Homeಮುಖಪುಟವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

- Advertisement -
- Advertisement -

“ವಯನಾಡ್ ಇಬ್ಬರು ಸಂಸದರನ್ನು ಹೊಂದಲು ಸಜ್ಜಾಗಿದೆ, ಅವರಲ್ಲಿ ಒಬ್ಬರು ಅನಧಿಕೃತ, ಕ್ಷೇತ್ರದ ಹಿತಾಸಕ್ತಿಗಳನ್ನು ರಕ್ಷಿಸಲು ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳನ್ನು ಗೆದ್ದು ನಂತರ, ತಮ್ಮ ತಾಐಇ ಪ್ರತಿನಿಧಿಸುತ್ತಿದ್ದ ಸ್ಥಾನವನ್ನು ಉಳಿಸಿಕೊಳ್ಳಲು ನಿರ್ಧರಿಸಿದರು. ಆ ಮೂಲಕ ವಯನಾಡಿನಲ್ಲಿ ಉಪಚುನಾವಣೆಗೆ ದಾರಿ ಮಾಡಿಕೊಟ್ಟರು. ರಾಹುಲ್ ಗಾಂಧಿಯವರು 2019-2024ರ ವರೆಗೆ ಲೋಕಸಭೆಯಲ್ಲಿ ವಯನಾಡನ್ನು ಪ್ರತಿನಿಧಿಸಿದ್ದರು.

ತಮ್ಮ ಸಹೋದರಿಗೆ ಬೆಂಬಲ ಕೋರಿದ ಲೋಕಸಭೆಯ ವಿರೋಧ ಪಕ್ಷದ ನಾಯಕ, “ನಾನು ವಯನಾಡಿನ ಜನರೊಂದಿಗೆ ಹಂಚಿಕೊಳ್ಳುವ ಸಂಬಂಧವನ್ನು ನೀವು ಚೆನ್ನಾಗಿ ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸುತ್ತೇನೆ. ವಯನಾಡ್ ನನಗಾಗಿ ಏನು ಮಾಡಿದೆ ಎಂಬುದನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಭಾವನೆಗಳು ನಿಜವಾಗಿಯೂ ಆಳವಾದಾಗ ಅವುಗಳನ್ನು ವ್ಯಕ್ತಪಡಿಸುವ ಏಕೈಕ ಮಾರ್ಗವೆಂದರೆ ಕ್ರಿಯೆ” ಅವರು ಹೇಳಿದರು.

“ಇಬ್ಬರು ಸಂಸದರನ್ನು ಹೊಂದಿರುವ ದೇಶದ ಏಕೈಕ ಕ್ಷೇತ್ರ ವಯನಾಡ್ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಆದರೆ, ಒಬ್ಬರು ಅಧಿಕೃತ, ಇನ್ನೊಂದು ಅನಧಿಕೃತ, ವಯನಾಡ್ ಜನರ ಹಿತಾಸಕ್ತಿಗಳನ್ನು ರಕ್ಷಿಸಲು ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

“ನಾನು ಆಕೆಯ ಸ್ನೇಹಿತರು ಮತ್ತು ಕುಟುಂಬದ ಬಗ್ಗೆ ಏಕೆ ಹೇಳುತ್ತಿದ್ದೇನೆ ಎಂದು ನೀವು ಆಶ್ಚರ್ಯ ಪಡುತ್ತಿರಬೇಕು. ಕಾರಣ, ಪ್ರಿಯಾಂಕಾ ವಯನಾಡಿನ ಜನರನ್ನು ತನ್ನ ಕುಟುಂಬವೆಂದು ಪರಿಗಣಿಸುತ್ತಾರೆ” ಎಂದು ಅವರು ಹೇಳಿದರು.

“ಆಕೆ ಕಟ್ಟಿದ ಈ ರಾಖಿ ನನ್ನ ಕೈಯಲ್ಲಿದೆ, ಅದು ಮುರಿಯುವವರೆಗೂ ನಾನು ಅದನ್ನು ತೆಗೆಯುವುದಿಲ್ಲ. ಇದು ಸಹೋದರನ ರಕ್ಷಣೆಯ ಸಂಕೇತವಾಗಿದೆ, ಇದು ತನ್ನ ಸಹೋದರಿಯ ರಕ್ಷಣೆಯ ಸಂಕೇತವಾಗಿದೆ. ನಾನು ವಯನಾಡಿನ ಜನತೆಯಲ್ಲಿ ವಿನಂತಿಸುತ್ತೇನೆ, ನನ್ನ ಸಹೋದರಿಯನ್ನು ನೋಡಿಕೊಳ್ಳಿ, ನನ್ನ ಸಹೋದರಿಯನ್ನು ರಕ್ಷಿಸಿ” ಎಂದು ಅವರು ಮನವಿ ಮಾಡಿದರು.

“ವಯನಾಡಿನ ಜನರನ್ನು ನೋಡಿಕೊಳ್ಳಲು ಅವಳು ತನ್ನ ಸಂಪೂರ್ಣ ಶಕ್ತಿಯನ್ನು ಹಾಕುತ್ತಾಳೆ. ನಾನು ಅನಧಿಕೃತ ಸಂಸದ ಎಂಬುದನ್ನು ಮರೆಯಬೇಡಿ, ಹಾಗಾಗಿ ಇಲ್ಲಿಗೆ ಬಂದು ಮಧ್ಯಪ್ರವೇಶಿಸಲು ನನಗೆ ಅನುಮತಿ ಇದೆ” ಎಂದು ರಾಹುಲ್ ಗಾಂಧಿ ಹೇಳಿದರು.

“ಕಳೆದ 35 ವರ್ಷಗಳಿಂದ ಚುನಾವಣಾ ಪ್ರಚಾರದಲ್ಲಿದ್ದಾರೆ. ಆದರೆ, ತನಗಾಗಿ ಮತ ಕೇಳುತ್ತಿರುವುದು ಇದೇ ಮೊದಲು” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

“ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಪರ ಪ್ರಚಾರ ಮಾಡುವಾಗ ನನಗೆ 17 ವರ್ಷ. ನಂತರ ನಾನು ನನ್ನ ತಾಯಿ, ಸಹೋದರ ಮತ್ತು ನನ್ನ ಅನೇಕ ಸಹೋದ್ಯೋಗಿಗಳಿಗಾಗಿ ಪ್ರಚಾರ ಮಾಡಿದ್ದೇನೆ. 35 ವರ್ಷಗಳಿಂದ ನಾನು ವಿವಿಧ ಚುನಾವಣೆಗಳಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಆದರೆ, ನಾನು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಪ್ರಚಾರ ಮಾಡುವುದು ಮತ್ತು ನನಗೆ ನಿಮ್ಮ ಬೆಂಬಲವನ್ನು ಕೋರುವುದು ತುಂಬಾ ವಿಭಿನ್ನವಾದ ಭಾವನೆ” ಎಂದು ಅವರು ಹೇಳಿದರು “ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ, ನೀವು ನನಗೆ ಅವಕಾಶ ನೀಡಿದರೆ ನಿಮ್ಮನ್ನು ಪ್ರತಿನಿಧಿಸುವುದು ನನ್ನ ಗೌರವ” ಎಂದರು.

ಇದನ್ನೂ ಓದಿ; ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...