Homeಮುಖಪುಟನಮ್ಮದೇ ಭಾಷೆಗಳಂತೆ ನಮ್ಮ ಬಾವುಟಗಳನ್ನೂ ಹೊಂದಿದ್ದೇವೆ: ಆಂಧ್ರ ಸಿಎಂ ಪರ ನಿಂತ ನಟಿ ರಮ್ಯಾ ದಿವ್ಯಸ್ಪಂದನ

ನಮ್ಮದೇ ಭಾಷೆಗಳಂತೆ ನಮ್ಮ ಬಾವುಟಗಳನ್ನೂ ಹೊಂದಿದ್ದೇವೆ: ಆಂಧ್ರ ಸಿಎಂ ಪರ ನಿಂತ ನಟಿ ರಮ್ಯಾ ದಿವ್ಯಸ್ಪಂದನ

ಆರ್‌ಆರ್‌ಆರ್‌ ಸಿನಿಮಾಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ಆಂಧ್ರ ಸಿಎಂ "ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ" ಎಂದು ಟ್ವೀಟ್ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

- Advertisement -
- Advertisement -

ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಪ್ರತಿಷ್ಟಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ರಾಷ್ಟ್ರೀಯತೆ ಮತ್ತು ಪ್ರಾದೇಶಿಕತೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ ಎಂದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರನ್ನು ಗಾಯಕ ಅದ್ನಾನ್ ಸಾಮಿ ಟೀಕಿಸಿದ್ದರು. ಈಗ ನಟಿ ರಮ್ಯಾ ದಿವ್ಯಸ್ಪಂದನರವರು ಆಂಧ್ರ ಸಿಎಂ ಪರ ನಿಂತು ಟ್ವೀಟ್ ಮಾಡಿದ್ದಾರೆ.

ತೆಲಗು ಹಾಡಿಗೆ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರು ಚಿತ್ರತಂಡವನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದರು. “ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ. ಆಂಧ್ರ ಪ್ರದೇಶ ಪರವಾಗಿ ಚಿತ್ರತಂಡದ ಎಂ.ಎಂ ಕೀರವಾಣಿ, ರಾಜಮೌಳಿ, ತಾರಕ್, ಚರಣ್ ಹಾಗೂ ಇಡೀ ‘RRR’ ತಂಡಕ್ಕೆ ಅಭಿನಂದನೆ. ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದಿದ್ದರು.

ಇದಕ್ಕೆ ತಕರಾರು ತೆಗೆದಿದ್ದ ಗಾಯಕ, ಸಂಗೀತ ನಿರ್ದೇಶಕ ಅದ್ನಾನ್ ಸಾಮಿ, “ತೆಲುಗು ಬಾವುಟನಾ? ನೀವು ಹೇಳುತ್ತಿರುವುದು ಭಾರತದ ಬಾವುಟ ಅಲ್ಲವೇ? ಪ್ರಪಂಚದ ವಿಷಯಕ್ಕೆ ಬಂದರೆ ನಾವೆಲ್ಲಾ ಒಂದೇ ದೇಶ. ಮೊದಲು ನಾವು ಭಾರತೀಯರು. ದಯವಿಟ್ಟು ನೀವು ಭಾರತ ಬಿಟ್ಟು ಬೇರೆ ಇರಲು ಪ್ರಯತ್ನಿಸಬೇಡಿ. ಈ ವಿಭಜನೆಯ ಸಿದ್ದಾಂತವೂ ಅತಿ ಅಪಾಯಕಾರಿ ಎಂದು 1947ರಲ್ಲಿ ನಾವು ನೋಡಿದ್ದೇವೆ. ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ನಟಿ ರಮ್ಯಾ, “ಹೌದು ನಾವು ಭಾರತೀಯರು, ಜೊತೆಗೆ ಕನ್ನಡಿಗರು, ತೆಲುಗರು, ತಮಿಳರು ಬಂಗಾಳಿಗಳು ಇತ್ಯಾದಿಗಳು ಸಹ. ನಾವು ನಮ್ಮದೇಯಾದ ಭಾಷೆಗಳನ್ನು ಹೊಂದಿರುವಂತೆ ನಮ್ಮದೇ ಬಾವುಟಗಳನ್ನೂ ಸಹ ಹೊಂದಿದ್ದೇವೆ. ನಾವು ಭಾರತೀಯರೆನಿಸಿಕೊಳ್ಳುವುದಕ್ಕೆ ಮತ್ತು ಹಲವು ಸಂಸ್ಕೃತಿ, ಭಾಷೆ, ಧ್ವಜಗಳಗಳೊಂದಿಗೆ ಬೇರೂರಿರುವ ಜನರು ಎನಿಸಿಕೊಳ್ಳುವುದಕ್ಕೆ ಹೆಮ್ಮೆ ಇದೆ. ವಿವಿಧತೆಯಲ್ಲಿ ಏಕತೆ ಸಾಧಿಸುವುದು ಮುಖ್ಯವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಪ್ರೀತಿಯ ಅದ್ನಾನ್ ಸಾಮಿಯವರೆ ತೆಲುಗು ಧ್ವಜ ಎಂದರೆ ಏನೆಂದು ಅರ್ಥಮಾಡಿಕೊಳ್ಳದ ನಿಮ್ಮ ಬುದ್ದಿಯನ್ನು ಇದು ತೋರಿಸುತ್ತಿದೆ. ತೆಲುಗು ಧ್ವಜ ಎಂದರೆ ನಮ್ಮ ಹೆಮ್ಮೆಯನ್ನು ಸೂಚಿಸುತ್ತದೆ. ನಿಮ್ಮಂತಹವರಿಂದ ನಾವು ದೇಶಪ್ರೇಮದ ಕುರಿತು ಉಪನ್ಯಾಸಗಳನ್ನು ಕೇಳಬೇಕಾಗಿಲ್ಲ. ಎರವಲು ಪಡೆದ ರಾಷ್ಟ್ರೀಯತೆಯನ್ನು ನೀವೇ ಇಟ್ಟುಕೊಳ್ಳುವುದು ಉತ್ತಮ ಎಂದು ಹೈದರಾಬಾದ್ ಚಿಂತಕರ ಒಕ್ಕೂಟ ಟೀಕಿಸಿದೆ.

ಈ ಹಿಂದೆಯೂ ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ವಾದ ವಿವಾದ ನಡೆದಿತ್ತು. ಹಿಂದಿ ರಾಷ್ಟ್ರೀಯ ಭಾಷೆ ಎಂಬುದನ್ನು ನಾವು ಒಪ್ಪುವುದಿಲ್ಲ ಎಂದು ಸುದೀಪ್ ಪ್ರತಿಪಾದಿಸಿದ್ದರು.

ಇದನ್ನೂ ಓದಿ; ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...