Homeಚಳವಳಿನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ಕೇಸರಿ ಪಕ್ಷವಾದ ಬಿಜೆಪಿ, ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿರುವುದಾಗಿ `ದಿ ವೈರ್’ ವರದಿ ಮಾಡಿದೆ.

- Advertisement -
- Advertisement -

“ನಾವು ಕೂಡ ರೈತರು, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸುತ್ತೇವೆ” ಎಂದು ಲಖಿಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನ ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ಜಾಲತಾಣದಲ್ಲಿ ಪತ್ರಕರ್ತೆ ಇಸ್ಮತ್‌ ಅರ ವರದಿ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ಶುಭಂ ಮಿಶ್ರಾ ಅವರ ಕುಟುಂಬವು, “ಕೆಲವು ಸ್ಥಳೀಯ ಬಿಜೆಪಿ ನಾಯಕರು ನಮ್ಮಲ್ಲಿಗೆ ಬಂದು ಧೈರ್ಯ ತುಂಬಿದ್ದರೂ, ಬಿಜೆಪಿಯ ಹಿರಿಯ ನಾಯಕರು ಯಾರೂ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ಅಕ್ಟೋಬರ್‌ 3ರಂದು ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ವಾಹನಗಳನ್ನು ಹತ್ತಿಸಿದಾಗ ಮೃತಪಟ್ಟವರ ಕುಟುಂಬಗಳನ್ನು ಅಕ್ಟೋಬರ್‌ 6ರಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಯಾಗಿದ್ದರು. ಜೊತೆಗೆ ಘಟನೆಯಲ್ಲಿ ಅಸುನೀಗಿದ ಪತ್ರಕರ್ತ ರಮಣ್‌ ಕಶ್ಯಪ್‌ ಅವರ ಕುಟುಂಬವನ್ನೂ ಭೇಟಿಯಾಗಿದ್ದರು.

ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಶುಭಂ ಮಿಶ್ರಾ ಅವರ ಕುಟುಂಬವು, “ಪ್ರಿಯಾಂಕ ಹಾಗೂ ರಾಹುಲ್‌ ಅವರು ತಮ್ಮನ್ನೂ ಭೇಟಿಯಾಗುವುದನ್ನು ಸ್ವಾಗತಿಸಿದೆ” ಎಂದು ಒಂದು ದಿನದ ಬಳಿಕ ಹೇಳಿದೆ.

ಶುಭಂ ಮಿಶ್ರಾ ಅವರ ಒಂದು ವರ್ಷದ ಮಗುವಿನೊಂದಿಗೆ ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ (ಚಿತ್ರಕೃಪೆ: ದಿ ವೈರ್‌, ಇಸ್ಮತ್‌ ಅರ)

“ಮೃತಪಟ್ಟ ರೈತರ ಕುಟುಂಬಗಳಿಗೆ ಧೈರ್ಯ ತುಂಬಲು ರಾಹುಲ್‌ ಹಾಗೂ ಪ್ರಿಯಾಂಕ ಆಗಮಿಸಿದ್ದರು. ನಾವು ಕೂಡ ರೈತರು. ನಮ್ಮ ಕುಟುಂಬದ ಸದಸ್ಯನನ್ನೂ ಈ ಘಟನೆಯಲ್ಲಿ ಕಳೆದುಕೊಂಡಿದ್ದೇವೆ. ನಮ್ಮ ಮನೆಗೆ ಅವರು ಭೇಟಿ ನೀಡುವುದಾದರೆ ಸಂತೋಷದಿಂದ ಸ್ವಾಗತಿಸುತ್ತೇವೆ” ಎಂದು ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ ಹೇಳಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ಶುಭಂ ಮಿಶ್ರಾ ಅವರು ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ಬಿಜೆಪಿ ಬೂತ್‌ ಮಟ್ಟದ ಅಧ್ಯಕ್ಷರಾಗಿದ್ದರು. ಕೇಸರಿ ಪಕ್ಷವಾದ ಬಿಜೆಪಿ ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿದೆ. “ಸ್ಥಳೀಯ ಬಿಜೆಪಿ ನಾಯಕರು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಆದರೆ ಬಿಜೆಪಿಯ ಯಾವುದೇ ಹಿರಿಯ ನಾಯಕರು ಕುಟುಂಬವನ್ನು ಭೇಟಿಯಾಗಿಲ್ಲ” ಎಂದು ಹೇಳಿದೆ.

ಬಿಜೆಪಿಯನ್ನು ಬೇರು ಮಟ್ಟದಿಂದ ಕಟ್ಟಿದ ಸಾವಿರಾರು ಕಾರ್ಯಕರ್ತರಲ್ಲಿ ಮಿಶ್ರಾ ಕೂಡ ಒಬ್ಬರಾಗಿದ್ದರು. ಆದರೆ ಮಿಶ್ರಾ ಸಾವಿಗೆ ಬಿಜೆಪಿಯು ‘ಹುತಾತ್ಮ’ ಸ್ಥಾನವನ್ನು ನೀಡುವ ಅಧಿಕೃತ ಹೇಳಿಕೆಯನ್ನು ಪಕ್ಷ ಈವರೆಗೆ ನೀಡಿಲ್ಲ ಎಂದು ಮಿಶ್ರಾ ಕುಟುಂಬ ಹೇಳಿರುವುದಾಗಿ ದಿ ವೈರ್‌ ಇದಕ್ಕೂ ಮುಂಚೆ ವರದಿ ಮಾಡಿತ್ತು.

