Homeಚಳವಳಿನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ಕೇಸರಿ ಪಕ್ಷವಾದ ಬಿಜೆಪಿ, ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿರುವುದಾಗಿ `ದಿ ವೈರ್’ ವರದಿ ಮಾಡಿದೆ.

- Advertisement -
- Advertisement -

“ನಾವು ಕೂಡ ರೈತರು, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸುತ್ತೇವೆ” ಎಂದು ಲಖಿಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನ ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ಜಾಲತಾಣದಲ್ಲಿ ಪತ್ರಕರ್ತೆ ಇಸ್ಮತ್‌ ಅರ ವರದಿ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ಶುಭಂ ಮಿಶ್ರಾ ಅವರ ಕುಟುಂಬವು, “ಕೆಲವು ಸ್ಥಳೀಯ ಬಿಜೆಪಿ ನಾಯಕರು ನಮ್ಮಲ್ಲಿಗೆ ಬಂದು ಧೈರ್ಯ ತುಂಬಿದ್ದರೂ, ಬಿಜೆಪಿಯ ಹಿರಿಯ ನಾಯಕರು ಯಾರೂ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ಅಕ್ಟೋಬರ್‌ 3ರಂದು ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ವಾಹನಗಳನ್ನು ಹತ್ತಿಸಿದಾಗ ಮೃತಪಟ್ಟವರ ಕುಟುಂಬಗಳನ್ನು ಅಕ್ಟೋಬರ್‌ 6ರಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಯಾಗಿದ್ದರು. ಜೊತೆಗೆ ಘಟನೆಯಲ್ಲಿ ಅಸುನೀಗಿದ ಪತ್ರಕರ್ತ ರಮಣ್‌ ಕಶ್ಯಪ್‌ ಅವರ ಕುಟುಂಬವನ್ನೂ ಭೇಟಿಯಾಗಿದ್ದರು.

ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಶುಭಂ ಮಿಶ್ರಾ ಅವರ ಕುಟುಂಬವು, “ಪ್ರಿಯಾಂಕ ಹಾಗೂ ರಾಹುಲ್‌ ಅವರು ತಮ್ಮನ್ನೂ ಭೇಟಿಯಾಗುವುದನ್ನು ಸ್ವಾಗತಿಸಿದೆ” ಎಂದು ಒಂದು ದಿನದ ಬಳಿಕ ಹೇಳಿದೆ.

ಶುಭಂ ಮಿಶ್ರಾ ಅವರ ಒಂದು ವರ್ಷದ ಮಗುವಿನೊಂದಿಗೆ ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ (ಚಿತ್ರಕೃಪೆ: ದಿ ವೈರ್‌, ಇಸ್ಮತ್‌ ಅರ)

“ಮೃತಪಟ್ಟ ರೈತರ ಕುಟುಂಬಗಳಿಗೆ ಧೈರ್ಯ ತುಂಬಲು ರಾಹುಲ್‌ ಹಾಗೂ ಪ್ರಿಯಾಂಕ ಆಗಮಿಸಿದ್ದರು. ನಾವು ಕೂಡ ರೈತರು. ನಮ್ಮ ಕುಟುಂಬದ ಸದಸ್ಯನನ್ನೂ ಈ ಘಟನೆಯಲ್ಲಿ ಕಳೆದುಕೊಂಡಿದ್ದೇವೆ. ನಮ್ಮ ಮನೆಗೆ ಅವರು ಭೇಟಿ ನೀಡುವುದಾದರೆ ಸಂತೋಷದಿಂದ ಸ್ವಾಗತಿಸುತ್ತೇವೆ” ಎಂದು ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ ಹೇಳಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ಶುಭಂ ಮಿಶ್ರಾ ಅವರು ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ಬಿಜೆಪಿ ಬೂತ್‌ ಮಟ್ಟದ ಅಧ್ಯಕ್ಷರಾಗಿದ್ದರು. ಕೇಸರಿ ಪಕ್ಷವಾದ ಬಿಜೆಪಿ ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿದೆ. “ಸ್ಥಳೀಯ ಬಿಜೆಪಿ ನಾಯಕರು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಆದರೆ ಬಿಜೆಪಿಯ ಯಾವುದೇ ಹಿರಿಯ ನಾಯಕರು ಕುಟುಂಬವನ್ನು ಭೇಟಿಯಾಗಿಲ್ಲ” ಎಂದು ಹೇಳಿದೆ.

ಬಿಜೆಪಿಯನ್ನು ಬೇರು ಮಟ್ಟದಿಂದ ಕಟ್ಟಿದ ಸಾವಿರಾರು ಕಾರ್ಯಕರ್ತರಲ್ಲಿ ಮಿಶ್ರಾ ಕೂಡ ಒಬ್ಬರಾಗಿದ್ದರು. ಆದರೆ ಮಿಶ್ರಾ ಸಾವಿಗೆ ಬಿಜೆಪಿಯು ‘ಹುತಾತ್ಮ’ ಸ್ಥಾನವನ್ನು ನೀಡುವ ಅಧಿಕೃತ ಹೇಳಿಕೆಯನ್ನು ಪಕ್ಷ ಈವರೆಗೆ ನೀಡಿಲ್ಲ ಎಂದು ಮಿಶ್ರಾ ಕುಟುಂಬ ಹೇಳಿರುವುದಾಗಿ ದಿ ವೈರ್‌ ಇದಕ್ಕೂ ಮುಂಚೆ ವರದಿ ಮಾಡಿತ್ತು.

