Homeಮುಖಪುಟನಾಯಿ ಕೂಡಾ ತಿನ್ನದ ಆಹಾರವನ್ನು ನಮಗೆ ನೀಡಲಾಗುತ್ತಿದೆ: ಯುಪಿ ಪೊಲೀಸ್ ಸಿಬ್ಬಂದಿ ಪ್ರತಿಭಟನೆ

ನಾಯಿ ಕೂಡಾ ತಿನ್ನದ ಆಹಾರವನ್ನು ನಮಗೆ ನೀಡಲಾಗುತ್ತಿದೆ: ಯುಪಿ ಪೊಲೀಸ್ ಸಿಬ್ಬಂದಿ ಪ್ರತಿಭಟನೆ

- Advertisement -
- Advertisement -

ಉತ್ತರ ಪ್ರದೇಶ ಪೊಲೀಸ್ ಪೇದೆಯೊಬ್ಬರು ಫಿರೋಜಾಬಾದ್‌ನ ಪೊಲೀಸ್ ಲೈನ್ಸ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದಾಗಿ ಪ್ರತಿಭಟಿಸಿದ್ದು ಸಾರ್ವಜನಿಕವಾಗಿ ಅಳಲು ತೋಡಿಕೊಂಡಿದ್ದಾರೆ. ಕಣ್ಣೀರು ಹಾಕುತ್ತಲೆ ಮಾತನಾಡಿರುವ ಕಾನ್‌ಸ್ಟೆಬಲ್ ಮನೋಜ್ ಕುಮಾರ್ ಅವರು ಪೊಲೀಸ್ ಸಿಬ್ಬಂದಿಗೆ ಮೆಸ್‌ನಲ್ಲಿ ನೀರು ನೀರಾಗಿರುವ ಬೇಳೆ ಮತ್ತು ಬೇಯಿಸದ ರೊಟ್ಟಿಗಳನ್ನು ನೀಡಲಾಗುತ್ತದೆ ಎಂದು ಆರೋಪಿಸಿದ್ದು, ಈ ಬಗ್ಗೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಕೈಯಲ್ಲಿ ರೊಟ್ಟಿ, ಅನ್ನ ಮತ್ತು ದಾಲ್‌ನ ಬಟ್ಟಲಿನೊಂದಿಗೆ ಪ್ರತಿಭಟನೆ ನಡೆಸಿದ ಕಾನ್‌ಸ್ಟೆಬಲ್ ಮನೋಜ್ ಕುಮಾರ್‌, “ಪೊಲೀಸರು 12 ಗಂಟೆಗಳ ಕರ್ತವ್ಯ ನಿರ್ವಹಿಸಿದ ನಂತರ ಈ ಆಹಾರವನ್ನು ತಿನ್ನುತ್ತಿದ್ದಾರೆ. ನಾಯಿ ಕೂಡ ಇದನ್ನು ತಿನ್ನುವುದಿಲ್ಲ. ನಾವು ಈ ಆಹಾರವನ್ನು ತಿನ್ನಲು ಸಾಧ್ಯವಿಲ್ಲ. ನಮ್ಮ ಹೊಟ್ಟೆಗೆ ಏನೂ ಇಲ್ಲದಿದ್ದರೆ ನಾವು ನಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸುವುದು?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಲಿಸ್ ಸಿಬ್ಬಂದಿಗೆ ಪೌಷ್ಠಿಕಾಂಶದ ಆಹಾರ ನೀಡುವುದನ್ನು ಖಚಿತಪಡಿಸಿಕೊಳ್ಳಲು ಅವರಿಗೆ ನೀಡಲಾಗುವ ಭತ್ಯೆಯನ್ನು ಹೆಚ್ಚಿಸಲಾಗುವುದು ಎಂದು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಭರವಸೆ ನೀಡಿದ್ದರೂ, ಅವರಿಗೆ ಇನ್ನೂ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಇದೆಲ್ಲವೂ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಡಿಸಿಪಿಯವರ ಹಗರಣ. ಈ ಜನರ ಮೂಲಕ ಪೊಲೀಸ್ ಸಿಬ್ಬಂದಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಫಿರೋಜಾಬಾದ್‌ನಲ್ಲಿ ನಿಯೋಜನೆಗೊಂಡಿರುವ ಅಲಿಗಢ ನಿವಾಸಿ ಮನೋಜ್‌ ಕುಮಾರ್, ತನಗೆ ಮತ್ತು ಇತರ ಕೆಳ ದರ್ಜೆಯ ಸಿಬ್ಬಂದಿಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಹೇಳಿಕೊಂಡಿದ್ದಕ್ಕೆ ಮೆಸ್ ಮ್ಯಾನೇಜರ್ ತನ್ನನ್ನು ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಆಹಾರದೊಂದಿಗೆ ಅವರ ಪ್ರತಿಭಟನೆಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲು ನಿರ್ಧರಿಸಿದ್ದಾರೆ.

