ಭಾರತವನ್ನು ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಲು ಕೆಲಸ ಮಾಡುವುದೇ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ರವರ ಮಹಾಪರಿನಿರ್ವಾಣದ ದಿನದ ನೆನಪಿನಲ್ಲಿ ಟ್ವೀಟ್ ಮಾಡಿರುವ ಅವರು “ರಾಷ್ಟ್ರ ನಿರ್ಮಾಣಕ್ಕೆ ಡಾ.ಅಂಬೇಡ್ಕರ್ ಅವರ ಕೊಡುಗೆಯನ್ನು ನಾವು ಇಂದು ನೆನಪಿಸಿಕೊಳ್ಳುತ್ತೇವೆ. ಭಾರತವನ್ನು ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಲು ಕೆಲಸ ಮಾಡುವುದು ಅವರಿಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ” ಎಂದಿದ್ದಾರೆ.
Today we remember Dr Ambedkar’s contribution to nation building.
Working to make India free from all forms of discrimination is the only truthful way to pay homage to him.
— Rahul Gandhi (@RahulGandhi) December 6, 2020
ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಸಹ ಟ್ವೀಟ್ ಮಾಡಿ “ಮಹಾಪರಿನಿರ್ವಾಣ ದಿನದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸೋಣ. ಅವರ ಆಲೋಚನೆಗಳು ಮತ್ತು ಆದರ್ಶಗಳು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತಲೇ ಇವೆ. ನಮ್ಮ ರಾಷ್ಟ್ರಕ್ಕಾಗಿ ಅವರು ಕಂಡ ಕನಸುಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ” ಎಂದಿದ್ದಾರೆ.
Remembering the great Dr. Babasaheb Ambedkar on Mahaparinirvan Diwas. His thoughts and ideals continue to give strength to millions. We are committed to fulfilling the dreams he had for our nation. pic.twitter.com/dJUwGjv3Z5
— Narendra Modi (@narendramodi) December 6, 2020
‘ಅಂಬೇಡ್ಕರ್ ವ್ಯಕ್ತಿ ಮಾತ್ರರಲ್ಲ, ಅವರು ಸ್ವತಂತ್ರ ಭಾರತದ ಚೈತನ್ಯಸ್ವರೂಪರಾಗಿರುವ ಆದರ್ಶನಾಯಕ. ಸಂವಿಧಾನ ಶಿಲ್ಪಿ, ಭಾರತರತ್ನ, ಡಾ ಬಿ.ಆರ್.ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನ’ದ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಲಾಯಿತು’ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಅಂಬೇಡ್ಕರ್ ವ್ಯಕ್ತಿ ಮಾತ್ರರಲ್ಲ, ಅವರು ಸ್ವತಂತ್ರ ಭಾರತದ ಚೈತನ್ಯಸ್ವರೂಪರಾಗಿರುವ ಆದರ್ಶನಾಯಕ. ಸಂವಿಧಾನ ಶಿಲ್ಪಿ, ಭಾರತರತ್ನ, ಡಾ ಬಿ.ಆರ್.ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನ’ದ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಲಾಯಿತು. ಸಚಿವರು, ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು. pic.twitter.com/cuKrKgPiNp
— B.S. Yediyurappa (@BSYBJP) December 6, 2020
“ಕೆಡವಿ ಹಾಕುವ, ಸುಟ್ಟುಹಾಕುವ ಮನುಷ್ಯ ವಿರೋಧಿ ಸಂಸ್ಕೃತಿ ವಿರುದ್ಧ ಹೋರಾಡಲು ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಗಳು ನಮ್ಮ ಕೈಗಳಲ್ಲಿನ ಅಸ್ತ್ರಗಳಾಗಬೇಕು. ಬಾಬಾಸಾಹೇಬರ ಪರಿನಿರ್ವಾಣದ ದಿನ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಮಾಡೋಣ. ಇದು ಆ ಚೇತನಕ್ಕೆ ಸಲ್ಲಿಸುವ ನಿಜವಾದ ಗೌರವ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೆಡವಿ ಹಾಕುವ, ಸುಟ್ಟುಹಾಕುವ
ಮನುಷ್ಯ ವಿರೋಧಿ ಸಂಸ್ಕೃತಿ ವಿರುದ್ಧ ಹೋರಾಡಲು ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಗಳು ನಮ್ಮ ಕೈಗಳಲ್ಲಿನ ಅಸ್ತ್ರಗಳಾಗಬೇಕು.ಬಾಬಾಸಾಹೇಬರ ಪರಿನಿರ್ವಾಣದ ದಿನ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಮಾಡೋಣ.
ಇದು ಆ ಚೇತನಕ್ಕೆ ಸಲ್ಲಿಸುವ ನಿಜವಾದ ಗೌರವ ?#Ambedkar pic.twitter.com/Ng0e3yAqyi
— Siddaramaiah (@siddaramaiah) December 6, 2020
ಇದನ್ನೂ ಓದಿ: ಪರಿನಿಬ್ಬಾಣ ದಿನ ವಿಶೇಷ: ಅಂಬೇಡ್ಕರ್ ಅವರಿಗೂ ಬೇಕಿರುವ ವಿಮೋಚನೆ – ವಿ.ಎಲ್ ನರಸಿಂಹಮೂರ್ತಿ