Homeಕರ್ನಾಟಕಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ...

ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ

- Advertisement -
- Advertisement -

ಬಳ್ಳಾರಿಯಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ BJP ಶಾಸಕ ಸೋಮಶೇಖರ್‌ರೆಡ್ಡಿ ಭಾರತದ ಮುಸ್ಲಿಮರ ವಿರುದ್ಧ ಎಗ್ಗಿಲ್ಲದೇ ನಾಲಿಗೆ ಹರಿಯಬಿಟ್ಟಿದ್ದು ಮನಬಂದಂತೆ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ನೇರವಾಗಿ ನೀವು ಇರೋದೋ 17% ಹಾಗಾಗಿ ನಾವು ಹೇಳಿದಂತೆ ಕೇಳಿಕೊಂಡಿರಿ. ಇಲ್ಲಿದಿದ್ದರೆ ನಿಮ್ಮನ್ನು ಉಳಿಸೊಲ್ಲ ಅಂತ ಅವಾಜ್‌ ಹಾಕಿದ್ದಾರೆ.

ಮಚ್ಚು ಖಡ್ಗ ಹಿಡಿದು ರಣರಂಗ ಮಾಡ್ತೀವಿ ಅಂತ ಹೇಳಿರುವ ಅವರ ಭಾಷಣದ ಪೂರ್ಣ ವಿವರ ಈ ಕೆಳಗಿನಂತಿದೆ ಓದಿ.

ಹೋರಾಟ ಮಾಡುತ್ತಿರುವವರಿಗೆ ಒಂದು ಎಚ್ಚರಿಕೆ ಎಂದರೆ, ಫೈವ್‌ ಪರ್ಸೆಂಟ್‌ ಮಾತ್ರ. ಜಾಸ್ತಿ ನಖರಾ ಮಾಡಿದರೆ, 100% ಜನ ಬಂದ್ರೆ ನಿಮ್ಮ ಪರಿಸ್ಥಿತಿ ಎನಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿ

ಕಾಂಗ್ರೆಸ್‌ ಬೆವುಕೂಫ್‌ಗಳನ್ನು ನಂಬಿಕೊಂಡು ಬೀದಿಗೆ ಬರ್ತಿರಾ ನೀವು? ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ…

ಇದು ನನ್ ದೇಶ. ನಮ್ಮೆಲ್ಲರ ದೇಶ. ನೀವು ನಮ್ಮ ದೇಶದಲ್ಲಿರಬೇಕಾದರೆ ಆಸ್ಟ್ರೇಲಿಯಾ ಪ್ರಧಾನಿ ಹೇಳಿದಂತೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ಹೆಚ್ಚಿಗೆ ನಖರಾ ಮಾಡಿದರೆ ನಿಮ್ ದೇಶಕ್ಕೆ ಕಳಿಸಿಕೊಡಬೇಕಾಗುತ್ತದೆ. ಆ ಪರಿಸ್ಥಿತಿ ಬರದಂತೆ ನೋಡಿಕೊಳ್ಳಿ

ನಾವು ಹಿಂದೂಗಳು ಶಾಂತಿಯಿಂದ ಇದ್ದೀವಿ. ನಮ್ಮ ಶಾಂತಿನ ನೀವು ಪರೀಕ್ಷೆ ಮಾಡೋದಾದರೆ ಒಂದು ಸಲ, ಎರಡು ಸಾರಿ. ನಾವು ತಿರುಗಿಬಿದ್ದರೆ ಮೂರನೇ ಸಾರಿ ಉಳಿಯೊಲ್ಲ ನೀವು.

ನಮ್ಮ ದೇಶದ, ಸರ್ಕಾರದ ವಾಹನಗಳು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಪಂಕ್ಚರ್‌ ಹಾಕುವವರು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನಮ್ಮ ಸೌತ್‌ ಎಂಪಿ ತೇಜಸ್ವಿ ಸೂರ್ಯ ಹೇಳಿದ್ದರು. ಅದು ನಿಜ. ಏಕೆಂದರೆ ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ..

