Homeಮುಖಪುಟಪ. ಬಂಗಾಳ| ಮಹಿಳೆಗೆ ಕ್ರೂರವಾಗಿ ಥಳಿಸಿರುವ ವಿಡಿಯೋ ವೈರಲ್: 2021ರ ಘಟನೆ ಎಂದ ಟಿಎಂಸಿ ನಾಯಕರು

ಪ. ಬಂಗಾಳ| ಮಹಿಳೆಗೆ ಕ್ರೂರವಾಗಿ ಥಳಿಸಿರುವ ವಿಡಿಯೋ ವೈರಲ್: 2021ರ ಘಟನೆ ಎಂದ ಟಿಎಂಸಿ ನಾಯಕರು

- Advertisement -
- Advertisement -

ನಾಲ್ವರು ವ್ಯಕ್ತಿಗಳು ಮಹಿಳೆಯೊಬ್ಬರ ಕೈ, ಕಾಲು ಹಿಡಿದಿರುವುದು ಮತ್ತು ಇನ್ನಿಬ್ಬರು ವ್ಯಕ್ತಿಗಳು ದೊಣ್ಣೆಯಿಂದ ಆಕೆಗೆ ಕ್ರೂರವಾಗಿ ಥಳಿಸುತ್ತಿರುವ ವಿಡಿಯೋವೊಂದು ನಿನ್ನೆಯಿಂದ (ಜುಲೈ 9) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಂತ ಮಜುಂದಾರ್ “ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಶಾಸಕನ ಆಪ್ತ ಜಯಂತ್ ಸಿಂಗ್ ಮತ್ತು ಆತನ ಸಹಚರರು ಬಾಲಕಿಗೆ ಥಳಿಸಿದ್ದಾರೆ ಎಂದು ಆರೋಪಿಸಿದ್ದು, ಉತ್ತರ 24 ಪರಗಣ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

“ಟಿಎಂಸಿ ಶಾಸಕ ಮದನ್ ಮಿತ್ರಾ ಅವರ ಆಪ್ತ ಜಯಂತ್ ಸಿಂಗ್ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಕಮರ್ಹಟಿಯ ತಲ್ತಾಲಾ ಕ್ಲಬ್‌ನಿಂದ ಹೊರ ಹೊಮ್ಮಿರುವ ಈ ವಿಡಿಯೋ ನೋಡಿ ಸಂಪೂರ್ಣವಾಗಿ ದಿಗ್ಭ್ರಮೆಗೊಂಡಿದ್ದೇನೆ. ಮಹಿಳಾ ಹಕ್ಕುಗಳನ್ನು ಪ್ರತಿಪಾದಿಸುತ್ತೇವೆ ಎಂದು ಹೇಳಿಕೊಳ್ಳುವ ಸರ್ಕಾರದ ಅಡಿಯಲ್ಲಿ ಈ ಹೇಯ ಕೃತ್ಯವು ಮಾನವೀಯತೆಗೆ ಅವಮಾನವಾಗಿದೆ” ಎಂದು ಸುಕಂತ ಮಜುಂದಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ ತಲೆ ಮೇಲೆ ಬಿಳಿ ಬಣ್ಣದ ಬಟ್ಟೆ ಸುತ್ತಿಕೊಂಡಿರುವ ವ್ಯಕ್ತಿ ಜಯಂತ್ ಸಿಂಗ್ ಆಗಿದ್ದು, ಆತ ಮಹಿಳೆಯ ಕಾಲು ಹಿಡಿದುಕೊಂಡಿದ್ದಾನೆ. ಆತನ ಸಹಚರರಲ್ಲಿ ಮೂವರು ಮಹಿಳೆಯ ಕೈ ಕಾಲು ಹಿಡಿದುಕೊಂಡಿದ್ದು, ಇನ್ನಿಬ್ಬರು ಥಳಿಸಿದ್ದಾರೆ. ಈ ಘಟನೆ ಮಾರ್ಚ್ 2021ರಲ್ಲಿ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ.

“ನಾವು ವಿಡಿಯೋವನ್ನು ಪರಿಶೀಲಿಸುತ್ತಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮತ್ತು ತಪ್ಪಿತಸ್ಥರನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದೇವೆ. ಹಲ್ಲೆಗೊಳಗಾದ ವ್ಯಕ್ತಿ ಪುರುಷನೋ ಮಹಿಳೆಯೋ ಎಂದು ನೋಡುತ್ತಿದ್ದೇವೆ. ಈ ವಿಡಿಯೋ 2021ರಲ್ಲಿ ಓರ್ವ ಪುರುಷ ಮತ್ತು ಮಹಿಳೆ ಕಳ್ಳರು ಎಂಬ ಶಂಕೆಯ ಮೇಲೆ ಕ್ಲಬ್ ಬಳಿ ಸಿಕ್ಕಿಬಿದ್ದ ಘಟನೆಯದ್ದಾಗಿರಹುದು. ಅದೇ ಘಟನೆಯದ್ದಾ? ಎಂದು ನಾವು ಪರಿಶೀಲಿಸುತ್ತಿದ್ದೇವೆ” ಎಂದು ಬ್ಯಾರಕ್‌ಪುರದ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವೈರಲ್ ವಿಡಿಯೋ ಜೊತೆಗೆ ಮತ್ತೊಂದು ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ “ಪಶ್ಚಿಮ ಬಂಗಾಳದ ಚೋಪ್ರಾದಲ್ಲಿ ಮೆಹರುನ್ನಿಸಾಗೆ ಥಳಿಸಿರುವುದು ಮಮತಾ ಬ್ಯಾನರ್ಜಿಯ ಪುರುಷರು ತ್ವರಿತ ನ್ಯಾಯವನ್ನು ವಿತರಿಸುವ ಪ್ರತ್ಯೇಕ ಉದಾಹರಣೆಯಲ್ಲ. ಟಿಎಂಸಿ ಶಾಸಕ ಮದನ್ ಮಿತ್ರ ಅವರ ಸಹವರ್ತಿ ಜಯಂತ ಸಿಂಗ್ ಮತ್ತು ಅವರ ಗ್ಯಾಂಗ್, ವಾಡಿಕೆಯಂತೆ ಮಹಿಳೆಯರಿಗೆ ಸಾರ್ವಜನಿಕವಾಗಿ ಥಳಿಸಿದೆ. ದಮ್ ದಮ್‌ನ ಕಮರ್ಹಟಿ ಮುನ್ಸಿಪಾಲಿಟಿಯ ಭಾಗವಾಗಿರುವ ಅರಿದಹಾದಲ್ಲಿ ಅವರು ಇತ್ತೀಚೆಗೆ ಮಹಿಳೆ ಮತ್ತು ಆಕೆಯ ಮಗಳನ್ನು ಹತ್ಯೆ ಮಾಡಿದ್ದಾರೆ. ಇದು ಅವರ ಕನಿಷ್ಠ ಅಪರಾಧವಾಗಿದೆ” ಎಂದಿದ್ದಾರೆ.

