Homeಮುಖಪುಟಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಾದ ಕೇರಳ ಸರ್ಕಾರ

ಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಾದ ಕೇರಳ ಸರ್ಕಾರ

ಕಳವಳ ವ್ಯಕ್ತಪಡಿಸಿದ ಪರಿಸರ ತಜ್ಞರ ಸಮಿತಿ

- Advertisement -
- Advertisement -

ಕನಿಷ್ಠ 300 ಜನರನ್ನು ಬಲಿ ತೆಗೆದುಕೊಂಡ ಇತ್ತೀಚಿನ ಭೀಕರ ಭೂಕುಸಿತ ಮತ್ತು ರಾಜ್ಯ ಮಟ್ಟದ ತಜ್ಞರ ಮೌಲ್ಯಮಾಪನ ಸಮಿತಿ (ಎಸ್‌ಇಎಸಿ)ಯ ಗಂಭೀರ ಎಚ್ಚರಿಕೆಯ ನಡುವೆಯೂ ಕೇರಳ ಸರ್ಕಾರ ವಯನಾಡ್ ಮತ್ತು ಕೋಯಿಕ್ಕೋಡ್ ನಡುವೆ ಅವಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಾಗಿದೆ. ಈ ಸುರಂಗ ಇತ್ತೀಚೆಗೆ ಭೂಕುಸಿತ ಸಂಭವಿಸಿದ ಪ್ರದೇಶದ ಸಮೀಪವೇ ಹಾದು ಹೋಗಲಿದೆ ಎನ್ನುವುದು ಆತಂಕದ ವಿಷಯ.

ವಯನಾಡಿನ ಮೆಪ್ಪಾಡಿಯಿಂದ ಕೋಝಿಕ್ಕೋಡ್‌ನ ಅನಕ್ಕಂಪೊಯಿಲ್‌ವರೆಗಿನ 8.7 ಕಿಲೋ ಮೀಟರ್ ಸುರಂಗ ಮಾರ್ಗ ಯೋಜನೆಗೆ ಸರ್ಕಾರ ಟೆಂಡರ್‌ ಕರೆದಿದ್ದು, ಭೋಪಾಲ್ ಮೂಲದ ದಿಲೀಪ್ ಬಿಲ್ಡ್‌ಕಾನ್ 1,341 ಕೋಟಿ ರೂಪಾಯಿಗೆ ಅತಿ ಕಡಿಮೆ ಬಿಡ್ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

ಕೋಝಿಕ್ಕೋಡ್‌ನ ತಿರುವಂಬಾಡಿಯ ಸಿಪಿಎಂ ಶಾಸಕ ಲಿಂಟೊ ಜೋಸೆಫ್ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣವು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೆ, ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಇನ್ನಷ್ಟೇ ಸಿಗಬೇಕಿದೆ. ಅತೀ ದೊಡ್ಡ ಭೂಕುಸಿತ ಸಂಭವಿಸಿದ ಪ್ರದೇಶ ಸಮೀಪದಲ್ಲೇ ಇರುವುದರಿಂದ ಮತ್ತು ಸುರಂಗ ನಿರ್ಮಾಣವಾಗಲಿರುವ ಪ್ರದೇಶದಲ್ಲಿ ಆಗಾಗ ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆ, ಯೋಜನೆಯ ಕುರಿತು ಎಸ್‌ಇಎಸಿ ತೀವ್ರ ಕಳವಳ ವ್ಯಕ್ತಪಡಿಸಿದೆ.

ಸುರಂಗ ಮಾರ್ಗ ನಿರ್ಮಾಣವಾಗಲಿರುವ ಪ್ರದೇಶದಲ್ಲಿ, ವಿಶೇಷವಾಗಿ ಮಳೆಗಾಲದಲ್ಲಿ ಭೂಕುಸಿತ ಸಂಭವಿಸುತ್ತಿದೆ. ಯೋಜನೆಯ ಜಾರಿಯಲ್ಲಿ ವೈಫಲ್ಯಗಳು ಎದುರಾಗಿಲಿದೆ ಎಂದು ಸ್ಥಿರತೆಯ ವಿಶ್ಲೇಷಣೆಯು ಹೇಳಿದೆ. ಪುತ್ತುಮಲ ಎಂಬ ಗ್ರಾಮವು ಪ್ರಸ್ತಾವಿತ ಸುರಂಗ ಮಾರ್ಗದಿಂದ ಸರಿಸುಮಾರು 0.85 ಕಿಮೀ ದೂರದಲ್ಲಿದೆ. ಅಲ್ಲಿ 2019 ರಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು ಎಂದು ಜೂನ್ 11 ರಂದು ನಡೆದ ಎಸ್‌ಇಎಸಿ ಸಭೆ ಹೇಳಿದೆ.

ಪ್ರಸ್ತಾವಿತ ಯೋಜನೆಯು ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರುತ್ತದೆ ಎಂದಿರುವ ಎಸ್‌ಇಎಸಿ, ಪರಿಸರ ಅನುಮತಿಗಾಗಿ ಅರ್ಜಿಯನ್ನು ಪರಿಶೀಲಿಸಲು 28 ಹೆಚ್ಚುವರಿ ದಾಖಲೆಗಳನ್ನು ಕೋರಿದೆ.

ಜುಲೈ 30ರ ಭೂಕುಸಿತದ ನಂತರ, ತಾಮರಶ್ಶೇರಿ ಘಾಟ್ ರಸ್ತೆಯಲ್ಲಿನ ಟ್ರಾಫಿಕ್ ದಟ್ಟಣೆಗೆ ಪರಿಹಾರವಾಗಿ ಯೋಜಿಸಲಾದ ಉದ್ದೇಶಿತ ಸುರಂಗ ರಸ್ತೆಯ ಬಗ್ಗೆ ಪರಿಸರವಾದಿಗಳು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸುರಂಗ ರಸ್ತೆಗಳು ಎಲ್ಲಿಯೂ ಅನಾಹುತಗಳಿಗೆ ಕಾರಣವಾದ ಬಗ್ಗೆ ವರದಿಯಾಗಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ‘ರಾಜೀನಾಮೆ ಕೊಟ್ಟ ನಂತರ ವಿನೇಶಾ ಫೋಗಟ್‌ಗೆ ಭಾರತೀಯ ರೈಲ್ವೆಯಿಂದ ಶೋಕಾಸ್ ನೋಟಿಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...