Homeಎಕಾನಮಿಆರ್ಥಿಕ ಕುಸಿತವನ್ನು ಮೋದಿ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಗಂಭೀರ ಸಮಸ್ಯೆಯತ್ತ ನಡೆಯುತ್ತಿದ್ದೇವೆ; ಯೋಗೇಂದ್ರ ಯಾದವ್

ಆರ್ಥಿಕ ಕುಸಿತವನ್ನು ಮೋದಿ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಗಂಭೀರ ಸಮಸ್ಯೆಯತ್ತ ನಡೆಯುತ್ತಿದ್ದೇವೆ; ಯೋಗೇಂದ್ರ ಯಾದವ್

- Advertisement -
- Advertisement -

ನಮ್ಮ ದೇಶ ಆರ್ಥಿಕ ಹಿಂಜರಿತದತ್ತ ಸಾಗುತ್ತಿದೆಯೇ? ಇನ್ನು ಈ ಪ್ರಶ್ನೆಯನ್ನು ಕೇಳದೇ ಇರಲು ಆಗುವುದಿಲ್ಲ. ಒಂದು ಕಡೆ ಇಡೀ ದೇಶವೇ ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯಲ್ಲಿ ಸಿಲುಕಿಕೊಂಡಿದ್ದರೆ ಅದೇ ಸಮಯದಲ್ಲಿ ದೇಶದ ಅರ್ಥವ್ಯವಸ್ಥೆಯು ನಿಧಾನವಾಗಿ ಕುಸಿಯುತ್ತಿದೆ. ಮೊದಲು ಸಮಸ್ಯೆಯಾಗಿ ಕಂಡುಬಂದಿದ್ದು, ಈಗ ಸಂಕಟದ ರೂಪ ಪಡೆದುಕೊಳ್ಳುತ್ತಿದೆ.

ಇತ್ತೀಚಿಗೆ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಆರ್ಥಿಕ ಹಿಂಜರಿತದ ಲಕ್ಷಣಗಳು ಚಿಂತಾಜನಕವಾಗಿವೆ, ಇದಕ್ಕೆ ತುರ್ತಾಗಿ ಏನಾದರೂ ಮಾಡಬೇಕಾದ ಅಗತ್ಯವಿದೆ ಎಂದು ಎಚ್ಚರಿಸಿದರು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಇದೇ ರಘುರಾಮ್ ರಾಜನ್ ಅವರು ವಿಶ್ವದಲ್ಲಿ 2008ರ ಆರ್ಥಿಕ ಹಿಂಜರಿತದ ಸಮಯದಲ್ಲಿ ಮುಂದೆ ಹೀಗಾಗುವುದಿದೆ ಎನ್ನುವ ಭವಿಷ್ಯವಾಣಿ ನುಡಿದಿದ್ದ ಅರ್ಥಶಾಸ್ತ್ರಜ್ಞರಾಗಿದ್ದಾರೆ. ಹಾಗಾಗಿ ಅವರ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಲೇಬೇಕಿದೆ.

ಕಳೆದ ಕೆಲವು ದಿನಗಳಲ್ಲಿ ಅರ್ಥವ್ಯವಸ್ಥೆಯ ಭಿನ್ನಭಿನ್ನ ಕ್ಷೇತ್ರಗಳಿಂದ ಕೆಟ್ಟ ಸುದ್ದಿಗಳು ಬರುತ್ತಿವೆ. ಆಟೋ ಉದ್ಯಮದಲ್ಲಿ ಹಿಂಜರಿತ ಮತ್ತು ಕೆಲಸಗಾರರನ್ನು ಕೆಲಸದಿಂದ ತೆಗೆದುಹಾಕುವ ವಿಷಯ ಈಗ ಸಾಮಾನ್ಯ ವಿಷಯವಾಗಿಬಿಟ್ಟಿದೆ. ಪರಿಸ್ಥಿತಿ ಎಷ್ಟು ಹದಗೆಟ್ಟಿದೆಯೆಂದರೆ, ರಾಹುಲ್ ಬಜಾಜ್‍ರಂತಹ ಉದ್ಯಮಿಯೇ ಅರ್ಥವ್ಯವಸ್ಥೆಯಲ್ಲಿ ಬೇಡಿಕೆ ಇಲ್ಲ ಹಾಗೂ ಹೂಡಿಕೆಯೂ ಇಲ್ಲದಿರುವಾಗ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಕೇಳಬೇಕಾಯಿತು. ರೈತರ ಸಂಘಟನೆಗಳು ಹಾಗೂ ಡೇರಿ ಉತ್ಪಾದಕರೂ ಸಹ ಅನೇಕ ದಿನಗಳಿಂದ ತಮ್ಮ ಸಂಕಷ್ಟವನ್ನು ತೋಡಿಕೊಳ್ಳುತ್ತಿದ್ದಾರೆ. ಈಗ ಬಟ್ಟೆ ತಯಾರಕರು ಆ ಕ್ಷೇತ್ರದಲ್ಲಿ ಪರಿಸ್ಥಿತಿ ದಿನೇದಿನೆ ಕೆಡುತ್ತಿದೆ ಎಂದು ನಿರ್ದಿಷ್ಟವಾಗಿ ಜಾಹೀರಾತನ್ನೇ ಪ್ರಕಟಿಸಿದ್ದಾರೆ. ಪ್ರಾಪರ್ಟಿಯ ವ್ಯಾಪಾರ ಹಲವು ವರ್ಷಗಳಿಂದ ನಿಧಾನವಾಗಿದೆ. ನೋಟುರದ್ದತಿಯ ಸಮಯದಿಂದಲೇ ಚಿಲ್ಲರೆ ವ್ಯಾಪಾರಿಗಳು ತಮ್ಮ ವ್ಯಾಪಾರ ಹದಗಟ್ಟಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಆದಾಗ್ಯೂ ಜನರ ಹೇಳಿಕೆಯ ಮೇಲೆ ಭರವಸೆ ಮಾಡುವುದರ ಬದಲಿಗೆ ನಿಜವಾದ ಅಂಕಿಅಂಶಗಳ ಆಧಾರದ ಮೇಲೆಯೇ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳಬೇಕಿದೆ. ಇತ್ತೀಚಿಗೆ ಹಿಂಜರಿತವನ್ನು ಪುಷ್ಟೀಕರಿಸುವಂತಹ ಅನೇಕ ಅಂಕಿಅಂಶಗಳು ಬಂದಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಸರಕಾರ ಅರ್ಥವ್ಯವಸ್ಥೆಯ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತದೆ. ಕಳೆದ 9 ತಿಂಗಳಿಂದ ಈ ಅಂಕಿಅಂಶಗಳ ಪ್ರಕಾರ ನಮ್ಮ ದೇಶದ ಅರ್ಥಿಕ ವೃದ್ಧಿಯ ದರ ಕಡಿಮೆಯಾಗುತ್ತಿದೆ. 9% ರಿಂದ 10% ದರದಲ್ಲಿ ವೃದ್ಧಿಯಾಗುತ್ತಿದ್ದ ನಮ್ಮ ಅರ್ಥವ್ಯವಸ್ಥೆ ಈಗ 5.8% ರ ದರಕ್ಕೆ ಕುಸಿದಿದೆ. ಕಳೆದ 20 ವರ್ಷಗಳಲ್ಲಿ ಸತತ ಮೂರು ತ್ರೈಮಾಸಿಕಗಳಲ್ಲೂ (quarterly) ಅಭಿವೃದ್ಧಿ ದರದಲ್ಲಿ ಕುಸಿತ ಕಂಡಿದ್ದು ಕೇವಲ ಮೂರು ಬಾರಿ. ನಿಸ್ಸಂಶಯವಾಗಿಯೂ ಆರ್ಥಿಕ ವೃದ್ಧಿಯ ವಾರ್ಷಿಕ ದರದಲ್ಲಿ ಇಳಿತ ಕಂಡುಬಂದಿದೆಯೇ ಹೊರತು ವೃದ್ಧಿ ನಿಂತಿಲ್ಲ, ಅಥವಾ ಅರ್ಥವ್ಯವಸ್ಥೆಯ ಸಂಕುಚಿತ ಇನ್ನೂ ಶುರು ಆಗಿಲ್ಲ. ಆದರೆ ಭಾರತೀಯ ಅರ್ಥವ್ಯವಸ್ಥೆಗೆ ವೃದ್ಧಿಯ ದರ ಹೆಚ್ಚುತ್ತ ಇರುವುದು ಅತ್ಯಂತ ಅವಶ್ಯಕವಾಗಿದೆ ಹಾಗಾಗಿ ಈ ಸುದ್ದಿಗಳು ಚಿಂತಾಜನಕವಾಗಿವೆ.

