Homeಮುಖಪುಟನಮ್ಮದೇ ಭಾಷೆಗಳಂತೆ ನಮ್ಮ ಬಾವುಟಗಳನ್ನೂ ಹೊಂದಿದ್ದೇವೆ: ಆಂಧ್ರ ಸಿಎಂ ಪರ ನಿಂತ ನಟಿ ರಮ್ಯಾ ದಿವ್ಯಸ್ಪಂದನ

ನಮ್ಮದೇ ಭಾಷೆಗಳಂತೆ ನಮ್ಮ ಬಾವುಟಗಳನ್ನೂ ಹೊಂದಿದ್ದೇವೆ: ಆಂಧ್ರ ಸಿಎಂ ಪರ ನಿಂತ ನಟಿ ರಮ್ಯಾ ದಿವ್ಯಸ್ಪಂದನ

ಆರ್‌ಆರ್‌ಆರ್‌ ಸಿನಿಮಾಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ಆಂಧ್ರ ಸಿಎಂ "ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ" ಎಂದು ಟ್ವೀಟ್ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

- Advertisement -
- Advertisement -

ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಪ್ರತಿಷ್ಟಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ರಾಷ್ಟ್ರೀಯತೆ ಮತ್ತು ಪ್ರಾದೇಶಿಕತೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ ಎಂದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರನ್ನು ಗಾಯಕ ಅದ್ನಾನ್ ಸಾಮಿ ಟೀಕಿಸಿದ್ದರು. ಈಗ ನಟಿ ರಮ್ಯಾ ದಿವ್ಯಸ್ಪಂದನರವರು ಆಂಧ್ರ ಸಿಎಂ ಪರ ನಿಂತು ಟ್ವೀಟ್ ಮಾಡಿದ್ದಾರೆ.

ತೆಲಗು ಹಾಡಿಗೆ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರು ಚಿತ್ರತಂಡವನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದರು. “ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ. ಆಂಧ್ರ ಪ್ರದೇಶ ಪರವಾಗಿ ಚಿತ್ರತಂಡದ ಎಂ.ಎಂ ಕೀರವಾಣಿ, ರಾಜಮೌಳಿ, ತಾರಕ್, ಚರಣ್ ಹಾಗೂ ಇಡೀ ‘RRR’ ತಂಡಕ್ಕೆ ಅಭಿನಂದನೆ. ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದಿದ್ದರು.

ಇದಕ್ಕೆ ತಕರಾರು ತೆಗೆದಿದ್ದ ಗಾಯಕ, ಸಂಗೀತ ನಿರ್ದೇಶಕ ಅದ್ನಾನ್ ಸಾಮಿ, “ತೆಲುಗು ಬಾವುಟನಾ? ನೀವು ಹೇಳುತ್ತಿರುವುದು ಭಾರತದ ಬಾವುಟ ಅಲ್ಲವೇ? ಪ್ರಪಂಚದ ವಿಷಯಕ್ಕೆ ಬಂದರೆ ನಾವೆಲ್ಲಾ ಒಂದೇ ದೇಶ. ಮೊದಲು ನಾವು ಭಾರತೀಯರು. ದಯವಿಟ್ಟು ನೀವು ಭಾರತ ಬಿಟ್ಟು ಬೇರೆ ಇರಲು ಪ್ರಯತ್ನಿಸಬೇಡಿ. ಈ ವಿಭಜನೆಯ ಸಿದ್ದಾಂತವೂ ಅತಿ ಅಪಾಯಕಾರಿ ಎಂದು 1947ರಲ್ಲಿ ನಾವು ನೋಡಿದ್ದೇವೆ. ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ನಟಿ ರಮ್ಯಾ, “ಹೌದು ನಾವು ಭಾರತೀಯರು, ಜೊತೆಗೆ ಕನ್ನಡಿಗರು, ತೆಲುಗರು, ತಮಿಳರು ಬಂಗಾಳಿಗಳು ಇತ್ಯಾದಿಗಳು ಸಹ. ನಾವು ನಮ್ಮದೇಯಾದ ಭಾಷೆಗಳನ್ನು ಹೊಂದಿರುವಂತೆ ನಮ್ಮದೇ ಬಾವುಟಗಳನ್ನೂ ಸಹ ಹೊಂದಿದ್ದೇವೆ. ನಾವು ಭಾರತೀಯರೆನಿಸಿಕೊಳ್ಳುವುದಕ್ಕೆ ಮತ್ತು ಹಲವು ಸಂಸ್ಕೃತಿ, ಭಾಷೆ, ಧ್ವಜಗಳಗಳೊಂದಿಗೆ ಬೇರೂರಿರುವ ಜನರು ಎನಿಸಿಕೊಳ್ಳುವುದಕ್ಕೆ ಹೆಮ್ಮೆ ಇದೆ. ವಿವಿಧತೆಯಲ್ಲಿ ಏಕತೆ ಸಾಧಿಸುವುದು ಮುಖ್ಯವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಪ್ರೀತಿಯ ಅದ್ನಾನ್ ಸಾಮಿಯವರೆ ತೆಲುಗು ಧ್ವಜ ಎಂದರೆ ಏನೆಂದು ಅರ್ಥಮಾಡಿಕೊಳ್ಳದ ನಿಮ್ಮ ಬುದ್ದಿಯನ್ನು ಇದು ತೋರಿಸುತ್ತಿದೆ. ತೆಲುಗು ಧ್ವಜ ಎಂದರೆ ನಮ್ಮ ಹೆಮ್ಮೆಯನ್ನು ಸೂಚಿಸುತ್ತದೆ. ನಿಮ್ಮಂತಹವರಿಂದ ನಾವು ದೇಶಪ್ರೇಮದ ಕುರಿತು ಉಪನ್ಯಾಸಗಳನ್ನು ಕೇಳಬೇಕಾಗಿಲ್ಲ. ಎರವಲು ಪಡೆದ ರಾಷ್ಟ್ರೀಯತೆಯನ್ನು ನೀವೇ ಇಟ್ಟುಕೊಳ್ಳುವುದು ಉತ್ತಮ ಎಂದು ಹೈದರಾಬಾದ್ ಚಿಂತಕರ ಒಕ್ಕೂಟ ಟೀಕಿಸಿದೆ.

ಈ ಹಿಂದೆಯೂ ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ವಾದ ವಿವಾದ ನಡೆದಿತ್ತು. ಹಿಂದಿ ರಾಷ್ಟ್ರೀಯ ಭಾಷೆ ಎಂಬುದನ್ನು ನಾವು ಒಪ್ಪುವುದಿಲ್ಲ ಎಂದು ಸುದೀಪ್ ಪ್ರತಿಪಾದಿಸಿದ್ದರು.

ಇದನ್ನೂ ಓದಿ; ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...