Homeಎಕಾನಮಿಆರ್ಥಿಕ ಕುಸಿತವನ್ನು ಮೋದಿ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಗಂಭೀರ ಸಮಸ್ಯೆಯತ್ತ ನಡೆಯುತ್ತಿದ್ದೇವೆ; ಯೋಗೇಂದ್ರ ಯಾದವ್

ಆರ್ಥಿಕ ಕುಸಿತವನ್ನು ಮೋದಿ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಗಂಭೀರ ಸಮಸ್ಯೆಯತ್ತ ನಡೆಯುತ್ತಿದ್ದೇವೆ; ಯೋಗೇಂದ್ರ ಯಾದವ್

- Advertisement -
- Advertisement -

ನಮ್ಮ ದೇಶ ಆರ್ಥಿಕ ಹಿಂಜರಿತದತ್ತ ಸಾಗುತ್ತಿದೆಯೇ? ಇನ್ನು ಈ ಪ್ರಶ್ನೆಯನ್ನು ಕೇಳದೇ ಇರಲು ಆಗುವುದಿಲ್ಲ. ಒಂದು ಕಡೆ ಇಡೀ ದೇಶವೇ ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯಲ್ಲಿ ಸಿಲುಕಿಕೊಂಡಿದ್ದರೆ ಅದೇ ಸಮಯದಲ್ಲಿ ದೇಶದ ಅರ್ಥವ್ಯವಸ್ಥೆಯು ನಿಧಾನವಾಗಿ ಕುಸಿಯುತ್ತಿದೆ. ಮೊದಲು ಸಮಸ್ಯೆಯಾಗಿ ಕಂಡುಬಂದಿದ್ದು, ಈಗ ಸಂಕಟದ ರೂಪ ಪಡೆದುಕೊಳ್ಳುತ್ತಿದೆ.

ಇತ್ತೀಚಿಗೆ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಆರ್ಥಿಕ ಹಿಂಜರಿತದ ಲಕ್ಷಣಗಳು ಚಿಂತಾಜನಕವಾಗಿವೆ, ಇದಕ್ಕೆ ತುರ್ತಾಗಿ ಏನಾದರೂ ಮಾಡಬೇಕಾದ ಅಗತ್ಯವಿದೆ ಎಂದು ಎಚ್ಚರಿಸಿದರು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಇದೇ ರಘುರಾಮ್ ರಾಜನ್ ಅವರು ವಿಶ್ವದಲ್ಲಿ 2008ರ ಆರ್ಥಿಕ ಹಿಂಜರಿತದ ಸಮಯದಲ್ಲಿ ಮುಂದೆ ಹೀಗಾಗುವುದಿದೆ ಎನ್ನುವ ಭವಿಷ್ಯವಾಣಿ ನುಡಿದಿದ್ದ ಅರ್ಥಶಾಸ್ತ್ರಜ್ಞರಾಗಿದ್ದಾರೆ. ಹಾಗಾಗಿ ಅವರ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಲೇಬೇಕಿದೆ.

