Homeಕರ್ನಾಟಕಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ...

ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ

- Advertisement -
- Advertisement -

ಬಳ್ಳಾರಿಯಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ BJP ಶಾಸಕ ಸೋಮಶೇಖರ್‌ರೆಡ್ಡಿ ಭಾರತದ ಮುಸ್ಲಿಮರ ವಿರುದ್ಧ ಎಗ್ಗಿಲ್ಲದೇ ನಾಲಿಗೆ ಹರಿಯಬಿಟ್ಟಿದ್ದು ಮನಬಂದಂತೆ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ನೇರವಾಗಿ ನೀವು ಇರೋದೋ 17% ಹಾಗಾಗಿ ನಾವು ಹೇಳಿದಂತೆ ಕೇಳಿಕೊಂಡಿರಿ. ಇಲ್ಲಿದಿದ್ದರೆ ನಿಮ್ಮನ್ನು ಉಳಿಸೊಲ್ಲ ಅಂತ ಅವಾಜ್‌ ಹಾಕಿದ್ದಾರೆ.

ಮಚ್ಚು ಖಡ್ಗ ಹಿಡಿದು ರಣರಂಗ ಮಾಡ್ತೀವಿ ಅಂತ ಹೇಳಿರುವ ಅವರ ಭಾಷಣದ ಪೂರ್ಣ ವಿವರ ಈ ಕೆಳಗಿನಂತಿದೆ ಓದಿ.

ಹೋರಾಟ ಮಾಡುತ್ತಿರುವವರಿಗೆ ಒಂದು ಎಚ್ಚರಿಕೆ ಎಂದರೆ, ಫೈವ್‌ ಪರ್ಸೆಂಟ್‌ ಮಾತ್ರ. ಜಾಸ್ತಿ ನಖರಾ ಮಾಡಿದರೆ, 100% ಜನ ಬಂದ್ರೆ ನಿಮ್ಮ ಪರಿಸ್ಥಿತಿ ಎನಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿ

ಕಾಂಗ್ರೆಸ್‌ ಬೆವುಕೂಫ್‌ಗಳನ್ನು ನಂಬಿಕೊಂಡು ಬೀದಿಗೆ ಬರ್ತಿರಾ ನೀವು? ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ…

ಇದು ನನ್ ದೇಶ. ನಮ್ಮೆಲ್ಲರ ದೇಶ. ನೀವು ನಮ್ಮ ದೇಶದಲ್ಲಿರಬೇಕಾದರೆ ಆಸ್ಟ್ರೇಲಿಯಾ ಪ್ರಧಾನಿ ಹೇಳಿದಂತೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ಹೆಚ್ಚಿಗೆ ನಖರಾ ಮಾಡಿದರೆ ನಿಮ್ ದೇಶಕ್ಕೆ ಕಳಿಸಿಕೊಡಬೇಕಾಗುತ್ತದೆ. ಆ ಪರಿಸ್ಥಿತಿ ಬರದಂತೆ ನೋಡಿಕೊಳ್ಳಿ

ನಾವು ಹಿಂದೂಗಳು ಶಾಂತಿಯಿಂದ ಇದ್ದೀವಿ. ನಮ್ಮ ಶಾಂತಿನ ನೀವು ಪರೀಕ್ಷೆ ಮಾಡೋದಾದರೆ ಒಂದು ಸಲ, ಎರಡು ಸಾರಿ. ನಾವು ತಿರುಗಿಬಿದ್ದರೆ ಮೂರನೇ ಸಾರಿ ಉಳಿಯೊಲ್ಲ ನೀವು.

ನಮ್ಮ ದೇಶದ, ಸರ್ಕಾರದ ವಾಹನಗಳು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಪಂಕ್ಚರ್‌ ಹಾಕುವವರು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನಮ್ಮ ಸೌತ್‌ ಎಂಪಿ ತೇಜಸ್ವಿ ಸೂರ್ಯ ಹೇಳಿದ್ದರು. ಅದು ನಿಜ. ಏಕೆಂದರೆ ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ..

