Homeಎಕಾನಮಿಆರ್ಥಿಕ ಕುಸಿತವನ್ನು ಮೋದಿ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಗಂಭೀರ ಸಮಸ್ಯೆಯತ್ತ ನಡೆಯುತ್ತಿದ್ದೇವೆ; ಯೋಗೇಂದ್ರ ಯಾದವ್

ಆರ್ಥಿಕ ಕುಸಿತವನ್ನು ಮೋದಿ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಗಂಭೀರ ಸಮಸ್ಯೆಯತ್ತ ನಡೆಯುತ್ತಿದ್ದೇವೆ; ಯೋಗೇಂದ್ರ ಯಾದವ್

- Advertisement -
- Advertisement -

ನಮ್ಮ ದೇಶ ಆರ್ಥಿಕ ಹಿಂಜರಿತದತ್ತ ಸಾಗುತ್ತಿದೆಯೇ? ಇನ್ನು ಈ ಪ್ರಶ್ನೆಯನ್ನು ಕೇಳದೇ ಇರಲು ಆಗುವುದಿಲ್ಲ. ಒಂದು ಕಡೆ ಇಡೀ ದೇಶವೇ ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯಲ್ಲಿ ಸಿಲುಕಿಕೊಂಡಿದ್ದರೆ ಅದೇ ಸಮಯದಲ್ಲಿ ದೇಶದ ಅರ್ಥವ್ಯವಸ್ಥೆಯು ನಿಧಾನವಾಗಿ ಕುಸಿಯುತ್ತಿದೆ. ಮೊದಲು ಸಮಸ್ಯೆಯಾಗಿ ಕಂಡುಬಂದಿದ್ದು, ಈಗ ಸಂಕಟದ ರೂಪ ಪಡೆದುಕೊಳ್ಳುತ್ತಿದೆ.

ಇತ್ತೀಚಿಗೆ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಆರ್ಥಿಕ ಹಿಂಜರಿತದ ಲಕ್ಷಣಗಳು ಚಿಂತಾಜನಕವಾಗಿವೆ, ಇದಕ್ಕೆ ತುರ್ತಾಗಿ ಏನಾದರೂ ಮಾಡಬೇಕಾದ ಅಗತ್ಯವಿದೆ ಎಂದು ಎಚ್ಚರಿಸಿದರು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಇದೇ ರಘುರಾಮ್ ರಾಜನ್ ಅವರು ವಿಶ್ವದಲ್ಲಿ 2008ರ ಆರ್ಥಿಕ ಹಿಂಜರಿತದ ಸಮಯದಲ್ಲಿ ಮುಂದೆ ಹೀಗಾಗುವುದಿದೆ ಎನ್ನುವ ಭವಿಷ್ಯವಾಣಿ ನುಡಿದಿದ್ದ ಅರ್ಥಶಾಸ್ತ್ರಜ್ಞರಾಗಿದ್ದಾರೆ. ಹಾಗಾಗಿ ಅವರ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಲೇಬೇಕಿದೆ.

