Homeಮುಖಪುಟನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ಮಕ್ಕಳಿಗೆ ಸಭ್ಯತೆ, ಘನತೆ, ಗಾಂಭೀರ್ಯತೆಯೊಂದಿಗೆ ಶಿಕ್ಷಣವನ್ನು ಮುಗಿಸಲು ಅನುವು ಮಾಡಿಕೊಡಿ. ಪರಸ್ಪರರನ್ನು ಕಚ್ಚಾಡಿಸುವವರನ್ನು ಯಾವ ಧರ್ಮದಲ್ಲಿ ಇದ್ದರೂ ಖಂಡಿಸಿ, ದೂರವಿಡಿ.

- Advertisement -
- Advertisement -

ಭಾರತ ಬಹುಸಂಸ್ಕೃತಿಯ ರಾಷ್ಟ್ರ. ಸರ್ವ ಜನಾಂಗದ ಶಾಂತಿಯ ತೋಟ ರಸಿಕರ ಕಂಗಳ ಸೆಳೆಯುವ ನೋಟ ಎಂದು ರಾಷ್ಟ್ರಕವಿ ಕುವೆಂಪು ಹಾಡಿಹೊಗಳಿದ ವಿವಿಧ ಧರ್ಮ, ಜನಾಂಗ, ಜಾತಿ -ಪಂಥಗಳ, ಭಾಷೆ, ಉಡುಗೆ- ತೊಡುಗೆ, ಆಹಾರ ಪದ್ಧತಿಗಳನ್ನು ತಲೆತಲಾಂತರದಿಂದ ಗೌರವಿಸಿಕೊಂಡು ಸಹಬಾಳ್ವೆ ಮತ್ತು ಸೌಹಾರ್ದತೆಗೆ ಜಗತ್ತಿಗೆ ಮಾದರಿಯಾದ ದೇಶ. ಮಾದರಿಯಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದ ದೇಶ. ನಾನು ಯಾವುದೇ ಧರ್ಮವನ್ನು ಅನುಸರಿಸುತ್ತಿದ್ದರು ನನಗೆ ಭಾರತೀಯಳು ಎನ್ನುವುದಕ್ಕೆ ಹೆಮ್ಮೆ .ಏಕೆಂದರೆ ಈ ನೆಲದ ಸಂಸ್ಕೃತಿ ಎಲ್ಲವನ್ನೂ ಒಳಗೊಂಡು ಜೀವಿಸುವ ವಿಶಾಲ ಹೃದಯವನ್ನು ನೀಡಿದೆ.

ಈ ಹೊಗಳಿಕೆ ಅತಿಯಾಯಿತು ಎಂದು ಅನಿಸುವ ವಿಭಾಗಕ್ಕೆ ನೀವು ಸೇರಿದ್ದರೆ ಅದು ನಿಮ್ಮ ದೃಷ್ಟಿಕೋನ. ಈ ಬಹುಸಂಸ್ಕೃತಿ, ಬಹುಧರ್ಮೀಯತಿಯನ್ನು ಒಪ್ಪಿಕೊಂಡು ಬಾಳುವುದನ್ನು ಕಲಿಸುವ ಪ್ರಥಮ ಮೆಟ್ಟಿಲು ಶಿಕ್ಷಣ ಸಂಸ್ಥೆಗಳು. ಅದರಲ್ಲೂ ಸರಕಾರಿ ಶಿಕ್ಷಣ ಸಂಸ್ಥೆಗಳು. ಇಂದಿನಂತೆ ಮಧ್ಯಮ, ಮೇಲುವರ್ಗದ ಜನರೆಲ್ಲರೂ ತಮ್ಮ ಮಕ್ಕಳನ್ನು ಆಂಗ್ಲ ಶಾಲೆಗೆ ಸೇರಿಸುವ ವ್ಯವಸ್ಥೆ ಅಂದಿರಲಿಲ್ಲ. ಹೆಚ್ಚಿನ ಎಲ್ಲರೂ ಸರಕಾರಿ ಶಾಲೆಗಳಿಗೆ ಹೋಗುತ್ತಿದ್ದರು ಮತ್ತು ಅದು ನಮಗೆ ಕೀಳರಿಮೆಯ ವಿಚಾರವಾಗಿರಲಿಲ್ಲ. ನನ್ನ ಸರಕಾರಿ ಶಾಲೆ ಹಾಗಿತ್ತು. ಮಾನವೀಯತೆಯನ್ನು, ವಿಶ್ವ ಭ್ರಾತೃತ್ವವನ್ನು ಕಲಿಸುವ, ಹಿರಿಯರನ್ನು ಹೇಗೆ ಗೌರವಿಸಬೇಕು? ಒಡನಾಡಿಗಳನ್ನು ಹೇಗೆ ಸ್ನೇಹದೊಂದಿಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು? ಕಿರಿಯರನ್ನು ಯಾವ ರೀತಿ ಪ್ರೀತಿಸಬೇಕು? ಎಂಬುದನ್ನು ಕಲಿಸಿಕೊಟ್ಟ ಶಾಲೆಗಳು ನಮ್ಮವು. ಅಂದಿನ ಬಾಲ್ಯದ ಗೆಳತಿ ರಶ್ಮಿ ಇಂದು ಸಿಕ್ಕರು ಅದೇ ಪ್ರೀತಿಯಿಂದ ಬಾಲ್ಯದ ಮುಗ್ಧತೆಯೊಂದಿಗೆ ಮಾತನಾಡಿಸುತ್ತಾಳೆ. ಸಹಪಾಠಿಗಳಾಗಿದ್ದ ಜೋಕಿಮ್, ರಮೇಶ್ ಈಗ ಎಲ್ಲಿರಬಹುದು ಅವರ ಸಂಸಾರ ಹೇಗಿರಬಹುದು? ಎಂಬ ಕುತೂಹಲ ಈಗಲೂ ನನಗಿದೆ  ಹೈಸ್ಕೂಲು ಕಾಲೇಜು ಗೆಳತಿಯರಾದ ದೀಪ ಕಲಾ, ರೂಪ, ಪ್ರಫುಲ್ಲ, ಚೇತನ, ಮಮತಾ, ಸುನೀತಾ, ಪ್ರೆಸಿಲ್ಲಾ, ಪ್ರಿಯಾ, ಮೀನಾ, ತಾವ್ರೋ ಹೀಗೆ ಪಟ್ಟಿ ಬೆಳೆಯುತ್ತದೆ. ನಮಗ್ಯಾರಿಗೂ ನಾವು ಒಂದೇ ತಂದೆ ತಾಯಿಯ ಮಕ್ಕಳಲ್ಲ ಎಂದು ಎಂದಿಗೂ ಅನಿಸಿದ್ದೇ ಇಲ್ಲ. ಅನೇಕ ಬಾರಿ ಅವರ ಮನೆಗೆ ಹೋಗಿದ್ದೆ, ಉಂಡಿದ್ದೆ. ಅವರ ಅಕ್ಕರೆಯಲ್ಲಿ ಮಿಂದು ಎದ್ದಿದ್ದೆ. ನನ್ನ ಧರ್ಮ ಅದ್ಯಾವುದಕ್ಕೂ ನನಗೆ ತಡೆಯಾಗಲಿಲ್ಲ. ನಾನು ಧರಿಸಿದ್ದ ಹಿಜಾಬ್ ಅವರಿಗೆ ಸಮಸ್ಯೆಯಾಗಿರಲಿಲ್ಲ.

