Homeಮುಖಪುಟನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

- Advertisement -
- Advertisement -

’ಮರಾಠರ ಹೆಮ್ಮೆ ಮತ್ತು ಹಿಂದುತ್ವದ ವಿಷಯಕ್ಕೆ ಬಂದಾಗ, ನಾವು ಗೂಂಡಾಗಳೇ, ನಮಗೆ ಯಾರೂ ಗೂಂಡಾಗಳು ಎಂದು ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ, ನಾವು ಪ್ರಮಾಣಪತ್ರ ಹೊಂದಿರುವ ಗೂಂಡಾಗಳೇ’ ಎಂದು ಶಿವಸೇನೆಯ ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈನ ದಾದರ್‌ನಲ್ಲಿರುವ ಸೇನಾ ಭವನದ ಹೊರಗೆ ಬಿಜೆಪಿ ಮತ್ತು ಶಿವಸೇನಾ ಪಕ್ಷಗಳ ಕಾರ್ಯಕರ್ತರ  ನಡುವೆ ಬುಧವಾರ ನಡೆದ ಘರ್ಷಣೆ ಬಗ್ಗೆ ಬಿಜೆಪಿಯು ಶಿವಸೇನೆಯ ಗೂಂಡಾಗಿರಿಯ ಬಗ್ಗೆ ಟ್ವಿಟ್ ಮಾಡಿ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನೆಯ ಸಂಜಯ್ ರಾವತ್ ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು ಎಂದಿದ್ದಾರೆ.

ಅಯೋಧ್ಯೆಯಲ್ಲಿ ಭೂ ವ್ಯವಹಾರ ವಿವಾದದ ಬಗ್ಗೆ ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ “ಆಕ್ರಮಣಕಾರಿ” ಟೀಕೆಗಳ ವಿರುದ್ಧ ಬಿಜೆಪಿ ಯುವ ಮೋರ್ಚಾ ವಿಭಾಗವು ಪ್ರತಿಭಟನಾ ಮೆರವಣಿಗೆ ನಡೆಸುವಾಗ ಶಿವಸೇನೆ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಶೀವಸೇನೆಯ ಕಾರ್ಯಕರ್ತರು ಬಿಜೆಪಿಯ ಮಹಿಳಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದಾರೆ. ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದ್ದ ಈ ಘಟನೆಯಲ್ಲಿ, ’ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಲು ಬಿಜೆಪಿ ಕಾರ್ಯಕರ್ತರು ಬರುತ್ತಿದ್ದಾರೆ ಎಂಬ ಮಾಹಿತಿ ತಮಗೆ ದೊರೆತಿದೆ’ ಎಂದು ಶಿವಸೇನಾ ಹೇಳಿತ್ತು.

“ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಿದ್ದಾರೆ, ಅವರು ಸೇನಾ ಭವನವನ್ನು ಧ್ವಂಸ ಮಾಡಲು ಬರುತ್ತಿದ್ದಾರೆ ಎಂದು ನಮಗೆ ಮೊದಲು ತಿಳಿದಿತ್ತು. ಆದ್ದರಿಂದ ಅವರು ಸೇನಾ ಭವನದ ಹತ್ತಿರ ತಲುಪುವ ಮುನ್ನವೇ ನಾವು ಅವರನ್ನು ನಿಲ್ಲಿಸಿದ್ದೇವೆ” ಎಂದು ಸೇನಾ ಶಾಸಕ ಸದಾ ಸರ್ವಾಂಕರ್‌ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಪಿಟಿಐ ಉಲ್ಲೇಖಿಸಿದೆ.

“ಬಾಳಾ ಸಾಹೇಬ್ ಠಾಕ್ರೆ ಅವರು ಶಿವಸೇನೆ ಭವನದಲ್ಲಿ ಕುಳಿತುಕೊಳ್ಳುತ್ತಿದ್ದರು. ಶಿವಸೇನೆ ಭವನವನ್ನು ಯಾರಾದರೂ ಟಾರ್ಗೆಟ್ ಮಾಡಿದರೆ ನಾವು ಸರಿಯಾದ ಉತ್ತರ ನೀಡುತ್ತೇವೆ. ಇದನ್ನು ನೀವು ಗೂಂಡಗಿರಿ ಎಂದು ಕರೆದರೆ ನಾವು ಗೂಂಡಾಗಳು” ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಬಿಜೆಪಿ ಏಕೆ ಇಷ್ಟು ಆಕ್ರೋಶಗೊಂಡಿದೆ..? ಸೇನಾ ಸಂಪಾದಕೀಯ ಏನು ಹೇಳಿದೆ..? ಇದು ಕೇವಲ ಆರೋಪಗಳ ಬಗ್ಗೆ ಸ್ಪಷ್ಟೀಕರಣವನ್ನು ಕೋರಿತ್ತು. ಆರೋಪಗಳು ಸುಳ್ಳು ಎಂದು ಸಾಬೀತುಪಡಿಸಿದರೆ, ಅದನ್ನು ನೆಲಸಮಗೊಳಿಸಿದವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿತ್ತು. ಸಂಪಾದಕೀಯದಲ್ಲಿ ಎಲ್ಲಿಯೂ ಬಿಜೆಪಿ ಭಾಗಿಯಾಗಿದೆ ಎಂದು ಉಲ್ಲೇಖಿಸಿಲ್ಲ. ನಿಮಗೆ ಓದಲು ಮತ್ತು ಬರೆಯಲು ಸಾಧ್ಯವಿಲ್ಲವೇ..? ಮೊದಲು ಆರೋಪಗಳು ಯಾವುವು ಮತ್ತು ಶಿವಸೇನೆ ವಕ್ತಾರರು ಏನು ಹೇಳಿದ್ದಾರೆಂದು ಅರ್ಥಮಾಡಿಕೊಳ್ಳಿ” ಎಂದು ಸಾಮ್ನಾ ಸಂಪಾದಕರು ಆಗಿರುವ ಸಂಜಯ್‌ ರಾವತ್‌ ಕಿಡಿಕಾರಿದ್ದಾರೆ.


 ಇದನ್ನೂ ಓದಿ: ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...