Homeಚಳವಳಿನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ಕೇಸರಿ ಪಕ್ಷವಾದ ಬಿಜೆಪಿ, ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿರುವುದಾಗಿ `ದಿ ವೈರ್’ ವರದಿ ಮಾಡಿದೆ.

- Advertisement -
- Advertisement -

“ನಾವು ಕೂಡ ರೈತರು, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸುತ್ತೇವೆ” ಎಂದು ಲಖಿಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನ ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ಜಾಲತಾಣದಲ್ಲಿ ಪತ್ರಕರ್ತೆ ಇಸ್ಮತ್‌ ಅರ ವರದಿ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ಶುಭಂ ಮಿಶ್ರಾ ಅವರ ಕುಟುಂಬವು, “ಕೆಲವು ಸ್ಥಳೀಯ ಬಿಜೆಪಿ ನಾಯಕರು ನಮ್ಮಲ್ಲಿಗೆ ಬಂದು ಧೈರ್ಯ ತುಂಬಿದ್ದರೂ, ಬಿಜೆಪಿಯ ಹಿರಿಯ ನಾಯಕರು ಯಾರೂ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ಅಕ್ಟೋಬರ್‌ 3ರಂದು ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ವಾಹನಗಳನ್ನು ಹತ್ತಿಸಿದಾಗ ಮೃತಪಟ್ಟವರ ಕುಟುಂಬಗಳನ್ನು ಅಕ್ಟೋಬರ್‌ 6ರಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಯಾಗಿದ್ದರು. ಜೊತೆಗೆ ಘಟನೆಯಲ್ಲಿ ಅಸುನೀಗಿದ ಪತ್ರಕರ್ತ ರಮಣ್‌ ಕಶ್ಯಪ್‌ ಅವರ ಕುಟುಂಬವನ್ನೂ ಭೇಟಿಯಾಗಿದ್ದರು.

ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಶುಭಂ ಮಿಶ್ರಾ ಅವರ ಕುಟುಂಬವು, “ಪ್ರಿಯಾಂಕ ಹಾಗೂ ರಾಹುಲ್‌ ಅವರು ತಮ್ಮನ್ನೂ ಭೇಟಿಯಾಗುವುದನ್ನು ಸ್ವಾಗತಿಸಿದೆ” ಎಂದು ಒಂದು ದಿನದ ಬಳಿಕ ಹೇಳಿದೆ.

ಶುಭಂ ಮಿಶ್ರಾ ಅವರ ಒಂದು ವರ್ಷದ ಮಗುವಿನೊಂದಿಗೆ ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ (ಚಿತ್ರಕೃಪೆ: ದಿ ವೈರ್‌, ಇಸ್ಮತ್‌ ಅರ)

“ಮೃತಪಟ್ಟ ರೈತರ ಕುಟುಂಬಗಳಿಗೆ ಧೈರ್ಯ ತುಂಬಲು ರಾಹುಲ್‌ ಹಾಗೂ ಪ್ರಿಯಾಂಕ ಆಗಮಿಸಿದ್ದರು. ನಾವು ಕೂಡ ರೈತರು. ನಮ್ಮ ಕುಟುಂಬದ ಸದಸ್ಯನನ್ನೂ ಈ ಘಟನೆಯಲ್ಲಿ ಕಳೆದುಕೊಂಡಿದ್ದೇವೆ. ನಮ್ಮ ಮನೆಗೆ ಅವರು ಭೇಟಿ ನೀಡುವುದಾದರೆ ಸಂತೋಷದಿಂದ ಸ್ವಾಗತಿಸುತ್ತೇವೆ” ಎಂದು ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ ಹೇಳಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ಶುಭಂ ಮಿಶ್ರಾ ಅವರು ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ಬಿಜೆಪಿ ಬೂತ್‌ ಮಟ್ಟದ ಅಧ್ಯಕ್ಷರಾಗಿದ್ದರು. ಕೇಸರಿ ಪಕ್ಷವಾದ ಬಿಜೆಪಿ ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿದೆ. “ಸ್ಥಳೀಯ ಬಿಜೆಪಿ ನಾಯಕರು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಆದರೆ ಬಿಜೆಪಿಯ ಯಾವುದೇ ಹಿರಿಯ ನಾಯಕರು ಕುಟುಂಬವನ್ನು ಭೇಟಿಯಾಗಿಲ್ಲ” ಎಂದು ಹೇಳಿದೆ.

ಬಿಜೆಪಿಯನ್ನು ಬೇರು ಮಟ್ಟದಿಂದ ಕಟ್ಟಿದ ಸಾವಿರಾರು ಕಾರ್ಯಕರ್ತರಲ್ಲಿ ಮಿಶ್ರಾ ಕೂಡ ಒಬ್ಬರಾಗಿದ್ದರು. ಆದರೆ ಮಿಶ್ರಾ ಸಾವಿಗೆ ಬಿಜೆಪಿಯು ‘ಹುತಾತ್ಮ’ ಸ್ಥಾನವನ್ನು ನೀಡುವ ಅಧಿಕೃತ ಹೇಳಿಕೆಯನ್ನು ಪಕ್ಷ ಈವರೆಗೆ ನೀಡಿಲ್ಲ ಎಂದು ಮಿಶ್ರಾ ಕುಟುಂಬ ಹೇಳಿರುವುದಾಗಿ ದಿ ವೈರ್‌ ಇದಕ್ಕೂ ಮುಂಚೆ ವರದಿ ಮಾಡಿತ್ತು.