ಇಂದು ಹಿಜಾಬ್ ಕಟಕಟೆಯಲ್ಲಿ ನಿಂತಿರುವುದಕ್ಕೆ, ಬೀದಿ ವಿಷಯವಾಗಿ ಮಾರ್ಪಟ್ಟಿರುವುದಕ್ಕೆ ವಿಷಾದವಿದೆ. ಒಂದೇ ಬೆಂಚಿನಲ್ಲಿ ಒಟ್ಟಿಗೆ ಕುಳಿತು ತರಲೆ ಮಾತುಗಳನ್ನಾಡುತ್ತಿದ್ದ, ವಿಮರ್ಶಿಸುತ್ತ, ಟೀಕಿಸುತ್ತಿದ್ದ ಅದರಾಚೆಗೆ ಅಷ್ಟೇ ಪ್ರೀತಿ ಕಾಳಜಿಯನ್ನು ವ್ಯಕ್ತಪಡಿಸುತ್ತಿದ್ದ ಸಹಪಾಠಿಗಳು ದಿನಬೆಳಗಾದರೆ ಅನ್ಯ ಧರ್ಮದವರಾಗಿ ಹೇಗೆ ಮಾರ್ಪಟ್ಟರು?

ನಿಜ ಹಿಜಾಬ್ ಒಂದು ಧರ್ಮದ ಸಹೋದರಿಯರು ಅನುಸರಿಸುತ್ತಿರುವ ವಸ್ತ್ರ ಪದ್ಧತಿ. ಅದನ್ನು ಬೇರೆ ಯಾವುದೋ ವಸ್ತ್ರದೊಂದಿಗೆ ಪ್ರತಿಸ್ಪರ್ಧಿಯಾಗಿಸಿದ್ದು ಯಾರು? ನಾವು ಇಂದಿಗೂ ಹಿಂದೂ-ಮುಸ್ಲಿಂ ಸಹೋದರಿಯರು ಪರಸ್ಪರ ಪ್ರೀತಿ ಗೌರವಗಳಿಂದ ನಡೆಸಿಕೊಳ್ಳುತ್ತಿದ್ದೇವೆ. ಹಬ್ಬಗಳಲ್ಲಿ, ಸಂತೋಷ ಮತ್ತು ದುಃಖದ ಸಂದರ್ಭಗಳಲ್ಲಿ ಪರಸ್ಪರ ಜೊತೆಗಿದ್ದೇವೆ. ಈ ರೀತಿ ಹಿಜಾಬ್ ಅನ್ನು ಚರ್ಚಾ ವಿಷಯವಾಗಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವವರ ದಾಳಕ್ಕೆ ನಾವೆಂದೂ ಬಲಿ ಬೀಳಬಾರದು.

