Homeಮುಖಪುಟನಾಯಿ ಕೂಡಾ ತಿನ್ನದ ಆಹಾರವನ್ನು ನಮಗೆ ನೀಡಲಾಗುತ್ತಿದೆ: ಯುಪಿ ಪೊಲೀಸ್ ಸಿಬ್ಬಂದಿ ಪ್ರತಿಭಟನೆ

ನಾಯಿ ಕೂಡಾ ತಿನ್ನದ ಆಹಾರವನ್ನು ನಮಗೆ ನೀಡಲಾಗುತ್ತಿದೆ: ಯುಪಿ ಪೊಲೀಸ್ ಸಿಬ್ಬಂದಿ ಪ್ರತಿಭಟನೆ

- Advertisement -
- Advertisement -

ಉತ್ತರ ಪ್ರದೇಶ ಪೊಲೀಸ್ ಪೇದೆಯೊಬ್ಬರು ಫಿರೋಜಾಬಾದ್‌ನ ಪೊಲೀಸ್ ಲೈನ್ಸ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದಾಗಿ ಪ್ರತಿಭಟಿಸಿದ್ದು ಸಾರ್ವಜನಿಕವಾಗಿ ಅಳಲು ತೋಡಿಕೊಂಡಿದ್ದಾರೆ. ಕಣ್ಣೀರು ಹಾಕುತ್ತಲೆ ಮಾತನಾಡಿರುವ ಕಾನ್‌ಸ್ಟೆಬಲ್ ಮನೋಜ್ ಕುಮಾರ್ ಅವರು ಪೊಲೀಸ್ ಸಿಬ್ಬಂದಿಗೆ ಮೆಸ್‌ನಲ್ಲಿ ನೀರು ನೀರಾಗಿರುವ ಬೇಳೆ ಮತ್ತು ಬೇಯಿಸದ ರೊಟ್ಟಿಗಳನ್ನು ನೀಡಲಾಗುತ್ತದೆ ಎಂದು ಆರೋಪಿಸಿದ್ದು, ಈ ಬಗ್ಗೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಕೈಯಲ್ಲಿ ರೊಟ್ಟಿ, ಅನ್ನ ಮತ್ತು ದಾಲ್‌ನ ಬಟ್ಟಲಿನೊಂದಿಗೆ ಪ್ರತಿಭಟನೆ ನಡೆಸಿದ ಕಾನ್‌ಸ್ಟೆಬಲ್ ಮನೋಜ್ ಕುಮಾರ್‌, “ಪೊಲೀಸರು 12 ಗಂಟೆಗಳ ಕರ್ತವ್ಯ ನಿರ್ವಹಿಸಿದ ನಂತರ ಈ ಆಹಾರವನ್ನು ತಿನ್ನುತ್ತಿದ್ದಾರೆ. ನಾಯಿ ಕೂಡ ಇದನ್ನು ತಿನ್ನುವುದಿಲ್ಲ. ನಾವು ಈ ಆಹಾರವನ್ನು ತಿನ್ನಲು ಸಾಧ್ಯವಿಲ್ಲ. ನಮ್ಮ ಹೊಟ್ಟೆಗೆ ಏನೂ ಇಲ್ಲದಿದ್ದರೆ ನಾವು ನಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸುವುದು?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಲಿಸ್ ಸಿಬ್ಬಂದಿಗೆ ಪೌಷ್ಠಿಕಾಂಶದ ಆಹಾರ ನೀಡುವುದನ್ನು ಖಚಿತಪಡಿಸಿಕೊಳ್ಳಲು ಅವರಿಗೆ ನೀಡಲಾಗುವ ಭತ್ಯೆಯನ್ನು ಹೆಚ್ಚಿಸಲಾಗುವುದು ಎಂದು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಭರವಸೆ ನೀಡಿದ್ದರೂ, ಅವರಿಗೆ ಇನ್ನೂ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಇದೆಲ್ಲವೂ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಡಿಸಿಪಿಯವರ ಹಗರಣ. ಈ ಜನರ ಮೂಲಕ ಪೊಲೀಸ್ ಸಿಬ್ಬಂದಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಫಿರೋಜಾಬಾದ್‌ನಲ್ಲಿ ನಿಯೋಜನೆಗೊಂಡಿರುವ ಅಲಿಗಢ ನಿವಾಸಿ ಮನೋಜ್‌ ಕುಮಾರ್, ತನಗೆ ಮತ್ತು ಇತರ ಕೆಳ ದರ್ಜೆಯ ಸಿಬ್ಬಂದಿಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಹೇಳಿಕೊಂಡಿದ್ದಕ್ಕೆ ಮೆಸ್ ಮ್ಯಾನೇಜರ್ ತನ್ನನ್ನು ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಆಹಾರದೊಂದಿಗೆ ಅವರ ಪ್ರತಿಭಟನೆಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲು ನಿರ್ಧರಿಸಿದ್ದಾರೆ.