“ನಾವು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇವೆ, ಆದರೆ ಅವರು ಭೇಟಿ ನೀಡಿದ್ದರೆ ನಾವು ಅವರನ್ನು ದೂರವಿಡುತ್ತಿರಲಿಲ್ಲ” ಎಂದು ಕುಟುಂಬ ಹೇಳಿದ್ದು, “ನಾವು ಎಲ್ಲ ಕಡೆಯಿಂದಲೂ ದೂರವಾಗುತ್ತಿರುವ ಅನುಭವವಾಗುತ್ತಿದೆ. ಮಾಧ್ಯಮಗಳು ಕೂಡ ಮಿಶ್ರಾ ಅವರನ್ನು ‘ಖಳನಾಯಕ’ ಎಂದು ಬಿಂಬಿಸುತ್ತಿವೆ” ಎಂದು ಅವರು ಹೇಳಿರುವುದಾಗಿ ದಿ ವೈರ್‌ಗೆ ತಿಳಿಸಿದ್ದಾರೆ.

“ನಮ್ಮ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ನಮ್ಮನ್ನು ಯಾರೂ ಗಮನಿಸುತ್ತಿಲ್ಲ. ರಾಹುಲ್ ಹಾಗೂ ಪ್ರಿಯಾಂಕ ಅವರು ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡುವುದಾಗಿ ಹೇಳಿದರು, ನಾವು ರೈತರಲ್ಲವೇ? ಸಂತ್ರಸ್ತರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ನಾವೂ ಸಂತ್ರಸ್ತರಲ್ಲವೇ? ನಾವೂ ನಮ್ಮ ಮಗನನ್ನೂ ಕಳೆದುಕೊಂಡಿದ್ದೇವೆಯಲ್ಲವೇ?” ಎಂದು ವಿಜಯ ಮಿಶ್ರಾ ಕೇಳಿದ್ದಾರೆ.

ಶುಭಂ ಮಿಶ್ರಾ ಅವರ ಸ್ನೇಹಿತ ಪ್ರವೀಣ್‌ ಮಿಶ್ರಾ ಅವರು, “ಶುಭಂ ಒಳ್ಳೆಯ ಮನುಷ್ಯ. ಯಾವುದೇ ಜಾತಿ, ಧರ್ಮವನ್ನು ಲೆಕ್ಕಿಸದೆ ಕೋವಿಡ್‌ ಬಿಕ್ಕಟ್ಟಿನ ವೇಳೆ ಜನರಿಗೆ ಸಹಾಯ ಮಾಡಿದ್ದಾರೆ. ಹಿಂದೂ ಮುಸ್ಲಿಮರನೇಕರಿಗೆ ಪಡಿತರ ವಿತರಿಸಿದ್ದಾರೆ. ದುಃಖಕ್ಕೆ ಧರ್ಮ, ಜಾತಿ, ರಾಜಕೀಯವಿರುವುದಿಲ್ಲ” ಎಂದಿರುವುದ್ದಾರೆ.

“ಕಾಂಗ್ರೆಸ್‌ ಅಧಿಕಾರ ನಡೆಸುತ್ತಿರುವ ಪಂಜಾಬ್‌ ಮತ್ತು ಛತ್ತೀಸ್‌ಘಡ ಮುಖ್ಯಮಂತ್ರಿಗಳು (ಚರಣ್‌ಜಿತ್‌ ಸಿಂಗ್‌ ಹಾಗೂ ಭೂಪೇಶ್ ಭಾಗೇಲ್‌) ಮೃತ ರೈತ ಕುಟುಂಬಗಳಿಗೆ ಐವತ್ತು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ನಮಗೂ ಪರಿಹಾರ ನೀಡಬೇಕು” ಎಂದು ಕುಟುಂಬ ಕೇಳಿಕೊಂಡಿರುವುದಾಗಿ ವರದಿ ಹೇಳಿದೆ.

“ಶುಭಂ ಅವರು ಹೆಂಡತಿ ಹಾಗೂ ಪುಟ್ಟ ಮಗಳನ್ನು ಅಗಲಿದ್ದಾರೆ. ನಮ್ಮ ಆರ್ಥಿಕ ಸ್ಥಿತಿ ಕೂಡ ಸುಭದ್ರವಾಗಿಲ್ಲ. ದುಃಖದಲ್ಲಿ ಯಾವುದೇ ಪಕ್ಷದ ರಾಜಕೀಯ ಇರಬಾರದು” ಎಂದು ವಿಶ್ರಾ ಅವರ ತಂದೆ ಹೇಳಿದ್ದಾರೆ.

ದಿ ವೈರ್‌ ವರದಿಗಾರ್ತಿ ವಿಜಯ್‌ಮಿಶ್ರಾ ಅವರನ್ನು ಮಾತನಾಡಿಸಿ ಹಿಂದಿರುಗುವಾಗ, “ನಮ್ಮ ದುಃಖವನ್ನು ಹಂಚಿಕೊಳ್ಳಲು ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನಾವು ಆಹ್ವಾನಿಸುತ್ತೇವೆ ಎಂಬುದನ್ನು ತಪ್ಪದೇ ಬರೆಯಿರಿ” ಎಂದು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...