Homeಮುಖಪುಟಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಾದ ಕೇರಳ ಸರ್ಕಾರ

ಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಾದ ಕೇರಳ ಸರ್ಕಾರ

ಕಳವಳ ವ್ಯಕ್ತಪಡಿಸಿದ ಪರಿಸರ ತಜ್ಞರ ಸಮಿತಿ

- Advertisement -
- Advertisement -

ಕನಿಷ್ಠ 300 ಜನರನ್ನು ಬಲಿ ತೆಗೆದುಕೊಂಡ ಇತ್ತೀಚಿನ ಭೀಕರ ಭೂಕುಸಿತ ಮತ್ತು ರಾಜ್ಯ ಮಟ್ಟದ ತಜ್ಞರ ಮೌಲ್ಯಮಾಪನ ಸಮಿತಿ (ಎಸ್‌ಇಎಸಿ)ಯ ಗಂಭೀರ ಎಚ್ಚರಿಕೆಯ ನಡುವೆಯೂ ಕೇರಳ ಸರ್ಕಾರ ವಯನಾಡ್ ಮತ್ತು ಕೋಯಿಕ್ಕೋಡ್ ನಡುವೆ ಅವಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಾಗಿದೆ. ಈ ಸುರಂಗ ಇತ್ತೀಚೆಗೆ ಭೂಕುಸಿತ ಸಂಭವಿಸಿದ ಪ್ರದೇಶದ ಸಮೀಪವೇ ಹಾದು ಹೋಗಲಿದೆ ಎನ್ನುವುದು ಆತಂಕದ ವಿಷಯ.

ವಯನಾಡಿನ ಮೆಪ್ಪಾಡಿಯಿಂದ ಕೋಝಿಕ್ಕೋಡ್‌ನ ಅನಕ್ಕಂಪೊಯಿಲ್‌ವರೆಗಿನ 8.7 ಕಿಲೋ ಮೀಟರ್ ಸುರಂಗ ಮಾರ್ಗ ಯೋಜನೆಗೆ ಸರ್ಕಾರ ಟೆಂಡರ್‌ ಕರೆದಿದ್ದು, ಭೋಪಾಲ್ ಮೂಲದ ದಿಲೀಪ್ ಬಿಲ್ಡ್‌ಕಾನ್ 1,341 ಕೋಟಿ ರೂಪಾಯಿಗೆ ಅತಿ ಕಡಿಮೆ ಬಿಡ್ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

ಕೋಝಿಕ್ಕೋಡ್‌ನ ತಿರುವಂಬಾಡಿಯ ಸಿಪಿಎಂ ಶಾಸಕ ಲಿಂಟೊ ಜೋಸೆಫ್ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣವು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೆ, ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಇನ್ನಷ್ಟೇ ಸಿಗಬೇಕಿದೆ. ಅತೀ ದೊಡ್ಡ ಭೂಕುಸಿತ ಸಂಭವಿಸಿದ ಪ್ರದೇಶ ಸಮೀಪದಲ್ಲೇ ಇರುವುದರಿಂದ ಮತ್ತು ಸುರಂಗ ನಿರ್ಮಾಣವಾಗಲಿರುವ ಪ್ರದೇಶದಲ್ಲಿ ಆಗಾಗ ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆ, ಯೋಜನೆಯ ಕುರಿತು ಎಸ್‌ಇಎಸಿ ತೀವ್ರ ಕಳವಳ ವ್ಯಕ್ತಪಡಿಸಿದೆ.

ಸುರಂಗ ಮಾರ್ಗ ನಿರ್ಮಾಣವಾಗಲಿರುವ ಪ್ರದೇಶದಲ್ಲಿ, ವಿಶೇಷವಾಗಿ ಮಳೆಗಾಲದಲ್ಲಿ ಭೂಕುಸಿತ ಸಂಭವಿಸುತ್ತಿದೆ. ಯೋಜನೆಯ ಜಾರಿಯಲ್ಲಿ ವೈಫಲ್ಯಗಳು ಎದುರಾಗಿಲಿದೆ ಎಂದು ಸ್ಥಿರತೆಯ ವಿಶ್ಲೇಷಣೆಯು ಹೇಳಿದೆ. ಪುತ್ತುಮಲ ಎಂಬ ಗ್ರಾಮವು ಪ್ರಸ್ತಾವಿತ ಸುರಂಗ ಮಾರ್ಗದಿಂದ ಸರಿಸುಮಾರು 0.85 ಕಿಮೀ ದೂರದಲ್ಲಿದೆ. ಅಲ್ಲಿ 2019 ರಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು ಎಂದು ಜೂನ್ 11 ರಂದು ನಡೆದ ಎಸ್‌ಇಎಸಿ ಸಭೆ ಹೇಳಿದೆ.

ಪ್ರಸ್ತಾವಿತ ಯೋಜನೆಯು ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರುತ್ತದೆ ಎಂದಿರುವ ಎಸ್‌ಇಎಸಿ, ಪರಿಸರ ಅನುಮತಿಗಾಗಿ ಅರ್ಜಿಯನ್ನು ಪರಿಶೀಲಿಸಲು 28 ಹೆಚ್ಚುವರಿ ದಾಖಲೆಗಳನ್ನು ಕೋರಿದೆ.

ಜುಲೈ 30ರ ಭೂಕುಸಿತದ ನಂತರ, ತಾಮರಶ್ಶೇರಿ ಘಾಟ್ ರಸ್ತೆಯಲ್ಲಿನ ಟ್ರಾಫಿಕ್ ದಟ್ಟಣೆಗೆ ಪರಿಹಾರವಾಗಿ ಯೋಜಿಸಲಾದ ಉದ್ದೇಶಿತ ಸುರಂಗ ರಸ್ತೆಯ ಬಗ್ಗೆ ಪರಿಸರವಾದಿಗಳು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸುರಂಗ ರಸ್ತೆಗಳು ಎಲ್ಲಿಯೂ ಅನಾಹುತಗಳಿಗೆ ಕಾರಣವಾದ ಬಗ್ಗೆ ವರದಿಯಾಗಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ‘ರಾಜೀನಾಮೆ ಕೊಟ್ಟ ನಂತರ ವಿನೇಶಾ ಫೋಗಟ್‌ಗೆ ಭಾರತೀಯ ರೈಲ್ವೆಯಿಂದ ಶೋಕಾಸ್ ನೋಟಿಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...