ಅಣ್ಣ ತಮ್ಮಂದಿರು ಅಣ್ಣತಮ್ಮಂದಿರ ಥರ ಇರಬೇಕು. ನೀವು ಶತ್ರುಗಳ ಥರ ಆಡಿದರೆ ನಾವು ಶತ್ರುಗಳಾಗುತ್ತವೆ. ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ.

ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ.

ಇದಿಷ್ಟು ಒರ್ವ ಜನಪ್ರತಿನಿಧಿ ಮಾಡಿರುವ ಭಾಷಣವಾಗಿದೆ. ಈ ವಿಷಯಕ್ಕೆ ಇವರ ಮೇಲೆ ದೂರು ದಾಖಲಿಸುವ ಸಾಧ್ಯತೆಯೂ ಸಹ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯುದ್ದ ಪ್ರಾರಂಭವಾಗುವುದಾದರೆ ಎದುರಲ್ಲಿ ಇವನೇ ನಿಲ್ಲಲಿ.
    ಮುಗ್ದ ಬಡವರ ಮನೆಯ ಮಕ್ಕಳನ್ನು ನಿಲ್ಲಿಸಿ ಇವನು ಅಧಿಕಾರ ಪಡೆಯುವುದು ಬೇಡ.
    ಬಳ್ಳಾರಿಯನ್ನು ಲೂಟಿಮಾಡಿದ ಇವನ ಪರಂಪರೆ ಎಷ್ಟು ಚೆನ್ನಾಗಿರಬಹುದು

  2. ಹಿಂದೂ 19% ಮುಲನಿವಾಸಿಗಲು, 8% ………. ಆದಿವಾಸಿಗಲು ಮತ್ತು ದ್ರಾವಿಡ ರು ……. ನೆನಪಿಡಿ ……….. ಯಾವಾಗ ಸತ್ಯ …….. …. (ಇತಿಹಾಸ) ಹೋರಾಗ್ ….. ಬರುತೆ ……….. ಅಗಾ ??????????????????????????????????????????

  3. ಪ್ರಜಾಪ್ರಭುತ್ವ ಅಂದ್ರೆ ಏನು ಅಂತ ಗೊತ್ತಿದಿಯಾ ಮಿಸ್ಟರ್ ಸೋಮಶೇಖರ ರೆಡ್ಡಿ…
    ಬಿಜೆಪಿ ಶಾಸಕರು ಎಂಥ ವಿಕೃತಿ ಮನೋಸ್ಥಿತಿಯವರು ಅನ್ನೋದಕ್ಕೆ ಇದೊಂದು ನಿದರ್ಶನ…. ಯಾರು ದೇಶದ ಭ್ರಾತೃತ್ವಕ್ಕೆ , ಪ್ರಜಾಪ್ರಭುತ್ವಕ್ಕೆ, ಗೌರವಿಸಲ್ವೋ ಅವರನ್ನು ದೇಶ ದ್ರೋಹಿ ಅಂತ ತೀರ್ಮಾನಿಸಬೇಕು… ಆದರೆ ಭಾಜಪಾ ಶಾಸಕರೇ ಇಂಥ ಅಸಭ್ಯ, ಹೇಳಿಕೆಗಳ್ನ ಕೊಟ್ಕೂಂಡು ನಿರ್ಭಯವಾಗಿ ಸಮರ್ಥಿಸಿಕೊಳ್ಳುತ್ತಿರುವುದು ಇದನ್ನು ಪಕ್ಷ ಗಣನೆಗೆ ತೆಗೆದುಕೊಳ್ಳದಿರುವುದನ್ನ ನೋಡಿದರೆ ಪಕ್ಷದ ಹಿನ್ನೋಟ, ಅಜೆಂಡಾ, ಧ್ಯೇಯ ಒಂದೇ ಎಂದೆನಿಸುತ್ತಿದೆ ಸಹಜವಾಗಿ..

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...