“ನಾವು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇವೆ, ಆದರೆ ಅವರು ಭೇಟಿ ನೀಡಿದ್ದರೆ ನಾವು ಅವರನ್ನು ದೂರವಿಡುತ್ತಿರಲಿಲ್ಲ” ಎಂದು ಕುಟುಂಬ ಹೇಳಿದ್ದು, “ನಾವು ಎಲ್ಲ ಕಡೆಯಿಂದಲೂ ದೂರವಾಗುತ್ತಿರುವ ಅನುಭವವಾಗುತ್ತಿದೆ. ಮಾಧ್ಯಮಗಳು ಕೂಡ ಮಿಶ್ರಾ ಅವರನ್ನು ‘ಖಳನಾಯಕ’ ಎಂದು ಬಿಂಬಿಸುತ್ತಿವೆ” ಎಂದು ಅವರು ಹೇಳಿರುವುದಾಗಿ ದಿ ವೈರ್‌ಗೆ ತಿಳಿಸಿದ್ದಾರೆ.

“ನಮ್ಮ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ನಮ್ಮನ್ನು ಯಾರೂ ಗಮನಿಸುತ್ತಿಲ್ಲ. ರಾಹುಲ್ ಹಾಗೂ ಪ್ರಿಯಾಂಕ ಅವರು ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡುವುದಾಗಿ ಹೇಳಿದರು, ನಾವು ರೈತರಲ್ಲವೇ? ಸಂತ್ರಸ್ತರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ನಾವೂ ಸಂತ್ರಸ್ತರಲ್ಲವೇ? ನಾವೂ ನಮ್ಮ ಮಗನನ್ನೂ ಕಳೆದುಕೊಂಡಿದ್ದೇವೆಯಲ್ಲವೇ?” ಎಂದು ವಿಜಯ ಮಿಶ್ರಾ ಕೇಳಿದ್ದಾರೆ.

ಶುಭಂ ಮಿಶ್ರಾ ಅವರ ಸ್ನೇಹಿತ ಪ್ರವೀಣ್‌ ಮಿಶ್ರಾ ಅವರು, “ಶುಭಂ ಒಳ್ಳೆಯ ಮನುಷ್ಯ. ಯಾವುದೇ ಜಾತಿ, ಧರ್ಮವನ್ನು ಲೆಕ್ಕಿಸದೆ ಕೋವಿಡ್‌ ಬಿಕ್ಕಟ್ಟಿನ ವೇಳೆ ಜನರಿಗೆ ಸಹಾಯ ಮಾಡಿದ್ದಾರೆ. ಹಿಂದೂ ಮುಸ್ಲಿಮರನೇಕರಿಗೆ ಪಡಿತರ ವಿತರಿಸಿದ್ದಾರೆ. ದುಃಖಕ್ಕೆ ಧರ್ಮ, ಜಾತಿ, ರಾಜಕೀಯವಿರುವುದಿಲ್ಲ” ಎಂದಿರುವುದ್ದಾರೆ.

“ಕಾಂಗ್ರೆಸ್‌ ಅಧಿಕಾರ ನಡೆಸುತ್ತಿರುವ ಪಂಜಾಬ್‌ ಮತ್ತು ಛತ್ತೀಸ್‌ಘಡ ಮುಖ್ಯಮಂತ್ರಿಗಳು (ಚರಣ್‌ಜಿತ್‌ ಸಿಂಗ್‌ ಹಾಗೂ ಭೂಪೇಶ್ ಭಾಗೇಲ್‌) ಮೃತ ರೈತ ಕುಟುಂಬಗಳಿಗೆ ಐವತ್ತು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ನಮಗೂ ಪರಿಹಾರ ನೀಡಬೇಕು” ಎಂದು ಕುಟುಂಬ ಕೇಳಿಕೊಂಡಿರುವುದಾಗಿ ವರದಿ ಹೇಳಿದೆ.

“ಶುಭಂ ಅವರು ಹೆಂಡತಿ ಹಾಗೂ ಪುಟ್ಟ ಮಗಳನ್ನು ಅಗಲಿದ್ದಾರೆ. ನಮ್ಮ ಆರ್ಥಿಕ ಸ್ಥಿತಿ ಕೂಡ ಸುಭದ್ರವಾಗಿಲ್ಲ. ದುಃಖದಲ್ಲಿ ಯಾವುದೇ ಪಕ್ಷದ ರಾಜಕೀಯ ಇರಬಾರದು” ಎಂದು ವಿಶ್ರಾ ಅವರ ತಂದೆ ಹೇಳಿದ್ದಾರೆ.

ದಿ ವೈರ್‌ ವರದಿಗಾರ್ತಿ ವಿಜಯ್‌ಮಿಶ್ರಾ ಅವರನ್ನು ಮಾತನಾಡಿಸಿ ಹಿಂದಿರುಗುವಾಗ, “ನಮ್ಮ ದುಃಖವನ್ನು ಹಂಚಿಕೊಳ್ಳಲು ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನಾವು ಆಹ್ವಾನಿಸುತ್ತೇವೆ ಎಂಬುದನ್ನು ತಪ್ಪದೇ ಬರೆಯಿರಿ” ಎಂದು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...