Homeಮುಖಪುಟವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

- Advertisement -
- Advertisement -

“ವಯನಾಡ್ ಇಬ್ಬರು ಸಂಸದರನ್ನು ಹೊಂದಲು ಸಜ್ಜಾಗಿದೆ, ಅವರಲ್ಲಿ ಒಬ್ಬರು ಅನಧಿಕೃತ, ಕ್ಷೇತ್ರದ ಹಿತಾಸಕ್ತಿಗಳನ್ನು ರಕ್ಷಿಸಲು ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳನ್ನು ಗೆದ್ದು ನಂತರ, ತಮ್ಮ ತಾಐಇ ಪ್ರತಿನಿಧಿಸುತ್ತಿದ್ದ ಸ್ಥಾನವನ್ನು ಉಳಿಸಿಕೊಳ್ಳಲು ನಿರ್ಧರಿಸಿದರು. ಆ ಮೂಲಕ ವಯನಾಡಿನಲ್ಲಿ ಉಪಚುನಾವಣೆಗೆ ದಾರಿ ಮಾಡಿಕೊಟ್ಟರು. ರಾಹುಲ್ ಗಾಂಧಿಯವರು 2019-2024ರ ವರೆಗೆ ಲೋಕಸಭೆಯಲ್ಲಿ ವಯನಾಡನ್ನು ಪ್ರತಿನಿಧಿಸಿದ್ದರು.

ತಮ್ಮ ಸಹೋದರಿಗೆ ಬೆಂಬಲ ಕೋರಿದ ಲೋಕಸಭೆಯ ವಿರೋಧ ಪಕ್ಷದ ನಾಯಕ, “ನಾನು ವಯನಾಡಿನ ಜನರೊಂದಿಗೆ ಹಂಚಿಕೊಳ್ಳುವ ಸಂಬಂಧವನ್ನು ನೀವು ಚೆನ್ನಾಗಿ ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸುತ್ತೇನೆ. ವಯನಾಡ್ ನನಗಾಗಿ ಏನು ಮಾಡಿದೆ ಎಂಬುದನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಭಾವನೆಗಳು ನಿಜವಾಗಿಯೂ ಆಳವಾದಾಗ ಅವುಗಳನ್ನು ವ್ಯಕ್ತಪಡಿಸುವ ಏಕೈಕ ಮಾರ್ಗವೆಂದರೆ ಕ್ರಿಯೆ” ಅವರು ಹೇಳಿದರು.

“ಇಬ್ಬರು ಸಂಸದರನ್ನು ಹೊಂದಿರುವ ದೇಶದ ಏಕೈಕ ಕ್ಷೇತ್ರ ವಯನಾಡ್ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಆದರೆ, ಒಬ್ಬರು ಅಧಿಕೃತ, ಇನ್ನೊಂದು ಅನಧಿಕೃತ, ವಯನಾಡ್ ಜನರ ಹಿತಾಸಕ್ತಿಗಳನ್ನು ರಕ್ಷಿಸಲು ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

“ನಾನು ಆಕೆಯ ಸ್ನೇಹಿತರು ಮತ್ತು ಕುಟುಂಬದ ಬಗ್ಗೆ ಏಕೆ ಹೇಳುತ್ತಿದ್ದೇನೆ ಎಂದು ನೀವು ಆಶ್ಚರ್ಯ ಪಡುತ್ತಿರಬೇಕು. ಕಾರಣ, ಪ್ರಿಯಾಂಕಾ ವಯನಾಡಿನ ಜನರನ್ನು ತನ್ನ ಕುಟುಂಬವೆಂದು ಪರಿಗಣಿಸುತ್ತಾರೆ” ಎಂದು ಅವರು ಹೇಳಿದರು.

“ಆಕೆ ಕಟ್ಟಿದ ಈ ರಾಖಿ ನನ್ನ ಕೈಯಲ್ಲಿದೆ, ಅದು ಮುರಿಯುವವರೆಗೂ ನಾನು ಅದನ್ನು ತೆಗೆಯುವುದಿಲ್ಲ. ಇದು ಸಹೋದರನ ರಕ್ಷಣೆಯ ಸಂಕೇತವಾಗಿದೆ, ಇದು ತನ್ನ ಸಹೋದರಿಯ ರಕ್ಷಣೆಯ ಸಂಕೇತವಾಗಿದೆ. ನಾನು ವಯನಾಡಿನ ಜನತೆಯಲ್ಲಿ ವಿನಂತಿಸುತ್ತೇನೆ, ನನ್ನ ಸಹೋದರಿಯನ್ನು ನೋಡಿಕೊಳ್ಳಿ, ನನ್ನ ಸಹೋದರಿಯನ್ನು ರಕ್ಷಿಸಿ” ಎಂದು ಅವರು ಮನವಿ ಮಾಡಿದರು.

“ವಯನಾಡಿನ ಜನರನ್ನು ನೋಡಿಕೊಳ್ಳಲು ಅವಳು ತನ್ನ ಸಂಪೂರ್ಣ ಶಕ್ತಿಯನ್ನು ಹಾಕುತ್ತಾಳೆ. ನಾನು ಅನಧಿಕೃತ ಸಂಸದ ಎಂಬುದನ್ನು ಮರೆಯಬೇಡಿ, ಹಾಗಾಗಿ ಇಲ್ಲಿಗೆ ಬಂದು ಮಧ್ಯಪ್ರವೇಶಿಸಲು ನನಗೆ ಅನುಮತಿ ಇದೆ” ಎಂದು ರಾಹುಲ್ ಗಾಂಧಿ ಹೇಳಿದರು.

“ಕಳೆದ 35 ವರ್ಷಗಳಿಂದ ಚುನಾವಣಾ ಪ್ರಚಾರದಲ್ಲಿದ್ದಾರೆ. ಆದರೆ, ತನಗಾಗಿ ಮತ ಕೇಳುತ್ತಿರುವುದು ಇದೇ ಮೊದಲು” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

“ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಪರ ಪ್ರಚಾರ ಮಾಡುವಾಗ ನನಗೆ 17 ವರ್ಷ. ನಂತರ ನಾನು ನನ್ನ ತಾಯಿ, ಸಹೋದರ ಮತ್ತು ನನ್ನ ಅನೇಕ ಸಹೋದ್ಯೋಗಿಗಳಿಗಾಗಿ ಪ್ರಚಾರ ಮಾಡಿದ್ದೇನೆ. 35 ವರ್ಷಗಳಿಂದ ನಾನು ವಿವಿಧ ಚುನಾವಣೆಗಳಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಆದರೆ, ನಾನು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಪ್ರಚಾರ ಮಾಡುವುದು ಮತ್ತು ನನಗೆ ನಿಮ್ಮ ಬೆಂಬಲವನ್ನು ಕೋರುವುದು ತುಂಬಾ ವಿಭಿನ್ನವಾದ ಭಾವನೆ” ಎಂದು ಅವರು ಹೇಳಿದರು “ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ, ನೀವು ನನಗೆ ಅವಕಾಶ ನೀಡಿದರೆ ನಿಮ್ಮನ್ನು ಪ್ರತಿನಿಧಿಸುವುದು ನನ್ನ ಗೌರವ” ಎಂದರು.

ಇದನ್ನೂ ಓದಿ; ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...