ಕಳೆದ ಕೆಲವು ದಿನಗಳಲ್ಲಿ ಅರ್ಥವ್ಯವಸ್ಥೆಯ ಭಿನ್ನಭಿನ್ನ ಕ್ಷೇತ್ರಗಳಿಂದ ಕೆಟ್ಟ ಸುದ್ದಿಗಳು ಬರುತ್ತಿವೆ. ಆಟೋ ಉದ್ಯಮದಲ್ಲಿ ಹಿಂಜರಿತ ಮತ್ತು ಕೆಲಸಗಾರರನ್ನು ಕೆಲಸದಿಂದ ತೆಗೆದುಹಾಕುವ ವಿಷಯ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ. ಪರಿಸ್ಥಿತಿ ಎಷ್ಟು ಹದಗೆಟ್ಟಿದೆಯೆಂದರೆ, ರಾಹುಲ್ ಬಜಾಜ್‍ರಂತಹ ಉದ್ಯಮಿಯೇ ಅರ್ಥವ್ಯವಸ್ಥೆಯಲ್ಲಿ ಬೇಡಿಕೆ ಇಲ್ಲ ಹಾಗೂ ಹೂಡಿಕೆಯೂ ಇಲ್ಲದಿರುವಾಗ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಕೇಳಬೇಕಾಯಿತು. ರೈತರ ಸಂಘಟನೆಗಳು ಹಾಗೂ ಡೇರಿ ಉತ್ಪಾದಕರೂ ಸಹ ಅನೇಕ ದಿನಗಳಿಂದ ತಮ್ಮ ಸಂಕಷ್ಟವನ್ನು ತೋಡಿಕೊಳ್ಳುತ್ತಿದ್ದಾರೆ. ಈಗ ಬಟ್ಟೆ ತಯಾರಕರು ಆ ಕ್ಷೇತ್ರದಲ್ಲಿ ಪರಿಸ್ಥಿತಿ ದಿನೇದಿನೆ ಕೆಡುತ್ತಿದೆ ಎಂದು ನಿರ್ದಿಷ್ಟವಾಗಿ ಜಾಹೀರಾತನ್ನೇ ಪ್ರಕಟಿಸಿದ್ದಾರೆ. ಪ್ರಾಪರ್ಟಿಯ ವ್ಯಾಪಾರ ಹಲವು ವರ್ಷಗಳಿಂದ ನಿಧಾನವಾಗಿದೆ. ನೋಟುರದ್ದತಿಯ ಸಮಯದಿಂದಲೇ ಚಿಲ್ಲರೆ ವ್ಯಾಪಾರಿಗಳು ತಮ್ಮ ವ್ಯಾಪಾರ ಹದಗಟ್ಟಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಆದಾಗ್ಯೂ ಜನರ ಹೇಳಿಕೆಯ ಮೇಲೆ ಭರವಸೆ ಮಾಡುವುದರ ಬದಲಿಗೆ ನಿಜವಾದ ಅಂಕಿಅಂಶಗಳ ಆಧಾರದ ಮೇಲೆಯೇ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳಬೇಕಿದೆ. ಇತ್ತೀಚಿಗೆ ಹಿಂಜರಿತವನ್ನು ಪುಷ್ಟೀಕರಿಸುವಂತಹ ಅನೇಕ ಅಂಕಿಅಂಶಗಳು ಬಂದಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಸರಕಾರ ಅರ್ಥವ್ಯವಸ್ಥೆಯ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತದೆ. ಕಳೆದ 9 ತಿಂಗಳಿಂದ ಈ ಅಂಕಿಅಂಶಗಳ ಪ್ರಕಾರ ನಮ್ಮ ದೇಶದ ಅರ್ಥಿಕ ವೃದ್ಧಿಯ ದರ ಕಡಿಮೆಯಾಗುತ್ತಿದೆ. 9% ರಿಂದ 10% ದರದಲ್ಲಿ ವೃದ್ಧಿಯಾಗುತ್ತಿದ್ದ ನಮ್ಮ ಅರ್ಥವ್ಯವಸ್ಥೆ ಈಗ 5.8% ರ ದರಕ್ಕೆ ಕುಸಿದಿದೆ. ಕಳೆದ 20 ವರ್ಷಗಳಲ್ಲಿ ಸತತ ಮೂರು ತ್ರೈಮಾಸಿಕಗಳಲ್ಲೂ (quarterly) ಅಭಿವೃದ್ಧಿ ದರದಲ್ಲಿ ಕುಸಿತ ಕಂಡಿದ್ದು ಕೇವಲ ಮೂರು ಬಾರಿ. ನಿಸ್ಸಂಶಯವಾಗಿಯೂ ಆರ್ಥಿಕ ವೃದ್ಧಿಯ ವಾರ್ಷಿಕ ದರದಲ್ಲಿ ಇಳಿತ ಕಂಡುಬಂದಿದೆಯೇ ಹೊರತು ವೃದ್ಧಿ ನಿಂತಿಲ್ಲ, ಅಥವಾ ಅರ್ಥವ್ಯವಸ್ಥೆಯ ಸಂಕುಚಿತ ಇನ್ನೂ ಶುರು ಆಗಿಲ್ಲ. ಆದರೆ ಭಾರತೀಯ ಅರ್ಥವ್ಯವಸ್ಥೆಗೆ ವೃದ್ಧಿಯ ದರ ಹೆಚ್ಚುತ್ತ ಇರುವುದು ಅತ್ಯಂತ ಅವಶ್ಯಕವಾಗಿದೆ ಹಾಗಾಗಿ ಈ ಸುದ್ದಿಗಳು ಚಿಂತಾಜನಕವಾಗಿವೆ.

