Homeಮುಖಪುಟಪ. ಬಂಗಾಳ| ಮಹಿಳೆಗೆ ಕ್ರೂರವಾಗಿ ಥಳಿಸಿರುವ ವಿಡಿಯೋ ವೈರಲ್: 2021ರ ಘಟನೆ ಎಂದ ಟಿಎಂಸಿ ನಾಯಕರು

ಪ. ಬಂಗಾಳ| ಮಹಿಳೆಗೆ ಕ್ರೂರವಾಗಿ ಥಳಿಸಿರುವ ವಿಡಿಯೋ ವೈರಲ್: 2021ರ ಘಟನೆ ಎಂದ ಟಿಎಂಸಿ ನಾಯಕರು

- Advertisement -
- Advertisement -

ನಾಲ್ವರು ವ್ಯಕ್ತಿಗಳು ಮಹಿಳೆಯೊಬ್ಬರ ಕೈ, ಕಾಲು ಹಿಡಿದಿರುವುದು ಮತ್ತು ಇನ್ನಿಬ್ಬರು ವ್ಯಕ್ತಿಗಳು ದೊಣ್ಣೆಯಿಂದ ಆಕೆಗೆ ಕ್ರೂರವಾಗಿ ಥಳಿಸುತ್ತಿರುವ ವಿಡಿಯೋವೊಂದು ನಿನ್ನೆಯಿಂದ (ಜುಲೈ 9) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಂತ ಮಜುಂದಾರ್ “ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಶಾಸಕನ ಆಪ್ತ ಜಯಂತ್ ಸಿಂಗ್ ಮತ್ತು ಆತನ ಸಹಚರರು ಬಾಲಕಿಗೆ ಥಳಿಸಿದ್ದಾರೆ ಎಂದು ಆರೋಪಿಸಿದ್ದು, ಉತ್ತರ 24 ಪರಗಣ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

“ಟಿಎಂಸಿ ಶಾಸಕ ಮದನ್ ಮಿತ್ರಾ ಅವರ ಆಪ್ತ ಜಯಂತ್ ಸಿಂಗ್ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಕಮರ್ಹಟಿಯ ತಲ್ತಾಲಾ ಕ್ಲಬ್‌ನಿಂದ ಹೊರ ಹೊಮ್ಮಿರುವ ಈ ವಿಡಿಯೋ ನೋಡಿ ಸಂಪೂರ್ಣವಾಗಿ ದಿಗ್ಭ್ರಮೆಗೊಂಡಿದ್ದೇನೆ. ಮಹಿಳಾ ಹಕ್ಕುಗಳನ್ನು ಪ್ರತಿಪಾದಿಸುತ್ತೇವೆ ಎಂದು ಹೇಳಿಕೊಳ್ಳುವ ಸರ್ಕಾರದ ಅಡಿಯಲ್ಲಿ ಈ ಹೇಯ ಕೃತ್ಯವು ಮಾನವೀಯತೆಗೆ ಅವಮಾನವಾಗಿದೆ” ಎಂದು ಸುಕಂತ ಮಜುಂದಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ ತಲೆ ಮೇಲೆ ಬಿಳಿ ಬಣ್ಣದ ಬಟ್ಟೆ ಸುತ್ತಿಕೊಂಡಿರುವ ವ್ಯಕ್ತಿ ಜಯಂತ್ ಸಿಂಗ್ ಆಗಿದ್ದು, ಆತ ಮಹಿಳೆಯ ಕಾಲು ಹಿಡಿದುಕೊಂಡಿದ್ದಾನೆ. ಆತನ ಸಹಚರರಲ್ಲಿ ಮೂವರು ಮಹಿಳೆಯ ಕೈ ಕಾಲು ಹಿಡಿದುಕೊಂಡಿದ್ದು, ಇನ್ನಿಬ್ಬರು ಥಳಿಸಿದ್ದಾರೆ. ಈ ಘಟನೆ ಮಾರ್ಚ್ 2021ರಲ್ಲಿ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ.

“ನಾವು ವಿಡಿಯೋವನ್ನು ಪರಿಶೀಲಿಸುತ್ತಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮತ್ತು ತಪ್ಪಿತಸ್ಥರನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದೇವೆ. ಹಲ್ಲೆಗೊಳಗಾದ ವ್ಯಕ್ತಿ ಪುರುಷನೋ ಮಹಿಳೆಯೋ ಎಂದು ನೋಡುತ್ತಿದ್ದೇವೆ. ಈ ವಿಡಿಯೋ 2021ರಲ್ಲಿ ಓರ್ವ ಪುರುಷ ಮತ್ತು ಮಹಿಳೆ ಕಳ್ಳರು ಎಂಬ ಶಂಕೆಯ ಮೇಲೆ ಕ್ಲಬ್ ಬಳಿ ಸಿಕ್ಕಿಬಿದ್ದ ಘಟನೆಯದ್ದಾಗಿರಹುದು. ಅದೇ ಘಟನೆಯದ್ದಾ? ಎಂದು ನಾವು ಪರಿಶೀಲಿಸುತ್ತಿದ್ದೇವೆ” ಎಂದು ಬ್ಯಾರಕ್‌ಪುರದ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವೈರಲ್ ವಿಡಿಯೋ ಜೊತೆಗೆ ಮತ್ತೊಂದು ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ “ಪಶ್ಚಿಮ ಬಂಗಾಳದ ಚೋಪ್ರಾದಲ್ಲಿ ಮೆಹರುನ್ನಿಸಾಗೆ ಥಳಿಸಿರುವುದು ಮಮತಾ ಬ್ಯಾನರ್ಜಿಯ ಪುರುಷರು ತ್ವರಿತ ನ್ಯಾಯವನ್ನು ವಿತರಿಸುವ ಪ್ರತ್ಯೇಕ ಉದಾಹರಣೆಯಲ್ಲ. ಟಿಎಂಸಿ ಶಾಸಕ ಮದನ್ ಮಿತ್ರ ಅವರ ಸಹವರ್ತಿ ಜಯಂತ ಸಿಂಗ್ ಮತ್ತು ಅವರ ಗ್ಯಾಂಗ್, ವಾಡಿಕೆಯಂತೆ ಮಹಿಳೆಯರಿಗೆ ಸಾರ್ವಜನಿಕವಾಗಿ ಥಳಿಸಿದೆ. ದಮ್ ದಮ್‌ನ ಕಮರ್ಹಟಿ ಮುನ್ಸಿಪಾಲಿಟಿಯ ಭಾಗವಾಗಿರುವ ಅರಿದಹಾದಲ್ಲಿ ಅವರು ಇತ್ತೀಚೆಗೆ ಮಹಿಳೆ ಮತ್ತು ಆಕೆಯ ಮಗಳನ್ನು ಹತ್ಯೆ ಮಾಡಿದ್ದಾರೆ. ಇದು ಅವರ ಕನಿಷ್ಠ ಅಪರಾಧವಾಗಿದೆ” ಎಂದಿದ್ದಾರೆ.

