Homeಮುಖಪುಟನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ದಿಟ್ಟ ಪತ್ರಕರ್ತ ದ್ಯಾನಿಶ್ ಸಿದ್ದೀಕಿ ಅವರ ಸಾವನ್ನು ಸಂಭ್ರಮಿಸುತ್ತಿರುವ ಬಲಪಂಥೀಯರ ದ್ವೇಷವನ್ನು ನಿರ್ಲಕ್ಷಿಸಲು ಸಾಧ್ಯವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ವಿಶ್ವಪ್ರಸಿದ್ದ ದಿಟ್ಟ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದು, ಇದಕ್ಕೆ ಪ್ರಕತಿಕ್ರಿಯಸಿರುವ ಆಲ್ಟ್‌ನ್ಯೂಸ್‌ ಸಂಸ್ಥಾಪಕ ಪ್ರತೀಕ್ ಸಿನ್ಹಾ, “ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು, ಈ ವೇಳೆ ಪತ್ರಕರ್ತ ದಾನಿಶ್ ಸಿದ್ದೀಕಿ ಹತರಾಗಿದ್ದಾರೆ.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ವಿಶ್ವದ ಪ್ರಮುಖ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪತ್ರಕರ್ತ ಪ್ರತೀಕ್ ಸಿನ್ಹಾ, “ನೀವು ಇಂದು ಟ್ವಿಟ್ಟರ್‌‌ನಲ್ಲಿನ ದ್ವೇಷವನ್ನು ನೋಡಿದ್ದೀರಾ? ದಿಟ್ಟ ಪತ್ರಕರ್ತನ ಸಾವಿಗೆ ಜನರು ಸಂಭ್ರಮಿಸುತ್ತಿದ್ದಾರೆ? ಈ ದ್ವೇಷವನ್ನು ನಾವು ನಿರ್ಲಕ್ಷಿಸಲು ಬಯಸುತ್ತೀರಾ? ಈ ದ್ವೇಷವು ತೀವ್ರವಾದಿ ಆಗುತ್ತಿರುವ ಅಥವಾ ಈಗಾಗಲೇ ತೀವ್ರವಾದಿಗಳಾಗಿರುವ ಜನರಿಂದ ಬರುತ್ತಿದೆ. ನಾವು ನಮ್ಮದೇ ತಾಲಿಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಹೇಳಿದ್ದಾರೆ.

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

ಇದನ್ನೂ ಓದಿ: ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಹತ

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಮತ್ತು ಜನರ ಸಂಕಷ್ಟಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ರಾಯ್ಟರ್ಸ್ ವರ್ಷದ ಫೋಟೋವಾಗಿ ದೆಹಲಿ ಹಿಂಚಾಚಾರದ ಚಿತ್ರ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು..ನಾವು ನಮ್ಮದೇ ತಾಲಿಬಾನ್ ರಚಿಸುವ ಅದರೊಟ್ಟಿಗೆ ಅಲ್ ಖೈದಾ,ಹಿಜ್ಬುಲ್ ಮುಜಾಹಿದ್ದೀನ್,isis ರಚನೆಯಲ್ಲಿ ನಿರತರಾದಂತೆ ಇದೆ.
    ಇದು ಈಗ ಅನುವಾರ್ಯವಿದೆಯೇ?
    ಏಕೆಂದರೆ ಭಾರತದಲ್ಲಿ ಇಂತಹ ಸಂಘಟನೆಗಳು ಇಲ್ಲದೆ ಇರುವುದರಿಂದ…ಇಲ್ಲಿರುವುದು ಕೇವಲ ….ಅಲ್ಲವೇ..?

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....