Homeಕರ್ನಾಟಕಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ...

ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ

- Advertisement -
- Advertisement -

ಬಳ್ಳಾರಿಯಲ್ಲಿಂದು ಬಿಜೆಪಿ ಹಮ್ಮಿಕೊಂಡಿದ್ದ ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ BJP ಶಾಸಕ ಸೋಮಶೇಖರ್‌ರೆಡ್ಡಿ ಭಾರತದ ಮುಸ್ಲಿಮರ ವಿರುದ್ಧ ಎಗ್ಗಿಲ್ಲದೇ ನಾಲಿಗೆ ಹರಿಯಬಿಟ್ಟಿದ್ದು ಮನಬಂದಂತೆ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ನೇರವಾಗಿ ನೀವು ಇರೋದೋ 17% ಹಾಗಾಗಿ ನಾವು ಹೇಳಿದಂತೆ ಕೇಳಿಕೊಂಡಿರಿ. ಇಲ್ಲಿದಿದ್ದರೆ ನಿಮ್ಮನ್ನು ಉಳಿಸೊಲ್ಲ ಅಂತ ಅವಾಜ್‌ ಹಾಕಿದ್ದಾರೆ.

ಮಚ್ಚು ಖಡ್ಗ ಹಿಡಿದು ರಣರಂಗ ಮಾಡ್ತೀವಿ ಅಂತ ಹೇಳಿರುವ ಅವರ ಭಾಷಣದ ಪೂರ್ಣ ವಿವರ ಈ ಕೆಳಗಿನಂತಿದೆ ಓದಿ.

ಹೋರಾಟ ಮಾಡುತ್ತಿರುವವರಿಗೆ ಒಂದು ಎಚ್ಚರಿಕೆ ಎಂದರೆ, ಫೈವ್‌ ಪರ್ಸೆಂಟ್‌ ಮಾತ್ರ. ಜಾಸ್ತಿ ನಖರಾ ಮಾಡಿದರೆ, 100% ಜನ ಬಂದ್ರೆ ನಿಮ್ಮ ಪರಿಸ್ಥಿತಿ ಎನಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿ

ಕಾಂಗ್ರೆಸ್‌ ಬೆವುಕೂಫ್‌ಗಳನ್ನು ನಂಬಿಕೊಂಡು ಬೀದಿಗೆ ಬರ್ತಿರಾ ನೀವು? ನಾವು 80% ಇರೋರು. ನೀವು ಬರೀ 17% ಇರೋದು. ನಾವು ತಿರುಗಿಬಿದ್ರೆ ನಿಮ್‌ ಪರಿಸ್ಥಿತಿ ಎನಾಗುತ್ತೆ ಗೊತ್ತಾ? ಎಚ್ಚರವಿರಲಿ, ಮೈಮೇಲೆ ಎಚ್ಚರವಿಟ್ಟುಕೊಂಡು ನಮ್‌ ದೇಶದಲ್ಲಿರಿ…

ಇದು ನನ್ ದೇಶ. ನಮ್ಮೆಲ್ಲರ ದೇಶ. ನೀವು ನಮ್ಮ ದೇಶದಲ್ಲಿರಬೇಕಾದರೆ ಆಸ್ಟ್ರೇಲಿಯಾ ಪ್ರಧಾನಿ ಹೇಳಿದಂತೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ಹೆಚ್ಚಿಗೆ ನಖರಾ ಮಾಡಿದರೆ ನಿಮ್ ದೇಶಕ್ಕೆ ಕಳಿಸಿಕೊಡಬೇಕಾಗುತ್ತದೆ. ಆ ಪರಿಸ್ಥಿತಿ ಬರದಂತೆ ನೋಡಿಕೊಳ್ಳಿ

ನಾವು ಹಿಂದೂಗಳು ಶಾಂತಿಯಿಂದ ಇದ್ದೀವಿ. ನಮ್ಮ ಶಾಂತಿನ ನೀವು ಪರೀಕ್ಷೆ ಮಾಡೋದಾದರೆ ಒಂದು ಸಲ, ಎರಡು ಸಾರಿ. ನಾವು ತಿರುಗಿಬಿದ್ದರೆ ಮೂರನೇ ಸಾರಿ ಉಳಿಯೊಲ್ಲ ನೀವು.

