Homeಕರ್ನಾಟಕಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ...

ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ

- Advertisement -
- Advertisement -

ಬಳ್ಳಾರಿಯಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ BJP ಶಾಸಕ ಸೋಮಶೇಖರ್‌ರೆಡ್ಡಿ ಭಾರತದ ಮುಸ್ಲಿಮರ ವಿರುದ್ಧ ಎಗ್ಗಿಲ್ಲದೇ ನಾಲಿಗೆ ಹರಿಯಬಿಟ್ಟಿದ್ದು ಮನಬಂದಂತೆ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ನೇರವಾಗಿ ನೀವು ಇರೋದೋ 17% ಹಾಗಾಗಿ ನಾವು ಹೇಳಿದಂತೆ ಕೇಳಿಕೊಂಡಿರಿ. ಇಲ್ಲಿದಿದ್ದರೆ ನಿಮ್ಮನ್ನು ಉಳಿಸೊಲ್ಲ ಅಂತ ಅವಾಜ್‌ ಹಾಕಿದ್ದಾರೆ.

ಮಚ್ಚು ಖಡ್ಗ ಹಿಡಿದು ರಣರಂಗ ಮಾಡ್ತೀವಿ ಅಂತ ಹೇಳಿರುವ ಅವರ ಭಾಷಣದ ಪೂರ್ಣ ವಿವರ ಈ ಕೆಳಗಿನಂತಿದೆ ಓದಿ.

ಹೋರಾಟ ಮಾಡುತ್ತಿರುವವರಿಗೆ ಒಂದು ಎಚ್ಚರಿಕೆ ಎಂದರೆ, ಫೈವ್‌ ಪರ್ಸೆಂಟ್‌ ಮಾತ್ರ. ಜಾಸ್ತಿ ನಖರಾ ಮಾಡಿದರೆ, 100% ಜನ ಬಂದ್ರೆ ನಿಮ್ಮ ಪರಿಸ್ಥಿತಿ ಎನಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿ

ಕಾಂಗ್ರೆಸ್‌ ಬೆವುಕೂಫ್‌ಗಳನ್ನು ನಂಬಿಕೊಂಡು ಬೀದಿಗೆ ಬರ್ತಿರಾ ನೀವು? ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ…

ಇದು ನನ್ ದೇಶ. ನಮ್ಮೆಲ್ಲರ ದೇಶ. ನೀವು ನಮ್ಮ ದೇಶದಲ್ಲಿರಬೇಕಾದರೆ ಆಸ್ಟ್ರೇಲಿಯಾ ಪ್ರಧಾನಿ ಹೇಳಿದಂತೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ಹೆಚ್ಚಿಗೆ ನಖರಾ ಮಾಡಿದರೆ ನಿಮ್ ದೇಶಕ್ಕೆ ಕಳಿಸಿಕೊಡಬೇಕಾಗುತ್ತದೆ. ಆ ಪರಿಸ್ಥಿತಿ ಬರದಂತೆ ನೋಡಿಕೊಳ್ಳಿ

ನಾವು ಹಿಂದೂಗಳು ಶಾಂತಿಯಿಂದ ಇದ್ದೀವಿ. ನಮ್ಮ ಶಾಂತಿನ ನೀವು ಪರೀಕ್ಷೆ ಮಾಡೋದಾದರೆ ಒಂದು ಸಲ, ಎರಡು ಸಾರಿ. ನಾವು ತಿರುಗಿಬಿದ್ದರೆ ಮೂರನೇ ಸಾರಿ ಉಳಿಯೊಲ್ಲ ನೀವು.

ನಮ್ಮ ದೇಶದ, ಸರ್ಕಾರದ ವಾಹನಗಳು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಪಂಕ್ಚರ್‌ ಹಾಕುವವರು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನಮ್ಮ ಸೌತ್‌ ಎಂಪಿ ತೇಜಸ್ವಿ ಸೂರ್ಯ ಹೇಳಿದ್ದರು. ಅದು ನಿಜ. ಏಕೆಂದರೆ ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ..