ಕಳೆದ ಕೆಲವು ದಿನಗಳಲ್ಲಿ ಅರ್ಥವ್ಯವಸ್ಥೆಯ ಭಿನ್ನಭಿನ್ನ ಕ್ಷೇತ್ರಗಳಿಂದ ಕೆಟ್ಟ ಸುದ್ದಿಗಳು ಬರುತ್ತಿವೆ. ಆಟೋ ಉದ್ಯಮದಲ್ಲಿ ಹಿಂಜರಿತ ಮತ್ತು ಕೆಲಸಗಾರರನ್ನು ಕೆಲಸದಿಂದ ತೆಗೆದುಹಾಕುವ ವಿಷಯ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ. ಪರಿಸ್ಥಿತಿ ಎಷ್ಟು ಹದಗೆಟ್ಟಿದೆಯೆಂದರೆ, ರಾಹುಲ್ ಬಜಾಜ್‍ರಂತಹ ಉದ್ಯಮಿಯೇ ಅರ್ಥವ್ಯವಸ್ಥೆಯಲ್ಲಿ ಬೇಡಿಕೆ ಇಲ್ಲ ಹಾಗೂ ಹೂಡಿಕೆಯೂ ಇಲ್ಲದಿರುವಾಗ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಕೇಳಬೇಕಾಯಿತು. ರೈತರ ಸಂಘಟನೆಗಳು ಹಾಗೂ ಡೇರಿ ಉತ್ಪಾದಕರೂ ಸಹ ಅನೇಕ ದಿನಗಳಿಂದ ತಮ್ಮ ಸಂಕಷ್ಟವನ್ನು ತೋಡಿಕೊಳ್ಳುತ್ತಿದ್ದಾರೆ. ಈಗ ಬಟ್ಟೆ ತಯಾರಕರು ಆ ಕ್ಷೇತ್ರದಲ್ಲಿ ಪರಿಸ್ಥಿತಿ ದಿನೇದಿನೆ ಕೆಡುತ್ತಿದೆ ಎಂದು ನಿರ್ದಿಷ್ಟವಾಗಿ ಜಾಹೀರಾತನ್ನೇ ಪ್ರಕಟಿಸಿದ್ದಾರೆ. ಪ್ರಾಪರ್ಟಿಯ ವ್ಯಾಪಾರ ಹಲವು ವರ್ಷಗಳಿಂದ ನಿಧಾನವಾಗಿದೆ. ನೋಟುರದ್ದತಿಯ ಸಮಯದಿಂದಲೇ ಚಿಲ್ಲರೆ ವ್ಯಾಪಾರಿಗಳು ತಮ್ಮ ವ್ಯಾಪಾರ ಹದಗಟ್ಟಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಆದಾಗ್ಯೂ ಜನರ ಹೇಳಿಕೆಯ ಮೇಲೆ ಭರವಸೆ ಮಾಡುವುದರ ಬದಲಿಗೆ ನಿಜವಾದ ಅಂಕಿಅಂಶಗಳ ಆಧಾರದ ಮೇಲೆಯೇ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳಬೇಕಿದೆ. ಇತ್ತೀಚಿಗೆ ಹಿಂಜರಿತವನ್ನು ಪುಷ್ಟೀಕರಿಸುವಂತಹ ಅನೇಕ ಅಂಕಿಅಂಶಗಳು ಬಂದಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಸರಕಾರ ಅರ್ಥವ್ಯವಸ್ಥೆಯ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತದೆ. ಕಳೆದ 9 ತಿಂಗಳಿಂದ ಈ ಅಂಕಿಅಂಶಗಳ ಪ್ರಕಾರ ನಮ್ಮ ದೇಶದ ಅರ್ಥಿಕ ವೃದ್ಧಿಯ ದರ ಕಡಿಮೆಯಾಗುತ್ತಿದೆ. 9% ರಿಂದ 10% ದರದಲ್ಲಿ ವೃದ್ಧಿಯಾಗುತ್ತಿದ್ದ ನಮ್ಮ ಅರ್ಥವ್ಯವಸ್ಥೆ ಈಗ 5.8% ರ ದರಕ್ಕೆ ಕುಸಿದಿದೆ. ಕಳೆದ 20 ವರ್ಷಗಳಲ್ಲಿ ಸತತ ಮೂರು ತ್ರೈಮಾಸಿಕಗಳಲ್ಲೂ (quarterly) ಅಭಿವೃದ್ಧಿ ದರದಲ್ಲಿ ಕುಸಿತ ಕಂಡಿದ್ದು ಕೇವಲ ಮೂರು ಬಾರಿ. ನಿಸ್ಸಂಶಯವಾಗಿಯೂ ಆರ್ಥಿಕ ವೃದ್ಧಿಯ ವಾರ್ಷಿಕ ದರದಲ್ಲಿ ಇಳಿತ ಕಂಡುಬಂದಿದೆಯೇ ಹೊರತು ವೃದ್ಧಿ ನಿಂತಿಲ್ಲ, ಅಥವಾ ಅರ್ಥವ್ಯವಸ್ಥೆಯ ಸಂಕುಚಿತ ಇನ್ನೂ ಶುರು ಆಗಿಲ್ಲ. ಆದರೆ ಭಾರತೀಯ ಅರ್ಥವ್ಯವಸ್ಥೆಗೆ ವೃದ್ಧಿಯ ದರ ಹೆಚ್ಚುತ್ತ ಇರುವುದು ಅತ್ಯಂತ ಅವಶ್ಯಕವಾಗಿದೆ ಹಾಗಾಗಿ ಈ ಸುದ್ದಿಗಳು ಚಿಂತಾಜನಕವಾಗಿವೆ.

