Homeಮುಖಪುಟನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ಮಕ್ಕಳಿಗೆ ಸಭ್ಯತೆ, ಘನತೆ, ಗಾಂಭೀರ್ಯತೆಯೊಂದಿಗೆ ಶಿಕ್ಷಣವನ್ನು ಮುಗಿಸಲು ಅನುವು ಮಾಡಿಕೊಡಿ. ಪರಸ್ಪರರನ್ನು ಕಚ್ಚಾಡಿಸುವವರನ್ನು ಯಾವ ಧರ್ಮದಲ್ಲಿ ಇದ್ದರೂ ಖಂಡಿಸಿ, ದೂರವಿಡಿ.

- Advertisement -
- Advertisement -

ಭಾರತ ಬಹುಸಂಸ್ಕೃತಿಯ ರಾಷ್ಟ್ರ. ಸರ್ವ ಜನಾಂಗದ ಶಾಂತಿಯ ತೋಟ ರಸಿಕರ ಕಂಗಳ ಸೆಳೆಯುವ ನೋಟ ಎಂದು ರಾಷ್ಟ್ರಕವಿ ಕುವೆಂಪು ಹಾಡಿಹೊಗಳಿದ ವಿವಿಧ ಧರ್ಮ, ಜನಾಂಗ, ಜಾತಿ -ಪಂಥಗಳ, ಭಾಷೆ, ಉಡುಗೆ- ತೊಡುಗೆ, ಆಹಾರ ಪದ್ಧತಿಗಳನ್ನು ತಲೆತಲಾಂತರದಿಂದ ಗೌರವಿಸಿಕೊಂಡು ಸಹಬಾಳ್ವೆ ಮತ್ತು ಸೌಹಾರ್ದತೆಗೆ ಜಗತ್ತಿಗೆ ಮಾದರಿಯಾದ ದೇಶ. ಮಾದರಿಯಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದ ದೇಶ. ನಾನು ಯಾವುದೇ ಧರ್ಮವನ್ನು ಅನುಸರಿಸುತ್ತಿದ್ದರು ನನಗೆ ಭಾರತೀಯಳು ಎನ್ನುವುದಕ್ಕೆ ಹೆಮ್ಮೆ .ಏಕೆಂದರೆ ಈ ನೆಲದ ಸಂಸ್ಕೃತಿ ಎಲ್ಲವನ್ನೂ ಒಳಗೊಂಡು ಜೀವಿಸುವ ವಿಶಾಲ ಹೃದಯವನ್ನು ನೀಡಿದೆ.

ಈ ಹೊಗಳಿಕೆ ಅತಿಯಾಯಿತು ಎಂದು ಅನಿಸುವ ವಿಭಾಗಕ್ಕೆ ನೀವು ಸೇರಿದ್ದರೆ ಅದು ನಿಮ್ಮ ದೃಷ್ಟಿಕೋನ. ಈ ಬಹುಸಂಸ್ಕೃತಿ, ಬಹುಧರ್ಮೀಯತಿಯನ್ನು ಒಪ್ಪಿಕೊಂಡು ಬಾಳುವುದನ್ನು ಕಲಿಸುವ ಪ್ರಥಮ ಮೆಟ್ಟಿಲು ಶಿಕ್ಷಣ ಸಂಸ್ಥೆಗಳು. ಅದರಲ್ಲೂ ಸರಕಾರಿ ಶಿಕ್ಷಣ ಸಂಸ್ಥೆಗಳು. ಇಂದಿನಂತೆ ಮಧ್ಯಮ, ಮೇಲುವರ್ಗದ ಜನರೆಲ್ಲರೂ ತಮ್ಮ ಮಕ್ಕಳನ್ನು ಆಂಗ್ಲ ಶಾಲೆಗೆ ಸೇರಿಸುವ ವ್ಯವಸ್ಥೆ ಅಂದಿರಲಿಲ್ಲ. ಹೆಚ್ಚಿನ ಎಲ್ಲರೂ ಸರಕಾರಿ ಶಾಲೆಗಳಿಗೆ ಹೋಗುತ್ತಿದ್ದರು ಮತ್ತು ಅದು ನಮಗೆ ಕೀಳರಿಮೆಯ ವಿಚಾರವಾಗಿರಲಿಲ್ಲ. ನನ್ನ ಸರಕಾರಿ ಶಾಲೆ ಹಾಗಿತ್ತು. ಮಾನವೀಯತೆಯನ್ನು, ವಿಶ್ವ ಭ್ರಾತೃತ್ವವನ್ನು ಕಲಿಸುವ, ಹಿರಿಯರನ್ನು ಹೇಗೆ ಗೌರವಿಸಬೇಕು? ಒಡನಾಡಿಗಳನ್ನು ಹೇಗೆ ಸ್ನೇಹದೊಂದಿಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು? ಕಿರಿಯರನ್ನು ಯಾವ ರೀತಿ ಪ್ರೀತಿಸಬೇಕು? ಎಂಬುದನ್ನು ಕಲಿಸಿಕೊಟ್ಟ ಶಾಲೆಗಳು ನಮ್ಮವು. ಅಂದಿನ ಬಾಲ್ಯದ ಗೆಳತಿ ರಶ್ಮಿ ಇಂದು ಸಿಕ್ಕರು ಅದೇ ಪ್ರೀತಿಯಿಂದ ಬಾಲ್ಯದ ಮುಗ್ಧತೆಯೊಂದಿಗೆ ಮಾತನಾಡಿಸುತ್ತಾಳೆ. ಸಹಪಾಠಿಗಳಾಗಿದ್ದ ಜೋಕಿಮ್, ರಮೇಶ್ ಈಗ ಎಲ್ಲಿರಬಹುದು ಅವರ ಸಂಸಾರ ಹೇಗಿರಬಹುದು? ಎಂಬ ಕುತೂಹಲ ಈಗಲೂ ನನಗಿದೆ  ಹೈಸ್ಕೂಲು ಕಾಲೇಜು ಗೆಳತಿಯರಾದ ದೀಪ ಕಲಾ, ರೂಪ, ಪ್ರಫುಲ್ಲ, ಚೇತನ, ಮಮತಾ, ಸುನೀತಾ, ಪ್ರೆಸಿಲ್ಲಾ, ಪ್ರಿಯಾ, ಮೀನಾ, ತಾವ್ರೋ ಹೀಗೆ ಪಟ್ಟಿ ಬೆಳೆಯುತ್ತದೆ. ನಮಗ್ಯಾರಿಗೂ ನಾವು ಒಂದೇ ತಂದೆ ತಾಯಿಯ ಮಕ್ಕಳಲ್ಲ ಎಂದು ಎಂದಿಗೂ ಅನಿಸಿದ್ದೇ ಇಲ್ಲ. ಅನೇಕ ಬಾರಿ ಅವರ ಮನೆಗೆ ಹೋಗಿದ್ದೆ, ಉಂಡಿದ್ದೆ. ಅವರ ಅಕ್ಕರೆಯಲ್ಲಿ ಮಿಂದು ಎದ್ದಿದ್ದೆ. ನನ್ನ ಧರ್ಮ ಅದ್ಯಾವುದಕ್ಕೂ ನನಗೆ ತಡೆಯಾಗಲಿಲ್ಲ. ನಾನು ಧರಿಸಿದ್ದ ಹಿಜಾಬ್ ಅವರಿಗೆ ಸಮಸ್ಯೆಯಾಗಿರಲಿಲ್ಲ.

