Homeಕರ್ನಾಟಕಕೃಷಿ ಕಾನೂನಿನ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ: ಬಡಗಲಪುರ ನಾಗೇಂದ್ರ

ಕೃಷಿ ಕಾನೂನಿನ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ: ಬಡಗಲಪುರ ನಾಗೇಂದ್ರ

- Advertisement -
- Advertisement -

ಕೃಷಿ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದ್ದು, ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಒಕ್ಕೂಟ ಸರ್ಕಾರದ ವಿರುದ್ದ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೋಮವಾರ ಹೇಳಿದರು. ಅವರು ‘ಭಾರತ್‌ ಬಂದ್‌’ ಪ್ರಯುಕ್ತ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡುತ್ತಿದ್ದರು.

“ರಾಜ್ಯದಲ್ಲಿ ‘ಭಾರತ್‌ ಬಂದ್’ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರೈತ ಆಂದೋಲನದಲ್ಲಿ 11 ಲಕ್ಷ ಜನರು ಭಾಷೆ, ಧರ್ಮ, ಗಡಿಗಳನ್ನು ಮೀರಿ ಸೇರಿದ್ದರು. ದೇಶದಲ್ಲಿ ಚಳವಳಿಗಳ ಯುಗ ಪ್ರಾರಂಭವಾಗಿದೆ, ಆದರೆ ಇದಕ್ಕೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಅದಕ್ಕಾಗಿ ರೈತರು ಸಮಾಜಿಕ ಜಾಲತಾಣವನ್ನು ಬಳಸಿಕೊಂಡು ದೇಶದ 130 ಕೋಟಿ ಜನರನ್ನು ತಲುಪುತ್ತಿದ್ದೇವೆ” ಎಂದರು.

ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

“ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು 18 ತಿಂಗಳು ಅಮಾನತ್ತಿನಲ್ಲಿ ಇಟ್ಟಿದೆ. ಅಂದರೆ ಒಂದು ರೀತಿಯಲ್ಲಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದೆ. ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ. ನವೆಂಬರ್‌ನಲ್ಲಿ ಇದಕ್ಕಿಂತಲೂ ದೊಡ್ಡ ಹೋರಾಟ ದೆಹಲಿಯಲ್ಲಿ ನಡೆಲಿದೆ. ಮುಂದಿನ ದಿನಗಳಲ್ಲಿ ದೆಹಲಿಯಿಂದ ಬಿಜೆಪಿಯನ್ನು ಓಡಿಸುವಂತಹ ಮತ್ತು ಅಲ್ಲಿನ ಗದ್ದುಗೆಯ ಹತ್ತಿರ ಸುಳಿಯುವಂತಹ ನಿರ್ಣಯವನ್ನು ಕೈಗೊಳ್ಳುತ್ತೇವೆ” ಎಂದು ನಾಗೇಂದ್ರ ಅವರು ಹೇಳಿದರು.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿತ್ತು. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಇದನ್ನೂ ಓದಿ: ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...