Homeಕರ್ನಾಟಕನಾವು ಗಾಂಧಿ ವಂಶಸ್ಥರು; ಬಿಜೆಪಿಗರು ಗೋಡ್ಸೆ ವಂಶಸ್ಥರು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾವು ಗಾಂಧಿ ವಂಶಸ್ಥರು; ಬಿಜೆಪಿಗರು ಗೋಡ್ಸೆ ವಂಶಸ್ಥರು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

“ಅಂಬೇಡ್ಕರ್, ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ಸಿನ ಹೋರಾಟದ ಚರಿತ್ರೆಯನ್ನು ನಾವು ಮುಂದಿನ ಪೀಳಿಗೆಗೆ ಅರ್ಥ ಮಾಡಿಸಬೇಕಿದೆ. ನಾವು ಗಾಂಧಿ ವಂಶಸ್ಥರು ಅವರು ಗೋಡ್ಸೆ ವಂಶಸ್ಥರು. ಬಿಜೆಪಿ ಮತ್ತು ಕಾಂಗ್ರೆಸ್ಸಿನ ಈ ಸೈದ್ಧಾಂತಿಕ ವ್ಯತ್ಯಾಸವನ್ನು ಇವತ್ತಿನ ಯುವ ಪೀಳಿಗೆಗೆ ಅರ್ಥೈಸಬೇಕಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು.

ಬೆಳಗಾವಿಯಲ್ಲಿ ಇದೇ ಜನವರಿ 21 ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು-ಜೈ ಭೀಮ್ – ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, “ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

“ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ” ಎಂದರು.

“ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ ಇಲ್ಲದೆ, ವಿಗ್ರಹ ಮಾಡಿಟ್ಟುಕೊಂಡಿರುವ ಬಿಜೆಪಿಯವರು, ಗಾಂಧಿ ಬಗ್ಗೆ ಗೌರವ ಇಲ್ಲದ ಬಿಜೆಪಿಯವರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೌರವ ಇಲ್ಲದ ಇವರಿಗೆ, ಅಂಬೇಡ್ಕರ್, ನೆಹರೂ ಯಾರ ಬಗ್ಗೆಯೂ ಗೌರವ ಇಲ್ಲದ ಬಿಜೆಪಿಯವರಿಗೆ ದೇಶದ ಸಂವಿಧಾನ ಮತ್ತು ಚರಿತ್ರೆಯ ಬಗ್ಗೆಯೂ ಗೌರವ ಇಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಅಂಬೇಡ್ಕರ್, ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ಸಿನ ಹೋರಾಟದ ಚರಿತ್ರೆಯನ್ನು ನಾವು ಮುಂದಿನ ಪೀಳಿಗೆಗೆ ಅರ್ಥ ಮಾಡಿಸಬೇಕಿದೆ. ನಾವು ಗಾಂಧಿ ವಂಶಸ್ಥರು ಅವರು ಗೋಡ್ಸೆ ವಂಶಸ್ಥರು. ಬಿಜೆಪಿ ಮತ್ತು ಕಾಂಗ್ರೆಸ್ಸಿನ ಈ ಸೈದ್ಧಾಂತಿಕ ವ್ಯತ್ಯಾಸವನ್ನು ಇವತ್ತಿನ ಯುವ ಪೀಳಿಗೆಗೆ ಅರ್ಥೈಸಬೇಕಿದೆ. ಇದಕ್ಕಾಗಿ ಜ 21ರ ಗಾಂಧಿ ಭಾರತ ಸಮಾವೇಷವನ್ನು ಅತ್ಯಂತ ಯಶಸ್ವಿಗೊಳಿಸೋಣ” ಎಂದು ಕರೆ ನೀಡಿದರು.

ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ, ಎಲ್ಲಾ ಪಕ್ಷದವರಿಗೂ ಸಮಾವೇಷಕ್ಕೆ ಸ್ವಾಗತ ಎಂದರು.

ಇದನ್ನೂ ಓದಿ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಮಂಡನೆ – ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...