Homeಕರ್ನಾಟಕಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ...

ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ

- Advertisement -
- Advertisement -

ಬಳ್ಳಾರಿಯಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ BJP ಶಾಸಕ ಸೋಮಶೇಖರ್‌ರೆಡ್ಡಿ ಭಾರತದ ಮುಸ್ಲಿಮರ ವಿರುದ್ಧ ಎಗ್ಗಿಲ್ಲದೇ ನಾಲಿಗೆ ಹರಿಯಬಿಟ್ಟಿದ್ದು ಮನಬಂದಂತೆ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ನೇರವಾಗಿ ನೀವು ಇರೋದೋ 17% ಹಾಗಾಗಿ ನಾವು ಹೇಳಿದಂತೆ ಕೇಳಿಕೊಂಡಿರಿ. ಇಲ್ಲಿದಿದ್ದರೆ ನಿಮ್ಮನ್ನು ಉಳಿಸೊಲ್ಲ ಅಂತ ಅವಾಜ್‌ ಹಾಕಿದ್ದಾರೆ.

ಮಚ್ಚು ಖಡ್ಗ ಹಿಡಿದು ರಣರಂಗ ಮಾಡ್ತೀವಿ ಅಂತ ಹೇಳಿರುವ ಅವರ ಭಾಷಣದ ಪೂರ್ಣ ವಿವರ ಈ ಕೆಳಗಿನಂತಿದೆ ಓದಿ.

ಹೋರಾಟ ಮಾಡುತ್ತಿರುವವರಿಗೆ ಒಂದು ಎಚ್ಚರಿಕೆ ಎಂದರೆ, ಫೈವ್‌ ಪರ್ಸೆಂಟ್‌ ಮಾತ್ರ. ಜಾಸ್ತಿ ನಖರಾ ಮಾಡಿದರೆ, 100% ಜನ ಬಂದ್ರೆ ನಿಮ್ಮ ಪರಿಸ್ಥಿತಿ ಎನಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿ

ಕಾಂಗ್ರೆಸ್‌ ಬೆವುಕೂಫ್‌ಗಳನ್ನು ನಂಬಿಕೊಂಡು ಬೀದಿಗೆ ಬರ್ತಿರಾ ನೀವು? ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ…

ಇದು ನನ್ ದೇಶ. ನಮ್ಮೆಲ್ಲರ ದೇಶ. ನೀವು ನಮ್ಮ ದೇಶದಲ್ಲಿರಬೇಕಾದರೆ ಆಸ್ಟ್ರೇಲಿಯಾ ಪ್ರಧಾನಿ ಹೇಳಿದಂತೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ಹೆಚ್ಚಿಗೆ ನಖರಾ ಮಾಡಿದರೆ ನಿಮ್ ದೇಶಕ್ಕೆ ಕಳಿಸಿಕೊಡಬೇಕಾಗುತ್ತದೆ. ಆ ಪರಿಸ್ಥಿತಿ ಬರದಂತೆ ನೋಡಿಕೊಳ್ಳಿ

ನಾವು ಹಿಂದೂಗಳು ಶಾಂತಿಯಿಂದ ಇದ್ದೀವಿ. ನಮ್ಮ ಶಾಂತಿನ ನೀವು ಪರೀಕ್ಷೆ ಮಾಡೋದಾದರೆ ಒಂದು ಸಲ, ಎರಡು ಸಾರಿ. ನಾವು ತಿರುಗಿಬಿದ್ದರೆ ಮೂರನೇ ಸಾರಿ ಉಳಿಯೊಲ್ಲ ನೀವು.

ನಮ್ಮ ದೇಶದ, ಸರ್ಕಾರದ ವಾಹನಗಳು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಪಂಕ್ಚರ್‌ ಹಾಕುವವರು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನಮ್ಮ ಸೌತ್‌ ಎಂಪಿ ತೇಜಸ್ವಿ ಸೂರ್ಯ ಹೇಳಿದ್ದರು. ಅದು ನಿಜ. ಏಕೆಂದರೆ ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ..