ಒಂದು ವೇಳೆ ಕಳೆದ ವರ್ಷ 2018ರಲ್ಲಿ ಜನೆವರಿಯಿಂದ ಮಾರ್ಚ್‍ತನಕದ ತ್ರೈಮಾಸಿಕ ಹಾಗೂ ಈ ವರ್ಷದ ಇವೇ ಮೂರು ತಿಂಗಳ ಹೋಲಿಕೆ ಮಾಡಿದರೆ ಸ್ಪಷ್ಟವಾಗುವುದೇನೆಂದರೆ ಸುಮಾರಾಗಿ ಎಲ್ಲಾ ಮಹತ್ವಪೂರ್ಣ ಕ್ಷೇತ್ರಗಳ ಅರ್ಥವ್ಯವಸ್ಥೆಯಲ್ಲಿ ಕುಸಿತ ಕಂಡುಬಂದಿದೆ. ಕಾರುಗಳು ಮಾರಾಟದಲ್ಲಿ ಕಳೆದ ಬಾರಿ 18% ವೃದ್ಧಿ ಆಗಿತ್ತು, ಈ ಬಾರಿ 23% ಕುಸಿತ ದಾಖಲೆಯಾಗಿದೆ. ಸ್ಕೂಟರ್ ಮತ್ತು ಇತರ ದ್ವೀಚಕ್ರ ವಾಹನಗಳಲ್ಲಿ ಕಳೆದ ಬಾರಿ 16% ಹೆಚ್ಚಳವಿತ್ತು ಆದರೆ ಈ ಬಾರಿ 12% ಕುಸಿತ ಕಾಣಿಸಿಕೊಂಡಿದೆ. ದೈನಂದಿಕ ಬಳಕೆಯ ಉಪಭೋಗದ ವಸ್ತುಗಳ ಮಾರಾಟದಲ್ಲಿ ಕಳೆದ ಬಾರಿಯ 12% ಹೆಚ್ಚಳದ ಹೋಲಿಕೆಯಲ್ಲಿ ಈ ಬಾರಿ ಕೇವಲ 5% ಹೆಚ್ಚಳವಾಗಿದೆ.

