Homeಮುಖಪುಟಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ಬಗ್ಗೆ ಬಿಜೆಪಿ ಸರ್ಕಾರ ಯಾಕೆ ಪ್ರತಿಭಟಿಸುತ್ತಿಲ್ಲ? ಬಾಂಗ್ಲಾದೇಶದ ಬಗ್ಗೆ ಭಯವೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದು ಆಯಿತು, ಮುಂದಕ್ಕೆ ಮಾಲ್ಡೀವ್‌ಗೆ ನಾವು ಹೆದರಲಿದ್ದೇವೆಯೆ? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಒಕ್ಕೂಟ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ವಿಚಾರದಲ್ಲಿ ಬಿಜೆಪಿ ಸರ್ಕಾರ ಯಾಕೆ ಪ್ರತಿಭಟಿಸುತ್ತಿಲ್ಲ? ಬಾಂಗ್ಲಾದೇಶಕ್ಕೆ ನಾವು ಹೆದರುತ್ತಿದ್ದೇವೆಯೆ? ಎಂದು ಅವರು ಕೇಳಿದ್ದಾರೆ.

ದುರ್ಗಾ ಪೂಜೆ ಆಚರಣೆಯ ಸಮಯ ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿ ಕಳೆದ ಬುಧವಾರದಿಂದ ಕೋಮುಗಲಭೆ ಭುಗಿಲೆದ್ದಿತ್ತು. ಇದರ ನಂತರ ಹಿಂದೂ ದೇವಾಲಯಗಳ ಮೇಲೆ ದಾಳಿಗಳು ತೀವ್ರಗೊಂಡಿತ್ತು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಈ ಬಗ್ಗೆ ಸೋಮವಾರ ಟ್ವಿಟರ್‌ನಲ್ಲಿ ಪ್ರಶ್ನಿಸಿದ ಸುಬ್ರಮಣಿಯನ್ ಸ್ವಾಮಿ, “ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ವಿಚಾರದಲ್ಲಿ ಬಿಜೆಪಿ ಸರ್ಕಾರ ಏಕೆ ಪ್ರತಿಭಟಿಸುತ್ತಿಲ್ಲ? ನಾವು ಬಾಂಗ್ಲಾದೇಶಕ್ಕೆ ಹೆದರುತ್ತಿದ್ದೇವೆಯೇ?” ಎಂದು ಅವರು ಕೇಳಿದ್ದಾರೆ.

“ಲಡಾಖ್‌ನಲ್ಲಿ ಚೀನಾದ ಆಕ್ರಮಣದ ಬಗ್ಗೆ ಭಯಪಟ್ಟ ನಂತರ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿರುವುದರ ಬಗ್ಗೆ ನಾವು ಹೆದರಿದೆವು. ಈಗ ಅವರೊಂದಿಗೆ ಮಾತನಾಡಲು ಬಯಸುತ್ತಿದ್ದೇವೆ. ಮುಂದಕ್ಕೆ ನಾವು ಮಾಲ್ಡೀವ್ಸ್‌ಗೆ ಹೆದರಲಿದ್ದೇವೆಯೆ?” ಎಂದು ಅವರು ಕೇಳಿದ್ದಾರೆ.

ಭಾನುವಾರ ತಡರಾತ್ರಿ, ಗುಂಪೊಂದು 66 ಮನೆಗಳಿಗೆ ಹಾನಿ ಮಾಡಿದ್ದು, ಕನಿಷ್ಠ 20 ಹಿಂದೂ ಧರ್ಮಿಯರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ದೇಶದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ದಾಳಿಯಲ್ಲಿ ಆರು ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಕೋಮು ಹಿಂಸೆಯನ್ನು ಪ್ರಚೋದಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ತನ್ನ ಗೃಹ ಸಚಿವರಿಗೆ ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಮಂಗಳವಾರ ಸೂಚನೆ ನೀಡಿದ್ದಾರೆ. ಅವರು ದೇಶದ ಜನತೆಯೊಂದಿಗೆ ಸತ್ಯವನ್ನು ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಏನನ್ನೂ ನಂಬಬೇಡಿ ಎಂದು ವಿನಂತಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಈ ಮಧ್ಯೆ, ಆಡಳಿತಾರೂಢ ಅವಾಮಿ ಲೀಗ್ ಪಕ್ಷವು ‘ಸಾಮರಸ್ಯ ರ್‍ಯಾಲಿ’ಗಳನ್ನು ನಡೆಸುತ್ತಿದ್ದು, ಕೋಮುಗಲಭೆಗಳ ವಿರುದ್ಧ ಮಂಗಳವಾರ ದೇಶದಾದ್ಯಂತ ಶಾಂತಿ ಮೆರವಣಿಗೆಗಳನ್ನು ನಡೆಸುತ್ತಿದೆ.

“ಹಿಂದೂ ಸಹೋದರ ಸಹೋದರಿಯರೇ, ಭಯಪಡಬೇಡಿ. ಶೇಖ್ ಹಸೀನಾ ಮತ್ತು ಅವಾಮಿ ಲೀಗ್ ನಿಮ್ಮೊಂದಿಗಿದ್ದಾರೆ. ಶೇಖ್ ಹಸೀನಾ ಸರ್ಕಾರವು ಅಲ್ಪಸಂಖ್ಯಾತ ಸ್ನೇಹಿ ಸರ್ಕಾರವಾಗಿದೆ” ಎಂದು ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಒಬೈದುಲ್ ಖಾದರ್‌‌ ಅವರು ಪಕ್ಷದ ಕೇಂದ್ರ ಕಚೇರಿಯ ಮುಂದೆ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಕೋಮುವಾದಿ ಶಕ್ತಿಗಳ ವಿರುದ್ಧ ಪ್ರತಿರೋಧವನ್ನು ಒಡ್ಡುವಂತೆ ಅವರು ತಮ್ಮ ಪಕ್ಷದ ಸದಸ್ಯರನ್ನು ಕೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. ಕೋಮುವಾದಿ ಶಕ್ತಿಗಳನ್ನು ಹೆಡೆಮುರಿ ಕಟ್ಟುವವರೆಗೂ ಆಡಳಿತ ಪಕ್ಷವು ಬೀದಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಈ ಕೋಮುವಾದಿಗಳಿಗೆ ಸರಿಯಾದ ಉತ್ತರ ನೀಡಲು ಸಿದ್ಧರಾಗಿದ್ದಾರೆ ಎಂದು ಒಬೈದುಲ್ ಖಾದರ್‌‌ ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...