ಅಣ್ಣ ತಮ್ಮಂದಿರು ಅಣ್ಣತಮ್ಮಂದಿರ ಥರ ಇರಬೇಕು. ನೀವು ಶತ್ರುಗಳ ಥರ ಆಡಿದರೆ ನಾವು ಶತ್ರುಗಳಾಗುತ್ತವೆ. ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ.

ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ.

ಇದಿಷ್ಟು ಒರ್ವ ಜನಪ್ರತಿನಿಧಿ ಮಾಡಿರುವ ಭಾಷಣವಾಗಿದೆ. ಈ ವಿಷಯಕ್ಕೆ ಇವರ ಮೇಲೆ ದೂರು ದಾಖಲಿಸುವ ಸಾಧ್ಯತೆಯೂ ಸಹ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯುದ್ದ ಪ್ರಾರಂಭವಾಗುವುದಾದರೆ ಎದುರಲ್ಲಿ ಇವನೇ ನಿಲ್ಲಲಿ.
    ಮುಗ್ದ ಬಡವರ ಮನೆಯ ಮಕ್ಕಳನ್ನು ನಿಲ್ಲಿಸಿ ಇವನು ಅಧಿಕಾರ ಪಡೆಯುವುದು ಬೇಡ.
    ಬಳ್ಳಾರಿಯನ್ನು ಲೂಟಿಮಾಡಿದ ಇವನ ಪರಂಪರೆ ಎಷ್ಟು ಚೆನ್ನಾಗಿರಬಹುದು

  2. ಹಿಂದೂ 19% ಮುಲನಿವಾಸಿಗಲು, 8% ………. ಆದಿವಾಸಿಗಲು ಮತ್ತು ದ್ರಾವಿಡ ರು ……. ನೆನಪಿಡಿ ……….. ಯಾವಾಗ ಸತ್ಯ …….. …. (ಇತಿಹಾಸ) ಹೋರಾಗ್ ….. ಬರುತೆ ……….. ಅಗಾ ??????????????????????????????????????????

  3. ಪ್ರಜಾಪ್ರಭುತ್ವ ಅಂದ್ರೆ ಏನು ಅಂತ ಗೊತ್ತಿದಿಯಾ ಮಿಸ್ಟರ್ ಸೋಮಶೇಖರ ರೆಡ್ಡಿ…
    ಬಿಜೆಪಿ ಶಾಸಕರು ಎಂಥ ವಿಕೃತಿ ಮನೋಸ್ಥಿತಿಯವರು ಅನ್ನೋದಕ್ಕೆ ಇದೊಂದು ನಿದರ್ಶನ…. ಯಾರು ದೇಶದ ಭ್ರಾತೃತ್ವಕ್ಕೆ , ಪ್ರಜಾಪ್ರಭುತ್ವಕ್ಕೆ, ಗೌರವಿಸಲ್ವೋ ಅವರನ್ನು ದೇಶ ದ್ರೋಹಿ ಅಂತ ತೀರ್ಮಾನಿಸಬೇಕು… ಆದರೆ ಭಾಜಪಾ ಶಾಸಕರೇ ಇಂಥ ಅಸಭ್ಯ, ಹೇಳಿಕೆಗಳ್ನ ಕೊಟ್ಕೂಂಡು ನಿರ್ಭಯವಾಗಿ ಸಮರ್ಥಿಸಿಕೊಳ್ಳುತ್ತಿರುವುದು ಇದನ್ನು ಪಕ್ಷ ಗಣನೆಗೆ ತೆಗೆದುಕೊಳ್ಳದಿರುವುದನ್ನ ನೋಡಿದರೆ ಪಕ್ಷದ ಹಿನ್ನೋಟ, ಅಜೆಂಡಾ, ಧ್ಯೇಯ ಒಂದೇ ಎಂದೆನಿಸುತ್ತಿದೆ ಸಹಜವಾಗಿ..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...