Homeಚಳವಳಿನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ಕೇಸರಿ ಪಕ್ಷವಾದ ಬಿಜೆಪಿ, ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿರುವುದಾಗಿ `ದಿ ವೈರ್’ ವರದಿ ಮಾಡಿದೆ.

- Advertisement -
- Advertisement -

“ನಾವು ಕೂಡ ರೈತರು, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸುತ್ತೇವೆ” ಎಂದು ಲಖಿಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನ ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ಜಾಲತಾಣದಲ್ಲಿ ಪತ್ರಕರ್ತೆ ಇಸ್ಮತ್‌ ಅರ ವರದಿ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ಶುಭಂ ಮಿಶ್ರಾ ಅವರ ಕುಟುಂಬವು, “ಕೆಲವು ಸ್ಥಳೀಯ ಬಿಜೆಪಿ ನಾಯಕರು ನಮ್ಮಲ್ಲಿಗೆ ಬಂದು ಧೈರ್ಯ ತುಂಬಿದ್ದರೂ, ಬಿಜೆಪಿಯ ಹಿರಿಯ ನಾಯಕರು ಯಾರೂ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ಅಕ್ಟೋಬರ್‌ 3ರಂದು ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ವಾಹನಗಳನ್ನು ಹತ್ತಿಸಿದಾಗ ಮೃತಪಟ್ಟವರ ಕುಟುಂಬಗಳನ್ನು ಅಕ್ಟೋಬರ್‌ 6ರಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಯಾಗಿದ್ದರು. ಜೊತೆಗೆ ಘಟನೆಯಲ್ಲಿ ಅಸುನೀಗಿದ ಪತ್ರಕರ್ತ ರಮಣ್‌ ಕಶ್ಯಪ್‌ ಅವರ ಕುಟುಂಬವನ್ನೂ ಭೇಟಿಯಾಗಿದ್ದರು.

ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಶುಭಂ ಮಿಶ್ರಾ ಅವರ ಕುಟುಂಬವು, “ಪ್ರಿಯಾಂಕ ಹಾಗೂ ರಾಹುಲ್‌ ಅವರು ತಮ್ಮನ್ನೂ ಭೇಟಿಯಾಗುವುದನ್ನು ಸ್ವಾಗತಿಸಿದೆ” ಎಂದು ಒಂದು ದಿನದ ಬಳಿಕ ಹೇಳಿದೆ.

ಶುಭಂ ಮಿಶ್ರಾ ಅವರ ಒಂದು ವರ್ಷದ ಮಗುವಿನೊಂದಿಗೆ ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ (ಚಿತ್ರಕೃಪೆ: ದಿ ವೈರ್‌, ಇಸ್ಮತ್‌ ಅರ)

“ಮೃತಪಟ್ಟ ರೈತರ ಕುಟುಂಬಗಳಿಗೆ ಧೈರ್ಯ ತುಂಬಲು ರಾಹುಲ್‌ ಹಾಗೂ ಪ್ರಿಯಾಂಕ ಆಗಮಿಸಿದ್ದರು. ನಾವು ಕೂಡ ರೈತರು. ನಮ್ಮ ಕುಟುಂಬದ ಸದಸ್ಯನನ್ನೂ ಈ ಘಟನೆಯಲ್ಲಿ ಕಳೆದುಕೊಂಡಿದ್ದೇವೆ. ನಮ್ಮ ಮನೆಗೆ ಅವರು ಭೇಟಿ ನೀಡುವುದಾದರೆ ಸಂತೋಷದಿಂದ ಸ್ವಾಗತಿಸುತ್ತೇವೆ” ಎಂದು ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ ಹೇಳಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ಶುಭಂ ಮಿಶ್ರಾ ಅವರು ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ಬಿಜೆಪಿ ಬೂತ್‌ ಮಟ್ಟದ ಅಧ್ಯಕ್ಷರಾಗಿದ್ದರು. ಕೇಸರಿ ಪಕ್ಷವಾದ ಬಿಜೆಪಿ ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿದೆ. “ಸ್ಥಳೀಯ ಬಿಜೆಪಿ ನಾಯಕರು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಆದರೆ ಬಿಜೆಪಿಯ ಯಾವುದೇ ಹಿರಿಯ ನಾಯಕರು ಕುಟುಂಬವನ್ನು ಭೇಟಿಯಾಗಿಲ್ಲ” ಎಂದು ಹೇಳಿದೆ.

ಬಿಜೆಪಿಯನ್ನು ಬೇರು ಮಟ್ಟದಿಂದ ಕಟ್ಟಿದ ಸಾವಿರಾರು ಕಾರ್ಯಕರ್ತರಲ್ಲಿ ಮಿಶ್ರಾ ಕೂಡ ಒಬ್ಬರಾಗಿದ್ದರು. ಆದರೆ ಮಿಶ್ರಾ ಸಾವಿಗೆ ಬಿಜೆಪಿಯು ‘ಹುತಾತ್ಮ’ ಸ್ಥಾನವನ್ನು ನೀಡುವ ಅಧಿಕೃತ ಹೇಳಿಕೆಯನ್ನು ಪಕ್ಷ ಈವರೆಗೆ ನೀಡಿಲ್ಲ ಎಂದು ಮಿಶ್ರಾ ಕುಟುಂಬ ಹೇಳಿರುವುದಾಗಿ ದಿ ವೈರ್‌ ಇದಕ್ಕೂ ಮುಂಚೆ ವರದಿ ಮಾಡಿತ್ತು.