ನಮಗೆ ಶಿಕ್ಷಣ ಮುಖ್ಯ. ಅದಕ್ಕಿಂತಲೂ ಮುಖ್ಯವಾಗಿ ಈ ದೇಶದ ಅಖಂಡತೆ ಸಾಮರಸ್ಯದ ಜೀವನ ಬಹಳ ಮುಖ್ಯ. ಅಲ್ಪಸಂಖ್ಯಾತರ ಎಲ್ಲ ಗುರುತುಗಳನ್ನು ಒಂದೊಂದಾಗಿ ಅಳಿಸಿ ಬಯಸುವ ಸಂವೇದನ ಶೂನ್ಯತೆ ಯುವಜನತೆಯನ್ನು ಯಾವ ದಿಕ್ಕಿನೆಡೆಗೆ ಕೊಂಡೊಯ್ಯುತ್ತದೆ, ಎಂಬುದರ ಬಗ್ಗೆ ದಿಗಿಲು ಆಗುತ್ತಿದೆ.

ಸಿಖ್ ಧರ್ಮೀಯ ಸಹೋದರರ ಶಿರವಸ್ತ್ರಕ್ಕಿಲ್ಲದ, ಕ್ರೈಸ್ತ ಸನ್ಯಾಸಿ ಭಗಿನಿಯರ ವಸ್ತ್ರಧಾರಣೆಗೆ ಇಲ್ಲದ ವಿರೋಧ ಹಿಜಾಬಿಗೆ ಯಾಕೆ? ತಲೆಯಮೇಲೆ ಹಾಕಿಕೊಳ್ಳುವ ಒಂದು ತುಂಡು ಬಟ್ಟೆಯ ಬಗ್ಗೆ ಇಷ್ಟು ಗೊಂದಲವೇಕೆ?

ಮಕ್ಕಳಿಗೆ ಸಭ್ಯತೆ, ಘನತೆ, ಗಾಂಭೀರ್ಯತೆಯೊಂದಿಗೆ ಶಿಕ್ಷಣವನ್ನು ಮುಗಿಸಲು ಅನುವು ಮಾಡಿಕೊಡಿ. ನಾಲಾಯಕ್ ಆದವರು, ಪರಸ್ಪರರನ್ನು ಕಚ್ಚಾಡಿಸುವವರನ್ನು ಯಾವ ಧರ್ಮದಲ್ಲಿ ಇದ್ದರೂ ಖಂಡಿಸಿ, ದೂರವಿಡಿ. ನಮ್ಮ ಮಕ್ಕಳು ವಿವಿಧ ಸಂಸ್ಕೃತಿಯನ್ನು ಪರಿಚಯಿಸಿಕೊಂಡು ಜೀವಿಸುವ ಹಕ್ಕನ್ನು ಅವರಿಂದ ಕಿತ್ತುಕೊಳ್ಳಬೇಡಿ. ರಾಜಕೀಯದವರ ಹಿತಾಸಕ್ತಿಗೆ ನೀವು ಬಲಿಯಾಗಬೇಡಿ. ಚೆನ್ನಾಗಿ ಕಲಿತು, ಬೆಳೆದು ನಮ್ಮ ಸಾಮರ್ಥ್ಯವನ್ನು ಅವರಿಗೆ ಗೊತ್ತುಪಡಿಸುವ. ಹೆಣ್ಣು ಮಕ್ಕಳ ಉಡುಪು ಅವರ ಹಕ್ಕು. ಹಾಗಾಗಿ ಹಿಜಾಬ್ ಸೇರಿದಂತೆ ಎಲ್ಲರ ವಸ್ತ್ರಗಳ ಪರವಾಗಿ ನಿಲ್ಲೋಣ. ನನ್ನ ವಸ್ತ್ರಧಾರಣೆ ನನ್ನ ಮೂಲಭೂತ ಹಕ್ಕು. ಅದು ನಿಮಗೆ ತೊಂದರೆಯನ್ನುಂಟು ಮಾಡುವುದಾದರೆ ಅದು ನನ್ನ ಅಥವಾ ಹಿಜಾಬಿನ ತಪ್ಪಲ್ಲ. ನಿಮ್ಮ ಮಾನಸಿಕತೆ, ಅದನ್ನು ಸ್ವಲ್ಪ ಶುದ್ಧವಾಗಿಟ್ಟುಕೊಳ್ಳಿ. ಸಮಸ್ಯೆಗೆ ಪರಿಹಾರ ನಿಮ್ಮಲ್ಲೇ ಇದೆ.

  • ಸಬೀಹ ಫಾತಿಮ

ಇದನ್ನೂ ಓದಿ: ಹೆಣ್ಣುಮಕ್ಕಳ ಬದುಕು, ಉಡುಪು ಮತ್ತು ಆಯ್ಕೆಯ ಹಕ್ಕುಗಳು ಮತ್ತು ಪುರುಷಾಧಿಪತ್ಯದ ಆಯ್ಕೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....