Homeಕರ್ನಾಟಕಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಸಹಕಾರಿ ಬ್ಯಾಂಕ್‌ ಸಾಲ ಮನ್ನಾಗೆ 1 ಸಾವಿರ ಕೋಟಿ : ತುಮಕೂರಿನಲ್ಲಿ ಯಡಿಯೂರಪ್ಪ ಘೋಷಣೆ

- Advertisement -
- Advertisement -

ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ, ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 66ನೇ ಅಖಿಲಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಬರೆದು ತಂದಿದ್ದ ಭಾಷಣವನ್ನು ಓದಿದರು. ತಿಪಟೂರಿನಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಅನುಮತಿ ನೀಡುವ ಭರವಸೆಯಿತ್ತಿದ್ದಾರೆ.

ರಾಜ್ಯದ ಉತ್ತರ ಭಾಗದಲ್ಲಿ ಅತಿವೃಷ್ಟಿಯಿಂದ 7 ಲಕ್ಷ ಎಕರೆ ಭೂಮಿ ನಾಶವಾಯಿತು. ಮೂರು ನಾಲ್ಕು ಲಕ್ಷ ಮನೆಗಳು ಬಿದ್ದು ಹೋದವು. ನೂರಾರು ಗ್ರಾಮಗಳು ನೀರುಪಾಲಾದವು. ಜನರು ಬೀದಿಗೆ ಬಿದ್ದರು. ಈ ಸಂಕಷ್ಟಗಳಿಗೆ ಸ್ಪಂದಿಸಲು ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಕೆಲವು ಕಡೆಗಳಲ್ಲಿ ಹೆಚ್ಚಿನ ಗಮನ ಕೊಡಲು ಆಗಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಬರುವ ಫೆಬ್ರವರಿ ಬಜೆಟ್ ನಲ್ಲಿ ಈ ನಾಡಿನ ರೈತರು ಗೌರವದಿಂದ ನೆಮ್ಮದಿಯಿಂದ ಸ್ವಾಭಿಮಾನದಿಂದ ಬದುಕಲು ಸಹಾಯ ಮಾಡಲು ಸಾಧ್ಯವಿದೆಯೋ ಅದನ್ನು ಮಾಡುತ್ತೇನೆ. ಯಶಸ್ವಿನಿ ಯೋಜನೆ ಇನ್ನೊಂದು ತಿಂಗಳ ಒಳಗಾಗಿ ಹಣದ ಭಾರ ಬಿದ್ದರೂ ಪರವಾಗಿಲ್ಲ, ತಕ್ಷಣ ಜಾರಿಗೆ ತರುತ್ತೇನೆ ಎಂದು ರೈತಬಂಧುಗಳಿಗೆ, ಸಹಕಾರಿಗಳಿಗೆ ಎಂದು ಭರವಸೆ ನೀಡಿದರು.

ಬರೆದು ತಂದಿದ್ದ ಭಾಷಣವನ್ನು ಕೇವಲ 10 ನಿಮಿಷಗಳಲ್ಲಿ ಓದಿ ಮುಗಿಸಿದ ಯಡಿಯೂರಪ್ಪನವರು ಅದರಲ್ಲಿ ಕೆ.ಎನ್ ರಾಜಣ್ಣ ಹೆಸರನ್ನು ಐದಾರು ಬಾರಿ ಪ್ರಸ್ತಾಪಿಸಿ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆಂದು ಶ್ಲಾಘಿಸಿದುದ್ದು ಕುತೂಹಲಕ್ಕೆ ಕಾರಣವಾಗಿದೆ.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮನವಿ ಮೇರೆಗೆ ತುಮಕೂರು ಹಾಲು ಒಕ್ಕೂಟದಲ್ಲಿ ಮೆಗಾ ಡೈರಿ ಸ್ಥಾಪನೆಯ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರವೇ ಮಾಡಿಕೊಡುತ್ತೇನೆ, ಮಂತ್ರಿಮಂಡಲದಲ್ಲಿ ಈ ವಿಷಯಗಳನ್ನು ತಂದು ಒಪ್ಪಿಗೆ ಪಡೆದು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಎಲ್ಲಾ ಕೆರೆಗಳಿಗೆ ಕುಡಿಯು ನೀರು ಹರಿಸಲಾಗುವುದು. ಆದರೆ ನೀರಾವರಿಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

66ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಸರ್ಕಾರಿ ಕಾರ್ಯಕ್ರಮವಾದರೂ ವೇದಿಕೆಯಲ್ಲಿ ಬಿಜೆಪಿ ಮುಖಂಡರನ್ನು ಬಿಟ್ಟರೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು, ಸಂಸದರು ಮತ್ತು ಮುಖಂಡರು ಭಾಗವಹಿಸಿರಲಿಲ್ಲ. ಇಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೆ.ಎನ್.ರಾಜಣ್ಣ, ಪುತ್ರ ರಾಜೇಂದ್ರ ಅವರ ಕಟೌಟ್ ಗಳು ರಾರಾಜಿಸುತ್ತಿದ್ದವು.

ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಕಾಂಗ್ರೆಸ್ ನ ಪರಮೇಶ್ವರ್,  ಸಂಸದ ಡಿ.ಕೆ.ಸುರೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡರ ಹೆಸರುಗಳನ್ನು ಹಾಕಿದ್ದರೂ ಅವರ್‍ಯಾರು ಸಮಾರಂಭಕ್ಕೆ ಬಂದಿರಲಿಲ್ಲ. ಗುಬ್ಬಿ ಶಾಸಕರೂ ಆದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಕೂಡ ಕಾರ್ಯಕ್ರಮ ದಿಂದ ದೂರವೇ ಉಳಿದಿದ್ದರು. ಜಾಹಿರಾತುಗಳಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಸಂಸದರ ಪೋಟೋಗಳನ್ನು ಕೈಬಿಡಲಾಗಿತ್ತು.

ಸಹಕಾರ ಸಪ್ತಾಹ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವಾದರೂ ಜಿಲ್ಲೆಯಲ್ಲಿ ಹೆಸರು ಮಾಡಿರುವ ಕೆ.ಷಡಕ್ಷರಿ ಅವರನ್ನೂ ಆಹ್ವಾನಿಸಿರಲಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ, ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ, ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡ್ಲಗಿರಿಯಪ್ಪ ಅವರನ್ನು ಆಹ್ವಾನಿಸಿದ್ದು ಕೆಲವರ ಹುಬ್ಬೇರಿಸುವಂತೆ ಮಾಡಿತ್ತು. ಸರ್ಕಾರಿ ಕಾರ್ಯಕ್ರಮದಲ್ಲಿ ಅವರಿಗೇನು ಕೆಲಸ ಎಂಬ ಪ್ರಶ್ನೆಯೂ ವ್ಯಕ್ತವಾಗಿದೆ.

ಕಾರ್ಯಕ್ರಮ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಬಲಾಬಲ ಪ್ರದರ್ಶನದ ವೇದಿಕೆಯೂ ಆಗಿತ್ತು. ಮುಖ್ಯಮಂತ್ರಿಗಳು ಮಾಧ್ಯಮಗಳೊಂದಿಗೆ ಮಾತನಾಡಿ ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಅವರು ಎಲ್ಲಿದ್ದರೂ ನಮ್ಮವರೇ ಆಗಿದ್ದಾರೆ. ಪಕ್ಷಕ್ಕೆ ಬರಲಿ ಬಿಡಲಿ ಅವರು ನಮ್ಮವರೇ ಎಂದು ಹೇಳುವ ಮೂಲಕ ರಾಜಣ್ಣ ಬಿಜೆಪಿ ಸೇರ್ಪಡೆಯ ಸುದ್ದಿಯನ್ನು ಸಂಪೂರ್ಣ ತಳ್ಳಿ ಹಾಕಲಾಕುವುದಿಲ್ಲ ಎಂಬ ಸುಳಿವು ನೀಡಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟ ಉತ್ತರವೂ ದೊರೆಯಲಿಲ್ಲ.

ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಜಿ.ಎಸ್.ಬಸವರಾಜು ಅವರ ಆದಿಯಾಗಿ ಮುಖ್ಯಮಂತ್ರಿಗಳು ಕೂಡ ಕೆ.ಎನ್.ರಾಜಣ್ಣ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ರಾಜಣ್ಣನವರ ಮುಂದಿನ ರಾಜಕೀಯ ನಡೆಯ ಬಗ್ಗೆ ಕುತೂಹಲವನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...