Homeಮುಖಪುಟವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

- Advertisement -
- Advertisement -

“ವಯನಾಡ್ ಇಬ್ಬರು ಸಂಸದರನ್ನು ಹೊಂದಲು ಸಜ್ಜಾಗಿದೆ, ಅವರಲ್ಲಿ ಒಬ್ಬರು ಅನಧಿಕೃತ, ಕ್ಷೇತ್ರದ ಹಿತಾಸಕ್ತಿಗಳನ್ನು ರಕ್ಷಿಸಲು ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳನ್ನು ಗೆದ್ದು ನಂತರ, ತಮ್ಮ ತಾಐಇ ಪ್ರತಿನಿಧಿಸುತ್ತಿದ್ದ ಸ್ಥಾನವನ್ನು ಉಳಿಸಿಕೊಳ್ಳಲು ನಿರ್ಧರಿಸಿದರು. ಆ ಮೂಲಕ ವಯನಾಡಿನಲ್ಲಿ ಉಪಚುನಾವಣೆಗೆ ದಾರಿ ಮಾಡಿಕೊಟ್ಟರು. ರಾಹುಲ್ ಗಾಂಧಿಯವರು 2019-2024ರ ವರೆಗೆ ಲೋಕಸಭೆಯಲ್ಲಿ ವಯನಾಡನ್ನು ಪ್ರತಿನಿಧಿಸಿದ್ದರು.

ತಮ್ಮ ಸಹೋದರಿಗೆ ಬೆಂಬಲ ಕೋರಿದ ಲೋಕಸಭೆಯ ವಿರೋಧ ಪಕ್ಷದ ನಾಯಕ, “ನಾನು ವಯನಾಡಿನ ಜನರೊಂದಿಗೆ ಹಂಚಿಕೊಳ್ಳುವ ಸಂಬಂಧವನ್ನು ನೀವು ಚೆನ್ನಾಗಿ ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸುತ್ತೇನೆ. ವಯನಾಡ್ ನನಗಾಗಿ ಏನು ಮಾಡಿದೆ ಎಂಬುದನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಭಾವನೆಗಳು ನಿಜವಾಗಿಯೂ ಆಳವಾದಾಗ ಅವುಗಳನ್ನು ವ್ಯಕ್ತಪಡಿಸುವ ಏಕೈಕ ಮಾರ್ಗವೆಂದರೆ ಕ್ರಿಯೆ” ಅವರು ಹೇಳಿದರು.

“ಇಬ್ಬರು ಸಂಸದರನ್ನು ಹೊಂದಿರುವ ದೇಶದ ಏಕೈಕ ಕ್ಷೇತ್ರ ವಯನಾಡ್ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಆದರೆ, ಒಬ್ಬರು ಅಧಿಕೃತ, ಇನ್ನೊಂದು ಅನಧಿಕೃತ, ವಯನಾಡ್ ಜನರ ಹಿತಾಸಕ್ತಿಗಳನ್ನು ರಕ್ಷಿಸಲು ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

“ನಾನು ಆಕೆಯ ಸ್ನೇಹಿತರು ಮತ್ತು ಕುಟುಂಬದ ಬಗ್ಗೆ ಏಕೆ ಹೇಳುತ್ತಿದ್ದೇನೆ ಎಂದು ನೀವು ಆಶ್ಚರ್ಯ ಪಡುತ್ತಿರಬೇಕು. ಕಾರಣ, ಪ್ರಿಯಾಂಕಾ ವಯನಾಡಿನ ಜನರನ್ನು ತನ್ನ ಕುಟುಂಬವೆಂದು ಪರಿಗಣಿಸುತ್ತಾರೆ” ಎಂದು ಅವರು ಹೇಳಿದರು.

“ಆಕೆ ಕಟ್ಟಿದ ಈ ರಾಖಿ ನನ್ನ ಕೈಯಲ್ಲಿದೆ, ಅದು ಮುರಿಯುವವರೆಗೂ ನಾನು ಅದನ್ನು ತೆಗೆಯುವುದಿಲ್ಲ. ಇದು ಸಹೋದರನ ರಕ್ಷಣೆಯ ಸಂಕೇತವಾಗಿದೆ, ಇದು ತನ್ನ ಸಹೋದರಿಯ ರಕ್ಷಣೆಯ ಸಂಕೇತವಾಗಿದೆ. ನಾನು ವಯನಾಡಿನ ಜನತೆಯಲ್ಲಿ ವಿನಂತಿಸುತ್ತೇನೆ, ನನ್ನ ಸಹೋದರಿಯನ್ನು ನೋಡಿಕೊಳ್ಳಿ, ನನ್ನ ಸಹೋದರಿಯನ್ನು ರಕ್ಷಿಸಿ” ಎಂದು ಅವರು ಮನವಿ ಮಾಡಿದರು.

“ವಯನಾಡಿನ ಜನರನ್ನು ನೋಡಿಕೊಳ್ಳಲು ಅವಳು ತನ್ನ ಸಂಪೂರ್ಣ ಶಕ್ತಿಯನ್ನು ಹಾಕುತ್ತಾಳೆ. ನಾನು ಅನಧಿಕೃತ ಸಂಸದ ಎಂಬುದನ್ನು ಮರೆಯಬೇಡಿ, ಹಾಗಾಗಿ ಇಲ್ಲಿಗೆ ಬಂದು ಮಧ್ಯಪ್ರವೇಶಿಸಲು ನನಗೆ ಅನುಮತಿ ಇದೆ” ಎಂದು ರಾಹುಲ್ ಗಾಂಧಿ ಹೇಳಿದರು.

“ಕಳೆದ 35 ವರ್ಷಗಳಿಂದ ಚುನಾವಣಾ ಪ್ರಚಾರದಲ್ಲಿದ್ದಾರೆ. ಆದರೆ, ತನಗಾಗಿ ಮತ ಕೇಳುತ್ತಿರುವುದು ಇದೇ ಮೊದಲು” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

“ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಪರ ಪ್ರಚಾರ ಮಾಡುವಾಗ ನನಗೆ 17 ವರ್ಷ. ನಂತರ ನಾನು ನನ್ನ ತಾಯಿ, ಸಹೋದರ ಮತ್ತು ನನ್ನ ಅನೇಕ ಸಹೋದ್ಯೋಗಿಗಳಿಗಾಗಿ ಪ್ರಚಾರ ಮಾಡಿದ್ದೇನೆ. 35 ವರ್ಷಗಳಿಂದ ನಾನು ವಿವಿಧ ಚುನಾವಣೆಗಳಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಆದರೆ, ನಾನು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಪ್ರಚಾರ ಮಾಡುವುದು ಮತ್ತು ನನಗೆ ನಿಮ್ಮ ಬೆಂಬಲವನ್ನು ಕೋರುವುದು ತುಂಬಾ ವಿಭಿನ್ನವಾದ ಭಾವನೆ” ಎಂದು ಅವರು ಹೇಳಿದರು “ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ, ನೀವು ನನಗೆ ಅವಕಾಶ ನೀಡಿದರೆ ನಿಮ್ಮನ್ನು ಪ್ರತಿನಿಧಿಸುವುದು ನನ್ನ ಗೌರವ” ಎಂದರು.

ಇದನ್ನೂ ಓದಿ; ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...