“ಅದೇ ಟಿಎಂಸಿ ಪುರುಷರ ಮತ್ತೊಂದು ಭಯಾನಕ ವೀಡಿಯೊ (13 ಸೆಕೆಂಡ್). ಕಮರ್ಹಟಿ ವಿಧಾನಸಭಾ ಕ್ಷೇತ್ರದ ತಲ್ತಾಲಾ ಕ್ಲಬ್‌ನ ತಮ್ಮ ‘ಇನ್ಸಾಫ್ ಸಭಾ’ದಲ್ಲಿ ಅಸಹಾಯಕ ಹುಡುಗಿಗೆ ಕ್ರೂರವಾಗಿ ಥಳಿಸಿರುವುದು. ಇದು ಆರು ತಿಂಗಳ ಹಿಂದೆ ನಡೆದ ಘಟನೆ. ದೂರದ ಪ್ರದೇಶವಲ್ಲದ ದಮ್ ಡಮ್‌ನಲ್ಲಿ ಇದು ಸಂಭವಿಸಿದೆ. ಅಂದರೆ ಗ್ರೇಟರ್ ಕೋಲ್ಕತ್ತಾ ಪ್ರದೇಶದ ಭಾಗದಲ್ಲಿ ” ಎಂದು ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ವೈರಲ್‌ ವಿಡಿಯೋಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ವಕ್ತಾರ ರಿಜು ದತ್ತಾ, “ಇದು ಮಾರ್ಚ್ 2021ರ ಹಳೆಯ ವಿಡಿಯೋ ಆಗಿದೆ. ಜಯಂತ್ ಸಿಂಗ್ ಮತ್ತು ಆತನ ಸಹಚರರು ಆರೋಪಿಗಳಾಗಿದ್ದಾರೆ. ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳು ಪ್ರಸ್ತುತ ಜೈಲಿನಲ್ಲಿದ್ದಾರೆ. ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಪುರುಷ ಆಗಿರಬಹುದು. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಬಿಜೆಪಿಯು ಬಂಗಾಳದಲ್ಲಿ ತಿರಸ್ಕೃತಗೊಂಡ ನಂತರ, ಟಿಎಂಸಿಯನ್ನು ಗುರಿಯಾಗಿಸಲು ಮತ್ತು ರಾಜ್ಯವನ್ನು ದೂಷಿಸಲು ಎಲ್ಲಾ ರೀತಿಯ ವಿಡಿಯೋಗಳನ್ನು ಬಳಸುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಟಿಎಂಸಿ ನಾಯಕಿ ಸಾಗರಿಕ ಘೋಷ್ ಕೂಡ ಬಿಜೆಪಿ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದು, ಅಪರಾಧಗಳ ಮೇಲೆ ಶೂನ್ಯ ಸಹಿಷ್ಣು ಎಂಬ ಬಂಗಾಳ ಸರ್ಕಾರದ ನಿಲುವು ಸ್ಪಷ್ಟವಾಗಿದೆ. ವಿಡಿಯೋದಲ್ಲಿ ಕಾಣುತ್ತಿರುವ ಅಪರಾಧ ಕೃತ್ಯವೆಸಗಿದ ಎಲ್ಲರ ಮೇಲೂ ಕ್ರಮ ಕೈಗೊಳ್ಳಲಾಗಿದೆ ಮತ್ತು ಕ್ರೈಮ ಕೈಗೊಳ್ಳಲಾಗುತ್ತದೆ. ಟಿಎಂಸಿಯನ್ನು ಗುರಿಯಾಗಿಸಲು ಮತ್ತು ಬಂಗಾಳವನ್ನು ಅವಮಾನಿಸಲು ಸೋತಿರುವ ಬಿಜೆಪಿ ಯಾವುದೇ ಹಳೆಯ ವಿಡಿಯೋವನ್ನು ಬಳಸಿಕೊಳ್ಳಬಹುದು. ಬಂಗಾಳ ಪೊಲೀಸ್ ತಪ್ಪು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಮುಂದುವರಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...