ಒಂದು ವೇಳೆ ಕಳೆದ ವರ್ಷ 2018ರಲ್ಲಿ ಜನೆವರಿಯಿಂದ ಮಾರ್ಚ್‍ತನಕದ ತ್ರೈಮಾಸಿಕ ಹಾಗೂ ಈ ವರ್ಷದ ಇವೇ ಮೂರು ತಿಂಗಳ ಹೋಲಿಕೆ ಮಾಡಿದರೆ ಸ್ಪಷ್ಟವಾಗುವುದೇನೆಂದರೆ ಸುಮಾರಾಗಿ ಎಲ್ಲಾ ಮಹತ್ವಪೂರ್ಣ ಕ್ಷೇತ್ರಗಳ ಅರ್ಥವ್ಯವಸ್ಥೆಯಲ್ಲಿ ಕುಸಿತ ಕಂಡುಬಂದಿದೆ. ಕಾರುಗಳು ಮಾರಾಟದಲ್ಲಿ ಕಳೆದ ಬಾರಿ 18% ವೃದ್ಧಿ ಆಗಿತ್ತು, ಈ ಬಾರಿ 23% ಕುಸಿತ ದಾಖಲೆಯಾಗಿದೆ. ಸ್ಕೂಟರ್ ಮತ್ತು ಇತರ ದ್ವೀಚಕ್ರ ವಾಹನಗಳಲ್ಲಿ ಕಳೆದ ಬಾರಿ 16% ಹೆಚ್ಚಳವಿತ್ತು ಆದರೆ ಈ ಬಾರಿ 12% ಕುಸಿತ ಕಾಣಿಸಿಕೊಂಡಿದೆ. ದೈನಂದಿಕ ಬಳಕೆಯ ಉಪಭೋಗದ ವಸ್ತುಗಳ ಮಾರಾಟದಲ್ಲಿ ಕಳೆದ ಬಾರಿಯ 12% ಹೆಚ್ಚಳದ ಹೋಲಿಕೆಯಲ್ಲಿ ಈ ಬಾರಿ ಕೇವಲ 5% ಹೆಚ್ಚಳವಾಗಿದೆ.