“ಈ ಇಲಾಖೆಯಲ್ಲಿ (ಪೊಲೀಸ್) ಕೇಳುವವರು ಯಾರೂ ಇಲ್ಲ. ಕ್ಯಾಪ್ಟನ್ ಸರ್ ನನ್ನ ಸಮಸ್ಯೆಗಳನ್ನು ಕೇಳುತ್ತಿಲ್ಲ, ಅದಕ್ಕಾಗಿಯೇ ನಾನು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ. ನಿಮ್ಮ ಸಿಬ್ಬಂದಿ ಯಾವ ರೀತಿಯ ಆಹಾರವನ್ನು ತಿನ್ನುತ್ತಾರೆ ಎಂದು ತಿಳಿಯಲು ನೀವು ಈ ತಟ್ಟೆಯಲ್ಲಿರುವ ರೊಟ್ಟಿಗಳನ್ನು ತಿನ್ನಬೇಕು ಎಂದು ಕ್ಯಾಪ್ಟನ್ ಸರ್ ಇಲ್ಲಿಂದ ಹಾದುಹೋದಾಗ ಈ ಬಗ್ಗೆ ನಾನು ಅವರಿಗೆ ಹೇಳಿದ್ದೇನೆ. ಅವರ ಮಕ್ಕಳು ಅಂತಹ ಆಹಾರವನ್ನು ತಿನ್ನಲು ಸಾಧ್ಯವೆ? ಇದನ್ನು ನಾನು ಅವರಿಗೆ ಕೇಳಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಪರಾಧಿ ಎಂದು ತೀರ್ಪು ಬರುತ್ತಿದ್ದಂತೆ ಕೋರ್ಟ್‌ನಿಂದ ಯುಪಿ ಸಚಿವ ಪರಾರಿ: 35 ವರ್ಷಗಳ ಹಿಂದೆ ರೈಲ್ವೆ ಸಲಕರಣೆ ಕಳ್ಳತನ ಮಾಡಿದ್ದ ಸಚಿವ

ಅಂತಿಮವಾಗಿ ಕಾನ್ಸ್ಟೇಬಲ್ ಮನೋಜ್ ಕುಮಾರ್ ಅವರನ್ನು ಇತರ ಪೊಲೀಸ್ ಸಿಬ್ಬಂದಿ ಅವರನ್ನು ಪ್ರತಿಭಟನೆಯ ಸ್ಥಳದಿಂದ ಕರೆದೊಯ್ದಿದ್ದಾರೆ. ಮೆಸ್‌ನಲ್ಲಿ ಗುಣಮಟ್ಟವಿಲ್ಲದ ಆಹಾರದ ಬಗ್ಗೆ ದೂರು ನೀಡಿದ ಅವರ ವೀಡಿಯೊ ಹೊರಬಂದ ನಂತರ, ಫಿರೋಜಾಬಾದ್ ಪೊಲೀಸರು ಈ ವಿಷಯವನ್ನು ಪರಿಶೀಲಿಸುವಂತೆ ಸಿಒ ಸಿಟಿಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...