Homeಮುಖಪುಟಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಸಹಕಾರಿ ಬ್ಯಾಂಕ್‌ ಸಾಲ ಮನ್ನಾಗೆ 1 ಸಾವಿರ ಕೋಟಿ : ತುಮಕೂರಿನಲ್ಲಿ ಯಡಿಯೂರಪ್ಪ ಘೋಷಣೆ

- Advertisement -
- Advertisement -

ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ, ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 66ನೇ ಅಖಿಲಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಬರೆದು ತಂದಿದ್ದ ಭಾಷಣವನ್ನು ಓದಿದರು. ತಿಪಟೂರಿನಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಅನುಮತಿ ನೀಡುವ ಭರವಸೆಯಿತ್ತಿದ್ದಾರೆ.

ರಾಜ್ಯದ ಉತ್ತರ ಭಾಗದಲ್ಲಿ ಅತಿವೃಷ್ಟಿಯಿಂದ 7 ಲಕ್ಷ ಎಕರೆ ಭೂಮಿ ನಾಶವಾಯಿತು. ಮೂರು ನಾಲ್ಕು ಲಕ್ಷ ಮನೆಗಳು ಬಿದ್ದು ಹೋದವು. ನೂರಾರು ಗ್ರಾಮಗಳು ನೀರುಪಾಲಾದವು. ಜನರು ಬೀದಿಗೆ ಬಿದ್ದರು. ಈ ಸಂಕಷ್ಟಗಳಿಗೆ ಸ್ಪಂದಿಸಲು ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಕೆಲವು ಕಡೆಗಳಲ್ಲಿ ಹೆಚ್ಚಿನ ಗಮನ ಕೊಡಲು ಆಗಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಬರುವ ಫೆಬ್ರವರಿ ಬಜೆಟ್ ನಲ್ಲಿ ಈ ನಾಡಿನ ರೈತರು ಗೌರವದಿಂದ ನೆಮ್ಮದಿಯಿಂದ ಸ್ವಾಭಿಮಾನದಿಂದ ಬದುಕಲು ಸಹಾಯ ಮಾಡಲು ಸಾಧ್ಯವಿದೆಯೋ ಅದನ್ನು ಮಾಡುತ್ತೇನೆ. ಯಶಸ್ವಿನಿ ಯೋಜನೆ ಇನ್ನೊಂದು ತಿಂಗಳ ಒಳಗಾಗಿ ಹಣದ ಭಾರ ಬಿದ್ದರೂ ಪರವಾಗಿಲ್ಲ, ತಕ್ಷಣ ಜಾರಿಗೆ ತರುತ್ತೇನೆ ಎಂದು ರೈತಬಂಧುಗಳಿಗೆ, ಸಹಕಾರಿಗಳಿಗೆ ಎಂದು ಭರವಸೆ ನೀಡಿದರು.

ಬರೆದು ತಂದಿದ್ದ ಭಾಷಣವನ್ನು ಕೇವಲ 10 ನಿಮಿಷಗಳಲ್ಲಿ ಓದಿ ಮುಗಿಸಿದ ಯಡಿಯೂರಪ್ಪನವರು ಅದರಲ್ಲಿ ಕೆ.ಎನ್ ರಾಜಣ್ಣ ಹೆಸರನ್ನು ಐದಾರು ಬಾರಿ ಪ್ರಸ್ತಾಪಿಸಿ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆಂದು ಶ್ಲಾಘಿಸಿದುದ್ದು ಕುತೂಹಲಕ್ಕೆ ಕಾರಣವಾಗಿದೆ.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮನವಿ ಮೇರೆಗೆ ತುಮಕೂರು ಹಾಲು ಒಕ್ಕೂಟದಲ್ಲಿ ಮೆಗಾ ಡೈರಿ ಸ್ಥಾಪನೆಯ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರವೇ ಮಾಡಿಕೊಡುತ್ತೇನೆ, ಮಂತ್ರಿಮಂಡಲದಲ್ಲಿ ಈ ವಿಷಯಗಳನ್ನು ತಂದು ಒಪ್ಪಿಗೆ ಪಡೆದು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಎಲ್ಲಾ ಕೆರೆಗಳಿಗೆ ಕುಡಿಯು ನೀರು ಹರಿಸಲಾಗುವುದು. ಆದರೆ ನೀರಾವರಿಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

66ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಸರ್ಕಾರಿ ಕಾರ್ಯಕ್ರಮವಾದರೂ ವೇದಿಕೆಯಲ್ಲಿ ಬಿಜೆಪಿ ಮುಖಂಡರನ್ನು ಬಿಟ್ಟರೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು, ಸಂಸದರು ಮತ್ತು ಮುಖಂಡರು ಭಾಗವಹಿಸಿರಲಿಲ್ಲ. ಇಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೆ.ಎನ್.ರಾಜಣ್ಣ, ಪುತ್ರ ರಾಜೇಂದ್ರ ಅವರ ಕಟೌಟ್ ಗಳು ರಾರಾಜಿಸುತ್ತಿದ್ದವು.

ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಕಾಂಗ್ರೆಸ್ ನ ಪರಮೇಶ್ವರ್,  ಸಂಸದ ಡಿ.ಕೆ.ಸುರೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡರ ಹೆಸರುಗಳನ್ನು ಹಾಕಿದ್ದರೂ ಅವರ್‍ಯಾರು ಸಮಾರಂಭಕ್ಕೆ ಬಂದಿರಲಿಲ್ಲ. ಗುಬ್ಬಿ ಶಾಸಕರೂ ಆದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಕೂಡ ಕಾರ್ಯಕ್ರಮ ದಿಂದ ದೂರವೇ ಉಳಿದಿದ್ದರು. ಜಾಹಿರಾತುಗಳಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಸಂಸದರ ಪೋಟೋಗಳನ್ನು ಕೈಬಿಡಲಾಗಿತ್ತು.

ಸಹಕಾರ ಸಪ್ತಾಹ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವಾದರೂ ಜಿಲ್ಲೆಯಲ್ಲಿ ಹೆಸರು ಮಾಡಿರುವ ಕೆ.ಷಡಕ್ಷರಿ ಅವರನ್ನೂ ಆಹ್ವಾನಿಸಿರಲಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ, ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ, ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡ್ಲಗಿರಿಯಪ್ಪ ಅವರನ್ನು ಆಹ್ವಾನಿಸಿದ್ದು ಕೆಲವರ ಹುಬ್ಬೇರಿಸುವಂತೆ ಮಾಡಿತ್ತು. ಸರ್ಕಾರಿ ಕಾರ್ಯಕ್ರಮದಲ್ಲಿ ಅವರಿಗೇನು ಕೆಲಸ ಎಂಬ ಪ್ರಶ್ನೆಯೂ ವ್ಯಕ್ತವಾಗಿದೆ.

ಕಾರ್ಯಕ್ರಮ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಬಲಾಬಲ ಪ್ರದರ್ಶನದ ವೇದಿಕೆಯೂ ಆಗಿತ್ತು. ಮುಖ್ಯಮಂತ್ರಿಗಳು ಮಾಧ್ಯಮಗಳೊಂದಿಗೆ ಮಾತನಾಡಿ ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಅವರು ಎಲ್ಲಿದ್ದರೂ ನಮ್ಮವರೇ ಆಗಿದ್ದಾರೆ. ಪಕ್ಷಕ್ಕೆ ಬರಲಿ ಬಿಡಲಿ ಅವರು ನಮ್ಮವರೇ ಎಂದು ಹೇಳುವ ಮೂಲಕ ರಾಜಣ್ಣ ಬಿಜೆಪಿ ಸೇರ್ಪಡೆಯ ಸುದ್ದಿಯನ್ನು ಸಂಪೂರ್ಣ ತಳ್ಳಿ ಹಾಕಲಾಕುವುದಿಲ್ಲ ಎಂಬ ಸುಳಿವು ನೀಡಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟ ಉತ್ತರವೂ ದೊರೆಯಲಿಲ್ಲ.

ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಜಿ.ಎಸ್.ಬಸವರಾಜು ಅವರ ಆದಿಯಾಗಿ ಮುಖ್ಯಮಂತ್ರಿಗಳು ಕೂಡ ಕೆ.ಎನ್.ರಾಜಣ್ಣ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ರಾಜಣ್ಣನವರ ಮುಂದಿನ ರಾಜಕೀಯ ನಡೆಯ ಬಗ್ಗೆ ಕುತೂಹಲವನ್ನು ಹುಟ್ಟುಹಾಕಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...