ಅಣ್ಣ ತಮ್ಮಂದಿರು ಅಣ್ಣತಮ್ಮಂದಿರ ಥರ ಇರಬೇಕು. ನೀವು ಶತ್ರುಗಳ ಥರ ಆಡಿದರೆ ನಾವು ಶತ್ರುಗಳಾಗುತ್ತವೆ. ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ.

ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ.

ಇದಿಷ್ಟು ಒರ್ವ ಜನಪ್ರತಿನಿಧಿ ಮಾಡಿರುವ ಭಾಷಣವಾಗಿದೆ. ಈ ವಿಷಯಕ್ಕೆ ಇವರ ಮೇಲೆ ದೂರು ದಾಖಲಿಸುವ ಸಾಧ್ಯತೆಯೂ ಸಹ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯುದ್ದ ಪ್ರಾರಂಭವಾಗುವುದಾದರೆ ಎದುರಲ್ಲಿ ಇವನೇ ನಿಲ್ಲಲಿ.
    ಮುಗ್ದ ಬಡವರ ಮನೆಯ ಮಕ್ಕಳನ್ನು ನಿಲ್ಲಿಸಿ ಇವನು ಅಧಿಕಾರ ಪಡೆಯುವುದು ಬೇಡ.
    ಬಳ್ಳಾರಿಯನ್ನು ಲೂಟಿಮಾಡಿದ ಇವನ ಪರಂಪರೆ ಎಷ್ಟು ಚೆನ್ನಾಗಿರಬಹುದು

  2. ಹಿಂದೂ 19% ಮುಲನಿವಾಸಿಗಲು, 8% ………. ಆದಿವಾಸಿಗಲು ಮತ್ತು ದ್ರಾವಿಡ ರು ……. ನೆನಪಿಡಿ ……….. ಯಾವಾಗ ಸತ್ಯ …….. …. (ಇತಿಹಾಸ) ಹೋರಾಗ್ ….. ಬರುತೆ ……….. ಅಗಾ ??????????????????????????????????????????

  3. ಪ್ರಜಾಪ್ರಭುತ್ವ ಅಂದ್ರೆ ಏನು ಅಂತ ಗೊತ್ತಿದಿಯಾ ಮಿಸ್ಟರ್ ಸೋಮಶೇಖರ ರೆಡ್ಡಿ…
    ಬಿಜೆಪಿ ಶಾಸಕರು ಎಂಥ ವಿಕೃತಿ ಮನೋಸ್ಥಿತಿಯವರು ಅನ್ನೋದಕ್ಕೆ ಇದೊಂದು ನಿದರ್ಶನ…. ಯಾರು ದೇಶದ ಭ್ರಾತೃತ್ವಕ್ಕೆ , ಪ್ರಜಾಪ್ರಭುತ್ವಕ್ಕೆ, ಗೌರವಿಸಲ್ವೋ ಅವರನ್ನು ದೇಶ ದ್ರೋಹಿ ಅಂತ ತೀರ್ಮಾನಿಸಬೇಕು… ಆದರೆ ಭಾಜಪಾ ಶಾಸಕರೇ ಇಂಥ ಅಸಭ್ಯ, ಹೇಳಿಕೆಗಳ್ನ ಕೊಟ್ಕೂಂಡು ನಿರ್ಭಯವಾಗಿ ಸಮರ್ಥಿಸಿಕೊಳ್ಳುತ್ತಿರುವುದು ಇದನ್ನು ಪಕ್ಷ ಗಣನೆಗೆ ತೆಗೆದುಕೊಳ್ಳದಿರುವುದನ್ನ ನೋಡಿದರೆ ಪಕ್ಷದ ಹಿನ್ನೋಟ, ಅಜೆಂಡಾ, ಧ್ಯೇಯ ಒಂದೇ ಎಂದೆನಿಸುತ್ತಿದೆ ಸಹಜವಾಗಿ..

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...