Homeಚಳವಳಿನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ಕೇಸರಿ ಪಕ್ಷವಾದ ಬಿಜೆಪಿ, ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿರುವುದಾಗಿ `ದಿ ವೈರ್’ ವರದಿ ಮಾಡಿದೆ.

- Advertisement -
- Advertisement -

“ನಾವು ಕೂಡ ರೈತರು, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸುತ್ತೇವೆ” ಎಂದು ಲಖಿಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನ ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ಜಾಲತಾಣದಲ್ಲಿ ಪತ್ರಕರ್ತೆ ಇಸ್ಮತ್‌ ಅರ ವರದಿ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ಶುಭಂ ಮಿಶ್ರಾ ಅವರ ಕುಟುಂಬವು, “ಕೆಲವು ಸ್ಥಳೀಯ ಬಿಜೆಪಿ ನಾಯಕರು ನಮ್ಮಲ್ಲಿಗೆ ಬಂದು ಧೈರ್ಯ ತುಂಬಿದ್ದರೂ, ಬಿಜೆಪಿಯ ಹಿರಿಯ ನಾಯಕರು ಯಾರೂ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ಅಕ್ಟೋಬರ್‌ 3ರಂದು ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ವಾಹನಗಳನ್ನು ಹತ್ತಿಸಿದಾಗ ಮೃತಪಟ್ಟವರ ಕುಟುಂಬಗಳನ್ನು ಅಕ್ಟೋಬರ್‌ 6ರಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಯಾಗಿದ್ದರು. ಜೊತೆಗೆ ಘಟನೆಯಲ್ಲಿ ಅಸುನೀಗಿದ ಪತ್ರಕರ್ತ ರಮಣ್‌ ಕಶ್ಯಪ್‌ ಅವರ ಕುಟುಂಬವನ್ನೂ ಭೇಟಿಯಾಗಿದ್ದರು.

ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಶುಭಂ ಮಿಶ್ರಾ ಅವರ ಕುಟುಂಬವು, “ಪ್ರಿಯಾಂಕ ಹಾಗೂ ರಾಹುಲ್‌ ಅವರು ತಮ್ಮನ್ನೂ ಭೇಟಿಯಾಗುವುದನ್ನು ಸ್ವಾಗತಿಸಿದೆ” ಎಂದು ಒಂದು ದಿನದ ಬಳಿಕ ಹೇಳಿದೆ.

ಶುಭಂ ಮಿಶ್ರಾ ಅವರ ಒಂದು ವರ್ಷದ ಮಗುವಿನೊಂದಿಗೆ ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ (ಚಿತ್ರಕೃಪೆ: ದಿ ವೈರ್‌, ಇಸ್ಮತ್‌ ಅರ)

“ಮೃತಪಟ್ಟ ರೈತರ ಕುಟುಂಬಗಳಿಗೆ ಧೈರ್ಯ ತುಂಬಲು ರಾಹುಲ್‌ ಹಾಗೂ ಪ್ರಿಯಾಂಕ ಆಗಮಿಸಿದ್ದರು. ನಾವು ಕೂಡ ರೈತರು. ನಮ್ಮ ಕುಟುಂಬದ ಸದಸ್ಯನನ್ನೂ ಈ ಘಟನೆಯಲ್ಲಿ ಕಳೆದುಕೊಂಡಿದ್ದೇವೆ. ನಮ್ಮ ಮನೆಗೆ ಅವರು ಭೇಟಿ ನೀಡುವುದಾದರೆ ಸಂತೋಷದಿಂದ ಸ್ವಾಗತಿಸುತ್ತೇವೆ” ಎಂದು ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ ಹೇಳಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ಶುಭಂ ಮಿಶ್ರಾ ಅವರು ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ಬಿಜೆಪಿ ಬೂತ್‌ ಮಟ್ಟದ ಅಧ್ಯಕ್ಷರಾಗಿದ್ದರು. ಕೇಸರಿ ಪಕ್ಷವಾದ ಬಿಜೆಪಿ ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿದೆ. “ಸ್ಥಳೀಯ ಬಿಜೆಪಿ ನಾಯಕರು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಆದರೆ ಬಿಜೆಪಿಯ ಯಾವುದೇ ಹಿರಿಯ ನಾಯಕರು ಕುಟುಂಬವನ್ನು ಭೇಟಿಯಾಗಿಲ್ಲ” ಎಂದು ಹೇಳಿದೆ.

ಬಿಜೆಪಿಯನ್ನು ಬೇರು ಮಟ್ಟದಿಂದ ಕಟ್ಟಿದ ಸಾವಿರಾರು ಕಾರ್ಯಕರ್ತರಲ್ಲಿ ಮಿಶ್ರಾ ಕೂಡ ಒಬ್ಬರಾಗಿದ್ದರು. ಆದರೆ ಮಿಶ್ರಾ ಸಾವಿಗೆ ಬಿಜೆಪಿಯು ‘ಹುತಾತ್ಮ’ ಸ್ಥಾನವನ್ನು ನೀಡುವ ಅಧಿಕೃತ ಹೇಳಿಕೆಯನ್ನು ಪಕ್ಷ ಈವರೆಗೆ ನೀಡಿಲ್ಲ ಎಂದು ಮಿಶ್ರಾ ಕುಟುಂಬ ಹೇಳಿರುವುದಾಗಿ ದಿ ವೈರ್‌ ಇದಕ್ಕೂ ಮುಂಚೆ ವರದಿ ಮಾಡಿತ್ತು.

