Homeಮುಖಪುಟವಯನಾಡ್ ಭೂಕುಸಿತ: ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್

ವಯನಾಡ್ ಭೂಕುಸಿತ: ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್

- Advertisement -
- Advertisement -

ಜುಲೈ 30 ರಂದು ವಯನಾಡಿನ ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶಗಳನ್ನು ಧ್ವಂಸಗೊಳಿಸಿದ ಭಾರೀ ಭೂಕುಸಿತದ ಬಗ್ಗೆ ಕೇರಳ ಹೈಕೋರ್ಟ್ ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಇದು ಕನಿಷ್ಠ 226 ಜನರ ಮರಣಕ್ಕೆ ಕಾರಣವಾಗಿದ್ದು, ಸಾವಿರಾರು ಜನರನ್ನು ನಿರಾಶ್ರಿತರನ್ನಾಗಿಸಿದೆ.

ನ್ಯಾಯಮೂರ್ತಿಗಳಾದ ಎ ಕೆ ಜಯಶಂಕರನ್ ನಂಬಿಯಾರ್ ಮತ್ತು ವಿ ಎಂ ಶ್ಯಾಮ್ ಕುಮಾರ್ ಅವರ ಪೀಠವು ಮಾಧ್ಯಮ ವರದಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸುವಂತೆ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದೆ. ವಿಭಾಗೀಯ ಪೀಠ ಶುಕ್ರವಾರ ಬೆಳಗ್ಗೆ ಈ ವಿಷಯವನ್ನು ಪರಿಗಣಿಸಲಿದೆ.

ಅಧಿಕಾರಿಗಳ ಪ್ರಕಾರ ಜುಲೈ 30 ರಂದು ಮುಂಡಕ್ಕೈ ಮತ್ತು ಚೂರಲ್ಮಲಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಸತ್ತವರ ಸಂಖ್ಯೆ 226 ಕ್ಕೆ ಏರಿದೆ. ಸ್ಥಳೀಯ ಆಡಳಿತ ಬಿಡುಗಡೆ ಮಾಡಿರುವ ಬುಧವಾರದ ಅಂಕಿ ಅಂಶಗಳ ಪ್ರಕಾರ ಇನ್ನೂ 138 ಮಂದಿ ನಾಪತ್ತೆಯಾಗಿದ್ದಾರೆ.

ಬದುಕುಳಿದವರ ನೆರವಿಗೆ ಕಾರ್ಯಪಡೆ ರಚಿಸಿದ ಕೇರಳ ಸರ್ಕಾರ

ಜುಲೈ 30ರ ವಯನಾಡ್ ಭೂಕುಸಿತದಿಂದ ಬದುಕುಳಿದವರಿಗೆ ತಮ್ಮ ವಿವಿಧ ನಷ್ಟಗಳಿಗೆ ವಿಮೆಯನ್ನು ಪಡೆಯಲು ಸಹಾಯ ಮಾಡಲು ಕೇರಳ ಸರ್ಕಾರ ಗುರುವಾರ ಕಾರ್ಯಪಡೆಯನ್ನು ರಚಿಸಿದೆ. ಘಟನೆ ನಡೆದ ದಿನದಿಂದ ವಯನಾಡಿನಲ್ಲಿ ಬೀಡುಬಿಟ್ಟಿರುವ ಸಂಪುಟ ಉಪ ಸಮಿತಿಯ ಶಿಫಾರಸಿನ ಮೇರೆಗೆ ಕಾರ್ಯಪಡೆ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ತಿಳಿಸಿದೆ.

ಕಂದಾಯ ವಸೂಲಿ ಉಪ ಜಿಲ್ಲಾಧಿಕಾರಿ ಕೆ.ಗೋಪಿನಾಥ್ ನೇತೃತ್ವದ ವಿಶೇಷ ತಂಡ ಕಾರ್ಯಾರಂಭ ಮಾಡಿದೆ ಎಂದು ಸಿಎಂಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಲೈಮ್ ಮೊತ್ತವನ್ನು ತ್ವರಿತವಾಗಿ ವಿತರಿಸುವುದನ್ನು ತಂಡವು ಖಚಿತಪಡಿಸುತ್ತದೆ ಎಂದು ಅದು ಹೇಳಿದೆ.

ತಂಡವು ಇತರ ಇಲಾಖೆಗಳೊಂದಿಗೆ ಕೆಲಸ ಮಾಡುತ್ತದೆ, ಮಾಹಿತಿ ಸಂಗ್ರಹಿಸುತ್ತದೆ ಮತ್ತು ಘಟನೆಯ ಸಂತ್ರಸ್ತರು ತೆಗೆದುಕೊಂಡ ವಿಮಾ ಪಾಲಿಸಿಗಳ ವಿವರಗಳನ್ನು ಸಿದ್ಧಪಡಿಸುತ್ತದೆ. “ಪರಿಹಾರ ಶಿಬಿರಗಳಲ್ಲಿ ಅಥವಾ ಸಂಬಂಧಿಕರ ಮನೆಗಳಲ್ಲಿ ನೆಲೆಸಿರುವ ಬದುಕುಳಿದವರಿಂದ ಮತ್ತು ವಿವಿಧ ಸರ್ಕಾರಿ ಸಂಸ್ಥೆಗಳು, ವಿಮಾ ಕಂಪನಿಗಳು ಮತ್ತು ಇತರ ಏಜೆನ್ಸಿಗಳಿಂದ ವಿವರಗಳನ್ನು ಸಂಗ್ರಹಿಸಲಾಗುತ್ತದೆ” ಎಂದು ಪ್ರಕಟಣೆ ತಿಳಿಸಿದೆ.

ವಾಹನ ವಿಮೆ, ಜೀವ ವಿಮೆ, ಗೃಹ ವಿಮೆ, ಬೆಳೆ ವಿಮೆ ಮತ್ತು ಸಾಕುಪ್ರಾಣಿಗಳು, ಜಾನುವಾರುಗಳ ವಿಮೆಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಲಾಗುವುದು ಎಂದು ಅದು ಹೇಳಿದೆ.

‘ಲೀಡ್ ಬ್ಯಾಂಕ್’ ಜಿಲ್ಲಾ ವ್ಯವಸ್ಥಾಪಕರು, ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯದ ಜಿಲ್ಲಾ ವ್ಯವಸ್ಥಾಪಕರು ಮತ್ತು ಅರ್ಥಶಾಸ್ತ್ರ ಮತ್ತು ಸಾಂಖ್ಯಿಕ ಇಲಾಖೆಯ ಉಪನಿರ್ದೇಶಕರು ಸಹ ಕಾರ್ಯಪಡೆಯ ಸದಸ್ಯರಾಗಿದ್ದಾರೆ.

‘ಲೀಡ್ ಬ್ಯಾಂಕ್’ ಎಂಬ ಪದವು ವಿಮಾ ಪಾಲಿಸಿಗಳನ್ನು ಅಂಡರ್ರೈಟ್ ಮಾಡುವ (ನಷ್ಟದ ಸಂದರ್ಭದಲ್ಲಿ ಪಾವತಿಸಲು ಒಪ್ಪಿಕೊಳ್ಳುತ್ತದೆ) ಸೂಚಿಸುತ್ತದೆ.

ಇದನ್ನೂ ಓದಿ; ವಿನೇಶಾ ಪ್ರತಿಭಟನೆ ಸ್ವೀಕರಿಸಿದ ‘ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ’; ಒಲಿಂಪಿಕ್ ಬೆಳ್ಳಿ ಪದಕದ ಆಸೆ ಜೀವಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...