ನಮ್ಮ ದೇಶದ, ಸರ್ಕಾರದ ವಾಹನಗಳು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಪಂಕ್ಚರ್‌ ಹಾಕುವವರು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನಮ್ಮ ಸೌತ್‌ ಎಂಪಿ ತೇಜಸ್ವಿ ಸೂರ್ಯ ಹೇಳಿದ್ದರು. ಅದು ನಿಜ. ಏಕೆಂದರೆ ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ..

ಅಣ್ಣ ತಮ್ಮಂದಿರು ಅಣ್ಣತಮ್ಮಂದಿರ ಥರ ಇರಬೇಕು. ನೀವು ಶತ್ರುಗಳ ಥರ ಆಡಿದರೆ ನಾವು ಶತ್ರುಗಳಾಗುತ್ತವೆ. ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ.

ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ.

ಇದಿಷ್ಟು ಒರ್ವ ಜನಪ್ರತಿನಿಧಿ ಮಾಡಿರುವ ಭಾಷಣವಾಗಿದೆ. ಈ ವಿಷಯಕ್ಕೆ ಇವರ ಮೇಲೆ ದೂರು ದಾಖಲಿಸುವ ಸಾಧ್ಯತೆಯೂ ಸಹ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯುದ್ದ ಪ್ರಾರಂಭವಾಗುವುದಾದರೆ ಎದುರಲ್ಲಿ ಇವನೇ ನಿಲ್ಲಲಿ.
    ಮುಗ್ದ ಬಡವರ ಮನೆಯ ಮಕ್ಕಳನ್ನು ನಿಲ್ಲಿಸಿ ಇವನು ಅಧಿಕಾರ ಪಡೆಯುವುದು ಬೇಡ.
    ಬಳ್ಳಾರಿಯನ್ನು ಲೂಟಿಮಾಡಿದ ಇವನ ಪರಂಪರೆ ಎಷ್ಟು ಚೆನ್ನಾಗಿರಬಹುದು

  2. ಹಿಂದೂ 19% ಮುಲನಿವಾಸಿಗಲು, 8% ………. ಆದಿವಾಸಿಗಲು ಮತ್ತು ದ್ರಾವಿಡ ರು ……. ನೆನಪಿಡಿ ……….. ಯಾವಾಗ ಸತ್ಯ …….. …. (ಇತಿಹಾಸ) ಹೋರಾಗ್ ….. ಬರುತೆ ……….. ಅಗಾ ??????????????????????????????????????????

  3. ಪ್ರಜಾಪ್ರಭುತ್ವ ಅಂದ್ರೆ ಏನು ಅಂತ ಗೊತ್ತಿದಿಯಾ ಮಿಸ್ಟರ್ ಸೋಮಶೇಖರ ರೆಡ್ಡಿ…
    ಬಿಜೆಪಿ ಶಾಸಕರು ಎಂಥ ವಿಕೃತಿ ಮನೋಸ್ಥಿತಿಯವರು ಅನ್ನೋದಕ್ಕೆ ಇದೊಂದು ನಿದರ್ಶನ…. ಯಾರು ದೇಶದ ಭ್ರಾತೃತ್ವಕ್ಕೆ , ಪ್ರಜಾಪ್ರಭುತ್ವಕ್ಕೆ, ಗೌರವಿಸಲ್ವೋ ಅವರನ್ನು ದೇಶ ದ್ರೋಹಿ ಅಂತ ತೀರ್ಮಾನಿಸಬೇಕು… ಆದರೆ ಭಾಜಪಾ ಶಾಸಕರೇ ಇಂಥ ಅಸಭ್ಯ, ಹೇಳಿಕೆಗಳ್ನ ಕೊಟ್ಕೂಂಡು ನಿರ್ಭಯವಾಗಿ ಸಮರ್ಥಿಸಿಕೊಳ್ಳುತ್ತಿರುವುದು ಇದನ್ನು ಪಕ್ಷ ಗಣನೆಗೆ ತೆಗೆದುಕೊಳ್ಳದಿರುವುದನ್ನ ನೋಡಿದರೆ ಪಕ್ಷದ ಹಿನ್ನೋಟ, ಅಜೆಂಡಾ, ಧ್ಯೇಯ ಒಂದೇ ಎಂದೆನಿಸುತ್ತಿದೆ ಸಹಜವಾಗಿ..

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...