“ನಾವು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇವೆ, ಆದರೆ ಅವರು ಭೇಟಿ ನೀಡಿದ್ದರೆ ನಾವು ಅವರನ್ನು ದೂರವಿಡುತ್ತಿರಲಿಲ್ಲ” ಎಂದು ಕುಟುಂಬ ಹೇಳಿದ್ದು, “ನಾವು ಎಲ್ಲ ಕಡೆಯಿಂದಲೂ ದೂರವಾಗುತ್ತಿರುವ ಅನುಭವವಾಗುತ್ತಿದೆ. ಮಾಧ್ಯಮಗಳು ಕೂಡ ಮಿಶ್ರಾ ಅವರನ್ನು ‘ಖಳನಾಯಕ’ ಎಂದು ಬಿಂಬಿಸುತ್ತಿವೆ” ಎಂದು ಅವರು ಹೇಳಿರುವುದಾಗಿ ದಿ ವೈರ್‌ಗೆ ತಿಳಿಸಿದ್ದಾರೆ.

“ನಮ್ಮ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ನಮ್ಮನ್ನು ಯಾರೂ ಗಮನಿಸುತ್ತಿಲ್ಲ. ರಾಹುಲ್ ಹಾಗೂ ಪ್ರಿಯಾಂಕ ಅವರು ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡುವುದಾಗಿ ಹೇಳಿದರು, ನಾವು ರೈತರಲ್ಲವೇ? ಸಂತ್ರಸ್ತರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ನಾವೂ ಸಂತ್ರಸ್ತರಲ್ಲವೇ? ನಾವೂ ನಮ್ಮ ಮಗನನ್ನೂ ಕಳೆದುಕೊಂಡಿದ್ದೇವೆಯಲ್ಲವೇ?” ಎಂದು ವಿಜಯ ಮಿಶ್ರಾ ಕೇಳಿದ್ದಾರೆ.

ಶುಭಂ ಮಿಶ್ರಾ ಅವರ ಸ್ನೇಹಿತ ಪ್ರವೀಣ್‌ ಮಿಶ್ರಾ ಅವರು, “ಶುಭಂ ಒಳ್ಳೆಯ ಮನುಷ್ಯ. ಯಾವುದೇ ಜಾತಿ, ಧರ್ಮವನ್ನು ಲೆಕ್ಕಿಸದೆ ಕೋವಿಡ್‌ ಬಿಕ್ಕಟ್ಟಿನ ವೇಳೆ ಜನರಿಗೆ ಸಹಾಯ ಮಾಡಿದ್ದಾರೆ. ಹಿಂದೂ ಮುಸ್ಲಿಮರನೇಕರಿಗೆ ಪಡಿತರ ವಿತರಿಸಿದ್ದಾರೆ. ದುಃಖಕ್ಕೆ ಧರ್ಮ, ಜಾತಿ, ರಾಜಕೀಯವಿರುವುದಿಲ್ಲ” ಎಂದಿರುವುದ್ದಾರೆ.

“ಕಾಂಗ್ರೆಸ್‌ ಅಧಿಕಾರ ನಡೆಸುತ್ತಿರುವ ಪಂಜಾಬ್‌ ಮತ್ತು ಛತ್ತೀಸ್‌ಘಡ ಮುಖ್ಯಮಂತ್ರಿಗಳು (ಚರಣ್‌ಜಿತ್‌ ಸಿಂಗ್‌ ಹಾಗೂ ಭೂಪೇಶ್ ಭಾಗೇಲ್‌) ಮೃತ ರೈತ ಕುಟುಂಬಗಳಿಗೆ ಐವತ್ತು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ನಮಗೂ ಪರಿಹಾರ ನೀಡಬೇಕು” ಎಂದು ಕುಟುಂಬ ಕೇಳಿಕೊಂಡಿರುವುದಾಗಿ ವರದಿ ಹೇಳಿದೆ.

“ಶುಭಂ ಅವರು ಹೆಂಡತಿ ಹಾಗೂ ಪುಟ್ಟ ಮಗಳನ್ನು ಅಗಲಿದ್ದಾರೆ. ನಮ್ಮ ಆರ್ಥಿಕ ಸ್ಥಿತಿ ಕೂಡ ಸುಭದ್ರವಾಗಿಲ್ಲ. ದುಃಖದಲ್ಲಿ ಯಾವುದೇ ಪಕ್ಷದ ರಾಜಕೀಯ ಇರಬಾರದು” ಎಂದು ವಿಶ್ರಾ ಅವರ ತಂದೆ ಹೇಳಿದ್ದಾರೆ.

ದಿ ವೈರ್‌ ವರದಿಗಾರ್ತಿ ವಿಜಯ್‌ಮಿಶ್ರಾ ಅವರನ್ನು ಮಾತನಾಡಿಸಿ ಹಿಂದಿರುಗುವಾಗ, “ನಮ್ಮ ದುಃಖವನ್ನು ಹಂಚಿಕೊಳ್ಳಲು ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನಾವು ಆಹ್ವಾನಿಸುತ್ತೇವೆ ಎಂಬುದನ್ನು ತಪ್ಪದೇ ಬರೆಯಿರಿ” ಎಂದು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...