“ಅದೇ ಟಿಎಂಸಿ ಪುರುಷರ ಮತ್ತೊಂದು ಭಯಾನಕ ವೀಡಿಯೊ (13 ಸೆಕೆಂಡ್). ಕಮರ್ಹಟಿ ವಿಧಾನಸಭಾ ಕ್ಷೇತ್ರದ ತಲ್ತಾಲಾ ಕ್ಲಬ್‌ನ ತಮ್ಮ ‘ಇನ್ಸಾಫ್ ಸಭಾ’ದಲ್ಲಿ ಅಸಹಾಯಕ ಹುಡುಗಿಗೆ ಕ್ರೂರವಾಗಿ ಥಳಿಸಿರುವುದು. ಇದು ಆರು ತಿಂಗಳ ಹಿಂದೆ ನಡೆದ ಘಟನೆ. ದೂರದ ಪ್ರದೇಶವಲ್ಲದ ದಮ್ ಡಮ್‌ನಲ್ಲಿ ಇದು ಸಂಭವಿಸಿದೆ. ಅಂದರೆ ಗ್ರೇಟರ್ ಕೋಲ್ಕತ್ತಾ ಪ್ರದೇಶದ ಭಾಗದಲ್ಲಿ ” ಎಂದು ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ವೈರಲ್‌ ವಿಡಿಯೋಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ವಕ್ತಾರ ರಿಜು ದತ್ತಾ, “ಇದು ಮಾರ್ಚ್ 2021ರ ಹಳೆಯ ವಿಡಿಯೋ ಆಗಿದೆ. ಜಯಂತ್ ಸಿಂಗ್ ಮತ್ತು ಆತನ ಸಹಚರರು ಆರೋಪಿಗಳಾಗಿದ್ದಾರೆ. ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳು ಪ್ರಸ್ತುತ ಜೈಲಿನಲ್ಲಿದ್ದಾರೆ. ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಪುರುಷ ಆಗಿರಬಹುದು. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಬಿಜೆಪಿಯು ಬಂಗಾಳದಲ್ಲಿ ತಿರಸ್ಕೃತಗೊಂಡ ನಂತರ, ಟಿಎಂಸಿಯನ್ನು ಗುರಿಯಾಗಿಸಲು ಮತ್ತು ರಾಜ್ಯವನ್ನು ದೂಷಿಸಲು ಎಲ್ಲಾ ರೀತಿಯ ವಿಡಿಯೋಗಳನ್ನು ಬಳಸುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಟಿಎಂಸಿ ನಾಯಕಿ ಸಾಗರಿಕ ಘೋಷ್ ಕೂಡ ಬಿಜೆಪಿ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದು, ಅಪರಾಧಗಳ ಮೇಲೆ ಶೂನ್ಯ ಸಹಿಷ್ಣು ಎಂಬ ಬಂಗಾಳ ಸರ್ಕಾರದ ನಿಲುವು ಸ್ಪಷ್ಟವಾಗಿದೆ. ವಿಡಿಯೋದಲ್ಲಿ ಕಾಣುತ್ತಿರುವ ಅಪರಾಧ ಕೃತ್ಯವೆಸಗಿದ ಎಲ್ಲರ ಮೇಲೂ ಕ್ರಮ ಕೈಗೊಳ್ಳಲಾಗಿದೆ ಮತ್ತು ಕ್ರೈಮ ಕೈಗೊಳ್ಳಲಾಗುತ್ತದೆ. ಟಿಎಂಸಿಯನ್ನು ಗುರಿಯಾಗಿಸಲು ಮತ್ತು ಬಂಗಾಳವನ್ನು ಅವಮಾನಿಸಲು ಸೋತಿರುವ ಬಿಜೆಪಿ ಯಾವುದೇ ಹಳೆಯ ವಿಡಿಯೋವನ್ನು ಬಳಸಿಕೊಳ್ಳಬಹುದು. ಬಂಗಾಳ ಪೊಲೀಸ್ ತಪ್ಪು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಮುಂದುವರಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...