ಒಂದು ವೇಳೆ ಕಳೆದ ವರ್ಷ 2018ರಲ್ಲಿ ಜನೆವರಿಯಿಂದ ಮಾರ್ಚ್‍ತನಕದ ತ್ರೈಮಾಸಿಕ ಹಾಗೂ ಈ ವರ್ಷದ ಇವೇ ಮೂರು ತಿಂಗಳ ಹೋಲಿಕೆ ಮಾಡಿದರೆ ಸ್ಪಷ್ಟವಾಗುವುದೇನೆಂದರೆ ಸುಮಾರಾಗಿ ಎಲ್ಲಾ ಮಹತ್ವಪೂರ್ಣ ಕ್ಷೇತ್ರಗಳ ಅರ್ಥವ್ಯವಸ್ಥೆಯಲ್ಲಿ ಕುಸಿತ ಕಂಡುಬಂದಿದೆ. ಕಾರುಗಳು ಮಾರಾಟದಲ್ಲಿ ಕಳೆದ ಬಾರಿ 18% ವೃದ್ಧಿ ಆಗಿತ್ತು, ಈ ಬಾರಿ 23% ಕುಸಿತ ದಾಖಲೆಯಾಗಿದೆ. ಸ್ಕೂಟರ್ ಮತ್ತು ಇತರ ದ್ವೀಚಕ್ರ ವಾಹನಗಳಲ್ಲಿ ಕಳೆದ ಬಾರಿ 16% ಹೆಚ್ಚಳವಿತ್ತು ಆದರೆ ಈ ಬಾರಿ 12% ಕುಸಿತ ಕಾಣಿಸಿಕೊಂಡಿದೆ. ದೈನಂದಿಕ ಬಳಕೆಯ ಉಪಭೋಗದ ವಸ್ತುಗಳ ಮಾರಾಟದಲ್ಲಿ ಕಳೆದ ಬಾರಿಯ 12% ಹೆಚ್ಚಳದ ಹೋಲಿಕೆಯಲ್ಲಿ ಈ ಬಾರಿ ಕೇವಲ 5% ಹೆಚ್ಚಳವಾಗಿದೆ.

