Homeಕರ್ನಾಟಕಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ...

ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ

- Advertisement -
- Advertisement -

ಬಳ್ಳಾರಿಯಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ BJP ಶಾಸಕ ಸೋಮಶೇಖರ್‌ರೆಡ್ಡಿ ಭಾರತದ ಮುಸ್ಲಿಮರ ವಿರುದ್ಧ ಎಗ್ಗಿಲ್ಲದೇ ನಾಲಿಗೆ ಹರಿಯಬಿಟ್ಟಿದ್ದು ಮನಬಂದಂತೆ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ನೇರವಾಗಿ ನೀವು ಇರೋದೋ 17% ಹಾಗಾಗಿ ನಾವು ಹೇಳಿದಂತೆ ಕೇಳಿಕೊಂಡಿರಿ. ಇಲ್ಲಿದಿದ್ದರೆ ನಿಮ್ಮನ್ನು ಉಳಿಸೊಲ್ಲ ಅಂತ ಅವಾಜ್‌ ಹಾಕಿದ್ದಾರೆ.

ಮಚ್ಚು ಖಡ್ಗ ಹಿಡಿದು ರಣರಂಗ ಮಾಡ್ತೀವಿ ಅಂತ ಹೇಳಿರುವ ಅವರ ಭಾಷಣದ ಪೂರ್ಣ ವಿವರ ಈ ಕೆಳಗಿನಂತಿದೆ ಓದಿ.

ಹೋರಾಟ ಮಾಡುತ್ತಿರುವವರಿಗೆ ಒಂದು ಎಚ್ಚರಿಕೆ ಎಂದರೆ, ಫೈವ್‌ ಪರ್ಸೆಂಟ್‌ ಮಾತ್ರ. ಜಾಸ್ತಿ ನಖರಾ ಮಾಡಿದರೆ, 100% ಜನ ಬಂದ್ರೆ ನಿಮ್ಮ ಪರಿಸ್ಥಿತಿ ಎನಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿ

ಕಾಂಗ್ರೆಸ್‌ ಬೆವುಕೂಫ್‌ಗಳನ್ನು ನಂಬಿಕೊಂಡು ಬೀದಿಗೆ ಬರ್ತಿರಾ ನೀವು? ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ…

ಇದು ನನ್ ದೇಶ. ನಮ್ಮೆಲ್ಲರ ದೇಶ. ನೀವು ನಮ್ಮ ದೇಶದಲ್ಲಿರಬೇಕಾದರೆ ಆಸ್ಟ್ರೇಲಿಯಾ ಪ್ರಧಾನಿ ಹೇಳಿದಂತೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ಹೆಚ್ಚಿಗೆ ನಖರಾ ಮಾಡಿದರೆ ನಿಮ್ ದೇಶಕ್ಕೆ ಕಳಿಸಿಕೊಡಬೇಕಾಗುತ್ತದೆ. ಆ ಪರಿಸ್ಥಿತಿ ಬರದಂತೆ ನೋಡಿಕೊಳ್ಳಿ

ನಾವು ಹಿಂದೂಗಳು ಶಾಂತಿಯಿಂದ ಇದ್ದೀವಿ. ನಮ್ಮ ಶಾಂತಿನ ನೀವು ಪರೀಕ್ಷೆ ಮಾಡೋದಾದರೆ ಒಂದು ಸಲ, ಎರಡು ಸಾರಿ. ನಾವು ತಿರುಗಿಬಿದ್ದರೆ ಮೂರನೇ ಸಾರಿ ಉಳಿಯೊಲ್ಲ ನೀವು.

ನಮ್ಮ ದೇಶದ, ಸರ್ಕಾರದ ವಾಹನಗಳು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಪಂಕ್ಚರ್‌ ಹಾಕುವವರು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನಮ್ಮ ಸೌತ್‌ ಎಂಪಿ ತೇಜಸ್ವಿ ಸೂರ್ಯ ಹೇಳಿದ್ದರು. ಅದು ನಿಜ. ಏಕೆಂದರೆ ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ..

