Homeಮುಖಪುಟಪ. ಬಂಗಾಳ| ಮಹಿಳೆಗೆ ಕ್ರೂರವಾಗಿ ಥಳಿಸಿರುವ ವಿಡಿಯೋ ವೈರಲ್: 2021ರ ಘಟನೆ ಎಂದ ಟಿಎಂಸಿ ನಾಯಕರು

ಪ. ಬಂಗಾಳ| ಮಹಿಳೆಗೆ ಕ್ರೂರವಾಗಿ ಥಳಿಸಿರುವ ವಿಡಿಯೋ ವೈರಲ್: 2021ರ ಘಟನೆ ಎಂದ ಟಿಎಂಸಿ ನಾಯಕರು

- Advertisement -
- Advertisement -

ನಾಲ್ವರು ವ್ಯಕ್ತಿಗಳು ಮಹಿಳೆಯೊಬ್ಬರ ಕೈ, ಕಾಲು ಹಿಡಿದಿರುವುದು ಮತ್ತು ಇನ್ನಿಬ್ಬರು ವ್ಯಕ್ತಿಗಳು ದೊಣ್ಣೆಯಿಂದ ಆಕೆಗೆ ಕ್ರೂರವಾಗಿ ಥಳಿಸುತ್ತಿರುವ ವಿಡಿಯೋವೊಂದು ನಿನ್ನೆಯಿಂದ (ಜುಲೈ 9) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಂತ ಮಜುಂದಾರ್ “ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಶಾಸಕನ ಆಪ್ತ ಜಯಂತ್ ಸಿಂಗ್ ಮತ್ತು ಆತನ ಸಹಚರರು ಬಾಲಕಿಗೆ ಥಳಿಸಿದ್ದಾರೆ ಎಂದು ಆರೋಪಿಸಿದ್ದು, ಉತ್ತರ 24 ಪರಗಣ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

“ಟಿಎಂಸಿ ಶಾಸಕ ಮದನ್ ಮಿತ್ರಾ ಅವರ ಆಪ್ತ ಜಯಂತ್ ಸಿಂಗ್ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಕಮರ್ಹಟಿಯ ತಲ್ತಾಲಾ ಕ್ಲಬ್‌ನಿಂದ ಹೊರ ಹೊಮ್ಮಿರುವ ಈ ವಿಡಿಯೋ ನೋಡಿ ಸಂಪೂರ್ಣವಾಗಿ ದಿಗ್ಭ್ರಮೆಗೊಂಡಿದ್ದೇನೆ. ಮಹಿಳಾ ಹಕ್ಕುಗಳನ್ನು ಪ್ರತಿಪಾದಿಸುತ್ತೇವೆ ಎಂದು ಹೇಳಿಕೊಳ್ಳುವ ಸರ್ಕಾರದ ಅಡಿಯಲ್ಲಿ ಈ ಹೇಯ ಕೃತ್ಯವು ಮಾನವೀಯತೆಗೆ ಅವಮಾನವಾಗಿದೆ” ಎಂದು ಸುಕಂತ ಮಜುಂದಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ ತಲೆ ಮೇಲೆ ಬಿಳಿ ಬಣ್ಣದ ಬಟ್ಟೆ ಸುತ್ತಿಕೊಂಡಿರುವ ವ್ಯಕ್ತಿ ಜಯಂತ್ ಸಿಂಗ್ ಆಗಿದ್ದು, ಆತ ಮಹಿಳೆಯ ಕಾಲು ಹಿಡಿದುಕೊಂಡಿದ್ದಾನೆ. ಆತನ ಸಹಚರರಲ್ಲಿ ಮೂವರು ಮಹಿಳೆಯ ಕೈ ಕಾಲು ಹಿಡಿದುಕೊಂಡಿದ್ದು, ಇನ್ನಿಬ್ಬರು ಥಳಿಸಿದ್ದಾರೆ. ಈ ಘಟನೆ ಮಾರ್ಚ್ 2021ರಲ್ಲಿ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ.

“ನಾವು ವಿಡಿಯೋವನ್ನು ಪರಿಶೀಲಿಸುತ್ತಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮತ್ತು ತಪ್ಪಿತಸ್ಥರನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದೇವೆ. ಹಲ್ಲೆಗೊಳಗಾದ ವ್ಯಕ್ತಿ ಪುರುಷನೋ ಮಹಿಳೆಯೋ ಎಂದು ನೋಡುತ್ತಿದ್ದೇವೆ. ಈ ವಿಡಿಯೋ 2021ರಲ್ಲಿ ಓರ್ವ ಪುರುಷ ಮತ್ತು ಮಹಿಳೆ ಕಳ್ಳರು ಎಂಬ ಶಂಕೆಯ ಮೇಲೆ ಕ್ಲಬ್ ಬಳಿ ಸಿಕ್ಕಿಬಿದ್ದ ಘಟನೆಯದ್ದಾಗಿರಹುದು. ಅದೇ ಘಟನೆಯದ್ದಾ? ಎಂದು ನಾವು ಪರಿಶೀಲಿಸುತ್ತಿದ್ದೇವೆ” ಎಂದು ಬ್ಯಾರಕ್‌ಪುರದ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವೈರಲ್ ವಿಡಿಯೋ ಜೊತೆಗೆ ಮತ್ತೊಂದು ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ “ಪಶ್ಚಿಮ ಬಂಗಾಳದ ಚೋಪ್ರಾದಲ್ಲಿ ಮೆಹರುನ್ನಿಸಾಗೆ ಥಳಿಸಿರುವುದು ಮಮತಾ ಬ್ಯಾನರ್ಜಿಯ ಪುರುಷರು ತ್ವರಿತ ನ್ಯಾಯವನ್ನು ವಿತರಿಸುವ ಪ್ರತ್ಯೇಕ ಉದಾಹರಣೆಯಲ್ಲ. ಟಿಎಂಸಿ ಶಾಸಕ ಮದನ್ ಮಿತ್ರ ಅವರ ಸಹವರ್ತಿ ಜಯಂತ ಸಿಂಗ್ ಮತ್ತು ಅವರ ಗ್ಯಾಂಗ್, ವಾಡಿಕೆಯಂತೆ ಮಹಿಳೆಯರಿಗೆ ಸಾರ್ವಜನಿಕವಾಗಿ ಥಳಿಸಿದೆ. ದಮ್ ದಮ್‌ನ ಕಮರ್ಹಟಿ ಮುನ್ಸಿಪಾಲಿಟಿಯ ಭಾಗವಾಗಿರುವ ಅರಿದಹಾದಲ್ಲಿ ಅವರು ಇತ್ತೀಚೆಗೆ ಮಹಿಳೆ ಮತ್ತು ಆಕೆಯ ಮಗಳನ್ನು ಹತ್ಯೆ ಮಾಡಿದ್ದಾರೆ. ಇದು ಅವರ ಕನಿಷ್ಠ ಅಪರಾಧವಾಗಿದೆ” ಎಂದಿದ್ದಾರೆ.

