Homeಮುಖಪುಟಪ. ಬಂಗಾಳ| ಮಹಿಳೆಗೆ ಕ್ರೂರವಾಗಿ ಥಳಿಸಿರುವ ವಿಡಿಯೋ ವೈರಲ್: 2021ರ ಘಟನೆ ಎಂದ ಟಿಎಂಸಿ ನಾಯಕರು

ಪ. ಬಂಗಾಳ| ಮಹಿಳೆಗೆ ಕ್ರೂರವಾಗಿ ಥಳಿಸಿರುವ ವಿಡಿಯೋ ವೈರಲ್: 2021ರ ಘಟನೆ ಎಂದ ಟಿಎಂಸಿ ನಾಯಕರು

- Advertisement -
- Advertisement -

ನಾಲ್ವರು ವ್ಯಕ್ತಿಗಳು ಮಹಿಳೆಯೊಬ್ಬರ ಕೈ, ಕಾಲು ಹಿಡಿದಿರುವುದು ಮತ್ತು ಇನ್ನಿಬ್ಬರು ವ್ಯಕ್ತಿಗಳು ದೊಣ್ಣೆಯಿಂದ ಆಕೆಗೆ ಕ್ರೂರವಾಗಿ ಥಳಿಸುತ್ತಿರುವ ವಿಡಿಯೋವೊಂದು ನಿನ್ನೆಯಿಂದ (ಜುಲೈ 9) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಂತ ಮಜುಂದಾರ್ “ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಶಾಸಕನ ಆಪ್ತ ಜಯಂತ್ ಸಿಂಗ್ ಮತ್ತು ಆತನ ಸಹಚರರು ಬಾಲಕಿಗೆ ಥಳಿಸಿದ್ದಾರೆ ಎಂದು ಆರೋಪಿಸಿದ್ದು, ಉತ್ತರ 24 ಪರಗಣ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

“ಟಿಎಂಸಿ ಶಾಸಕ ಮದನ್ ಮಿತ್ರಾ ಅವರ ಆಪ್ತ ಜಯಂತ್ ಸಿಂಗ್ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಕಮರ್ಹಟಿಯ ತಲ್ತಾಲಾ ಕ್ಲಬ್‌ನಿಂದ ಹೊರ ಹೊಮ್ಮಿರುವ ಈ ವಿಡಿಯೋ ನೋಡಿ ಸಂಪೂರ್ಣವಾಗಿ ದಿಗ್ಭ್ರಮೆಗೊಂಡಿದ್ದೇನೆ. ಮಹಿಳಾ ಹಕ್ಕುಗಳನ್ನು ಪ್ರತಿಪಾದಿಸುತ್ತೇವೆ ಎಂದು ಹೇಳಿಕೊಳ್ಳುವ ಸರ್ಕಾರದ ಅಡಿಯಲ್ಲಿ ಈ ಹೇಯ ಕೃತ್ಯವು ಮಾನವೀಯತೆಗೆ ಅವಮಾನವಾಗಿದೆ” ಎಂದು ಸುಕಂತ ಮಜುಂದಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ ತಲೆ ಮೇಲೆ ಬಿಳಿ ಬಣ್ಣದ ಬಟ್ಟೆ ಸುತ್ತಿಕೊಂಡಿರುವ ವ್ಯಕ್ತಿ ಜಯಂತ್ ಸಿಂಗ್ ಆಗಿದ್ದು, ಆತ ಮಹಿಳೆಯ ಕಾಲು ಹಿಡಿದುಕೊಂಡಿದ್ದಾನೆ. ಆತನ ಸಹಚರರಲ್ಲಿ ಮೂವರು ಮಹಿಳೆಯ ಕೈ ಕಾಲು ಹಿಡಿದುಕೊಂಡಿದ್ದು, ಇನ್ನಿಬ್ಬರು ಥಳಿಸಿದ್ದಾರೆ. ಈ ಘಟನೆ ಮಾರ್ಚ್ 2021ರಲ್ಲಿ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ.

“ನಾವು ವಿಡಿಯೋವನ್ನು ಪರಿಶೀಲಿಸುತ್ತಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮತ್ತು ತಪ್ಪಿತಸ್ಥರನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದೇವೆ. ಹಲ್ಲೆಗೊಳಗಾದ ವ್ಯಕ್ತಿ ಪುರುಷನೋ ಮಹಿಳೆಯೋ ಎಂದು ನೋಡುತ್ತಿದ್ದೇವೆ. ಈ ವಿಡಿಯೋ 2021ರಲ್ಲಿ ಓರ್ವ ಪುರುಷ ಮತ್ತು ಮಹಿಳೆ ಕಳ್ಳರು ಎಂಬ ಶಂಕೆಯ ಮೇಲೆ ಕ್ಲಬ್ ಬಳಿ ಸಿಕ್ಕಿಬಿದ್ದ ಘಟನೆಯದ್ದಾಗಿರಹುದು. ಅದೇ ಘಟನೆಯದ್ದಾ? ಎಂದು ನಾವು ಪರಿಶೀಲಿಸುತ್ತಿದ್ದೇವೆ” ಎಂದು ಬ್ಯಾರಕ್‌ಪುರದ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವೈರಲ್ ವಿಡಿಯೋ ಜೊತೆಗೆ ಮತ್ತೊಂದು ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ “ಪಶ್ಚಿಮ ಬಂಗಾಳದ ಚೋಪ್ರಾದಲ್ಲಿ ಮೆಹರುನ್ನಿಸಾಗೆ ಥಳಿಸಿರುವುದು ಮಮತಾ ಬ್ಯಾನರ್ಜಿಯ ಪುರುಷರು ತ್ವರಿತ ನ್ಯಾಯವನ್ನು ವಿತರಿಸುವ ಪ್ರತ್ಯೇಕ ಉದಾಹರಣೆಯಲ್ಲ. ಟಿಎಂಸಿ ಶಾಸಕ ಮದನ್ ಮಿತ್ರ ಅವರ ಸಹವರ್ತಿ ಜಯಂತ ಸಿಂಗ್ ಮತ್ತು ಅವರ ಗ್ಯಾಂಗ್, ವಾಡಿಕೆಯಂತೆ ಮಹಿಳೆಯರಿಗೆ ಸಾರ್ವಜನಿಕವಾಗಿ ಥಳಿಸಿದೆ. ದಮ್ ದಮ್‌ನ ಕಮರ್ಹಟಿ ಮುನ್ಸಿಪಾಲಿಟಿಯ ಭಾಗವಾಗಿರುವ ಅರಿದಹಾದಲ್ಲಿ ಅವರು ಇತ್ತೀಚೆಗೆ ಮಹಿಳೆ ಮತ್ತು ಆಕೆಯ ಮಗಳನ್ನು ಹತ್ಯೆ ಮಾಡಿದ್ದಾರೆ. ಇದು ಅವರ ಕನಿಷ್ಠ ಅಪರಾಧವಾಗಿದೆ” ಎಂದಿದ್ದಾರೆ.