ಹೂಡಿಕೆಯಲ್ಲೂ ಇದೇ ಪ್ರವೃತ್ತಿಯನ್ನು ಕಾಣಬಹುದಾಗಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಹೊಸ ಹೂಡಿಕೆಯ ಪ್ರೊಜೆಕ್ಟ್ ಗಳ ಮೊತ್ತದಲ್ಲಿ 13% ಹೆಚ್ಚಳವಾಗಿತ್ತು, ಆದರೆ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 80% ಕಡಿಮೆ ಆಗಿದೆ. ಆರ್ಥಿಕ ಹಿಂಜರಿತವನ್ನು ಎದರುರಿಸುವುದರಲ್ಲಿ ಸರಕಾರಿ ವೆಚ್ಚದ ಮಹತ್ವಪೂರ್ಣ ಪಾತ್ರ ಇರುತ್ತದೆ. ಆದರೆ ಅದರಲ್ಲೂ ಕುಸಿತವೇ ಕಂಡುಬಂದಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಸರಕಾರದ ಟ್ಯಾಕ್ಸ್ ಆದಾಯ 22% ಹೆಚ್ಚಾಗಿತ್ತು ಆದರೆ ಈ ವರ್ಷ ಕೇವಲ 1.5% ಹೆಚ್ಚಳ ಕಂಡಿದೆ. ರಫ್ತು ಮತ್ತು ಆಮದಿನ ಅಂತರ ಕಳೆದ ಬಾರಿ 15% ಹೆಚ್ಚಾಗಿತ್ತು ಆದರೆ ಈ ಬಾರಿ 1% ಕಡಿಮೆ ಆಗಿದೆ. ಈ ಎಲ್ಲ ಅಂಕಿಅಂಶಗಳು ಹೇಳುವುದೇನೆಂದರೆ ಆರ್ಥಿಕ ಹಿಂಜರಿತದ ಸತ್ಯವನ್ನು ಅಲ್ಲಗೆಳೆಯಲಾಗುವುದಿಲ್ಲ. ಒಂದು ವೇಳೆ ಇದೇ ಪ್ರವೃತ್ತಿ ಇನ್ನೆರಡು ತ್ರೈಮಾಸಿಕಳವರೆಗೆ ಮುಂದುವರೆದರೆ ಕಳೆದ ಮೂರು ದಶಕಗಳ ಅತ್ಯಂತ ಗಂಭೀರ ಸ್ಥಿತಿ ಎದುರಿಸಬೇಕಾಗುವುದು.

ಆರ್ಥಿಕ ಹಿಂಜರಿತವನ್ನು ನಿಭಾಯಿಸಲು ಸಾಧ್ಯವಿದೆ ಆದರೆ ಹಾಗೆ ಮಾಡಲು ಎಲ್ಲಕ್ಕಿಂತ ಮುಂಚೆ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕಾಗುತ್ತದೆ. ದುರದೃಷ್ಟವಷಾತ್, ಸರಕಾರವು ಇಲ್ಲಿಯತನಕ ಈ ಸತ್ಯವನ್ನು ನೋಡಲು ನಿರಾಕರಿಸುತ್ತಿದೆ. ಜ್ವರದ ಚಿಕಿತ್ಸೆ ಮಾಡುವ ಬದಲಿಗೆ ಥರ್ಮಾಮೀಟರ್ ಅನ್ನು ಒಡೆದುಹಾಕುವಲ್ಲಿ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಭಾರತದ ಅಂಕಿಅಂಶಗಳ ವಿಭಾಗ ಸಾಧನೆ ಎಷ್ಟಿದೆಯೆಂದರೆ, ವಿಶ್ವಾದ್ಯಂತ ಅದರ ಅಂಕಿಅಂಶಗಳನ್ನು ವಿಶ್ವಾಸಾರ್ಹ ಎಂದು ಪರಿಗಣಿಸಲಾಗುತ್ತದೆ. ಸ್ವತಃ ಮೋದಿ ಸರಕಾರದ ಮುಖ್ಯ ಆರ್ಥಿಕ ಸಲಹಾಕಾರರಾಗಿದ್ದ ಅರವಿಂದ್ ಸುಬ್ರಹ್ಮಣ್ಯಮ್ ಅವರು ಹೇಳುವುದೇನೆಂದರೆ ಭಾರತದ ಜಿಡಿಪಿ ಕನಿಷ್ಠಪಕ್ಷ ಶೇಕಡಾ ಎರಡರಿಂದ ಎರಡೂವರೆವಷ್ಟು ಹೆಚ್ಚಿಸಿ ತೋರಿಸಲಾಗುತ್ತಿದೆ ಎಂದು.

