Homeಚಳವಳಿನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ಕೇಸರಿ ಪಕ್ಷವಾದ ಬಿಜೆಪಿ, ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿರುವುದಾಗಿ `ದಿ ವೈರ್’ ವರದಿ ಮಾಡಿದೆ.

- Advertisement -
- Advertisement -

“ನಾವು ಕೂಡ ರೈತರು, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸುತ್ತೇವೆ” ಎಂದು ಲಖಿಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನ ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ಜಾಲತಾಣದಲ್ಲಿ ಪತ್ರಕರ್ತೆ ಇಸ್ಮತ್‌ ಅರ ವರದಿ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ಶುಭಂ ಮಿಶ್ರಾ ಅವರ ಕುಟುಂಬವು, “ಕೆಲವು ಸ್ಥಳೀಯ ಬಿಜೆಪಿ ನಾಯಕರು ನಮ್ಮಲ್ಲಿಗೆ ಬಂದು ಧೈರ್ಯ ತುಂಬಿದ್ದರೂ, ಬಿಜೆಪಿಯ ಹಿರಿಯ ನಾಯಕರು ಯಾರೂ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ಅಕ್ಟೋಬರ್‌ 3ರಂದು ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ವಾಹನಗಳನ್ನು ಹತ್ತಿಸಿದಾಗ ಮೃತಪಟ್ಟವರ ಕುಟುಂಬಗಳನ್ನು ಅಕ್ಟೋಬರ್‌ 6ರಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಯಾಗಿದ್ದರು. ಜೊತೆಗೆ ಘಟನೆಯಲ್ಲಿ ಅಸುನೀಗಿದ ಪತ್ರಕರ್ತ ರಮಣ್‌ ಕಶ್ಯಪ್‌ ಅವರ ಕುಟುಂಬವನ್ನೂ ಭೇಟಿಯಾಗಿದ್ದರು.

ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಶುಭಂ ಮಿಶ್ರಾ ಅವರ ಕುಟುಂಬವು, “ಪ್ರಿಯಾಂಕ ಹಾಗೂ ರಾಹುಲ್‌ ಅವರು ತಮ್ಮನ್ನೂ ಭೇಟಿಯಾಗುವುದನ್ನು ಸ್ವಾಗತಿಸಿದೆ” ಎಂದು ಒಂದು ದಿನದ ಬಳಿಕ ಹೇಳಿದೆ.

ಶುಭಂ ಮಿಶ್ರಾ ಅವರ ಒಂದು ವರ್ಷದ ಮಗುವಿನೊಂದಿಗೆ ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ (ಚಿತ್ರಕೃಪೆ: ದಿ ವೈರ್‌, ಇಸ್ಮತ್‌ ಅರ)

“ಮೃತಪಟ್ಟ ರೈತರ ಕುಟುಂಬಗಳಿಗೆ ಧೈರ್ಯ ತುಂಬಲು ರಾಹುಲ್‌ ಹಾಗೂ ಪ್ರಿಯಾಂಕ ಆಗಮಿಸಿದ್ದರು. ನಾವು ಕೂಡ ರೈತರು. ನಮ್ಮ ಕುಟುಂಬದ ಸದಸ್ಯನನ್ನೂ ಈ ಘಟನೆಯಲ್ಲಿ ಕಳೆದುಕೊಂಡಿದ್ದೇವೆ. ನಮ್ಮ ಮನೆಗೆ ಅವರು ಭೇಟಿ ನೀಡುವುದಾದರೆ ಸಂತೋಷದಿಂದ ಸ್ವಾಗತಿಸುತ್ತೇವೆ” ಎಂದು ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ ಹೇಳಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ಶುಭಂ ಮಿಶ್ರಾ ಅವರು ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ಬಿಜೆಪಿ ಬೂತ್‌ ಮಟ್ಟದ ಅಧ್ಯಕ್ಷರಾಗಿದ್ದರು. ಕೇಸರಿ ಪಕ್ಷವಾದ ಬಿಜೆಪಿ ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿದೆ. “ಸ್ಥಳೀಯ ಬಿಜೆಪಿ ನಾಯಕರು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಆದರೆ ಬಿಜೆಪಿಯ ಯಾವುದೇ ಹಿರಿಯ ನಾಯಕರು ಕುಟುಂಬವನ್ನು ಭೇಟಿಯಾಗಿಲ್ಲ” ಎಂದು ಹೇಳಿದೆ.

ಬಿಜೆಪಿಯನ್ನು ಬೇರು ಮಟ್ಟದಿಂದ ಕಟ್ಟಿದ ಸಾವಿರಾರು ಕಾರ್ಯಕರ್ತರಲ್ಲಿ ಮಿಶ್ರಾ ಕೂಡ ಒಬ್ಬರಾಗಿದ್ದರು. ಆದರೆ ಮಿಶ್ರಾ ಸಾವಿಗೆ ಬಿಜೆಪಿಯು ‘ಹುತಾತ್ಮ’ ಸ್ಥಾನವನ್ನು ನೀಡುವ ಅಧಿಕೃತ ಹೇಳಿಕೆಯನ್ನು ಪಕ್ಷ ಈವರೆಗೆ ನೀಡಿಲ್ಲ ಎಂದು ಮಿಶ್ರಾ ಕುಟುಂಬ ಹೇಳಿರುವುದಾಗಿ ದಿ ವೈರ್‌ ಇದಕ್ಕೂ ಮುಂಚೆ ವರದಿ ಮಾಡಿತ್ತು.