“ಅದೇ ಟಿಎಂಸಿ ಪುರುಷರ ಮತ್ತೊಂದು ಭಯಾನಕ ವೀಡಿಯೊ (13 ಸೆಕೆಂಡ್). ಕಮರ್ಹಟಿ ವಿಧಾನಸಭಾ ಕ್ಷೇತ್ರದ ತಲ್ತಾಲಾ ಕ್ಲಬ್‌ನ ತಮ್ಮ ‘ಇನ್ಸಾಫ್ ಸಭಾ’ದಲ್ಲಿ ಅಸಹಾಯಕ ಹುಡುಗಿಗೆ ಕ್ರೂರವಾಗಿ ಥಳಿಸಿರುವುದು. ಇದು ಆರು ತಿಂಗಳ ಹಿಂದೆ ನಡೆದ ಘಟನೆ. ದೂರದ ಪ್ರದೇಶವಲ್ಲದ ದಮ್ ಡಮ್‌ನಲ್ಲಿ ಇದು ಸಂಭವಿಸಿದೆ. ಅಂದರೆ ಗ್ರೇಟರ್ ಕೋಲ್ಕತ್ತಾ ಪ್ರದೇಶದ ಭಾಗದಲ್ಲಿ ” ಎಂದು ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ವೈರಲ್‌ ವಿಡಿಯೋಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ವಕ್ತಾರ ರಿಜು ದತ್ತಾ, “ಇದು ಮಾರ್ಚ್ 2021ರ ಹಳೆಯ ವಿಡಿಯೋ ಆಗಿದೆ. ಜಯಂತ್ ಸಿಂಗ್ ಮತ್ತು ಆತನ ಸಹಚರರು ಆರೋಪಿಗಳಾಗಿದ್ದಾರೆ. ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳು ಪ್ರಸ್ತುತ ಜೈಲಿನಲ್ಲಿದ್ದಾರೆ. ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಪುರುಷ ಆಗಿರಬಹುದು. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಬಿಜೆಪಿಯು ಬಂಗಾಳದಲ್ಲಿ ತಿರಸ್ಕೃತಗೊಂಡ ನಂತರ, ಟಿಎಂಸಿಯನ್ನು ಗುರಿಯಾಗಿಸಲು ಮತ್ತು ರಾಜ್ಯವನ್ನು ದೂಷಿಸಲು ಎಲ್ಲಾ ರೀತಿಯ ವಿಡಿಯೋಗಳನ್ನು ಬಳಸುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಟಿಎಂಸಿ ನಾಯಕಿ ಸಾಗರಿಕ ಘೋಷ್ ಕೂಡ ಬಿಜೆಪಿ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದು, ಅಪರಾಧಗಳ ಮೇಲೆ ಶೂನ್ಯ ಸಹಿಷ್ಣು ಎಂಬ ಬಂಗಾಳ ಸರ್ಕಾರದ ನಿಲುವು ಸ್ಪಷ್ಟವಾಗಿದೆ. ವಿಡಿಯೋದಲ್ಲಿ ಕಾಣುತ್ತಿರುವ ಅಪರಾಧ ಕೃತ್ಯವೆಸಗಿದ ಎಲ್ಲರ ಮೇಲೂ ಕ್ರಮ ಕೈಗೊಳ್ಳಲಾಗಿದೆ ಮತ್ತು ಕ್ರೈಮ ಕೈಗೊಳ್ಳಲಾಗುತ್ತದೆ. ಟಿಎಂಸಿಯನ್ನು ಗುರಿಯಾಗಿಸಲು ಮತ್ತು ಬಂಗಾಳವನ್ನು ಅವಮಾನಿಸಲು ಸೋತಿರುವ ಬಿಜೆಪಿ ಯಾವುದೇ ಹಳೆಯ ವಿಡಿಯೋವನ್ನು ಬಳಸಿಕೊಳ್ಳಬಹುದು. ಬಂಗಾಳ ಪೊಲೀಸ್ ತಪ್ಪು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಮುಂದುವರಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...