Homeಮುಖಪುಟನಮ್ಮದೇ ಭಾಷೆಗಳಂತೆ ನಮ್ಮ ಬಾವುಟಗಳನ್ನೂ ಹೊಂದಿದ್ದೇವೆ: ಆಂಧ್ರ ಸಿಎಂ ಪರ ನಿಂತ ನಟಿ ರಮ್ಯಾ ದಿವ್ಯಸ್ಪಂದನ

ನಮ್ಮದೇ ಭಾಷೆಗಳಂತೆ ನಮ್ಮ ಬಾವುಟಗಳನ್ನೂ ಹೊಂದಿದ್ದೇವೆ: ಆಂಧ್ರ ಸಿಎಂ ಪರ ನಿಂತ ನಟಿ ರಮ್ಯಾ ದಿವ್ಯಸ್ಪಂದನ

ಆರ್‌ಆರ್‌ಆರ್‌ ಸಿನಿಮಾಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ಆಂಧ್ರ ಸಿಎಂ "ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ" ಎಂದು ಟ್ವೀಟ್ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

- Advertisement -
- Advertisement -

ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಪ್ರತಿಷ್ಟಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ರಾಷ್ಟ್ರೀಯತೆ ಮತ್ತು ಪ್ರಾದೇಶಿಕತೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ ಎಂದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರನ್ನು ಗಾಯಕ ಅದ್ನಾನ್ ಸಾಮಿ ಟೀಕಿಸಿದ್ದರು. ಈಗ ನಟಿ ರಮ್ಯಾ ದಿವ್ಯಸ್ಪಂದನರವರು ಆಂಧ್ರ ಸಿಎಂ ಪರ ನಿಂತು ಟ್ವೀಟ್ ಮಾಡಿದ್ದಾರೆ.

ತೆಲಗು ಹಾಡಿಗೆ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರು ಚಿತ್ರತಂಡವನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದರು. “ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ. ಆಂಧ್ರ ಪ್ರದೇಶ ಪರವಾಗಿ ಚಿತ್ರತಂಡದ ಎಂ.ಎಂ ಕೀರವಾಣಿ, ರಾಜಮೌಳಿ, ತಾರಕ್, ಚರಣ್ ಹಾಗೂ ಇಡೀ ‘RRR’ ತಂಡಕ್ಕೆ ಅಭಿನಂದನೆ. ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದಿದ್ದರು.

ಇದಕ್ಕೆ ತಕರಾರು ತೆಗೆದಿದ್ದ ಗಾಯಕ, ಸಂಗೀತ ನಿರ್ದೇಶಕ ಅದ್ನಾನ್ ಸಾಮಿ, “ತೆಲುಗು ಬಾವುಟನಾ? ನೀವು ಹೇಳುತ್ತಿರುವುದು ಭಾರತದ ಬಾವುಟ ಅಲ್ಲವೇ? ಪ್ರಪಂಚದ ವಿಷಯಕ್ಕೆ ಬಂದರೆ ನಾವೆಲ್ಲಾ ಒಂದೇ ದೇಶ. ಮೊದಲು ನಾವು ಭಾರತೀಯರು. ದಯವಿಟ್ಟು ನೀವು ಭಾರತ ಬಿಟ್ಟು ಬೇರೆ ಇರಲು ಪ್ರಯತ್ನಿಸಬೇಡಿ. ಈ ವಿಭಜನೆಯ ಸಿದ್ದಾಂತವೂ ಅತಿ ಅಪಾಯಕಾರಿ ಎಂದು 1947ರಲ್ಲಿ ನಾವು ನೋಡಿದ್ದೇವೆ. ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ನಟಿ ರಮ್ಯಾ, “ಹೌದು ನಾವು ಭಾರತೀಯರು, ಜೊತೆಗೆ ಕನ್ನಡಿಗರು, ತೆಲುಗರು, ತಮಿಳರು ಬಂಗಾಳಿಗಳು ಇತ್ಯಾದಿಗಳು ಸಹ. ನಾವು ನಮ್ಮದೇಯಾದ ಭಾಷೆಗಳನ್ನು ಹೊಂದಿರುವಂತೆ ನಮ್ಮದೇ ಬಾವುಟಗಳನ್ನೂ ಸಹ ಹೊಂದಿದ್ದೇವೆ. ನಾವು ಭಾರತೀಯರೆನಿಸಿಕೊಳ್ಳುವುದಕ್ಕೆ ಮತ್ತು ಹಲವು ಸಂಸ್ಕೃತಿ, ಭಾಷೆ, ಧ್ವಜಗಳಗಳೊಂದಿಗೆ ಬೇರೂರಿರುವ ಜನರು ಎನಿಸಿಕೊಳ್ಳುವುದಕ್ಕೆ ಹೆಮ್ಮೆ ಇದೆ. ವಿವಿಧತೆಯಲ್ಲಿ ಏಕತೆ ಸಾಧಿಸುವುದು ಮುಖ್ಯವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಪ್ರೀತಿಯ ಅದ್ನಾನ್ ಸಾಮಿಯವರೆ ತೆಲುಗು ಧ್ವಜ ಎಂದರೆ ಏನೆಂದು ಅರ್ಥಮಾಡಿಕೊಳ್ಳದ ನಿಮ್ಮ ಬುದ್ದಿಯನ್ನು ಇದು ತೋರಿಸುತ್ತಿದೆ. ತೆಲುಗು ಧ್ವಜ ಎಂದರೆ ನಮ್ಮ ಹೆಮ್ಮೆಯನ್ನು ಸೂಚಿಸುತ್ತದೆ. ನಿಮ್ಮಂತಹವರಿಂದ ನಾವು ದೇಶಪ್ರೇಮದ ಕುರಿತು ಉಪನ್ಯಾಸಗಳನ್ನು ಕೇಳಬೇಕಾಗಿಲ್ಲ. ಎರವಲು ಪಡೆದ ರಾಷ್ಟ್ರೀಯತೆಯನ್ನು ನೀವೇ ಇಟ್ಟುಕೊಳ್ಳುವುದು ಉತ್ತಮ ಎಂದು ಹೈದರಾಬಾದ್ ಚಿಂತಕರ ಒಕ್ಕೂಟ ಟೀಕಿಸಿದೆ.

ಈ ಹಿಂದೆಯೂ ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ವಾದ ವಿವಾದ ನಡೆದಿತ್ತು. ಹಿಂದಿ ರಾಷ್ಟ್ರೀಯ ಭಾಷೆ ಎಂಬುದನ್ನು ನಾವು ಒಪ್ಪುವುದಿಲ್ಲ ಎಂದು ಸುದೀಪ್ ಪ್ರತಿಪಾದಿಸಿದ್ದರು.

ಇದನ್ನೂ ಓದಿ; ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...