Homeಮುಖಪುಟಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ಬಗ್ಗೆ ಬಿಜೆಪಿ ಸರ್ಕಾರ ಯಾಕೆ ಪ್ರತಿಭಟಿಸುತ್ತಿಲ್ಲ? ಬಾಂಗ್ಲಾದೇಶದ ಬಗ್ಗೆ ಭಯವೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದು ಆಯಿತು, ಮುಂದಕ್ಕೆ ಮಾಲ್ಡೀವ್‌ಗೆ ನಾವು ಹೆದರಲಿದ್ದೇವೆಯೆ? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಒಕ್ಕೂಟ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ವಿಚಾರದಲ್ಲಿ ಬಿಜೆಪಿ ಸರ್ಕಾರ ಯಾಕೆ ಪ್ರತಿಭಟಿಸುತ್ತಿಲ್ಲ? ಬಾಂಗ್ಲಾದೇಶಕ್ಕೆ ನಾವು ಹೆದರುತ್ತಿದ್ದೇವೆಯೆ? ಎಂದು ಅವರು ಕೇಳಿದ್ದಾರೆ.

ದುರ್ಗಾ ಪೂಜೆ ಆಚರಣೆಯ ಸಮಯ ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿ ಕಳೆದ ಬುಧವಾರದಿಂದ ಕೋಮುಗಲಭೆ ಭುಗಿಲೆದ್ದಿತ್ತು. ಇದರ ನಂತರ ಹಿಂದೂ ದೇವಾಲಯಗಳ ಮೇಲೆ ದಾಳಿಗಳು ತೀವ್ರಗೊಂಡಿತ್ತು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಈ ಬಗ್ಗೆ ಸೋಮವಾರ ಟ್ವಿಟರ್‌ನಲ್ಲಿ ಪ್ರಶ್ನಿಸಿದ ಸುಬ್ರಮಣಿಯನ್ ಸ್ವಾಮಿ, “ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ವಿಚಾರದಲ್ಲಿ ಬಿಜೆಪಿ ಸರ್ಕಾರ ಏಕೆ ಪ್ರತಿಭಟಿಸುತ್ತಿಲ್ಲ? ನಾವು ಬಾಂಗ್ಲಾದೇಶಕ್ಕೆ ಹೆದರುತ್ತಿದ್ದೇವೆಯೇ?” ಎಂದು ಅವರು ಕೇಳಿದ್ದಾರೆ.

“ಲಡಾಖ್‌ನಲ್ಲಿ ಚೀನಾದ ಆಕ್ರಮಣದ ಬಗ್ಗೆ ಭಯಪಟ್ಟ ನಂತರ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿರುವುದರ ಬಗ್ಗೆ ನಾವು ಹೆದರಿದೆವು. ಈಗ ಅವರೊಂದಿಗೆ ಮಾತನಾಡಲು ಬಯಸುತ್ತಿದ್ದೇವೆ. ಮುಂದಕ್ಕೆ ನಾವು ಮಾಲ್ಡೀವ್ಸ್‌ಗೆ ಹೆದರಲಿದ್ದೇವೆಯೆ?” ಎಂದು ಅವರು ಕೇಳಿದ್ದಾರೆ.

ಭಾನುವಾರ ತಡರಾತ್ರಿ, ಗುಂಪೊಂದು 66 ಮನೆಗಳಿಗೆ ಹಾನಿ ಮಾಡಿದ್ದು, ಕನಿಷ್ಠ 20 ಹಿಂದೂ ಧರ್ಮಿಯರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ದೇಶದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ದಾಳಿಯಲ್ಲಿ ಆರು ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಕೋಮು ಹಿಂಸೆಯನ್ನು ಪ್ರಚೋದಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ತನ್ನ ಗೃಹ ಸಚಿವರಿಗೆ ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಮಂಗಳವಾರ ಸೂಚನೆ ನೀಡಿದ್ದಾರೆ. ಅವರು ದೇಶದ ಜನತೆಯೊಂದಿಗೆ ಸತ್ಯವನ್ನು ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಏನನ್ನೂ ನಂಬಬೇಡಿ ಎಂದು ವಿನಂತಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಈ ಮಧ್ಯೆ, ಆಡಳಿತಾರೂಢ ಅವಾಮಿ ಲೀಗ್ ಪಕ್ಷವು ‘ಸಾಮರಸ್ಯ ರ್‍ಯಾಲಿ’ಗಳನ್ನು ನಡೆಸುತ್ತಿದ್ದು, ಕೋಮುಗಲಭೆಗಳ ವಿರುದ್ಧ ಮಂಗಳವಾರ ದೇಶದಾದ್ಯಂತ ಶಾಂತಿ ಮೆರವಣಿಗೆಗಳನ್ನು ನಡೆಸುತ್ತಿದೆ.

“ಹಿಂದೂ ಸಹೋದರ ಸಹೋದರಿಯರೇ, ಭಯಪಡಬೇಡಿ. ಶೇಖ್ ಹಸೀನಾ ಮತ್ತು ಅವಾಮಿ ಲೀಗ್ ನಿಮ್ಮೊಂದಿಗಿದ್ದಾರೆ. ಶೇಖ್ ಹಸೀನಾ ಸರ್ಕಾರವು ಅಲ್ಪಸಂಖ್ಯಾತ ಸ್ನೇಹಿ ಸರ್ಕಾರವಾಗಿದೆ” ಎಂದು ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಒಬೈದುಲ್ ಖಾದರ್‌‌ ಅವರು ಪಕ್ಷದ ಕೇಂದ್ರ ಕಚೇರಿಯ ಮುಂದೆ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಕೋಮುವಾದಿ ಶಕ್ತಿಗಳ ವಿರುದ್ಧ ಪ್ರತಿರೋಧವನ್ನು ಒಡ್ಡುವಂತೆ ಅವರು ತಮ್ಮ ಪಕ್ಷದ ಸದಸ್ಯರನ್ನು ಕೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. ಕೋಮುವಾದಿ ಶಕ್ತಿಗಳನ್ನು ಹೆಡೆಮುರಿ ಕಟ್ಟುವವರೆಗೂ ಆಡಳಿತ ಪಕ್ಷವು ಬೀದಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಈ ಕೋಮುವಾದಿಗಳಿಗೆ ಸರಿಯಾದ ಉತ್ತರ ನೀಡಲು ಸಿದ್ಧರಾಗಿದ್ದಾರೆ ಎಂದು ಒಬೈದುಲ್ ಖಾದರ್‌‌ ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...