ಹೂಡಿಕೆಯಲ್ಲೂ ಇದೇ ಪ್ರವೃತ್ತಿಯನ್ನು ಕಾಣಬಹುದಾಗಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಹೊಸ ಹೂಡಿಕೆಯ ಪ್ರೊಜೆಕ್ಟ್ ಗಳ ಮೊತ್ತದಲ್ಲಿ 13% ಹೆಚ್ಚಳವಾಗಿತ್ತು, ಆದರೆ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 80% ಕಡಿಮೆ ಆಗಿದೆ. ಆರ್ಥಿಕ ಹಿಂಜರಿತವನ್ನು ಎದರುರಿಸುವುದರಲ್ಲಿ ಸರಕಾರಿ ವೆಚ್ಚದ ಮಹತ್ವಪೂರ್ಣ ಪಾತ್ರ ಇರುತ್ತದೆ. ಆದರೆ ಅದರಲ್ಲೂ ಕುಸಿತವೇ ಕಂಡುಬಂದಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ ಸರಕಾರದ ಟ್ಯಾಕ್ಸ್ ಆದಾಯ 22% ಹೆಚ್ಚಾಗಿತ್ತು ಆದರೆ ಈ ವರ್ಷ ಕೇವಲ 1.5% ಹೆಚ್ಚಳ ಕಂಡಿದೆ. ರಫ್ತು ಮತ್ತು ಆಮದಿನ ಅಂತರ ಕಳೆದ ಬಾರಿ 15% ಹೆಚ್ಚಾಗಿತ್ತು ಆದರೆ ಈ ಬಾರಿ 1% ಕಡಿಮೆ ಆಗಿದೆ. ಈ ಎಲ್ಲ ಅಂಕಿಅಂಶಗಳು ಹೇಳುವುದೇನೆಂದರೆ ಆರ್ಥಿಕ ಹಿಂಜರಿತದ ಸತ್ಯವನ್ನು ಅಲ್ಲಗೆಳೆಯಲಾಗುವುದಿಲ್ಲ. ಒಂದು ವೇಳೆ ಇದೇ ಪ್ರವೃತ್ತಿ ಇನ್ನೆರಡು ತ್ರೈಮಾಸಿಕಳವರೆಗೆ ಮುಂದುವರೆದರೆ ಕಳೆದ ಮೂರು ದಶಕಗಳ ಅತ್ಯಂತ ಗಂಭೀರ ಸ್ಥಿತಿ ಎದುರಿಸಬೇಕಾಗುವುದು.

ಆರ್ಥಿಕ ಹಿಂಜರಿತವನ್ನು ನಿಭಾಯಿಸಲು ಸಾಧ್ಯವಿದೆ ಆದರೆ ಹಾಗೆ ಮಾಡಲು ಎಲ್ಲಕ್ಕಿಂತ ಮುಂಚೆ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕಾಗುತ್ತದೆ. ದುರದೃಷ್ಟವಷಾತ್, ಸರಕಾರವು ಇಲ್ಲಿಯತನಕ ಈ ಸತ್ಯವನ್ನು ನೋಡಲು ನಿರಾಕರಿಸುತ್ತಿದೆ. ಜ್ವರದ ಚಿಕಿತ್ಸೆ ಮಾಡುವ ಬದಲಿಗೆ ಥರ್ಮಾಮೀಟರ್ ಅನ್ನು ಒಡೆದುಹಾಕುವಲ್ಲಿ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಭಾರತದ ಅಂಕಿಅಂಶಗಳ ವಿಭಾಗ ಸಾಧನೆ ಎಷ್ಟಿದೆಯೆಂದರೆ, ವಿಶ್ವಾದ್ಯಂತ ಅದರ ಅಂಕಿಅಂಶಗಳನ್ನು ವಿಶ್ವಾಸಾರ್ಹ ಎಂದು ಪರಿಗಣಿಸಲಾಗುತ್ತದೆ. ಸ್ವತಃ ಮೋದಿ ಸರಕಾರದ ಮುಖ್ಯ ಆರ್ಥಿಕ ಸಲಹಾಕಾರರಾಗಿದ್ದ ಅರವಿಂದ್ ಸುಬ್ರಹ್ಮಣ್ಯಮ್ ಅವರು ಹೇಳುವುದೇನೆಂದರೆ ಭಾರತದ ಜಿಡಿಪಿ ಕನಿಷ್ಠಪಕ್ಷ ಶೇಕಡಾ ಎರಡರಿಂದ ಎರಡೂವರೆವಷ್ಟು ಹೆಚ್ಚಿಸಿ ತೋರಿಸಲಾಗುತ್ತಿದೆ ಎಂದು.