ಹೂಡಿಕೆಯಲ್ಲೂ ಇದೇ ಪ್ರವೃತ್ತಿಯನ್ನು ಕಾಣಬಹುದಾಗಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಹೊಸ ಹೂಡಿಕೆಯ ಪ್ರೊಜೆಕ್ಟ್ ಗಳ ಮೊತ್ತದಲ್ಲಿ 13% ಹೆಚ್ಚಳವಾಗಿತ್ತು, ಆದರೆ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 80% ಕಡಿಮೆ ಆಗಿದೆ. ಆರ್ಥಿಕ ಹಿಂಜರಿತವನ್ನು ಎದರುರಿಸುವುದರಲ್ಲಿ ಸರಕಾರಿ ವೆಚ್ಚದ ಮಹತ್ವಪೂರ್ಣ ಪಾತ್ರ ಇರುತ್ತದೆ. ಆದರೆ ಅದರಲ್ಲೂ ಕುಸಿತವೇ ಕಂಡುಬಂದಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಸರಕಾರದ ಟ್ಯಾಕ್ಸ್ ಆದಾಯ 22% ಹೆಚ್ಚಾಗಿತ್ತು ಆದರೆ ಈ ವರ್ಷ ಕೇವಲ 1.5% ಹೆಚ್ಚಳ ಕಂಡಿದೆ. ರಫ್ತು ಮತ್ತು ಆಮದಿನ ಅಂತರ ಕಳೆದ ಬಾರಿ 15% ಹೆಚ್ಚಾಗಿತ್ತು ಆದರೆ ಈ ಬಾರಿ 1% ಕಡಿಮೆ ಆಗಿದೆ. ಈ ಎಲ್ಲ ಅಂಕಿಅಂಶಗಳು ಹೇಳುವುದೇನೆಂದರೆ ಆರ್ಥಿಕ ಹಿಂಜರಿತದ ಸತ್ಯವನ್ನು ಅಲ್ಲಗೆಳೆಯಲಾಗುವುದಿಲ್ಲ. ಒಂದು ವೇಳೆ ಇದೇ ಪ್ರವೃತ್ತಿ ಇನ್ನೆರಡು ತ್ರೈಮಾಸಿಕಳವರೆಗೆ ಮುಂದುವರೆದರೆ ಕಳೆದ ಮೂರು ದಶಕಗಳ ಅತ್ಯಂತ ಗಂಭೀರ ಸ್ಥಿತಿ ಎದುರಿಸಬೇಕಾಗುವುದು.

ಆರ್ಥಿಕ ಹಿಂಜರಿತವನ್ನು ನಿಭಾಯಿಸಲು ಸಾಧ್ಯವಿದೆ ಆದರೆ ಹಾಗೆ ಮಾಡಲು ಎಲ್ಲಕ್ಕಿಂತ ಮುಂಚೆ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕಾಗುತ್ತದೆ. ದುರದೃಷ್ಟವಷಾತ್, ಸರಕಾರವು ಇಲ್ಲಿಯತನಕ ಈ ಸತ್ಯವನ್ನು ನೋಡಲು ನಿರಾಕರಿಸುತ್ತಿದೆ. ಜ್ವರದ ಚಿಕಿತ್ಸೆ ಮಾಡುವ ಬದಲಿಗೆ ಥರ್ಮಾಮೀಟರ್ ಅನ್ನು ಒಡೆದುಹಾಕುವಲ್ಲಿ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಭಾರತದ ಅಂಕಿಅಂಶಗಳ ವಿಭಾಗ ಸಾಧನೆ ಎಷ್ಟಿದೆಯೆಂದರೆ, ವಿಶ್ವಾದ್ಯಂತ ಅದರ ಅಂಕಿಅಂಶಗಳನ್ನು ವಿಶ್ವಾಸಾರ್ಹ ಎಂದು ಪರಿಗಣಿಸಲಾಗುತ್ತದೆ. ಸ್ವತಃ ಮೋದಿ ಸರಕಾರದ ಮುಖ್ಯ ಆರ್ಥಿಕ ಸಲಹಾಕಾರರಾಗಿದ್ದ ಅರವಿಂದ್ ಸುಬ್ರಹ್ಮಣ್ಯಮ್ ಅವರು ಹೇಳುವುದೇನೆಂದರೆ ಭಾರತದ ಜಿಡಿಪಿ ಕನಿಷ್ಠಪಕ್ಷ ಶೇಕಡಾ ಎರಡರಿಂದ ಎರಡೂವರೆವಷ್ಟು ಹೆಚ್ಚಿಸಿ ತೋರಿಸಲಾಗುತ್ತಿದೆ ಎಂದು.