“ನಾವು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇವೆ, ಆದರೆ ಅವರು ಭೇಟಿ ನೀಡಿದ್ದರೆ ನಾವು ಅವರನ್ನು ದೂರವಿಡುತ್ತಿರಲಿಲ್ಲ” ಎಂದು ಕುಟುಂಬ ಹೇಳಿದ್ದು, “ನಾವು ಎಲ್ಲ ಕಡೆಯಿಂದಲೂ ದೂರವಾಗುತ್ತಿರುವ ಅನುಭವವಾಗುತ್ತಿದೆ. ಮಾಧ್ಯಮಗಳು ಕೂಡ ಮಿಶ್ರಾ ಅವರನ್ನು ‘ಖಳನಾಯಕ’ ಎಂದು ಬಿಂಬಿಸುತ್ತಿವೆ” ಎಂದು ಅವರು ಹೇಳಿರುವುದಾಗಿ ದಿ ವೈರ್‌ಗೆ ತಿಳಿಸಿದ್ದಾರೆ.

“ನಮ್ಮ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ನಮ್ಮನ್ನು ಯಾರೂ ಗಮನಿಸುತ್ತಿಲ್ಲ. ರಾಹುಲ್ ಹಾಗೂ ಪ್ರಿಯಾಂಕ ಅವರು ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡುವುದಾಗಿ ಹೇಳಿದರು, ನಾವು ರೈತರಲ್ಲವೇ? ಸಂತ್ರಸ್ತರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ನಾವೂ ಸಂತ್ರಸ್ತರಲ್ಲವೇ? ನಾವೂ ನಮ್ಮ ಮಗನನ್ನೂ ಕಳೆದುಕೊಂಡಿದ್ದೇವೆಯಲ್ಲವೇ?” ಎಂದು ವಿಜಯ ಮಿಶ್ರಾ ಕೇಳಿದ್ದಾರೆ.

ಶುಭಂ ಮಿಶ್ರಾ ಅವರ ಸ್ನೇಹಿತ ಪ್ರವೀಣ್‌ ಮಿಶ್ರಾ ಅವರು, “ಶುಭಂ ಒಳ್ಳೆಯ ಮನುಷ್ಯ. ಯಾವುದೇ ಜಾತಿ, ಧರ್ಮವನ್ನು ಲೆಕ್ಕಿಸದೆ ಕೋವಿಡ್‌ ಬಿಕ್ಕಟ್ಟಿನ ವೇಳೆ ಜನರಿಗೆ ಸಹಾಯ ಮಾಡಿದ್ದಾರೆ. ಹಿಂದೂ ಮುಸ್ಲಿಮರನೇಕರಿಗೆ ಪಡಿತರ ವಿತರಿಸಿದ್ದಾರೆ. ದುಃಖಕ್ಕೆ ಧರ್ಮ, ಜಾತಿ, ರಾಜಕೀಯವಿರುವುದಿಲ್ಲ” ಎಂದಿರುವುದ್ದಾರೆ.

“ಕಾಂಗ್ರೆಸ್‌ ಅಧಿಕಾರ ನಡೆಸುತ್ತಿರುವ ಪಂಜಾಬ್‌ ಮತ್ತು ಛತ್ತೀಸ್‌ಘಡ ಮುಖ್ಯಮಂತ್ರಿಗಳು (ಚರಣ್‌ಜಿತ್‌ ಸಿಂಗ್‌ ಹಾಗೂ ಭೂಪೇಶ್ ಭಾಗೇಲ್‌) ಮೃತ ರೈತ ಕುಟುಂಬಗಳಿಗೆ ಐವತ್ತು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ನಮಗೂ ಪರಿಹಾರ ನೀಡಬೇಕು” ಎಂದು ಕುಟುಂಬ ಕೇಳಿಕೊಂಡಿರುವುದಾಗಿ ವರದಿ ಹೇಳಿದೆ.

“ಶುಭಂ ಅವರು ಹೆಂಡತಿ ಹಾಗೂ ಪುಟ್ಟ ಮಗಳನ್ನು ಅಗಲಿದ್ದಾರೆ. ನಮ್ಮ ಆರ್ಥಿಕ ಸ್ಥಿತಿ ಕೂಡ ಸುಭದ್ರವಾಗಿಲ್ಲ. ದುಃಖದಲ್ಲಿ ಯಾವುದೇ ಪಕ್ಷದ ರಾಜಕೀಯ ಇರಬಾರದು” ಎಂದು ವಿಶ್ರಾ ಅವರ ತಂದೆ ಹೇಳಿದ್ದಾರೆ.

ದಿ ವೈರ್‌ ವರದಿಗಾರ್ತಿ ವಿಜಯ್‌ಮಿಶ್ರಾ ಅವರನ್ನು ಮಾತನಾಡಿಸಿ ಹಿಂದಿರುಗುವಾಗ, “ನಮ್ಮ ದುಃಖವನ್ನು ಹಂಚಿಕೊಳ್ಳಲು ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನಾವು ಆಹ್ವಾನಿಸುತ್ತೇವೆ ಎಂಬುದನ್ನು ತಪ್ಪದೇ ಬರೆಯಿರಿ” ಎಂದು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...