“ನಾವು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇವೆ, ಆದರೆ ಅವರು ಭೇಟಿ ನೀಡಿದ್ದರೆ ನಾವು ಅವರನ್ನು ದೂರವಿಡುತ್ತಿರಲಿಲ್ಲ” ಎಂದು ಕುಟುಂಬ ಹೇಳಿದ್ದು, “ನಾವು ಎಲ್ಲ ಕಡೆಯಿಂದಲೂ ದೂರವಾಗುತ್ತಿರುವ ಅನುಭವವಾಗುತ್ತಿದೆ. ಮಾಧ್ಯಮಗಳು ಕೂಡ ಮಿಶ್ರಾ ಅವರನ್ನು ‘ಖಳನಾಯಕ’ ಎಂದು ಬಿಂಬಿಸುತ್ತಿವೆ” ಎಂದು ಅವರು ಹೇಳಿರುವುದಾಗಿ ದಿ ವೈರ್‌ಗೆ ತಿಳಿಸಿದ್ದಾರೆ.

“ನಮ್ಮ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ನಮ್ಮನ್ನು ಯಾರೂ ಗಮನಿಸುತ್ತಿಲ್ಲ. ರಾಹುಲ್ ಹಾಗೂ ಪ್ರಿಯಾಂಕ ಅವರು ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡುವುದಾಗಿ ಹೇಳಿದರು, ನಾವು ರೈತರಲ್ಲವೇ? ಸಂತ್ರಸ್ತರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ನಾವೂ ಸಂತ್ರಸ್ತರಲ್ಲವೇ? ನಾವೂ ನಮ್ಮ ಮಗನನ್ನೂ ಕಳೆದುಕೊಂಡಿದ್ದೇವೆಯಲ್ಲವೇ?” ಎಂದು ವಿಜಯ ಮಿಶ್ರಾ ಕೇಳಿದ್ದಾರೆ.

ಶುಭಂ ಮಿಶ್ರಾ ಅವರ ಸ್ನೇಹಿತ ಪ್ರವೀಣ್‌ ಮಿಶ್ರಾ ಅವರು, “ಶುಭಂ ಒಳ್ಳೆಯ ಮನುಷ್ಯ. ಯಾವುದೇ ಜಾತಿ, ಧರ್ಮವನ್ನು ಲೆಕ್ಕಿಸದೆ ಕೋವಿಡ್‌ ಬಿಕ್ಕಟ್ಟಿನ ವೇಳೆ ಜನರಿಗೆ ಸಹಾಯ ಮಾಡಿದ್ದಾರೆ. ಹಿಂದೂ ಮುಸ್ಲಿಮರನೇಕರಿಗೆ ಪಡಿತರ ವಿತರಿಸಿದ್ದಾರೆ. ದುಃಖಕ್ಕೆ ಧರ್ಮ, ಜಾತಿ, ರಾಜಕೀಯವಿರುವುದಿಲ್ಲ” ಎಂದಿರುವುದ್ದಾರೆ.

“ಕಾಂಗ್ರೆಸ್‌ ಅಧಿಕಾರ ನಡೆಸುತ್ತಿರುವ ಪಂಜಾಬ್‌ ಮತ್ತು ಛತ್ತೀಸ್‌ಘಡ ಮುಖ್ಯಮಂತ್ರಿಗಳು (ಚರಣ್‌ಜಿತ್‌ ಸಿಂಗ್‌ ಹಾಗೂ ಭೂಪೇಶ್ ಭಾಗೇಲ್‌) ಮೃತ ರೈತ ಕುಟುಂಬಗಳಿಗೆ ಐವತ್ತು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ನಮಗೂ ಪರಿಹಾರ ನೀಡಬೇಕು” ಎಂದು ಕುಟುಂಬ ಕೇಳಿಕೊಂಡಿರುವುದಾಗಿ ವರದಿ ಹೇಳಿದೆ.

“ಶುಭಂ ಅವರು ಹೆಂಡತಿ ಹಾಗೂ ಪುಟ್ಟ ಮಗಳನ್ನು ಅಗಲಿದ್ದಾರೆ. ನಮ್ಮ ಆರ್ಥಿಕ ಸ್ಥಿತಿ ಕೂಡ ಸುಭದ್ರವಾಗಿಲ್ಲ. ದುಃಖದಲ್ಲಿ ಯಾವುದೇ ಪಕ್ಷದ ರಾಜಕೀಯ ಇರಬಾರದು” ಎಂದು ವಿಶ್ರಾ ಅವರ ತಂದೆ ಹೇಳಿದ್ದಾರೆ.

ದಿ ವೈರ್‌ ವರದಿಗಾರ್ತಿ ವಿಜಯ್‌ಮಿಶ್ರಾ ಅವರನ್ನು ಮಾತನಾಡಿಸಿ ಹಿಂದಿರುಗುವಾಗ, “ನಮ್ಮ ದುಃಖವನ್ನು ಹಂಚಿಕೊಳ್ಳಲು ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನಾವು ಆಹ್ವಾನಿಸುತ್ತೇವೆ ಎಂಬುದನ್ನು ತಪ್ಪದೇ ಬರೆಯಿರಿ” ಎಂದು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...