ಇಂದು ಹಿಜಾಬ್ ಕಟಕಟೆಯಲ್ಲಿ ನಿಂತಿರುವುದಕ್ಕೆ, ಬೀದಿ ವಿಷಯವಾಗಿ ಮಾರ್ಪಟ್ಟಿರುವುದಕ್ಕೆ ವಿಷಾದವಿದೆ. ಒಂದೇ ಬೆಂಚಿನಲ್ಲಿ ಒಟ್ಟಿಗೆ ಕುಳಿತು ತರಲೆ ಮಾತುಗಳನ್ನಾಡುತ್ತಿದ್ದ, ವಿಮರ್ಶಿಸುತ್ತ, ಟೀಕಿಸುತ್ತಿದ್ದ ಅದರಾಚೆಗೆ ಅಷ್ಟೇ ಪ್ರೀತಿ ಕಾಳಜಿಯನ್ನು ವ್ಯಕ್ತಪಡಿಸುತ್ತಿದ್ದ ಸಹಪಾಠಿಗಳು ದಿನಬೆಳಗಾದರೆ ಅನ್ಯ ಧರ್ಮದವರಾಗಿ ಹೇಗೆ ಮಾರ್ಪಟ್ಟರು?

ನಿಜ ಹಿಜಾಬ್ ಒಂದು ಧರ್ಮದ ಸಹೋದರಿಯರು ಅನುಸರಿಸುತ್ತಿರುವ ವಸ್ತ್ರ ಪದ್ಧತಿ. ಅದನ್ನು ಬೇರೆ ಯಾವುದೋ ವಸ್ತ್ರದೊಂದಿಗೆ ಪ್ರತಿಸ್ಪರ್ಧಿಯಾಗಿಸಿದ್ದು ಯಾರು? ನಾವು ಇಂದಿಗೂ ಹಿಂದೂ-ಮುಸ್ಲಿಂ ಸಹೋದರಿಯರು ಪರಸ್ಪರ ಪ್ರೀತಿ ಗೌರವಗಳಿಂದ ನಡೆಸಿಕೊಳ್ಳುತ್ತಿದ್ದೇವೆ. ಹಬ್ಬಗಳಲ್ಲಿ, ಸಂತೋಷ ಮತ್ತು ದುಃಖದ ಸಂದರ್ಭಗಳಲ್ಲಿ ಪರಸ್ಪರ ಜೊತೆಗಿದ್ದೇವೆ. ಈ ರೀತಿ ಹಿಜಾಬ್ ಅನ್ನು ಚರ್ಚಾ ವಿಷಯವಾಗಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವವರ ದಾಳಕ್ಕೆ ನಾವೆಂದೂ ಬಲಿ ಬೀಳಬಾರದು.