ಅಣ್ಣ ತಮ್ಮಂದಿರು ಅಣ್ಣತಮ್ಮಂದಿರ ಥರ ಇರಬೇಕು. ನೀವು ಶತ್ರುಗಳ ಥರ ಆಡಿದರೆ ನಾವು ಶತ್ರುಗಳಾಗುತ್ತವೆ. ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ.

ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ.

ಇದಿಷ್ಟು ಒರ್ವ ಜನಪ್ರತಿನಿಧಿ ಮಾಡಿರುವ ಭಾಷಣವಾಗಿದೆ. ಈ ವಿಷಯಕ್ಕೆ ಇವರ ಮೇಲೆ ದೂರು ದಾಖಲಿಸುವ ಸಾಧ್ಯತೆಯೂ ಸಹ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯುದ್ದ ಪ್ರಾರಂಭವಾಗುವುದಾದರೆ ಎದುರಲ್ಲಿ ಇವನೇ ನಿಲ್ಲಲಿ.
    ಮುಗ್ದ ಬಡವರ ಮನೆಯ ಮಕ್ಕಳನ್ನು ನಿಲ್ಲಿಸಿ ಇವನು ಅಧಿಕಾರ ಪಡೆಯುವುದು ಬೇಡ.
    ಬಳ್ಳಾರಿಯನ್ನು ಲೂಟಿಮಾಡಿದ ಇವನ ಪರಂಪರೆ ಎಷ್ಟು ಚೆನ್ನಾಗಿರಬಹುದು

  2. ಹಿಂದೂ 19% ಮುಲನಿವಾಸಿಗಲು, 8% ………. ಆದಿವಾಸಿಗಲು ಮತ್ತು ದ್ರಾವಿಡ ರು ……. ನೆನಪಿಡಿ ……….. ಯಾವಾಗ ಸತ್ಯ …….. …. (ಇತಿಹಾಸ) ಹೋರಾಗ್ ….. ಬರುತೆ ……….. ಅಗಾ ??????????????????????????????????????????

  3. ಪ್ರಜಾಪ್ರಭುತ್ವ ಅಂದ್ರೆ ಏನು ಅಂತ ಗೊತ್ತಿದಿಯಾ ಮಿಸ್ಟರ್ ಸೋಮಶೇಖರ ರೆಡ್ಡಿ…
    ಬಿಜೆಪಿ ಶಾಸಕರು ಎಂಥ ವಿಕೃತಿ ಮನೋಸ್ಥಿತಿಯವರು ಅನ್ನೋದಕ್ಕೆ ಇದೊಂದು ನಿದರ್ಶನ…. ಯಾರು ದೇಶದ ಭ್ರಾತೃತ್ವಕ್ಕೆ , ಪ್ರಜಾಪ್ರಭುತ್ವಕ್ಕೆ, ಗೌರವಿಸಲ್ವೋ ಅವರನ್ನು ದೇಶ ದ್ರೋಹಿ ಅಂತ ತೀರ್ಮಾನಿಸಬೇಕು… ಆದರೆ ಭಾಜಪಾ ಶಾಸಕರೇ ಇಂಥ ಅಸಭ್ಯ, ಹೇಳಿಕೆಗಳ್ನ ಕೊಟ್ಕೂಂಡು ನಿರ್ಭಯವಾಗಿ ಸಮರ್ಥಿಸಿಕೊಳ್ಳುತ್ತಿರುವುದು ಇದನ್ನು ಪಕ್ಷ ಗಣನೆಗೆ ತೆಗೆದುಕೊಳ್ಳದಿರುವುದನ್ನ ನೋಡಿದರೆ ಪಕ್ಷದ ಹಿನ್ನೋಟ, ಅಜೆಂಡಾ, ಧ್ಯೇಯ ಒಂದೇ ಎಂದೆನಿಸುತ್ತಿದೆ ಸಹಜವಾಗಿ..

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...