“ಈ ಇಲಾಖೆಯಲ್ಲಿ (ಪೊಲೀಸ್) ಕೇಳುವವರು ಯಾರೂ ಇಲ್ಲ. ಕ್ಯಾಪ್ಟನ್ ಸರ್ ನನ್ನ ಸಮಸ್ಯೆಗಳನ್ನು ಕೇಳುತ್ತಿಲ್ಲ, ಅದಕ್ಕಾಗಿಯೇ ನಾನು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ. ನಿಮ್ಮ ಸಿಬ್ಬಂದಿ ಯಾವ ರೀತಿಯ ಆಹಾರವನ್ನು ತಿನ್ನುತ್ತಾರೆ ಎಂದು ತಿಳಿಯಲು ನೀವು ಈ ತಟ್ಟೆಯಲ್ಲಿರುವ ರೊಟ್ಟಿಗಳನ್ನು ತಿನ್ನಬೇಕು ಎಂದು ಕ್ಯಾಪ್ಟನ್ ಸರ್ ಇಲ್ಲಿಂದ ಹಾದುಹೋದಾಗ ಈ ಬಗ್ಗೆ ನಾನು ಅವರಿಗೆ ಹೇಳಿದ್ದೇನೆ. ಅವರ ಮಕ್ಕಳು ಅಂತಹ ಆಹಾರವನ್ನು ತಿನ್ನಲು ಸಾಧ್ಯವೆ? ಇದನ್ನು ನಾನು ಅವರಿಗೆ ಕೇಳಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಪರಾಧಿ ಎಂದು ತೀರ್ಪು ಬರುತ್ತಿದ್ದಂತೆ ಕೋರ್ಟ್‌ನಿಂದ ಯುಪಿ ಸಚಿವ ಪರಾರಿ: 35 ವರ್ಷಗಳ ಹಿಂದೆ ರೈಲ್ವೆ ಸಲಕರಣೆ ಕಳ್ಳತನ ಮಾಡಿದ್ದ ಸಚಿವ

ಅಂತಿಮವಾಗಿ ಕಾನ್ಸ್ಟೇಬಲ್ ಮನೋಜ್ ಕುಮಾರ್ ಅವರನ್ನು ಇತರ ಪೊಲೀಸ್ ಸಿಬ್ಬಂದಿ ಅವರನ್ನು ಪ್ರತಿಭಟನೆಯ ಸ್ಥಳದಿಂದ ಕರೆದೊಯ್ದಿದ್ದಾರೆ. ಮೆಸ್‌ನಲ್ಲಿ ಗುಣಮಟ್ಟವಿಲ್ಲದ ಆಹಾರದ ಬಗ್ಗೆ ದೂರು ನೀಡಿದ ಅವರ ವೀಡಿಯೊ ಹೊರಬಂದ ನಂತರ, ಫಿರೋಜಾಬಾದ್ ಪೊಲೀಸರು ಈ ವಿಷಯವನ್ನು ಪರಿಶೀಲಿಸುವಂತೆ ಸಿಒ ಸಿಟಿಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...