Homeಕರ್ನಾಟಕಕೃಷಿ ಕಾನೂನಿನ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ: ಬಡಗಲಪುರ ನಾಗೇಂದ್ರ

ಕೃಷಿ ಕಾನೂನಿನ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ: ಬಡಗಲಪುರ ನಾಗೇಂದ್ರ

- Advertisement -
- Advertisement -

ಕೃಷಿ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದ್ದು, ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಒಕ್ಕೂಟ ಸರ್ಕಾರದ ವಿರುದ್ದ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೋಮವಾರ ಹೇಳಿದರು. ಅವರು ‘ಭಾರತ್‌ ಬಂದ್‌’ ಪ್ರಯುಕ್ತ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡುತ್ತಿದ್ದರು.

“ರಾಜ್ಯದಲ್ಲಿ ‘ಭಾರತ್‌ ಬಂದ್’ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರೈತ ಆಂದೋಲನದಲ್ಲಿ 11 ಲಕ್ಷ ಜನರು ಭಾಷೆ, ಧರ್ಮ, ಗಡಿಗಳನ್ನು ಮೀರಿ ಸೇರಿದ್ದರು. ದೇಶದಲ್ಲಿ ಚಳವಳಿಗಳ ಯುಗ ಪ್ರಾರಂಭವಾಗಿದೆ, ಆದರೆ ಇದಕ್ಕೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಅದಕ್ಕಾಗಿ ರೈತರು ಸಮಾಜಿಕ ಜಾಲತಾಣವನ್ನು ಬಳಸಿಕೊಂಡು ದೇಶದ 130 ಕೋಟಿ ಜನರನ್ನು ತಲುಪುತ್ತಿದ್ದೇವೆ” ಎಂದರು.

ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

“ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು 18 ತಿಂಗಳು ಅಮಾನತ್ತಿನಲ್ಲಿ ಇಟ್ಟಿದೆ. ಅಂದರೆ ಒಂದು ರೀತಿಯಲ್ಲಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದೆ. ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ. ನವೆಂಬರ್‌ನಲ್ಲಿ ಇದಕ್ಕಿಂತಲೂ ದೊಡ್ಡ ಹೋರಾಟ ದೆಹಲಿಯಲ್ಲಿ ನಡೆಲಿದೆ. ಮುಂದಿನ ದಿನಗಳಲ್ಲಿ ದೆಹಲಿಯಿಂದ ಬಿಜೆಪಿಯನ್ನು ಓಡಿಸುವಂತಹ ಮತ್ತು ಅಲ್ಲಿನ ಗದ್ದುಗೆಯ ಹತ್ತಿರ ಸುಳಿಯುವಂತಹ ನಿರ್ಣಯವನ್ನು ಕೈಗೊಳ್ಳುತ್ತೇವೆ” ಎಂದು ನಾಗೇಂದ್ರ ಅವರು ಹೇಳಿದರು.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿತ್ತು. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಇದನ್ನೂ ಓದಿ: ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...