ನಮಗೆ ಶಿಕ್ಷಣ ಮುಖ್ಯ. ಅದಕ್ಕಿಂತಲೂ ಮುಖ್ಯವಾಗಿ ಈ ದೇಶದ ಅಖಂಡತೆ ಸಾಮರಸ್ಯದ ಜೀವನ ಬಹಳ ಮುಖ್ಯ. ಅಲ್ಪಸಂಖ್ಯಾತರ ಎಲ್ಲ ಗುರುತುಗಳನ್ನು ಒಂದೊಂದಾಗಿ ಅಳಿಸಿ ಬಯಸುವ ಸಂವೇದನ ಶೂನ್ಯತೆ ಯುವಜನತೆಯನ್ನು ಯಾವ ದಿಕ್ಕಿನೆಡೆಗೆ ಕೊಂಡೊಯ್ಯುತ್ತದೆ, ಎಂಬುದರ ಬಗ್ಗೆ ದಿಗಿಲು ಆಗುತ್ತಿದೆ.

ಸಿಖ್ ಧರ್ಮೀಯ ಸಹೋದರರ ಶಿರವಸ್ತ್ರಕ್ಕಿಲ್ಲದ, ಕ್ರೈಸ್ತ ಸನ್ಯಾಸಿ ಭಗಿನಿಯರ ವಸ್ತ್ರಧಾರಣೆಗೆ ಇಲ್ಲದ ವಿರೋಧ ಹಿಜಾಬಿಗೆ ಯಾಕೆ? ತಲೆಯಮೇಲೆ ಹಾಕಿಕೊಳ್ಳುವ ಒಂದು ತುಂಡು ಬಟ್ಟೆಯ ಬಗ್ಗೆ ಇಷ್ಟು ಗೊಂದಲವೇಕೆ?

ಮಕ್ಕಳಿಗೆ ಸಭ್ಯತೆ, ಘನತೆ, ಗಾಂಭೀರ್ಯತೆಯೊಂದಿಗೆ ಶಿಕ್ಷಣವನ್ನು ಮುಗಿಸಲು ಅನುವು ಮಾಡಿಕೊಡಿ. ನಾಲಾಯಕ್ ಆದವರು, ಪರಸ್ಪರರನ್ನು ಕಚ್ಚಾಡಿಸುವವರನ್ನು ಯಾವ ಧರ್ಮದಲ್ಲಿ ಇದ್ದರೂ ಖಂಡಿಸಿ, ದೂರವಿಡಿ. ನಮ್ಮ ಮಕ್ಕಳು ವಿವಿಧ ಸಂಸ್ಕೃತಿಯನ್ನು ಪರಿಚಯಿಸಿಕೊಂಡು ಜೀವಿಸುವ ಹಕ್ಕನ್ನು ಅವರಿಂದ ಕಿತ್ತುಕೊಳ್ಳಬೇಡಿ. ರಾಜಕೀಯದವರ ಹಿತಾಸಕ್ತಿಗೆ ನೀವು ಬಲಿಯಾಗಬೇಡಿ. ಚೆನ್ನಾಗಿ ಕಲಿತು, ಬೆಳೆದು ನಮ್ಮ ಸಾಮರ್ಥ್ಯವನ್ನು ಅವರಿಗೆ ಗೊತ್ತುಪಡಿಸುವ. ಹೆಣ್ಣು ಮಕ್ಕಳ ಉಡುಪು ಅವರ ಹಕ್ಕು. ಹಾಗಾಗಿ ಹಿಜಾಬ್ ಸೇರಿದಂತೆ ಎಲ್ಲರ ವಸ್ತ್ರಗಳ ಪರವಾಗಿ ನಿಲ್ಲೋಣ. ನನ್ನ ವಸ್ತ್ರಧಾರಣೆ ನನ್ನ ಮೂಲಭೂತ ಹಕ್ಕು. ಅದು ನಿಮಗೆ ತೊಂದರೆಯನ್ನುಂಟು ಮಾಡುವುದಾದರೆ ಅದು ನನ್ನ ಅಥವಾ ಹಿಜಾಬಿನ ತಪ್ಪಲ್ಲ. ನಿಮ್ಮ ಮಾನಸಿಕತೆ, ಅದನ್ನು ಸ್ವಲ್ಪ ಶುದ್ಧವಾಗಿಟ್ಟುಕೊಳ್ಳಿ. ಸಮಸ್ಯೆಗೆ ಪರಿಹಾರ ನಿಮ್ಮಲ್ಲೇ ಇದೆ.

  • ಸಬೀಹ ಫಾತಿಮ

ಇದನ್ನೂ ಓದಿ: ಹೆಣ್ಣುಮಕ್ಕಳ ಬದುಕು, ಉಡುಪು ಮತ್ತು ಆಯ್ಕೆಯ ಹಕ್ಕುಗಳು ಮತ್ತು ಪುರುಷಾಧಿಪತ್ಯದ ಆಯ್ಕೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...