ಇಂತಹದರಲ್ಲಿ ಇನ್ನಷ್ಟು ಚಿಂತೆಯ ವಿಷಯವೇನೆಂದರೆ, ನಿಧಾನವಾಗಿ ಎಲ್ಲಾ ಒಳ್ಳೆಯ ಅರ್ಥಶಾಸ್ತ್ರಜ್ಞರು ಈ ಸರಕಾರವನ್ನು ಬಿಟ್ಟುಹೋಗುತ್ತಿದ್ದಾರೆ. ಕಳೆದ ಕಾರ್ಯಾವಧಿಯಲ್ಲಿ ರಿಸರ್ವ್ ಬ್ಯಾಂಕಿನ ಗವರ್ನರ್ ರಘುರಾಮ್ ರಾಜನ್ ಬಿಟ್ಟುಹೋದರು. ನಂತರ ಉರ್ಜಿತ್ ಪಟೇಲ್ ನಡುರಸ್ತೆಯಲ್ಲೇ ಬಿಟ್ಟುಹೋದರು. ಅರವಿಂದ ಸುಬ್ರಹ್ಮಣ್ಯಮ್ ಅವರೂ ಕೂಡ ತಮ್ಮ ಕಾರ್ಯಾವಧಿ ಪೂರ್ಣಗೊಳಿಸುವ ಮುನ್ನವೇ ಸರಕಾರವನ್ನು ಬಿಟ್ಟುಹೋದರು. ಹಾಗೂ ಈಗ ಆರ್ಥಿಕ ಸಲಹಾಕಾರ ಸಮಿತಿಯ ಅಧ್ಯಕ್ಷ ವಿವೇಕ್ ದೇಬರಾಯ್ ಕೂಡ ದೂರ ಹೋಗುತ್ತಿದ್ದಾರೆ. ನಿಸ್ಸಂಶಯವಾಗಿಯೂ ಪ್ರಧಾನಿ ನರೇಂದ್ರ ಮೋದಿ ರಾಜಕಾರಣದ ನಿಪುಣ ಆಟಗಾರರಾಗಿದ್ದಾರೆ ಹಾಗೂ ತಮಗೆ ಬೇಕಾದ ಫಲಿತಾಂಶಗಳನ್ನು ಗಿಟ್ಟಿಸಿಕೊಳ್ಳುತ್ತಾರೆ. ಆದರೆ ಅರ್ಥವ್ಯವಸ್ಥೆ ಒಂದು ಬೇರೆಯದೇ ವಿಷಯವಾಗಿದೆ. ನೋಟುರದ್ದತಿಯ ಪ್ರಕರಣವು ವಿವೇಚನೆಯುಳ್ಳ ಅರ್ಥಶಾಸ್ತ್ರಜ್ಞರ ಅಭಿಪ್ರಾಯವನ್ನು ಪಡೆಯದೇ ಕೆಲಸ ಮಾಡುವುದರಿಂದ ಎಂತಹ ದುಃಸ್ಥಿತಿಯನ್ನು ಎದುರಿಸಬೇಕಾಯಿತು ಎನ್ನುವುದನ್ನು ತೋರಿಸಿಕೊಟ್ಟಿತು. ಒಬ್ಬ ನಾಯಕದ ಅಜ್ಞಾನ ಮತ್ತು ಅಹಂಕಾರದ ಬೆಲೆಯನ್ನು ಸಂಪೂರ್ಣ ದೇಶ ಭರಿಸಬೇಕಾಗುತ್ತದೆ.

ರೋಗಿಯ ದೇಹ ಜ್ವರದಿಂದ ತಪಿಸುತ್ತಿದೆ. ಕೆಲಸ ಮಾಡಬೇಕಿರುವವರು ಬೇರೆಡೆ ಮುಖ ತಿರುಗಿಸಿ ಕುಳಿತಿದ್ದಾರೆ. ಥರ್ಮಾಮೀಟರ್ ಅನ್ನು ಒಡೆದುಹಾಕಲಾಗಿದೆ. ಹಾಗೂ ಈಗ ಡಾಕ್ಟರ್ ಗಳನ್ನೂ ಒದ್ದೋಡಿಸಲಾಗಿದೆ. ಇದರ ಪರಣಾಮ ಏನಾಗುವುದು ಎನ್ನುವುದನ್ನು ನೀವೇ ಯೋಚಿಸಿನೋಡಿ.

ಅನುವಾದ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...