“ಅದೇ ಟಿಎಂಸಿ ಪುರುಷರ ಮತ್ತೊಂದು ಭಯಾನಕ ವೀಡಿಯೊ (13 ಸೆಕೆಂಡ್). ಕಮರ್ಹಟಿ ವಿಧಾನಸಭಾ ಕ್ಷೇತ್ರದ ತಲ್ತಾಲಾ ಕ್ಲಬ್‌ನ ತಮ್ಮ ‘ಇನ್ಸಾಫ್ ಸಭಾ’ದಲ್ಲಿ ಅಸಹಾಯಕ ಹುಡುಗಿಗೆ ಕ್ರೂರವಾಗಿ ಥಳಿಸಿರುವುದು. ಇದು ಆರು ತಿಂಗಳ ಹಿಂದೆ ನಡೆದ ಘಟನೆ. ದೂರದ ಪ್ರದೇಶವಲ್ಲದ ದಮ್ ಡಮ್‌ನಲ್ಲಿ ಇದು ಸಂಭವಿಸಿದೆ. ಅಂದರೆ ಗ್ರೇಟರ್ ಕೋಲ್ಕತ್ತಾ ಪ್ರದೇಶದ ಭಾಗದಲ್ಲಿ ” ಎಂದು ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ವೈರಲ್‌ ವಿಡಿಯೋಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ವಕ್ತಾರ ರಿಜು ದತ್ತಾ, “ಇದು ಮಾರ್ಚ್ 2021ರ ಹಳೆಯ ವಿಡಿಯೋ ಆಗಿದೆ. ಜಯಂತ್ ಸಿಂಗ್ ಮತ್ತು ಆತನ ಸಹಚರರು ಆರೋಪಿಗಳಾಗಿದ್ದಾರೆ. ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳು ಪ್ರಸ್ತುತ ಜೈಲಿನಲ್ಲಿದ್ದಾರೆ. ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಪುರುಷ ಆಗಿರಬಹುದು. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಬಿಜೆಪಿಯು ಬಂಗಾಳದಲ್ಲಿ ತಿರಸ್ಕೃತಗೊಂಡ ನಂತರ, ಟಿಎಂಸಿಯನ್ನು ಗುರಿಯಾಗಿಸಲು ಮತ್ತು ರಾಜ್ಯವನ್ನು ದೂಷಿಸಲು ಎಲ್ಲಾ ರೀತಿಯ ವಿಡಿಯೋಗಳನ್ನು ಬಳಸುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಟಿಎಂಸಿ ನಾಯಕಿ ಸಾಗರಿಕ ಘೋಷ್ ಕೂಡ ಬಿಜೆಪಿ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದು, ಅಪರಾಧಗಳ ಮೇಲೆ ಶೂನ್ಯ ಸಹಿಷ್ಣು ಎಂಬ ಬಂಗಾಳ ಸರ್ಕಾರದ ನಿಲುವು ಸ್ಪಷ್ಟವಾಗಿದೆ. ವಿಡಿಯೋದಲ್ಲಿ ಕಾಣುತ್ತಿರುವ ಅಪರಾಧ ಕೃತ್ಯವೆಸಗಿದ ಎಲ್ಲರ ಮೇಲೂ ಕ್ರಮ ಕೈಗೊಳ್ಳಲಾಗಿದೆ ಮತ್ತು ಕ್ರೈಮ ಕೈಗೊಳ್ಳಲಾಗುತ್ತದೆ. ಟಿಎಂಸಿಯನ್ನು ಗುರಿಯಾಗಿಸಲು ಮತ್ತು ಬಂಗಾಳವನ್ನು ಅವಮಾನಿಸಲು ಸೋತಿರುವ ಬಿಜೆಪಿ ಯಾವುದೇ ಹಳೆಯ ವಿಡಿಯೋವನ್ನು ಬಳಸಿಕೊಳ್ಳಬಹುದು. ಬಂಗಾಳ ಪೊಲೀಸ್ ತಪ್ಪು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಮುಂದುವರಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...