ಅಣ್ಣ ತಮ್ಮಂದಿರು ಅಣ್ಣತಮ್ಮಂದಿರ ಥರ ಇರಬೇಕು. ನೀವು ಶತ್ರುಗಳ ಥರ ಆಡಿದರೆ ನಾವು ಶತ್ರುಗಳಾಗುತ್ತವೆ. ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ.

ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ.

ಇದಿಷ್ಟು ಒರ್ವ ಜನಪ್ರತಿನಿಧಿ ಮಾಡಿರುವ ಭಾಷಣವಾಗಿದೆ. ಈ ವಿಷಯಕ್ಕೆ ಇವರ ಮೇಲೆ ದೂರು ದಾಖಲಿಸುವ ಸಾಧ್ಯತೆಯೂ ಸಹ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯುದ್ದ ಪ್ರಾರಂಭವಾಗುವುದಾದರೆ ಎದುರಲ್ಲಿ ಇವನೇ ನಿಲ್ಲಲಿ.
    ಮುಗ್ದ ಬಡವರ ಮನೆಯ ಮಕ್ಕಳನ್ನು ನಿಲ್ಲಿಸಿ ಇವನು ಅಧಿಕಾರ ಪಡೆಯುವುದು ಬೇಡ.
    ಬಳ್ಳಾರಿಯನ್ನು ಲೂಟಿಮಾಡಿದ ಇವನ ಪರಂಪರೆ ಎಷ್ಟು ಚೆನ್ನಾಗಿರಬಹುದು

  2. ಹಿಂದೂ 19% ಮುಲನಿವಾಸಿಗಲು, 8% ………. ಆದಿವಾಸಿಗಲು ಮತ್ತು ದ್ರಾವಿಡ ರು ……. ನೆನಪಿಡಿ ……….. ಯಾವಾಗ ಸತ್ಯ …….. …. (ಇತಿಹಾಸ) ಹೋರಾಗ್ ….. ಬರುತೆ ……….. ಅಗಾ ??????????????????????????????????????????

  3. ಪ್ರಜಾಪ್ರಭುತ್ವ ಅಂದ್ರೆ ಏನು ಅಂತ ಗೊತ್ತಿದಿಯಾ ಮಿಸ್ಟರ್ ಸೋಮಶೇಖರ ರೆಡ್ಡಿ…
    ಬಿಜೆಪಿ ಶಾಸಕರು ಎಂಥ ವಿಕೃತಿ ಮನೋಸ್ಥಿತಿಯವರು ಅನ್ನೋದಕ್ಕೆ ಇದೊಂದು ನಿದರ್ಶನ…. ಯಾರು ದೇಶದ ಭ್ರಾತೃತ್ವಕ್ಕೆ , ಪ್ರಜಾಪ್ರಭುತ್ವಕ್ಕೆ, ಗೌರವಿಸಲ್ವೋ ಅವರನ್ನು ದೇಶ ದ್ರೋಹಿ ಅಂತ ತೀರ್ಮಾನಿಸಬೇಕು… ಆದರೆ ಭಾಜಪಾ ಶಾಸಕರೇ ಇಂಥ ಅಸಭ್ಯ, ಹೇಳಿಕೆಗಳ್ನ ಕೊಟ್ಕೂಂಡು ನಿರ್ಭಯವಾಗಿ ಸಮರ್ಥಿಸಿಕೊಳ್ಳುತ್ತಿರುವುದು ಇದನ್ನು ಪಕ್ಷ ಗಣನೆಗೆ ತೆಗೆದುಕೊಳ್ಳದಿರುವುದನ್ನ ನೋಡಿದರೆ ಪಕ್ಷದ ಹಿನ್ನೋಟ, ಅಜೆಂಡಾ, ಧ್ಯೇಯ ಒಂದೇ ಎಂದೆನಿಸುತ್ತಿದೆ ಸಹಜವಾಗಿ..

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...