟಡಗಳು ಸೇರಿವೆ” ಎಂದು ಅವರು ಹೇಳಿದ್ದಾರೆ.

ವೆಲ್ಲರ್ಮಲ ಸರ್ಕಾರಿ ವೃತ್ತಿಪರ ಪ್ರೌಢಶಾಲೆ ಮತ್ತು ಮುಂದಕ್ಕೈ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಭೂಕುಸಿತದಿಂದ ಸಂಪೂರ್ಣವಾಗಿ ನಾಶವಾಗಿವೆ ಎಂದು ಅವರು ಹೇಳಿದ್ದಾರೆ. “ಈ ಹಿಂದೆ 658 ವಿದ್ಯಾರ್ಥಿಗಳು ದಾಖಲಾಗಿದ್ದ ಈ ಎರಡು ಸಂಸ್ಥೆಗಳು ಈಗಲೂ ಶಾಶ್ವತ ಪುನರ್ವಸತಿಗಾಗಿ ಕಾಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಹಲವು ಸಂದರ್ಭಗಳ ಹಿನ್ನಲೆ, ವಯನಾಡ್ ಜಿಲ್ಲೆಗೆ ತೀವ್ರ ಬೆಂಬಲದ ಅಗತ್ಯವಿದೆ. ಅಲ್ಲಿನ ಜನರು ಧೈರ್ಯಶಾಲಿಗಳಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿರ್ಣಾಯಕ ಆರ್ಥಿಕ ಮತ್ತು ಮೂಲಸೌಕರ್ಯ ಬೆಂಬಲವಿಲ್ಲದೆ ಅವರು ಈ ದುರಂತವನ್ನು ನಿವಾರಿಸುವುದು ಅಸಾಧ್ಯ. ದುರದೃಷ್ಟವಶಾತ್, ಪುನರ್ವಸತಿ ಪ್ರಕ್ರಿಯೆಯು ಆಮೆಗತಿಯಲ್ಲಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಭೀಕರ ದುರಂತದ ನಂತರ ಪ್ರಧಾನಿ ಮೋದಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಹಾಗಾಗಿ ಕೇಂದ್ರ ಸರ್ಕಾರದಿಂದ ಗಣನೀಯ ಆರ್ಥಿಕ ನೆರವಿನ ನಿರೀಕ್ಷೆಯಿದೆ. ದುರದೃಷ್ಟವಶಾತ್, ಆ ನಿರೀಕ್ಷೆಗಳು ಈಡೇರಿಲ್ಲ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಇದಲ್ಲದೆ, ಕೇಂದ್ರ ಸರ್ಕಾರವು ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನಿರಾಕರಿಸಿದ್ದು ಸಂತ್ರಸ್ತರಿಗೆ ಆಘಾತವನ್ನುಂಟು ಮಾಡಿತ್ತು. ಹಲವು ತಿಂಗಳುಗಳ ನಂತರ, ಕೇರಳದ ಸಂಸದರ ನಿರಂತರ ಒತ್ತಡದ ನಂತರ, ವಿಪತ್ತನ್ನು ‘ತೀವ್ರ ಪ್ರಕೃತಿ ವಿಕೋಪ’ ಎಂದು ಘೋಷಿಸುವುದು ಸರಿಯಾದ ದಿಕ್ಕಿನಲ್ಲಿರುವ ಹೆಜ್ಜೆಯಂತೆ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಈ ಅಸಮರ್ಪಕ ಮತ್ತು ಷರತ್ತುಬದ್ಧ ಪರಿಹಾರ ಪ್ಯಾಕೇಜ್ ಘೋಷಣೆಯು ಅತ್ಯಂತ ನಿರಾಶಾದಾಯಕವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...