ಇಂತಹದರಲ್ಲಿ ಇನ್ನಷ್ಟು ಚಿಂತೆಯ ವಿಷಯವೇನೆಂದರೆ, ನಿಧಾನವಾಗಿ ಎಲ್ಲಾ ಒಳ್ಳೆಯ ಅರ್ಥಶಾಸ್ತ್ರಜ್ಞರು ಈ ಸರಕಾರವನ್ನು ಬಿಟ್ಟುಹೋಗುತ್ತಿದ್ದಾರೆ. ಕಳೆದ ಕಾರ್ಯಾವಧಿಯಲ್ಲಿ ರಿಸರ್ವ್ ಬ್ಯಾಂಕಿನ ಗವರ್ನರ್ ರಘುರಾಮ್ ರಾಜನ್ ಬಿಟ್ಟುಹೋದರು. ನಂತರ ಉರ್ಜಿತ್ ಪಟೇಲ್ ನಡುರಸ್ತೆಯಲ್ಲೇ ಬಿಟ್ಟುಹೋದರು. ಅರವಿಂದ ಸುಬ್ರಹ್ಮಣ್ಯಮ್ ಅವರೂ ಕೂಡ ತಮ್ಮ ಕಾರ್ಯಾವಧಿ ಪೂರ್ಣಗೊಳಿಸುವ ಮುನ್ನವೇ ಸರಕಾರವನ್ನು ಬಿಟ್ಟುಹೋದರು. ಹಾಗೂ ಈಗ ಆರ್ಥಿಕ ಸಲಹಾಕಾರ ಸಮಿತಿಯ ಅಧ್ಯಕ್ಷ ವಿವೇಕ್ ದೇಬರಾಯ್ ಕೂಡ ದೂರ ಹೋಗುತ್ತಿದ್ದಾರೆ. ನಿಸ್ಸಂಶಯವಾಗಿಯೂ ಪ್ರಧಾನಿ ನರೇಂದ್ರ ಮೋದಿ ರಾಜಕಾರಣದ ನಿಪುಣ ಆಟಗಾರರಾಗಿದ್ದಾರೆ ಹಾಗೂ ತಮಗೆ ಬೇಕಾದ ಫಲಿತಾಂಶಗಳನ್ನು ಗಿಟ್ಟಿಸಿಕೊಳ್ಳುತ್ತಾರೆ. ಆದರೆ ಅರ್ಥವ್ಯವಸ್ಥೆ ಒಂದು ಬೇರೆಯದೇ ವಿಷಯವಾಗಿದೆ. ನೋಟುರದ್ದತಿಯ ಪ್ರಕರಣವು ವಿವೇಚನೆಯುಳ್ಳ ಅರ್ಥಶಾಸ್ತ್ರಜ್ಞರ ಅಭಿಪ್ರಾಯವನ್ನು ಪಡೆಯದೇ ಕೆಲಸ ಮಾಡುವುದರಿಂದ ಎಂತಹ ದುಃಸ್ಥಿತಿಯನ್ನು ಎದುರಿಸಬೇಕಾಯಿತು ಎನ್ನುವುದನ್ನು ತೋರಿಸಿಕೊಟ್ಟಿತು. ಒಬ್ಬ ನಾಯಕದ ಅಜ್ಞಾನ ಮತ್ತು ಅಹಂಕಾರದ ಬೆಲೆಯನ್ನು ಸಂಪೂರ್ಣ ದೇಶ ಭರಿಸಬೇಕಾಗುತ್ತದೆ.

ರೋಗಿಯ ದೇಹ ಜ್ವರದಿಂದ ತಪಿಸುತ್ತಿದೆ. ಕೆಲಸ ಮಾಡಬೇಕಿರುವವರು ಬೇರೆಡೆ ಮುಖ ತಿರುಗಿಸಿ ಕುಳಿತಿದ್ದಾರೆ. ಥರ್ಮಾಮೀಟರ್ ಅನ್ನು ಒಡೆದುಹಾಕಲಾಗಿದೆ. ಹಾಗೂ ಈಗ ಡಾಕ್ಟರ್ ಗಳನ್ನೂ ಒದ್ದೋಡಿಸಲಾಗಿದೆ. ಇದರ ಪರಣಾಮ ಏನಾಗುವುದು ಎನ್ನುವುದನ್ನು ನೀವೇ ಯೋಚಿಸಿನೋಡಿ.

ಅನುವಾದ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...