Homeಕರ್ನಾಟಕಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಸಹಕಾರಿ ಬ್ಯಾಂಕ್‌ ಸಾಲ ಮನ್ನಾಗೆ 1 ಸಾವಿರ ಕೋಟಿ : ತುಮಕೂರಿನಲ್ಲಿ ಯಡಿಯೂರಪ್ಪ ಘೋಷಣೆ

- Advertisement -
- Advertisement -

ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ, ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 66ನೇ ಅಖಿಲಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಬರೆದು ತಂದಿದ್ದ ಭಾಷಣವನ್ನು ಓದಿದರು. ತಿಪಟೂರಿನಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಅನುಮತಿ ನೀಡುವ ಭರವಸೆಯಿತ್ತಿದ್ದಾರೆ.

ರಾಜ್ಯದ ಉತ್ತರ ಭಾಗದಲ್ಲಿ ಅತಿವೃಷ್ಟಿಯಿಂದ 7 ಲಕ್ಷ ಎಕರೆ ಭೂಮಿ ನಾಶವಾಯಿತು. ಮೂರು ನಾಲ್ಕು ಲಕ್ಷ ಮನೆಗಳು ಬಿದ್ದು ಹೋದವು. ನೂರಾರು ಗ್ರಾಮಗಳು ನೀರುಪಾಲಾದವು. ಜನರು ಬೀದಿಗೆ ಬಿದ್ದರು. ಈ ಸಂಕಷ್ಟಗಳಿಗೆ ಸ್ಪಂದಿಸಲು ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಕೆಲವು ಕಡೆಗಳಲ್ಲಿ ಹೆಚ್ಚಿನ ಗಮನ ಕೊಡಲು ಆಗಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಬರುವ ಫೆಬ್ರವರಿ ಬಜೆಟ್ ನಲ್ಲಿ ಈ ನಾಡಿನ ರೈತರು ಗೌರವದಿಂದ ನೆಮ್ಮದಿಯಿಂದ ಸ್ವಾಭಿಮಾನದಿಂದ ಬದುಕಲು ಸಹಾಯ ಮಾಡಲು ಸಾಧ್ಯವಿದೆಯೋ ಅದನ್ನು ಮಾಡುತ್ತೇನೆ. ಯಶಸ್ವಿನಿ ಯೋಜನೆ ಇನ್ನೊಂದು ತಿಂಗಳ ಒಳಗಾಗಿ ಹಣದ ಭಾರ ಬಿದ್ದರೂ ಪರವಾಗಿಲ್ಲ, ತಕ್ಷಣ ಜಾರಿಗೆ ತರುತ್ತೇನೆ ಎಂದು ರೈತಬಂಧುಗಳಿಗೆ, ಸಹಕಾರಿಗಳಿಗೆ ಎಂದು ಭರವಸೆ ನೀಡಿದರು.

ಬರೆದು ತಂದಿದ್ದ ಭಾಷಣವನ್ನು ಕೇವಲ 10 ನಿಮಿಷಗಳಲ್ಲಿ ಓದಿ ಮುಗಿಸಿದ ಯಡಿಯೂರಪ್ಪನವರು ಅದರಲ್ಲಿ ಕೆ.ಎನ್ ರಾಜಣ್ಣ ಹೆಸರನ್ನು ಐದಾರು ಬಾರಿ ಪ್ರಸ್ತಾಪಿಸಿ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆಂದು ಶ್ಲಾಘಿಸಿದುದ್ದು ಕುತೂಹಲಕ್ಕೆ ಕಾರಣವಾಗಿದೆ.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮನವಿ ಮೇರೆಗೆ ತುಮಕೂರು ಹಾಲು ಒಕ್ಕೂಟದಲ್ಲಿ ಮೆಗಾ ಡೈರಿ ಸ್ಥಾಪನೆಯ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರವೇ ಮಾಡಿಕೊಡುತ್ತೇನೆ, ಮಂತ್ರಿಮಂಡಲದಲ್ಲಿ ಈ ವಿಷಯಗಳನ್ನು ತಂದು ಒಪ್ಪಿಗೆ ಪಡೆದು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಎಲ್ಲಾ ಕೆರೆಗಳಿಗೆ ಕುಡಿಯು ನೀರು ಹರಿಸಲಾಗುವುದು. ಆದರೆ ನೀರಾವರಿಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

66ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಸರ್ಕಾರಿ ಕಾರ್ಯಕ್ರಮವಾದರೂ ವೇದಿಕೆಯಲ್ಲಿ ಬಿಜೆಪಿ ಮುಖಂಡರನ್ನು ಬಿಟ್ಟರೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು, ಸಂಸದರು ಮತ್ತು ಮುಖಂಡರು ಭಾಗವಹಿಸಿರಲಿಲ್ಲ. ಇಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೆ.ಎನ್.ರಾಜಣ್ಣ, ಪುತ್ರ ರಾಜೇಂದ್ರ ಅವರ ಕಟೌಟ್ ಗಳು ರಾರಾಜಿಸುತ್ತಿದ್ದವು.

ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಕಾಂಗ್ರೆಸ್ ನ ಪರಮೇಶ್ವರ್,  ಸಂಸದ ಡಿ.ಕೆ.ಸುರೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡರ ಹೆಸರುಗಳನ್ನು ಹಾಕಿದ್ದರೂ ಅವರ್‍ಯಾರು ಸಮಾರಂಭಕ್ಕೆ ಬಂದಿರಲಿಲ್ಲ. ಗುಬ್ಬಿ ಶಾಸಕರೂ ಆದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಕೂಡ ಕಾರ್ಯಕ್ರಮ ದಿಂದ ದೂರವೇ ಉಳಿದಿದ್ದರು. ಜಾಹಿರಾತುಗಳಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಸಂಸದರ ಪೋಟೋಗಳನ್ನು ಕೈಬಿಡಲಾಗಿತ್ತು.

ಸಹಕಾರ ಸಪ್ತಾಹ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವಾದರೂ ಜಿಲ್ಲೆಯಲ್ಲಿ ಹೆಸರು ಮಾಡಿರುವ ಕೆ.ಷಡಕ್ಷರಿ ಅವರನ್ನೂ ಆಹ್ವಾನಿಸಿರಲಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ, ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ, ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡ್ಲಗಿರಿಯಪ್ಪ ಅವರನ್ನು ಆಹ್ವಾನಿಸಿದ್ದು ಕೆಲವರ ಹುಬ್ಬೇರಿಸುವಂತೆ ಮಾಡಿತ್ತು. ಸರ್ಕಾರಿ ಕಾರ್ಯಕ್ರಮದಲ್ಲಿ ಅವರಿಗೇನು ಕೆಲಸ ಎಂಬ ಪ್ರಶ್ನೆಯೂ ವ್ಯಕ್ತವಾಗಿದೆ.

ಕಾರ್ಯಕ್ರಮ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಬಲಾಬಲ ಪ್ರದರ್ಶನದ ವೇದಿಕೆಯೂ ಆಗಿತ್ತು. ಮುಖ್ಯಮಂತ್ರಿಗಳು ಮಾಧ್ಯಮಗಳೊಂದಿಗೆ ಮಾತನಾಡಿ ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಅವರು ಎಲ್ಲಿದ್ದರೂ ನಮ್ಮವರೇ ಆಗಿದ್ದಾರೆ. ಪಕ್ಷಕ್ಕೆ ಬರಲಿ ಬಿಡಲಿ ಅವರು ನಮ್ಮವರೇ ಎಂದು ಹೇಳುವ ಮೂಲಕ ರಾಜಣ್ಣ ಬಿಜೆಪಿ ಸೇರ್ಪಡೆಯ ಸುದ್ದಿಯನ್ನು ಸಂಪೂರ್ಣ ತಳ್ಳಿ ಹಾಕಲಾಕುವುದಿಲ್ಲ ಎಂಬ ಸುಳಿವು ನೀಡಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟ ಉತ್ತರವೂ ದೊರೆಯಲಿಲ್ಲ.

ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಜಿ.ಎಸ್.ಬಸವರಾಜು ಅವರ ಆದಿಯಾಗಿ ಮುಖ್ಯಮಂತ್ರಿಗಳು ಕೂಡ ಕೆ.ಎನ್.ರಾಜಣ್ಣ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ರಾಜಣ್ಣನವರ ಮುಂದಿನ ರಾಜಕೀಯ ನಡೆಯ ಬಗ್ಗೆ ಕುತೂಹಲವನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...