Homeಮುಖಪುಟನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ದಿಟ್ಟ ಪತ್ರಕರ್ತ ದ್ಯಾನಿಶ್ ಸಿದ್ದೀಕಿ ಅವರ ಸಾವನ್ನು ಸಂಭ್ರಮಿಸುತ್ತಿರುವ ಬಲಪಂಥೀಯರ ದ್ವೇಷವನ್ನು ನಿರ್ಲಕ್ಷಿಸಲು ಸಾಧ್ಯವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ವಿಶ್ವಪ್ರಸಿದ್ದ ದಿಟ್ಟ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದು, ಇದಕ್ಕೆ ಪ್ರಕತಿಕ್ರಿಯಸಿರುವ ಆಲ್ಟ್‌ನ್ಯೂಸ್‌ ಸಂಸ್ಥಾಪಕ ಪ್ರತೀಕ್ ಸಿನ್ಹಾ, “ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು, ಈ ವೇಳೆ ಪತ್ರಕರ್ತ ದಾನಿಶ್ ಸಿದ್ದೀಕಿ ಹತರಾಗಿದ್ದಾರೆ.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ವಿಶ್ವದ ಪ್ರಮುಖ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪತ್ರಕರ್ತ ಪ್ರತೀಕ್ ಸಿನ್ಹಾ, “ನೀವು ಇಂದು ಟ್ವಿಟ್ಟರ್‌‌ನಲ್ಲಿನ ದ್ವೇಷವನ್ನು ನೋಡಿದ್ದೀರಾ? ದಿಟ್ಟ ಪತ್ರಕರ್ತನ ಸಾವಿಗೆ ಜನರು ಸಂಭ್ರಮಿಸುತ್ತಿದ್ದಾರೆ? ಈ ದ್ವೇಷವನ್ನು ನಾವು ನಿರ್ಲಕ್ಷಿಸಲು ಬಯಸುತ್ತೀರಾ? ಈ ದ್ವೇಷವು ತೀವ್ರವಾದಿ ಆಗುತ್ತಿರುವ ಅಥವಾ ಈಗಾಗಲೇ ತೀವ್ರವಾದಿಗಳಾಗಿರುವ ಜನರಿಂದ ಬರುತ್ತಿದೆ. ನಾವು ನಮ್ಮದೇ ತಾಲಿಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಹೇಳಿದ್ದಾರೆ.

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

ಇದನ್ನೂ ಓದಿ: ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಹತ

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಮತ್ತು ಜನರ ಸಂಕಷ್ಟಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ರಾಯ್ಟರ್ಸ್ ವರ್ಷದ ಫೋಟೋವಾಗಿ ದೆಹಲಿ ಹಿಂಚಾಚಾರದ ಚಿತ್ರ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು..ನಾವು ನಮ್ಮದೇ ತಾಲಿಬಾನ್ ರಚಿಸುವ ಅದರೊಟ್ಟಿಗೆ ಅಲ್ ಖೈದಾ,ಹಿಜ್ಬುಲ್ ಮುಜಾಹಿದ್ದೀನ್,isis ರಚನೆಯಲ್ಲಿ ನಿರತರಾದಂತೆ ಇದೆ.
    ಇದು ಈಗ ಅನುವಾರ್ಯವಿದೆಯೇ?
    ಏಕೆಂದರೆ ಭಾರತದಲ್ಲಿ ಇಂತಹ ಸಂಘಟನೆಗಳು ಇಲ್ಲದೆ ಇರುವುದರಿಂದ…ಇಲ್ಲಿರುವುದು ಕೇವಲ ….ಅಲ್ಲವೇ..?

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....