Homeಕರ್ನಾಟಕಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಸಹಕಾರಿ ಬ್ಯಾಂಕ್‌ ಸಾಲ ಮನ್ನಾಗೆ 1 ಸಾವಿರ ಕೋಟಿ : ತುಮಕೂರಿನಲ್ಲಿ ಯಡಿಯೂರಪ್ಪ ಘೋಷಣೆ

- Advertisement -
- Advertisement -

ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ, ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 66ನೇ ಅಖಿಲಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಬರೆದು ತಂದಿದ್ದ ಭಾಷಣವನ್ನು ಓದಿದರು. ತಿಪಟೂರಿನಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಅನುಮತಿ ನೀಡುವ ಭರವಸೆಯಿತ್ತಿದ್ದಾರೆ.

ರಾಜ್ಯದ ಉತ್ತರ ಭಾಗದಲ್ಲಿ ಅತಿವೃಷ್ಟಿಯಿಂದ 7 ಲಕ್ಷ ಎಕರೆ ಭೂಮಿ ನಾಶವಾಯಿತು. ಮೂರು ನಾಲ್ಕು ಲಕ್ಷ ಮನೆಗಳು ಬಿದ್ದು ಹೋದವು. ನೂರಾರು ಗ್ರಾಮಗಳು ನೀರುಪಾಲಾದವು. ಜನರು ಬೀದಿಗೆ ಬಿದ್ದರು. ಈ ಸಂಕಷ್ಟಗಳಿಗೆ ಸ್ಪಂದಿಸಲು ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಕೆಲವು ಕಡೆಗಳಲ್ಲಿ ಹೆಚ್ಚಿನ ಗಮನ ಕೊಡಲು ಆಗಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಬರುವ ಫೆಬ್ರವರಿ ಬಜೆಟ್ ನಲ್ಲಿ ಈ ನಾಡಿನ ರೈತರು ಗೌರವದಿಂದ ನೆಮ್ಮದಿಯಿಂದ ಸ್ವಾಭಿಮಾನದಿಂದ ಬದುಕಲು ಸಹಾಯ ಮಾಡಲು ಸಾಧ್ಯವಿದೆಯೋ ಅದನ್ನು ಮಾಡುತ್ತೇನೆ. ಯಶಸ್ವಿನಿ ಯೋಜನೆ ಇನ್ನೊಂದು ತಿಂಗಳ ಒಳಗಾಗಿ ಹಣದ ಭಾರ ಬಿದ್ದರೂ ಪರವಾಗಿಲ್ಲ, ತಕ್ಷಣ ಜಾರಿಗೆ ತರುತ್ತೇನೆ ಎಂದು ರೈತಬಂಧುಗಳಿಗೆ, ಸಹಕಾರಿಗಳಿಗೆ ಎಂದು ಭರವಸೆ ನೀಡಿದರು.

ಬರೆದು ತಂದಿದ್ದ ಭಾಷಣವನ್ನು ಕೇವಲ 10 ನಿಮಿಷಗಳಲ್ಲಿ ಓದಿ ಮುಗಿಸಿದ ಯಡಿಯೂರಪ್ಪನವರು ಅದರಲ್ಲಿ ಕೆ.ಎನ್ ರಾಜಣ್ಣ ಹೆಸರನ್ನು ಐದಾರು ಬಾರಿ ಪ್ರಸ್ತಾಪಿಸಿ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆಂದು ಶ್ಲಾಘಿಸಿದುದ್ದು ಕುತೂಹಲಕ್ಕೆ ಕಾರಣವಾಗಿದೆ.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮನವಿ ಮೇರೆಗೆ ತುಮಕೂರು ಹಾಲು ಒಕ್ಕೂಟದಲ್ಲಿ ಮೆಗಾ ಡೈರಿ ಸ್ಥಾಪನೆಯ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರವೇ ಮಾಡಿಕೊಡುತ್ತೇನೆ, ಮಂತ್ರಿಮಂಡಲದಲ್ಲಿ ಈ ವಿಷಯಗಳನ್ನು ತಂದು ಒಪ್ಪಿಗೆ ಪಡೆದು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಎಲ್ಲಾ ಕೆರೆಗಳಿಗೆ ಕುಡಿಯು ನೀರು ಹರಿಸಲಾಗುವುದು. ಆದರೆ ನೀರಾವರಿಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

66ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಸರ್ಕಾರಿ ಕಾರ್ಯಕ್ರಮವಾದರೂ ವೇದಿಕೆಯಲ್ಲಿ ಬಿಜೆಪಿ ಮುಖಂಡರನ್ನು ಬಿಟ್ಟರೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು, ಸಂಸದರು ಮತ್ತು ಮುಖಂಡರು ಭಾಗವಹಿಸಿರಲಿಲ್ಲ. ಇಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೆ.ಎನ್.ರಾಜಣ್ಣ, ಪುತ್ರ ರಾಜೇಂದ್ರ ಅವರ ಕಟೌಟ್ ಗಳು ರಾರಾಜಿಸುತ್ತಿದ್ದವು.

ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಕಾಂಗ್ರೆಸ್ ನ ಪರಮೇಶ್ವರ್,  ಸಂಸದ ಡಿ.ಕೆ.ಸುರೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡರ ಹೆಸರುಗಳನ್ನು ಹಾಕಿದ್ದರೂ ಅವರ್‍ಯಾರು ಸಮಾರಂಭಕ್ಕೆ ಬಂದಿರಲಿಲ್ಲ. ಗುಬ್ಬಿ ಶಾಸಕರೂ ಆದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಕೂಡ ಕಾರ್ಯಕ್ರಮ ದಿಂದ ದೂರವೇ ಉಳಿದಿದ್ದರು. ಜಾಹಿರಾತುಗಳಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಸಂಸದರ ಪೋಟೋಗಳನ್ನು ಕೈಬಿಡಲಾಗಿತ್ತು.

ಸಹಕಾರ ಸಪ್ತಾಹ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವಾದರೂ ಜಿಲ್ಲೆಯಲ್ಲಿ ಹೆಸರು ಮಾಡಿರುವ ಕೆ.ಷಡಕ್ಷರಿ ಅವರನ್ನೂ ಆಹ್ವಾನಿಸಿರಲಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ, ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ, ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡ್ಲಗಿರಿಯಪ್ಪ ಅವರನ್ನು ಆಹ್ವಾನಿಸಿದ್ದು ಕೆಲವರ ಹುಬ್ಬೇರಿಸುವಂತೆ ಮಾಡಿತ್ತು. ಸರ್ಕಾರಿ ಕಾರ್ಯಕ್ರಮದಲ್ಲಿ ಅವರಿಗೇನು ಕೆಲಸ ಎಂಬ ಪ್ರಶ್ನೆಯೂ ವ್ಯಕ್ತವಾಗಿದೆ.

ಕಾರ್ಯಕ್ರಮ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಬಲಾಬಲ ಪ್ರದರ್ಶನದ ವೇದಿಕೆಯೂ ಆಗಿತ್ತು. ಮುಖ್ಯಮಂತ್ರಿಗಳು ಮಾಧ್ಯಮಗಳೊಂದಿಗೆ ಮಾತನಾಡಿ ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಅವರು ಎಲ್ಲಿದ್ದರೂ ನಮ್ಮವರೇ ಆಗಿದ್ದಾರೆ. ಪಕ್ಷಕ್ಕೆ ಬರಲಿ ಬಿಡಲಿ ಅವರು ನಮ್ಮವರೇ ಎಂದು ಹೇಳುವ ಮೂಲಕ ರಾಜಣ್ಣ ಬಿಜೆಪಿ ಸೇರ್ಪಡೆಯ ಸುದ್ದಿಯನ್ನು ಸಂಪೂರ್ಣ ತಳ್ಳಿ ಹಾಕಲಾಕುವುದಿಲ್ಲ ಎಂಬ ಸುಳಿವು ನೀಡಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟ ಉತ್ತರವೂ ದೊರೆಯಲಿಲ್ಲ.

ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಜಿ.ಎಸ್.ಬಸವರಾಜು ಅವರ ಆದಿಯಾಗಿ ಮುಖ್ಯಮಂತ್ರಿಗಳು ಕೂಡ ಕೆ.ಎನ್.ರಾಜಣ್ಣ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ರಾಜಣ್ಣನವರ ಮುಂದಿನ ರಾಜಕೀಯ ನಡೆಯ ಬಗ್ಗೆ ಕುತೂಹಲವನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...