ಇಂತಹದರಲ್ಲಿ ಇನ್ನಷ್ಟು ಚಿಂತೆಯ ವಿಷಯವೇನೆಂದರೆ, ನಿಧಾನವಾಗಿ ಎಲ್ಲಾ ಒಳ್ಳೆಯ ಅರ್ಥಶಾಸ್ತ್ರಜ್ಞರು ಈ ಸರಕಾರವನ್ನು ಬಿಟ್ಟುಹೋಗುತ್ತಿದ್ದಾರೆ. ಕಳೆದ ಕಾರ್ಯಾವಧಿಯಲ್ಲಿ ರಿಸರ್ವ್ ಬ್ಯಾಂಕಿನ ಗವರ್ನರ್ ರಘುರಾಮ್ ರಾಜನ್ ಬಿಟ್ಟುಹೋದರು. ನಂತರ ಉರ್ಜಿತ್ ಪಟೇಲ್ ನಡುರಸ್ತೆಯಲ್ಲೇ ಬಿಟ್ಟುಹೋದರು. ಅರವಿಂದ ಸುಬ್ರಹ್ಮಣ್ಯಮ್ ಅವರೂ ಕೂಡ ತಮ್ಮ ಕಾರ್ಯಾವಧಿ ಪೂರ್ಣಗೊಳಿಸುವ ಮುನ್ನವೇ ಸರಕಾರವನ್ನು ಬಿಟ್ಟುಹೋದರು. ಹಾಗೂ ಈಗ ಆರ್ಥಿಕ ಸಲಹಾಕಾರ ಸಮಿತಿಯ ಅಧ್ಯಕ್ಷ ವಿವೇಕ್ ದೇಬರಾಯ್ ಕೂಡ ದೂರ ಹೋಗುತ್ತಿದ್ದಾರೆ. ನಿಸ್ಸಂಶಯವಾಗಿಯೂ ಪ್ರಧಾನಿ ನರೇಂದ್ರ ಮೋದಿ ರಾಜಕಾರಣದ ನಿಪುಣ ಆಟಗಾರರಾಗಿದ್ದಾರೆ ಹಾಗೂ ತಮಗೆ ಬೇಕಾದ ಫಲಿತಾಂಶಗಳನ್ನು ಗಿಟ್ಟಿಸಿಕೊಳ್ಳುತ್ತಾರೆ. ಆದರೆ ಅರ್ಥವ್ಯವಸ್ಥೆ ಒಂದು ಬೇರೆಯದೇ ವಿಷಯವಾಗಿದೆ. ನೋಟುರದ್ದತಿಯ ಪ್ರಕರಣವು ವಿವೇಚನೆಯುಳ್ಳ ಅರ್ಥಶಾಸ್ತ್ರಜ್ಞರ ಅಭಿಪ್ರಾಯವನ್ನು ಪಡೆಯದೇ ಕೆಲಸ ಮಾಡುವುದರಿಂದ ಎಂತಹ ದುಃಸ್ಥಿತಿಯನ್ನು ಎದುರಿಸಬೇಕಾಯಿತು ಎನ್ನುವುದನ್ನು ತೋರಿಸಿಕೊಟ್ಟಿತು. ಒಬ್ಬ ನಾಯಕದ ಅಜ್ಞಾನ ಮತ್ತು ಅಹಂಕಾರದ ಬೆಲೆಯನ್ನು ಸಂಪೂರ್ಣ ದೇಶ ಭರಿಸಬೇಕಾಗುತ್ತದೆ.

ರೋಗಿಯ ದೇಹ ಜ್ವರದಿಂದ ತಪಿಸುತ್ತಿದೆ. ಕೆಲಸ ಮಾಡಬೇಕಿರುವವರು ಬೇರೆಡೆ ಮುಖ ತಿರುಗಿಸಿ ಕುಳಿತಿದ್ದಾರೆ. ಥರ್ಮಾಮೀಟರ್ ಅನ್ನು ಒಡೆದುಹಾಕಲಾಗಿದೆ. ಹಾಗೂ ಈಗ ಡಾಕ್ಟರ್ ಗಳನ್ನೂ ಒದ್ದೋಡಿಸಲಾಗಿದೆ. ಇದರ ಪರಣಾಮ ಏನಾಗುವುದು ಎನ್ನುವುದನ್ನು ನೀವೇ ಯೋಚಿಸಿನೋಡಿ.

ಅನುವಾದ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...