“ನಾವು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇವೆ, ಆದರೆ ಅವರು ಭೇಟಿ ನೀಡಿದ್ದರೆ ನಾವು ಅವರನ್ನು ದೂರವಿಡುತ್ತಿರಲಿಲ್ಲ” ಎಂದು ಕುಟುಂಬ ಹೇಳಿದ್ದು, “ನಾವು ಎಲ್ಲ ಕಡೆಯಿಂದಲೂ ದೂರವಾಗುತ್ತಿರುವ ಅನುಭವವಾಗುತ್ತಿದೆ. ಮಾಧ್ಯಮಗಳು ಕೂಡ ಮಿಶ್ರಾ ಅವರನ್ನು ‘ಖಳನಾಯಕ’ ಎಂದು ಬಿಂಬಿಸುತ್ತಿವೆ” ಎಂದು ಅವರು ಹೇಳಿರುವುದಾಗಿ ದಿ ವೈರ್‌ಗೆ ತಿಳಿಸಿದ್ದಾರೆ.

“ನಮ್ಮ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ನಮ್ಮನ್ನು ಯಾರೂ ಗಮನಿಸುತ್ತಿಲ್ಲ. ರಾಹುಲ್ ಹಾಗೂ ಪ್ರಿಯಾಂಕ ಅವರು ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡುವುದಾಗಿ ಹೇಳಿದರು, ನಾವು ರೈತರಲ್ಲವೇ? ಸಂತ್ರಸ್ತರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ನಾವೂ ಸಂತ್ರಸ್ತರಲ್ಲವೇ? ನಾವೂ ನಮ್ಮ ಮಗನನ್ನೂ ಕಳೆದುಕೊಂಡಿದ್ದೇವೆಯಲ್ಲವೇ?” ಎಂದು ವಿಜಯ ಮಿಶ್ರಾ ಕೇಳಿದ್ದಾರೆ.

ಶುಭಂ ಮಿಶ್ರಾ ಅವರ ಸ್ನೇಹಿತ ಪ್ರವೀಣ್‌ ಮಿಶ್ರಾ ಅವರು, “ಶುಭಂ ಒಳ್ಳೆಯ ಮನುಷ್ಯ. ಯಾವುದೇ ಜಾತಿ, ಧರ್ಮವನ್ನು ಲೆಕ್ಕಿಸದೆ ಕೋವಿಡ್‌ ಬಿಕ್ಕಟ್ಟಿನ ವೇಳೆ ಜನರಿಗೆ ಸಹಾಯ ಮಾಡಿದ್ದಾರೆ. ಹಿಂದೂ ಮುಸ್ಲಿಮರನೇಕರಿಗೆ ಪಡಿತರ ವಿತರಿಸಿದ್ದಾರೆ. ದುಃಖಕ್ಕೆ ಧರ್ಮ, ಜಾತಿ, ರಾಜಕೀಯವಿರುವುದಿಲ್ಲ” ಎಂದಿರುವುದ್ದಾರೆ.

“ಕಾಂಗ್ರೆಸ್‌ ಅಧಿಕಾರ ನಡೆಸುತ್ತಿರುವ ಪಂಜಾಬ್‌ ಮತ್ತು ಛತ್ತೀಸ್‌ಘಡ ಮುಖ್ಯಮಂತ್ರಿಗಳು (ಚರಣ್‌ಜಿತ್‌ ಸಿಂಗ್‌ ಹಾಗೂ ಭೂಪೇಶ್ ಭಾಗೇಲ್‌) ಮೃತ ರೈತ ಕುಟುಂಬಗಳಿಗೆ ಐವತ್ತು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ನಮಗೂ ಪರಿಹಾರ ನೀಡಬೇಕು” ಎಂದು ಕುಟುಂಬ ಕೇಳಿಕೊಂಡಿರುವುದಾಗಿ ವರದಿ ಹೇಳಿದೆ.

“ಶುಭಂ ಅವರು ಹೆಂಡತಿ ಹಾಗೂ ಪುಟ್ಟ ಮಗಳನ್ನು ಅಗಲಿದ್ದಾರೆ. ನಮ್ಮ ಆರ್ಥಿಕ ಸ್ಥಿತಿ ಕೂಡ ಸುಭದ್ರವಾಗಿಲ್ಲ. ದುಃಖದಲ್ಲಿ ಯಾವುದೇ ಪಕ್ಷದ ರಾಜಕೀಯ ಇರಬಾರದು” ಎಂದು ವಿಶ್ರಾ ಅವರ ತಂದೆ ಹೇಳಿದ್ದಾರೆ.

ದಿ ವೈರ್‌ ವರದಿಗಾರ್ತಿ ವಿಜಯ್‌ಮಿಶ್ರಾ ಅವರನ್ನು ಮಾತನಾಡಿಸಿ ಹಿಂದಿರುಗುವಾಗ, “ನಮ್ಮ ದುಃಖವನ್ನು ಹಂಚಿಕೊಳ್ಳಲು ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನಾವು ಆಹ್ವಾನಿಸುತ್ತೇವೆ ಎಂಬುದನ್ನು ತಪ್ಪದೇ ಬರೆಯಿರಿ” ಎಂದು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...